ಮಂಡ್ಯ

ಬೈಕ್ ಡಿಕ್ಕಿ ► ಯುವಕರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ನ.11. ಅತಿವೇಗದಿಂದ ಬಂದ ಬೈಕೊಂದು ಬ್ರಿಡ್ಜ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಮಂಡ್ಯದ ಮಳವಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 209ರ ಚಿಲ್ಲಾಪುರ ಗೇಟ್ ಬಳಿ ಶುಕ್ರವಾರ ತಡರಾತ್ರಿ  ನಡೆದಿದೆ. ಹಲಗೂರಿನ ಪ್ರತಾಪ್(23) ಬಾಣಸಮುದ್ರದ ಶಶಿ(24) ಮೃತ ದುರ್ದೈವಿಗಳು. ಘಟನೆಯಿಂದ ಪ್ರತಾಪ್ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಶಶಿ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಅತಿವೇಗವೇ ಈ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಡಿಕ್ಕಿ ► ಯುವಕರಿಬ್ಬರು ಮೃತ್ಯು Read More »

ಕರಾವಳಿ

ನಂದಿನಿ ಹಾಲಿನ ವಾಹನ ಡಿಕ್ಕಿ► ನೂರಾರು ಹಾಲಿನ ಪ್ಯಾಕೆಟ್ ಮಣ್ಣುಪಾಲು…!!!

(ನ್ಯೂಸ್ ಕಡಬ) newskadaba.com ಮಂಡ್ಯ, ಅ.31. ನಂದಿನಿ ಹಾಲಿನ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಸೇತುವೆಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಘಟನೆ ನಾಗಮಂಗಲ ತಾಲೂಕಿನ ಕಾಚೇನಹಳ್ಳಿ ಬಳಿ ಮಂಗಳವಾರ ಮುಂಜಾನೆ ನಡೆದಿದೆ. ವಾಹನ ಉರುಳಿ ಬಿದ್ದ ಪರಿಣಾಮ ನಂದಿನಿ ಹಾಲಿನ ನೂರಾರು ಪ್ಯಾಕೆಟ್ ಹಳ್ಳದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದು, ಕೆಲವೊಂದು ಹಾಲಿನ ಪ್ಯಾಕೆಟ್ ಒಡೆದು ಹೋಗಿ ಹಾಲು ಮಣ್ಣು ಪಾಲಾಗಿದೆ. ಚೆನ್ನಾಗಿರುವ ಹಾಲಿನ ಪ್ಯಾಕೆಟ್ ಗಳನ್ನು ಬೇರೊಂದು ವಾಹನದಲ್ಲಿ ಬೆಳ್ಳೂರಿಗೆ ಸಾಗಿಸಲಾಗಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ಒಂದಷ್ಟು ಸಣ್ಣಪುಟ್ಟ ಗಾಯಗಳಾಗಿದ್ದು,

ನಂದಿನಿ ಹಾಲಿನ ವಾಹನ ಡಿಕ್ಕಿ► ನೂರಾರು ಹಾಲಿನ ಪ್ಯಾಕೆಟ್ ಮಣ್ಣುಪಾಲು…!!! Read More »

ಕರಾವಳಿ

ಕೈಕಾಲು ಕಟ್ಟಿದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನೀರಿನಲ್ಲಿ ಪತ್ತೆ ► ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಮಂಡ್ಯ, ಅ.18. ಜಿಲ್ಲೆಯ ಪಾಂಡವಪುರದ ವಿಶ್ವೇಶ್ವರಯ್ಯ ನಾಲೆಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ತೇಲಿ ಬಂದಿರೋ ಘಟನೆ ಬೆಳಕಿಗೆ ಬಂದಿದೆ. ಈ ಅಪರಿಚಿತ ವ್ಯಕ್ತಿಗೆ ಸುಮಾರು 42 ವರ್ಷ ಪ್ರಾಯವಾಗಿರಬಹುದು ಎಂದು ಅಂದಾಜಿಸಲಾಗಿದೆ. ವ್ಯಕ್ತಿಯ ಕೈಕಾಲುಗಳನ್ನು ಕಟ್ಟಿದ ರೀತಿಯಲ್ಲಿ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ನಾಲೆಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ನಾಲೆಯಲ್ಲಿ ವ್ಯಕ್ತಿಯ ಮೃತದೇಹ ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.  

ಕೈಕಾಲು ಕಟ್ಟಿದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನೀರಿನಲ್ಲಿ ಪತ್ತೆ ► ಕೊಲೆ ಶಂಕೆ Read More »

ಕರಾವಳಿ

ಜಮೀನಿನಲ್ಲಿ ರೈತನ ಕತ್ತು ಕೊಯ್ದು ಕೊಲೆ ► ಘಟನೆಗೆ ಕಾರಣ ನಿಗೂಢ

(ನ್ಯೂಸ್ ಕಡಬ) newskadaba.com ಮಂಡ್ಯ,ಸೆ.01, ರೈತರೊಬ್ಬರನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚಿಕ್ಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ರೈತನನ್ನು ಚಿಕ್ಕತಿಮ್ಮಯ್ಯ (45) ಎಂದು ಗುರುತಿಸಲಾಗಿದೆ. ಚಿಕ್ಕತಿಮ್ಮಯ್ಯ ಎಂದಿನಂತೆ ಗುರುವಾರ ಕೂಡ ತನ್ನ ಜಮೀನಿನ ಬಳಿ ಕೆಲಸಕ್ಕೆ ಹೋಗಿದ್ದರು. ರಾತ್ರಿಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ತಮ್ಮ ಮನೆಯವರು ಜಮೀನಿನ ಬಳಿ ಹೋಗಿ ಪರಿಶೀಲನೆ ನಡೆಸಿದಾಗ ರೈತ ಚಿಕ್ಕತಿಮ್ಮಯ್ಯ ಅವರನ್ನ ಕತ್ತು ಕೊಯ್ದು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಕೊಲೆಗೆ ಕಾರಣವೇನು ಎಂಬುದು

ಜಮೀನಿನಲ್ಲಿ ರೈತನ ಕತ್ತು ಕೊಯ್ದು ಕೊಲೆ ► ಘಟನೆಗೆ ಕಾರಣ ನಿಗೂಢ Read More »

ಕರಾವಳಿ

ಗಣೇಶ ವಿಸರ್ಜನೆ ವೇಳೆ ಅವಘಢ ► ಇಬ್ಬರು ಬಲಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಂಡ್ಯ, ಆ.28, : ಗಣೇಶ ವಿಸರ್ಜನೆಯ ವೇಳೆ ಸಂಭವಿಸಿದ ಅವಘಡದಿಂದ ಇಬ್ಬರು ಬಲಿಯಾದ ಘಟನೆ ಬೆಂಗಳೂರು ಮತ್ತು ಮಂಡ್ಯದಲ್ಲಿ ಆದಿತ್ಯವಾರ ನಡೆದಿದೆ. ಅವಘಡಕ್ಕೆ ಬೆಂಗಳೂರಿನಲ್ಲಿ 15 ವರ್ಷದ ವೆಂಕಟೇಶ ಹಾಗೂ ಮಂಡ್ಯದಲ್ಲಿ 25 ವರ್ಷದ ವಿಜಯಕುಮಾರ್ ಬಲಿಯಾದ ದುರ್ದೈವಿಗಳು. ಬೆಂಗಳೂರಿನಲ್ಲಿ ಗಣೇಶ ಚತುರ್ಥಿಯ ಮೂರನೇ ದಿನ ಮೂರ್ತಿ ವಿಸರ್ಜನೆ ಮಾಡಲು ಹೊರಟ ಟೆಂಪೋವೊಂದು ಬಾಲಕ ವೆಂಕಟೇಶ್ ಮೇಲೆ ಹರಿದಿದೆ. ಪರಿಣಾಮ ಗಣೇಶ ವಿಸರ್ಜನೆ ನೋಡಲು ಬಂದಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದನು. ಗಣೇಶ ಹೊತ್ತ ಟೆಂಪೋ

ಗಣೇಶ ವಿಸರ್ಜನೆ ವೇಳೆ ಅವಘಢ ► ಇಬ್ಬರು ಬಲಿ Read More »

ಕರ್ನಾಟಕ

ಮುದ್ದು ಕಂದಮ್ಮನನ್ನು ಮನೆಯಲ್ಲಿ ಬಿಟ್ಟು ►ಮಹಿಳೆಯೊಂದಿಗೆ ಪರಾರಿಯಾದ ಗೃಹಿಣಿ…!!!

(ನ್ಯೂಸ್ ಕಡಬ) newskadaba.com ಮಂಡ್ಯ, ಆ.23, ಗೃಹಿಣಿಯೊಬ್ಬರು ಅವಿವಾಹಿತ ಮಹಿಳೆಯೊಂದಿಗೆ ನಾಪತ್ತೆಯಾಗಿರುವ ವಿಚಿತ್ರ ಪ್ರಕರಣವೊಂದು ಶ್ರೀರಂಗಪಟ್ಟಣದ ಶ್ರೀನಿವಾಸ ಅಗ್ರಹಾರದಲ್ಲಿ ಬೆಳಕಿಗೆ ಬಂದಿದೆ.  ಕಾಣೆಯಾದ ಮಹಿಳೆಯರನ್ನು ಪ್ರಿಯದರ್ಶಿನಿ(22) ಮತ್ತು ಮಾಹಾದೇವಿ(21) ಎಂದು ತಿಳಿದುಬಂದಿದೆ. ಪ್ರಿಯದರ್ಶಿನಿ ಅವರಿಗೆ ಮದುವೆಯಾಗಿದ್ದು, ಒಂದು ಮುದ್ದಾದ ಮಗುವನ್ನು ಸಹ ಹೊಂದಿದ್ದಾರೆ. ಆಗಸ್ಟ್ 22ರಿಂದ ಇಬ್ಬರೂ ಮಹಿಳೆಯರೂ ಅನುಮಾನಸ್ಪದವಾಗಿ ನಾಪತ್ತೆಯಾಗಿದ್ದಾರೆ. ಕೆಲವು ದಿನಗಳಿಂದ ಪ್ರಿಯದರ್ಶಿನಿ ಮನೆಗೆ ಮಾಹಾದೇವಿ ಅವರು ಬಂದು ಹೋಗುತ್ತಿದ್ದರು. ಎಂದಿನಂತೆ ಅಗಸ್ಟ್ 22ರಂದು ಸಹ ಮಾಹಾದೇವಿಯವರು ಮನೆಗೆ ಬಂದು ಮಗುವಿಗೆ ಬಟ್ಟೆ ತಗೊಂಡು ಬರೋಣ ಎಂದು ಪ್ರಿಯದರ್ಶಿನಿಯರನ್ನು

ಮುದ್ದು ಕಂದಮ್ಮನನ್ನು ಮನೆಯಲ್ಲಿ ಬಿಟ್ಟು ►ಮಹಿಳೆಯೊಂದಿಗೆ ಪರಾರಿಯಾದ ಗೃಹಿಣಿ…!!! Read More »

ಕರ್ನಾಟಕ

ಭೀಕರ ರಸ್ತೆ ಅಪಘಾತ ► ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಮಂಡ್ಯ, ಆ.23, ಕ್ವಾಲಿಸ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಮಖಾಮುಖಿ ಢಿಕ್ಕಿಯಾಗಿ ಕ್ವಾಲಿಸ್‍ ನಲ್ಲಿದ್ದ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಮಂಡ್ಯದ ಮಳವಳ್ಳಿ ತಾಲೂಕಿನ ಬಸವನಪುರ ಗೇಟ್ ಬಳಿ ಬುಧವಾರ ಮುಂಜಾನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರ ಹೆಸರು ಪತ್ತೆಯಾಗಿಲ್ಲ. ಉಳಿದಂತೆ ನಾಗರಾಜು, ಆನಂದ, ಪ್ರಭುಲಿಂಗದೇವರು ಎಂಬವರು ಗಾಯಗೊಂಡಿದ್ದಾರೆ. ಕ್ವಾಲಿಸ್‍ನಲ್ಲಿ ಪ್ರಯಾಣ ಮಾಡುತ್ತಿದ್ದವರನ್ನು ಕೋಲಾರ ಜಿಲ್ಲೆ ಬಂಗಾರಪೇಟೆ ಮೂಲದ ಜ್ಯೋತಿಷಿಗಳು ಎಂದು ಹೇಳಲಾಗ್ತಿದೆ. ಬುಧವಾರ ಬೆಳಗ್ಗೆ ಕೊಳ್ಳೆಗಾಲದಿಂದ ಬೆಂಗಳೂರಿನ ಕಡೆ ತೆರಳುತ್ತಿದ್ದ ಕ್ವಾಲಿಸ್‍ ಹಾಗೂ

ಭೀಕರ ರಸ್ತೆ ಅಪಘಾತ ► ಇಬ್ಬರ ದುರ್ಮರಣ Read More »

ಕರ್ನಾಟಕ

ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದ ತಂದೆ-ಮಗ ►20 ವರ್ಷಗಳ ನಂತರ ಮರಳಿ ಗೂಡಿಗೆ

(ನ್ಯೂಸ್ ಕಡಬ) newskadaba.com ಮೈಸೂರು, ಆ.22, ಕಾರಣಾಂತರಗಳಿಂದ 20 ವರ್ಷಗಳ ಹಿಂದೆ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದ ಮಂಡ್ಯ ಜಿಲ್ಲೆಯ ಸೈಯದ್ ಅಬ್ಬಾಸ್ ಮತ್ತು ಅವರ ಪುತ್ರ ಸೈಯದ್ ಅತಿಕ್ ಅವರು ಮತ್ತೆ ಹಿಂದೂ ಧರ್ಮಕ್ಕೆ ವಾಪಸ್ಸಾಗಿದ್ದಾರೆ. ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ್ ನೇತೃತ್ವದಲ್ಲಿ ಮೈಸೂರಿನ ದೇವರಾಜ ಮೊಹಲ್ಲಾದ ಆರ್ಯ ಭವನದಲ್ಲಿ “ಘರ್ ವಾಪಸಿ” ಕಾರ್ಯಕ್ರಮ ನಡೆಯಿತು. ಮೂಲತಃ ಹಿಂದೂ ಧರ್ಮದವರಾಗಿದ್ದ ಸೈಯದ್ ಅಬ್ಬಾಸ್ ಈ ಕಾರ್ಯಕ್ರಮದಲ್ಲಿ ಮುಸ್ಲಿಂ ಧರ್ಮವನ್ನು ತ್ಯಜಿಸಿ ಮತ್ತೆ ಹಿಂದೂ ಧರ್ಮಕ್ಕೆ ವಾಪಸ್ಸಾದರು. ಸಾಂಪ್ರದಾಯಿಕವಾಗಿ ಜನಿವಾರ ಧರಿಸಿ ಹೋಮ, ಹವನ

ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದ ತಂದೆ-ಮಗ ►20 ವರ್ಷಗಳ ನಂತರ ಮರಳಿ ಗೂಡಿಗೆ Read More »

ಕರ್ನಾಟಕ

ಅಪರಿಚಿತ ವಾಹನ ಡಿಕ್ಕಿ ► ಅಮಾವಾಸ್ಯೆ ಪೂಜೆಗೆಂದು ಹೊರಟ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಆ .21, ಅಮಾವಾಸ್ಯೆ ಪ್ರಯುಕ್ತ ಪೂಜೆ ಸಲ್ಲಿಸಲು ಬೆಳ್ಳಂಬೆಳಗ್ಗೆ ದೇವಸ್ಥಾನಕ್ಕೆ ಹೊರಟಿದ್ದ ಮಹಿಳೆಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ, ಮದ್ದೂರು ಪಟ್ಟಣದಲ್ಲಿ ನಡೆದಿದೆ. ಮೃತಪಟ್ಟವರನ್ನು ಮದ್ದೂರು ಪಟ್ಟಣದ ಶಿಕ್ಷಕರ ಬಡಾವಣೆಯ ನಿವಾಸಿಯಾದ ನಿವೃತ್ತ ಶಿಕ್ಷಕ ತಿಮ್ಮಯ್ಯ ಅವರ ಪತ್ನಿ (54) ಸುಧಾ ಎಂದು ಗುರುತಿಸಲಾಗಿದೆ. ಸುಧಾರವರು ಅಮವಾಸ್ಯೆ ಪೂಜೆ ಸಲ್ಲಿಸಲು ಸೋಮವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಮದ್ದೂರಮ್ಮ ದೇವಾಲಯಕ್ಕೆ ಹೊರಟಿದ್ದರು. ಈ ವೇಳೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ

ಅಪರಿಚಿತ ವಾಹನ ಡಿಕ್ಕಿ ► ಅಮಾವಾಸ್ಯೆ ಪೂಜೆಗೆಂದು ಹೊರಟ ಮಹಿಳೆ ಮೃತ್ಯು Read More »

ಕರಾವಳಿ
Scroll to Top