ಮಂಗಳೂರು ನಗರ ಭಾಗದ ರೈಲ್ವೇ ಲೈನ್ ಗಳನ್ನು ದಕ್ಷಿಣ ರೈಲ್ವೆಯ ಬದಲಿಗೆ ನೈರುತ್ಯ ರೈಲ್ವೇ ಅಡಿಯಲ್ಲಿ ಕಾರ್ಯನಿರ್ವಹಿಸಲು ಸದನದಲ್ಲಿ ಚೌಟ ಪ್ರಸ್ತಾಪ
(ನ್ಯೂಸ್ ಕಡಬ) newskadaba.com ಡಿ. 12. ಮಂಗಳೂರು ನಗರ ಭಾಗದಲ್ಲಿ ಕಾರ್ಯನಿರ್ವಹಿಸುವ ರೈಲ್ವೇ ಲೈನ್ ಗಳು ಪ್ರಸ್ತುತ ದಕ್ಷಿಣ ರೈಲ್ವೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇದರ ಬದಲಿಗೆ ಈ ರೈಲ್ವೆ ಲೈನ್ ಗಳನ್ನು ನೈರುತ್ಯ ರೈಲ್ವೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರಸ್ತಾವನೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಂಸತ್ತಿನಲ್ಲಿ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರ ಮುಂದಿಟ್ಟಿದ್ದಾರೆ. ಆ ಮೂಲಕ, ಸಂಸದರು ಕರಾವಳಿಯ ರೈಲ್ವೆಯಲ್ಲಿ ಆಡಳಿತಾತ್ಮಕ ಸುಧಾರಣೆ ತರುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಟ್ಟಿದ್ದಾರೆ. ಸಂಸತ್ನ ಚಳಿಗಾಲದ […]

