ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನೀರಜ್ ಚೋಪ್ರಾ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 03. ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿ ಶುಭ ಹಾರೈಸಿದರು.   ಈ ಸಂದರ್ಭ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ವಿಧಾನ‌ ಪರಿಷತ್ ಸದಸ್ಯ ಗೋವಿಂದರಾಜು ಅವರು ಉಪಸ್ಥಿತರಿದ್ದರು. ಕಂಠೀರವ ಕ್ರೀಡಾಂಗಣದಲ್ಲಿ ಜುಲೈ 5ರಂದು ನಡೆಯಲಿರುವ ನೀರಜ್ ಚೋಪ್ರಾ ಕ್ಲಾಸಿಕ್ ಜಾವೆಲಿನ್ ಸ್ಪರ್ಧೆಯಲ್ಲಿ ಅವರು ಭಾಗವಹಿಸಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನೀರಜ್ ಚೋಪ್ರಾ..! Read More »

ಕ್ರೀಡಾ ನ್ಯೂಸ್