ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ – ತಾರತಮ್ಯವಲ್ಲ ಇದು ಶಬರಿಮಲೆ ಸಂಪ್ರದಾಯ ಕೇಂದ್ರ ಸರಕಾರದ ವಾದ
(ನ್ಯೂಸ್ ಕಡಬ) newskadaba.com, ಎ.07: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಮರುಪರಿಶೀಲನಾ ಅರ್ಜಿಗಳ ಅಂತಿಮ ವಿಚಾರಣೆಯು ಮಂಗಳವಾರ ಸುಪ್ರೀಂ ಕೋರ್ಟ್ನಲ್ಲಿ ಆರಂಭವಾಯಿತು. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಒಂಬತ್ತು ನ್ಯಾಯಾಧೀಶರ ಬೃಹತ್ ಸಾಂವಿಧಾನಿಕ ಪೀಠವು ಈ ಐತಿಹಾಸಿಕ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. ವಿಚಾರಣೆಯ ಮೊದಲ ದಿನವಾದ ಇಂದು ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಧಾರ್ಮಿಕ ನಂಬಿಕೆ […]

