ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com,  ಅ.16- ಕಲಬುರಗಿ: ಆರ್‌ಎಸ್​ಎಸ್ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕೆಂದು ಮನವಿ ಮಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಸೋಲಾಪುರ ಮೂಲದ ದಾನಪ್ಪ ಅಲಿಯಾಸ್ ದಾನೇಶ್ ಎಂದು ಗುರುತಿಸಲಾಗಿದ್ದು, ಬೆಂಗಳೂರು ಹಾಗೂ ಕಲಬುರಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ದಾನಪ್ಪ​ನನ್ನು ಲಾತೂರ್‌ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದಕ್ಕೆ ದಾನಪ್ಪ ಅಲಿಯಾಸ್ ದಾನೇಶ್ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಲ್ಲದೇ […]

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ ಆರೋಪಿ ಬಂಧನ Read More »

ಕರ್ನಾಟಕ