ಕುಕ್ಕೆ: ಪುಣ್ಯನದಿ ದರ್ಪಣ ತೀರ್ಥದಲ್ಲಿ ಅಸಂಖ್ಯ ಮೀನುಗಳು ಸಾವು ➤ ಕ್ರಿಮಿ ನಾಶಕ ಮಿಶ್ರಣ ಶಂಕೆ
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ,ಫೆ.11.ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಪಕ್ಕದಲ್ಲೆ ಹರಿಯುವ ಪುಣ್ಯನದಿ ದರ್ಪಣ ತೀರ್ಥದ ಕೆಳಭಾಗದ ನೀರಿನಲ್ಲಿ ನೂರಾರು ಮೀನುಗಳುಮೃತಪಟ್ಟಿವೆ.ದುಷ್ಕರ್ಮಿಗಳು ನದಿ ನೀರಿಗೆ ಕ್ರಿಮಿ ನಾಶಕ ಮಿಶ್ರಣ ಮಾಡಿರುವ ಶಂಕೆ ವ್ಯಕ್ತವಾ ಗಿದ್ದರೆ, ಇನ್ನೊಂದೆಡೆ ನದಿ ನೀರು ಬತ್ತಿ ಕಲುಷಿತಗೊಂಡು ಜಲಚರಗಳು ಸತ್ತಿರುವ ಸಂಶಯವೂ ಇದೆ. ಶನಿವಾರ ಸಂಜೆ ವೇಳೆಗೆ ನೂರಾರು ಮೀನುಗಳು ನದಿಯಲ್ಲಿ ಸತ್ತಿರು ವುದು ಮತ್ತು ಅಸಂಖ್ಯ ಮೀನುಗಳು ಸಾವು ಬದುಕಿನ ನಡುವೆ ನೀರಿನಲ್ಲಿ ವಿಲವಿಲನೆ ಒದ್ದಾಡುತ್ತಿರುವ ದೃಶ್ಯಗಳು ಕಂಡುಬಂದಿವೆ. ಸುಬ್ರಹ್ಮಣ್ಯ ದೇವಸ್ಥಾನದ […]
ಕುಕ್ಕೆ: ಪುಣ್ಯನದಿ ದರ್ಪಣ ತೀರ್ಥದಲ್ಲಿ ಅಸಂಖ್ಯ ಮೀನುಗಳು ಸಾವು ➤ ಕ್ರಿಮಿ ನಾಶಕ ಮಿಶ್ರಣ ಶಂಕೆ Read More »
ಕರಾವಳಿ
