Accident

ನಿಲ್ಲಿಸಿದ್ದ ಟಿಟಿ ಮೇಲೆ ಲಾರಿ ಪಲ್ಟಿ- ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಆ. 27. ಲಾರಿಯೊಂದು ನಿಯಂತ್ರಣ ತಪ್ಪಿ ನಿಂತಿದ್ದ ಟೆಂಪೋ ಟ್ರಾವೆಲರ್ (ಟಿಟಿ) ಮೇಲೆ ಉರುಳಿ ಬಿದ್ದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಅರಂತೋಡಿನ ದೇವರಕೊಲ್ಲಿ ಬಳಿ ಬುಧವಾರ ಸಂಜೆ ನಡೆದಿದೆ. ಮೂಲಗಳ ಪ್ರಕಾರ, ಗುಜರಾತ್‌ ಅಹಮದಾಬಾದ್‌ನ ಪ್ರವಾಸಿಗರ ಗುಂಪೊಂದು ಮಡಿಕೇರಿಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದಾಗ ದೇವರಕೊಲ್ಲಿ ಅಬ್ಬಿ ಜಲಪಾತದ ಬಳಿ ರಸ್ತೆಬದಿಯಲ್ಲಿ ತಮ್ಮ ಟಿಟಿ ವಾಹನವನ್ನು ನಿಲ್ಲಿಸಿದ್ದಾಗ ಈ ಅಪಘಾತ ಸಂಭವಿಸಿದೆನ್ನಲಾಗಿದೆ. ಸುಳ್ಯದ ಕಡೆಗೆ ಚಲಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿ […]

ನಿಲ್ಲಿಸಿದ್ದ ಟಿಟಿ ಮೇಲೆ ಲಾರಿ ಪಲ್ಟಿ- ಮೂವರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಖಾಕಿ ಒಳಗಿನ ಮಾನವೀಯತೆ: ಅಪಘಾತಕ್ಕೀಡಾದ ಕಾರಿನಲ್ಲಿದ್ದ ಮಗುವನ್ನು ಎತ್ತಿ ಸುರಕ್ಷಿತ ಸ್ಥಳಕ್ಕೆ ಕರೆತಂದ ವಿಟ್ಲ ಎಸ್‌ಐ!

(ನ್ಯೂಸ್‌ ಕಡಬ) newskadaba.com,  ಜು.20 : ಸೂರಿಕುಮೇರ್ ಪೆಟ್ರೋಲ್ ಬಂಕ್ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದ ಕಾರು..ಕಾರು ಅಪಘಾತಕ್ಕೀಡಾಗಿ ಒಳಗೆ ಸಿಲುಕಿದ್ದ ಚಾಲಕ, ಮಹಿಳೆ ಮತ್ತು ಮಗುವನ್ನು ವಿಟ್ಲ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಮಕೃಷ್ಣ ಹಾಗೂ ಸಿಬ್ಬಂದಿ ಕರುಣಾಕರ್ ತಕ್ಷಣವೇ ರಕ್ಷಿಸಿದ್ದಾರೆ. ಅಪಘಾತದ ಆಘಾತದಲ್ಲಿದ್ದ ಪುಟ್ಟ ಮಗುವನ್ನು ಎಸ್‌ಐ ರಾಮಕೃಷ್ಣ ಅವರು ಎತ್ತಿಕೊಂಡು ಸುರಕ್ಷಿತ ಸ್ಥಳಕ್ಕೆ ಕರೆತಂದ ದೃಶ್ಯ ಹತ್ತಿರದ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಸದ್ಯ ಈ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು,

ಖಾಕಿ ಒಳಗಿನ ಮಾನವೀಯತೆ: ಅಪಘಾತಕ್ಕೀಡಾದ ಕಾರಿನಲ್ಲಿದ್ದ ಮಗುವನ್ನು ಎತ್ತಿ ಸುರಕ್ಷಿತ ಸ್ಥಳಕ್ಕೆ ಕರೆತಂದ ವಿಟ್ಲ ಎಸ್‌ಐ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಲಿಸುತ್ತಿದ್ದ BMW ಕಾರಿನಲ್ಲಿ ಭೀಕರ ಅಗ್ನಿ ದುರಂತ – ನಾಲ್ವರು ಪವಾಡಸದೃಶ ಪಾರು

(ನ್ಯೂಸ್ ಕಡಬ) newskadaba.com ಜು. 18. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ಶುಕ್ರವಾರ ಸಂಜೆ ಬಿಎಂಡಬ್ಲ್ಯು ಕಾರೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಇಡೀ ಕಾರು ಹೆದ್ದಾರಿಯಲ್ಲೇ ಧಗಧಗನೆ ಹೊತ್ತಿ ಉರಿದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದ ಈ ಐಷಾರಾಮಿ ಕಾರು ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ತಲುಪಿದಾಗ, ಇಂಜಿನ್‌ನಲ್ಲಿ ದಿಢೀರನೆ ತಾಂತ್ರಿಕ ದೋಷ ಕಾಣಿಸಿಕೊಂಡು ಹೊಗೆ ಬರಲಾರಂಭಿಸಿದೆ. ಇದನ್ನು

ಚಲಿಸುತ್ತಿದ್ದ BMW ಕಾರಿನಲ್ಲಿ ಭೀಕರ ಅಗ್ನಿ ದುರಂತ – ನಾಲ್ವರು ಪವಾಡಸದೃಶ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಗೆ ಹತ್ತಲೆಂದು ಓಡಿ ಬಂದ ವೇಳೆ ಬಸ್ ಢಿಕ್ಕಿ – ವ್ಯಕ್ತಿ ಮೃತ್ಯು!!

(ನ್ಯೂಸ್ ಕಡಬ) newskadaba.com ಸುಳ್ಯ, ಜು. 12. ಬಸ್‌ಗೆ ಹತ್ತಲೆಂದು ಓಡಿ ಬಂದ ಆಯತಪ್ಪಿ ಬಸ್ ಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸುಳ್ಯದ ಏನೆಕಲ್ ಎಂಬಲ್ಲಿ ನಡೆದಿದೆ.   ಮೃತರನ್ನು ಏನೆಕಲ್ಲು ಗ್ರಾಮದ ಮುತ್ತಾಜೆಯ ಚೆನ್ನಪ್ಪ ಗೌಡ ಎಂದು ಗುರುತಿಸಲಾಗಿದೆ. ಪಂಜಕ್ಕೆ ಹೋಗಲೆಂದು ಏನೆಕಲ್ ಬಸ್ ಸ್ಟ್ಯಾಂಡ್ ನ ಎದುರುಗಡೆ ರಸ್ತೆ ಬದಿಯಲ್ಲಿ ನಿಂತಿದ್ದ ಇವರು, ಸುಬ್ರಹ್ಮಣ್ಯದಿಂದ ಪುತ್ತೂರಿಗೆ ಹೋಗುವ ಬಸ್ ಗೆ ಹತ್ತಲು ಬಸ್ ಸ್ಟ್ಯಾಂಡ್ ಕಡೆಗೆ ಓಡಿದಾಗ ಬಸ್ ಡಿಕ್ಕಿ

ಬಸ್ ಗೆ ಹತ್ತಲೆಂದು ಓಡಿ ಬಂದ ವೇಳೆ ಬಸ್ ಢಿಕ್ಕಿ – ವ್ಯಕ್ತಿ ಮೃತ್ಯು!! Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ಚಾಲಕ ಮೃತ್ಯು, ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಜೂ. 10. ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟು, ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಬುಧವಾರದಂದು ನಡೆದಿದೆ. ಮೃತಪಟ್ಟವರನ್ನು ಹಾಸನ ಮೂಲದ ಲಕ್ಷ್ಮೀಕಾಂತ್ ಎಂದು ಗುರುತಿಸಲಾಗಿದೆ. ಸಹಪ್ರಯಾಣಿಕರಾದ ರಂಜಿತ್, ದರ್ಶನ್ ಹಾಗೂ ಶೋಭಾ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸನ ಮೂಲದ ನಾಲ್ವರು ಪ್ರಯಾಣಿಸುತ್ತಿದ್ದ ಕಾರು ಗಡಿಯಾರ ಸಮೀಪ

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ಚಾಲಕ ಮೃತ್ಯು, ಮೂವರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಟೋವಿಂಗ್ ವಾಹನ ಮತ್ತು ಬೈಕ್ ನಡುವೆ ಢಿಕ್ಕಿ- ಸವಾರ ಗಂಭೀರ

(ನ್ಯೂಸ್‌ ಕಡಬ) newskadaba.com ಸುಳ್ಯ, ಜೂ. 06. ಟೋವಿಂಗ್ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಅರಂತೋಡು ಕೊಯನಾಡು ಸಮೀಪದ ದೇವರಕೊಲ್ಲಿ ಎಂಬಲ್ಲಿ ನಡೆದಿದೆ. ಕೇರಳ ನೋಂದಣಿಯ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸವಾರ ಅಪಘಾತದ ವೇಳೆ ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ಸಾಗಿಸಲಾಗಿದೆ.

ಟೋವಿಂಗ್ ವಾಹನ ಮತ್ತು ಬೈಕ್ ನಡುವೆ ಢಿಕ್ಕಿ- ಸವಾರ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು-ಸ್ಕೂಟರ್ ಮುಖಾಮುಖಿ ಢಿಕ್ಕಿ- ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ಜೂ. 05. ಕಾರು ಮತ್ತು ಸ್ಕೂಟರ್ ಮುಖಾಮುಖಿ ಢಿಕ್ಕಿ ಹೊಡೆದು ಎರಡೂ ವಾಹನಗಳು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಸವಾರರು ಗಾಯಗೊಂಡ ಘಟನೆ ಮದ್ದಡ್ಕ-ವರಕದೆ ಸಮೀಪ ಗುರುವಾರ ನಡೆದಿದೆ.   ಬೆಳ್ತಂಗಡಿಯಿಂದ ಮಡಂತ್ಯಾರು ಕಡೆಗೆ ತೆರಳುತ್ತಿದ್ದ ಸ್ಕೂಟರ್ ಹಾಗೂ ಎದುರಿನಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಕಾರು ನಡುವೆ ನಡೆದ ಢಿಕ್ಕಿಯ ರಭಸಕ್ಕೆ ಕಾರು ಮತ್ತು ಸ್ಕೂಟರ್ ರಸ್ತೆ ಬದಿಯ ಚರಂಡಿಗೆ ಬಿದ್ದಿವೆ ಎಂದು ತಿಳಿದುಬಂದಿದೆ. ಘಟನೆಯಿಂದ ಗಾಯಗೊಂಡ ಸವಾರರನ್ನು ಸ್ಥಳೀಯರು ಆಸ್ಪತ್ರೆಗೆ

ಕಾರು-ಸ್ಕೂಟರ್ ಮುಖಾಮುಖಿ ಢಿಕ್ಕಿ- ಸವಾರರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಗಳೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ಭೀಕರ ಅಪಘಾತ

(ನ್ಯೂಸ್‌ ಕಡಬ) newskadaba.com,  ನ.29: ಬೆಂಗಳೂರಿನಿಂದ ಗುರುರಾಯರ ದರ್ಶನಕ್ಕೆಂದು ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಈ ದಾರುಣ ಘಟನೆ ಕರ್ನೂಲ್ ಜಿಲ್ಲೆಯ ಎಮ್ಮಿಗನೂರು ಗ್ರಾಮದ ಕೋಟೆಕಲ್ ಬಳಿ ಜರುಗಿದೆ. ಮೃತರೆಲ್ಲಾ ಬೆಂಗಳೂರು ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ. ರಾಷ್ಟ್ರೀಯ ಹೆದ್ದಾರಿ 167ರಲ್ಲಿ ಕರ್ನೂಲ್ ಜಿಲ್ಲೆಯ ಎಮ್ಮಿಗನೂರು ಗ್ರಾಮದ ಕೋಟೆಕಲ್ ಬಳಿ ಭೀಕರ ಅಪಘಾತ ಸಂಭವಿಸಿದೆ. ವಿಶಾಖಪಟ್ಟಣಂನಿಂದ ಆದೋನಿ ಕಡೆಗೆ ಹೊರಟಿದ್ದ ಫಾರ್ಚುನರ್ ಕಾರು ಹಾಗೂ ಬೆಂಗಳೂರಿನಿಂದ ಮಂತ್ರಾಲಯ ಕಡೆಗೆ

ಬೆಂಗಳೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ಭೀಕರ ಅಪಘಾತ Read More »

ಕರ್ನಾಟಕ

ಕೆಂಪಳ್ಳ: ಸರಕು ಸಾಗಿಸುತ್ತಿದ್ದ ಟೆಂಪೋ ಪಲ್ಟಿ-ಚಾಲಕನಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.29: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ಪರಿಸರದ ಕೆಂಪಳ್ಳ ಬಳಿ ಚಾಲಕನ ನಿಯಂತ್ರಣ ತಪ್ಪಿ ಸರಕು ಸಾಗಿಸುತ್ತಿದ್ದ ಟೆಂಪೊ ಪಲ್ಟಿಯಾಗಿ, ಹೆದ್ದಾರಿಯ ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಶುಕ್ರವಾರ ನಡೆದಿದೆ. ಈ ಅಪಘಾತದಲ್ಲಿ ಟೆಂಪೊ ಚಾಲಕ ಗಾಯಗೊಂಡಿದ್ದು, ಘಟನೆಯಲ್ಲಿ ಬಸ್ಸಿನ ಮುಂಭಾಗ ಜಖಂಗೊಂಡಿದೆ. ಅಪಘಾತ ಸಂಭವಿಸಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.  

ಕೆಂಪಳ್ಳ: ಸರಕು ಸಾಗಿಸುತ್ತಿದ್ದ ಟೆಂಪೋ ಪಲ್ಟಿ-ಚಾಲಕನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ರಸ್ತೆಗೆ ನುಗ್ಗಿದ ಕಾಡುಹಂದಿ; ನಿಯಂತ್ರಣ ತಪ್ಪಿದ ಕಾರು

(ನ್ಯೂಸ್‌ ಕಡಬ) newskadaba.com,  ನ.17: ಕಾರು ಸಂಚರಿಸುತ್ತಿದ್ದ ವೇಳೆ ಕಾಡು ಹಂದಿಯೊಂದು ದಿಢೀರನೆ ರಸ್ತೆಗೆ ಜಿಗಿದ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಇಳಿದ ಘಟನೆ ಸುಳ್ಯ ಬಂದಡ್ಕ ಅಂತಾರಾಜ್ಯ ರಸ್ತೆಯ ಕೋಲ್ಚಾರಿನ ಕಣಕ್ಕೂರು ಸಮೀಪ ಭಾನುವಾರ ನಡೆದಿದೆ. ಸುಳ್ಯದಿಂದ ಕೇರಳದ ಬಂದಡ್ಕ ಕಡೆಗೆ ಕಾರು ಸಂಚರಿಸುತ್ತಿದ್ದ ವೇಳೆ ಬೆಳಗ್ಗಿನ ಜಾವ ಕಾಡು ಹಂದಿಯೊಂದು ದಿಢೀರನೆ ಅಡ್ಡ ಬಂದಿದೆ. ಪರಿಣಾಮ ಚಾಲಕ ನಿಯಂತ್ರಣ ತಪ್ಪಿ ಕಾರು ರಸ್ತೆಯಿಂದ ಮೋರಿಯ ಕೆಳಗೆ ಉರುಳಿದೆ. ಕಾರಿನಲ್ಲಿ ಚಾಲಕ

ಸುಳ್ಯ: ರಸ್ತೆಗೆ ನುಗ್ಗಿದ ಕಾಡುಹಂದಿ; ನಿಯಂತ್ರಣ ತಪ್ಪಿದ ಕಾರು Read More »

ಕರಾವಳಿ
Scroll to Top