ಮಕ್ಕಳಿಗೆ ತಿನಸುಗಳನ್ನು ನೀಡುವಾಗ ಎಚ್ಚರ…!!! ►ಬೆಳ್ತಂಗಡಿ: ಗಂಟಲಲ್ಲಿ ಚಕ್ಕುಲಿ ಸಿಲುಕಿ 1 ವರ್ಷದ ಮಗು ಮೃತ್ಯು..!!!
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ , ಅ.31. ಗಂಟಲಲ್ಲಿ ಚಕ್ಕುಲಿ ಸಿಲುಕಿ ಒಂದು ವರ್ಷದ ಪುಟ್ಟ ಮಗುವೊಂದು ಮೃತಪಟ್ಟ ಆಘಾತಕಾರಿ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯಲ್ಲಿ ನಡೆದಿದೆ. ಮೃತ ಮಗುವನ್ನು ಅರುಷ್( 1 ವರ್ಷ) ಎಂದು ಗುರುತಿಸಲಾಗಿದ್ದು, ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ನಿವಾಸಿ ವಿಠಲ ಎಂಬವರ ಮಗ ಎನ್ನಲಾಗಿದೆ. ಮಗ ಅರುಷ್ ಗೆ ಪೋಷಕರು ತಿನ್ನಲು ಚಕ್ಕುಲಿ ತುಂಡೊಂದನ್ನು ನೀಡಿದ್ದರು. ಏನೂ ಅರಿಯದ ಮುಗ್ಧ ಕಂದಮ್ಮನ ಗಂಟಲಿನಲ್ಲಿ ಚಕ್ಕುಲಿ ತುಂಡು ಸಿಲುಕಿದ ಪರಿಣಾಮ ಮಗುವಿಗೆ ಉಸಿರಾಡಲು ಕಷ್ಟವಾಗಿತ್ತು. […]


