ಶಬರಿಮಲೆ ದರ್ಶನ ಮುಗಿಸಿ ಮರಳುತ್ತಿದ್ದ ಮಾಲಾಧಾರಿಗಳಿಗೆ ಭೀಕರ ಅಪಘಾತ – ಬಾಲಕಿ ಸೇರಿ ನಾಲ್ವರು ಸ್ಥಳದಲ್ಲೇ ಸಾವು
(ನ್ಯೂಸ್ ಕಡಬ) newskadaba.com ,ಜ.09: ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ ದರ್ಶನ ಮುಗಿಸಿ ವಾಪಸ್ ಕೊಪ್ಪಳಕ್ಕೆ ತೆರಳುತ್ತಿದ್ದ ಕ್ರೂಸರ್ ವಾಹನವು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಏಳು ವರ್ಷದ ಬಾಲಕಿ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಮುಂಜಾನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಾವಿ ಕ್ರಾಸ್ ಬಳಿ ಸಂಭವಿಸಿದೆ. ಕೊಪ್ಪಳ ಜಿಲ್ಲೆಯ ಕುಕ್ಕನೂರು ಹಾಗೂ ಗದ್ದಿಗೆರೆ ತಾಂಡಾದ ಒಟ್ಟು 10 ಮಂದಿ ಮಾಲಾಧಾರಿಗಳು ಜನವರಿ 5ರಂದು ಶಬರಿಮಲೆಗೆ ತೆರಳಿದ್ದರು. […]

