ರಾಜ್ಯಸಭೆ ಕಣಕ್ಕೆ ಮಲ್ಲಿಕಾರ್ಜುನ ಖರ್ಗೆ ಎಂಟ್ರಿ – ರಾಹುಲ್ ಗಾಂಧಿ, ಡಿಕೆಶಿ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ
(ನ್ಯೂಸ್ ಕಡಬ) newskadaba.com, ಜೂ.05: ರಾಜ್ಯಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ವೇಗ ಪಡೆದಿರುವ ನಡುವೆಯೇ ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಜೂನ್ 18ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಇಂದು ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನೆರವೇರಿತು. ವಿಧಾನಸಭೆ ಕಾರ್ಯದರ್ಶಿಯೂ ಆಗಿರುವ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ಮಲ್ಲಿಕಾರ್ಜುನ ಖರ್ಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಹಾಗೂ […]

