accident death crime

ರಸ್ತೆ ಅಪಘಾತ: ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಚಂಡೀಗಢ, ಸೆ. 20.  ಬಿಜೆಪಿ ನಾಯಕನ ಅಜಾಗರೂಕ ಕಾರು ಚಾಲನೆಯಿಂದ ಭೀಕರ ಅಪಘಾತ ಸಂಭವಿಸಿ ಯುವಕನೊಬ್ಬ ಮೃತಪಟ್ಟ ಘಟನೆ ಗುರುಗ್ರಾಮದಲ್ಲಿ ವರದಿಯಾಗಿದೆ. ಮೃತಪಟ್ಟ ಯುವಕನನ್ನು ಅಕ್ಷತ್ ಗಾರ್ಗ್ ಎಂದು ಗುರುತಿಸಲಾಗಿದೆ. ಮಹೇಂದ್ರಾ 3XO ಕಾರಿನಲ್ಲಿ ಚಲಿಸುತ್ತಿದ್ದ ವೇಳೆ ಎದುರಿಗೆ ಬಂದ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.  

ರಸ್ತೆ ಅಪಘಾತ: ಯುವಕ ಮೃತ್ಯು..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬೈಕ್ ಅಪಘಾತ; ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com  ಮಂಗಳೂರು, ಫೆ.22. ಬೈಕ್ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬಿಜೈ ಚರ್ಚ್ ಹಾಲ್ ಮುಂಭಾಗದ ರಸ್ತೆಯಲ್ಲಿ ನಡೆದಿದೆ. ಎಸ್.ಡಿ.ಎಂ ಕಾಲೇಜಿನಲ್ಲಿ ಬಿಬಿಎಂ ತೃತೀಯ ವರ್ಷದ ವಿದ್ಯಾರ್ಥಿಯಾಗಿದ್ದ ಕವನ್ ಆಳ್ವ(20) ಮೃತ ಯುವಕ ಎಂದು ಗುರುತಿಲಾಗಿದೆ. ಆಟೋ ಚಾಲಕನ ನಿರ್ಲಕ್ಷ್ಯದ ತಿರುವು ಮತ್ತು ಹೆಲ್ಮೆಟ್ ರಹಿತ ಪ್ರಯಾಣದ ಕಾರಣ ಅಪಘಾತವಾಗಿ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಕದ್ರಿ ಸಂಚಾರಿ ಠಾಣೆಯಲ್ಲಿ ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.    

ಮಂಗಳೂರು: ಬೈಕ್ ಅಪಘಾತ; ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವ್ಯಕ್ತಿ ನಾಪತ್ತೆ     ➤ಪತ್ತೆಗೆ ಮನವಿ

(ನ್ಯೂಸ್ ಕಡಬ) newskadaba.com ಮಲ್ಪೆ, ಡಿ.09 ಕೆಲಸಕ್ಕೆಂದು ಮಲ್ಪೆ ಬಂದರಿಗೆ ಬಂದಿದ್ದ ಕೇರದ ಮೂಲದ ವ್ಯಕ್ತಿಯೊಬ್ಬರು ಹಲವು ತಿಂಗಳುಗಳಿಂದ ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ. ನಾಪತ್ತೆಯಾದವರನ್ನು ಕೃಷ್ಣ(48) ಎಂದು ಗುರುತಿಸಲಾಗಿದೆ. ಈತನ ಪತ್ನಿ, ಮಕ್ಕಳು ಮಲ್ಪೆಗೆ ಹುಡುಕಿಕೊಂಡು ಬಂದಿದ್ದು, ಇವರ ಕುರಿತು ಮಾಹಿತಿ ದೊರಕಿದ್ದಲ್ಲಿ ಮಲ್ಪೆ ಪೊಲೀಸ್ ಠಾಣೆಗೆ ತಿಳಿಸುವಂತೆ ಕೋರಲಾಗಿದೆ.

ವ್ಯಕ್ತಿ ನಾಪತ್ತೆ     ➤ಪತ್ತೆಗೆ ಮನವಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಭೀಕರ ರಸ್ತೆ ಅಪಘಾತ ➤ ದಂಪತಿಗಳು ಸ್ಥಳದಲ್ಲಿಯೇ ಮೃತ್ಯು

(ನ್ಯೂಸ್ ಕಡಬ ) newskadaba. com  ವಿಜಯಪುರ .ಡಿ.07. ನಿಂತಿದ್ದ ಕಂಟೈನರ್ ಗೆ ಹಿಂಬದಿಯಿಂದ ಬಂದ ಕಾರೊಂದು ಡಿಕ್ಕಿ   ಹೊಡೆದ ಪರಿಣಾಮ ದಂಪತಿಗಳಿಬ್ಬರು ಮೃತಪಟ್ಟ ಘಟನೆ ವಿಜಯಪುರದ ಸಿಂದಗಿ ಸರ್ಕಲ್ ಬಳಿ ಸಂಭವಿಸಿದೆ.   ಮೃತಪಟ್ಟವರನ್ನು ಕೊಪ್ಪಳ ಜಿಲ್ಲೆಯ ಸಿಪಿಐ ರವಿ ಉಕ್ಕುಂದ ಹಾಗೂ ಅವರ ಪತ್ನಿ ಮಧು ಎಂದು ಗುರುತಿಸಲಾಗಿದೆ. ಇವರು ಸಿಂದಗಿಯಿಂದ ಕಲಬುರ್ಗಿಗೆ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಘಟನೆಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ದಂಪತಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ

ಭೀಕರ ರಸ್ತೆ ಅಪಘಾತ ➤ ದಂಪತಿಗಳು ಸ್ಥಳದಲ್ಲಿಯೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top