ರೇಣುಕಾಸ್ವಾಮಿ ಕೊಲೆ ಪ್ರಕರಣ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಆರೋಪಿ ಪವಿತ್ರಾ ಗೌಡ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಬಯಲಾಯ್ತು ಆರೋಪಿಗಳ ಸಂಚು!

(ನ್ಯೂಸ್‌ ಕಡಬ) newskadaba.com, ಜು.03 : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿದ್ದ ಪ್ರಕರಣದ ವಿಚಾರಣೆ ವೇಳೆ ಹಲವು ಮಹತ್ವದ ಸಂಗತಿಗಳು ಬೆಳಕಿಗೆ ಬಂದಿವೆ. ಸಾಕ್ಷಿ ನಾಶಪಡಿಸಲು ಮತ್ತು ಸಾಕ್ಷ್ಯ ನುಡಿಯದಂತೆ ತಡೆಯಲು ಆರೋಪಿಗಳು ಸಂಚು ರೂಪಿಸಿರುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿದೆ. ತುಮಕೂರಿನ ಖಾಸಗಿ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದ ಪ್ರಮುಖ ಸಾಕ್ಷಿ ಸಂದೀಪ್‌ನನ್ನು ಜೂನ್ 25ರಂದು ಆಕರ್ಷ್ ಎಂಬಾತ ಮಾತನಾಡಬೇಕೆಂದು ಕರೆದಿದ್ದನು. ಬಳಿಕ ಆತನನ್ನು ಕಾರಿನಲ್ಲಿ ಕೂರಿಸಿಕೊಂಡು ನಾಲ್ವರು ಆರೋಪಿಗಳು ಕೋರ್ಟ್‌ನಲ್ಲಿ […]

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಬಯಲಾಯ್ತು ಆರೋಪಿಗಳ ಸಂಚು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ-ನವೆಂಬರ್ 10ಕ್ಕೆ ವಿಚಾರಣೆ ಮುಂದೂಡಿಕೆ

(ನ್ಯೂಸ್‌ ಕಡಬ) newskadaba.com,  ನ.03: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ 57ನೇ ಸೆಷನ್ ಕೋರ್ಟ್ ದರ್ಶನ್‌ ಸೇರಿದಂತೆ ಆರೋಪಿಗಳ ವಿಚಾರಣೆಯನ್ನು ನವೆಂಬರ್‌ 10ಕ್ಕೆ ಮುಂದೂಡಿದೆ. ಜೈಲು ಸೇರಿರುವ ದರ್ಶನ್‌ ಸೇರಿದಂತೆ ಆರೋಪಿಗಳು ನವೆಂಬರ್‌ 3ರಂದು ಬೆಂಗಳೂರು 57ನೇ ಸೆಷನ್ ಕೋರ್ಟ್ ಹಾಜರಾದರು. ಖುದ್ದು ಹಾಜರಾಗಲು ಕೋರ್ಟ್ ಸೂಚಿಸಿತ್ತು. ಇದರಂತೆ ಭಾರಿ ಬಿಗಿ ಭದ್ರತೆಯೊಂದಿಗೆ ಎ2 ಆರೋಪಿ ನಟ ದರ್ಶನ್, ಎ1 ಆರೋಪಿ ಪವಿತ್ರ ಗೌಡ ಸೇರಿದಂತೆ 6 ಆರೋಪಿಗಳು ಸೆಷನ್ ಕೋರ್ಟ್‌ಗೆ ಹಾಜರಾದರು. ಇದೀಗ ದರ್ಶನ್‌ ಸೇರಿದಂತೆ

ರೇಣುಕಾಸ್ವಾಮಿ ಕೊಲೆ ಪ್ರಕರಣ-ನವೆಂಬರ್ 10ಕ್ಕೆ ವಿಚಾರಣೆ ಮುಂದೂಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್ ಬೇಲ್ ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸರ್ಕಾರ ಅಸ್ತು

(ನ್ಯೂಸ್ ಕಡಬ) newskadaba.com ನ. 16. ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ರದ್ದು ಕೋರಿ ಶೀಘ್ರದಲ್ಲೇ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ. ಇದೀಗ ಸರ್ಕಾರದಿಂದ ಅನುಮತಿ ಸಿಕ್ಕಿರುವ ಹಿನ್ನೆಲೆಯಲ್ಲಿ ನಿಯಮಾನುಸಾರ ಸುಪ್ರೀಂ ಅರ್ಜಿ ಸಲ್ಲಿಸುವುದಾಗಿ ಹೇಳಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್ ಬೇಲ್ ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸರ್ಕಾರ ಅಸ್ತು Read More »

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ: 3 ಆರೋಪಿಗಳು ಇಂದು ಜೈಲಿನಿಂದ ಬಿಡುಗಡೆ

(ನ್ಯೂಸ್ ಕಡಬ) newskadaba.com ತುಮಕೂರು, ಅ. 02. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬಳಿಕವೂ ಬಿಡುಗಡೆಯಾಗದೇ ಪರದಾಡುತ್ತಿದ್ದ ಮೂವರು ಆರೋಪಿಗಳು ಇಂದು ತುಮಕೂರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸೆ.23 ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ಮೂವರು ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್, ಹಾಗೂ ನಿಖಿಲ್‌ಗೆ ಷರತ್ತುಬದ್ಧ ಜಾಮೀನು ದೊರೆತಿತ್ತು. ಎ-16 ಆರೋಪಿ ಕೇಶವಮೂರ್ತಿಗೆ ಹೈಕೋರ್ಟ್ನಿಂದ ಹಾಗೂ ಎ-15 ಆರೋಪಿ ಕಾರ್ತಿಕ್, ಎ-17 ಆರೋಪಿ ನಿಖಿಲ್‌ಗೆ 57ನೇ ಸಿಸಿಹೆಚ್ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಸಿಕ್ಕಿದೆ.    

ರೇಣುಕಾಸ್ವಾಮಿ ಕೊಲೆ ಪ್ರಕರಣ: 3 ಆರೋಪಿಗಳು ಇಂದು ಜೈಲಿನಿಂದ ಬಿಡುಗಡೆ Read More »

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಮತ್ತು ಗ್ಯಾಂಗ್‌ ಗೆ ಸೆ. 12ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 09.  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ ಗೆ ಮತ್ತೆ 3 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ತೀರ್ಪು ನೀಡಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾಗುವುದರಲ್ಲಿತ್ತು. ಈ ಹಿನ್ನೆಲೆ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿದೆ. ಈ ವೇಳೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 12ರ

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಮತ್ತು ಗ್ಯಾಂಗ್‌ ಗೆ ಸೆ. 12ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ Read More »

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ-  ಇಂದು ದರ್ಶನ್‌ ನ್ಯಾಯಾಂಗ ಬಂಧನ ಅವಧಿ ಮುಕ್ತಾಯ   ಎಸಿಎಂಎಂ ಕೋರ್ಟ್‌ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 09.  ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು (ಸೆ.9) ಮುಕ್ತಾಯವಾಗಲಿದೆ. ದರ್ಶನ್ ಸೇರಿ ಎಲ್ಲಾ 17 ಆರೋಪಿಗಳು ವಿವಿಧ ಜೈಲಲ್ಲಿರುವ ಕಾರಣ ಎಲ್ಲರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ. ವಿಚಾರಣೆ ಬಳಿಕ ನಟ ದರ್ಶನ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಲಿದ್ದಾರೆ ಎಂದು ವರದಿ ತಿಳಿದುಬಂದಿದೆ. ಬಳ್ಳಾರಿ ಜೈಲಲ್ಲಿರುವ ನಟ ದರ್ಶನ್ ಮಾತ್ರವಲ್ಲ ಡಿ ಗ್ಯಾಂಗ್‌ನ ಉಳಿದ ಸದಸ್ಯರು ಜಾಮೀನು ಪಡೆಯಲು ಕಸರತ್ತು ನಡೆಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ-  ಇಂದು ದರ್ಶನ್‌ ನ್ಯಾಯಾಂಗ ಬಂಧನ ಅವಧಿ ಮುಕ್ತಾಯ   ಎಸಿಎಂಎಂ ಕೋರ್ಟ್‌ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ Read More »

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ- ಮತ್ತೆ ವಿಚಾರಣೆಗೆ ಹಾಜರಾದ ನಟ ಚಿಕ್ಕಣ್ಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಚಿಕ್ಕಣ್ಣ ಇಂದು ಬಸವೇಶ್ವರನಗರದಲ್ಲಿರುವ ಎಸಿಪಿ ಕಚೇರಿಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಆರೋಪಿ ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದಕ್ಕೆ ಮತ್ತೆ ವಿಚಾರಣೆಗೆ ಕರೆಯಲಾಗಿದೆ ಎಂದು ವರದಿ ತಿಳಿಸಿದೆ. ಈ ಕುರಿತು ವಿಚಾರಣೆಯ ಬಳಿಕ ಚಿಕ್ಕಣ್ಣ ಮಾತನಾಡಿ, ನಾನು ಒಬ್ಬ ಸಾಕ್ಷಿದಾರನಾಗಿದ್ದುಕೊಂಡು ಹೋಗಿ ದರ್ಶನ್‌ ರನ್ನು ಮಾತನಾಡಿಸಬಾರದು ಅನ್ನೋದು ನನಗೆ ಗೊತ್ತಿರಲಿಲ್ಲ. ಹಾಗಾಗಿ ನಾನು ಪರಪ್ಪನ ಅಗ್ರಹಾರಕ್ಕೆ ಹೋಗಿ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ- ಮತ್ತೆ ವಿಚಾರಣೆಗೆ ಹಾಜರಾದ ನಟ ಚಿಕ್ಕಣ್ಣ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ- ಸೆಪ್ಟೆಂಬರ್ 9ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೈಲು ಪಾಲಾಗಿರುವ ಆರೋಪಿ ದರ್ಶನ್‌ ಮತ್ತು ಗ್ಯಾಂಗ್‌ ಗೆ ಸೆಪ್ಟೆಂಬರ್‌ 9ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ನ್ಯಾಯಾಂಗ ಬಂಧನ ಅಂತ್ಯವಾಗಿದ್ದ ಹಿನ್ನೆಲೆ ಇಂದು ವೀಡಿಯೋ ಕಾನ್ಫರೆನ್ಸ್‌ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಆರೋಪಿಗಳನ್ನು ಪುನಃ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡರು. ಮನವಿ ಪುರಸ್ಕರಿಸಿದ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು ದರ್ಶನ್‌ ಮತ್ತು ಗ್ಯಾಂಗ್‌ ನ

ರೇಣುಕಾಸ್ವಾಮಿ ಕೊಲೆ ಪ್ರಕರಣ- ಸೆಪ್ಟೆಂಬರ್ 9ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ Read More »

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ -ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಆರೋಪಿ ಪವಿತ್ರಾ ಗೌಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆಯು ಆಗಸ್ಟ್‌ 22ರಂದು ನಡೆಯಲಿದೆ.   ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಪರ ಹಿರಿಯ ವಕೀಲ ರೇನಿ ಸೆಬಾಸ್ಟಿಯನ್ ಸಿಸಿಎಚ್ 57ರ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಪವಿತ್ರಾಗೌಡ ಜೈಲು ಸೇರಿ 72 ದಿನಗಳು ಕಳೆದಿವೆ. ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಚಾರ್ಜ್‌

ರೇಣುಕಾಸ್ವಾಮಿ ಕೊಲೆ ಪ್ರಕರಣ -ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಆರೋಪಿ ಪವಿತ್ರಾ ಗೌಡ Read More »

ಕರ್ನಾಟಕ
Scroll to Top