Accident

ಬೈಕ್ ಅಪಘಾತ: ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 20. ಬೈಕ್ ಅಪಘಾತದಲ್ಲಿ ಯುವಕ ನೋರ್ವ ಮೃತಪಟ್ಟ ಘಟನೆ ವೆಳ್ಳರಿಕುಂಡು ಕಾರ್ಯೋಡ್ ಚಾಲಿ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಚುಲ್ಲಿ ಚರ್ಚ್ ಸಮೀಪದ ಜಸ್ಟಿನ್ (26) ಎಂದು ಗುರುತಿಸಲಾಗಿದೆ. ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಈ ಅಪಘಾತ ನಡೆದಿದೆ.  ಮೃತದೇಹವನ್ನು ಜಿಲ್ಲಾಸ್ಪತ್ರೆಯಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಿದೆ. ವೆಳ್ಳರಿಕುಂಡು ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ ಎಂದು ವರದಿ […]

ಬೈಕ್ ಅಪಘಾತ: ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಕಂಬಕ್ಕೆ ಶಾಲಾವಾಹನ ಡಿಕ್ಕಿ- ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 20. ಶಾಲಾ ವಾಹನವೊಂದು ಬೈಕ್ ನ್ನು ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ತಲೆಗೆ ಗಂಭೀರ ಗಾಯಗಳಾಗಿದ್ದು, ಶಾಲಾ ವಾಹನ ಮುಂಭಾಗ ಸಂಪೂರ್ಣ ಜಖಂ ಆಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತೆಕ್ಕಟ್ಟೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಜೊತೆಗೆ ವಾಹನದಲ್ಲಿದ್ದ ಇಬ್ಬರು ಮಹಿಳೆಯರಿಗೂ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಚಾಲಕನ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದೆನ್ನಲಾಗಿದೆ. ಹೆದ್ದಾರಿಯಲ್ಲಿ ಬೈಕೊಂದನ್ನು ತಪ್ಪಿಸುವ ಭರದಲ್ಲಿ ಚಾಲಕನ

ವಿದ್ಯುತ್ ಕಂಬಕ್ಕೆ ಶಾಲಾವಾಹನ ಡಿಕ್ಕಿ- ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..!                                                 

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 19.  ತಮಿಳುನಾಡಿನ ಕೊಯಂಬತ್ತೂರುನಲ್ಲಿ ನಡೆದ ಅಪಘಾತದಲ್ಲಿ ಸೀತಾಂಗೋಳಿ ಕಟ್ಟತ್ತಡ್ಕ ನಿವಾಸಿಯಾದ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ . ಮೃತಪಟ್ಟ ವಿದ್ಯಾರ್ಥಿಯನ್ನು ಕಟ್ಟತ್ತಡ್ಕ ಎಕೆಜಿ ನಗರದ ಮುಹಮ್ಮದ್ ರಾಶಿದ್ (20) ಎಂದು ಗುರುತಿಸಲಾಗಿದೆ. ಕೊಯಂಬತ್ತೂರುನಲ್ಲಿ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದ ಮುಹಮ್ಮದ್ ರಾಶಿದ್ ರಾತ್ರಿ ಎಂಟು ಗಂಟೆ ಸುಮಾರಿಗೆ ಆಹಾರ ಸೇವಿಸಲು ಹೋಟೆಲ್‌ಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಅತೀ ವೇಗದಿಂದ ಬಂದ ಟಿಪ್ಪರ್ ಲಾರಿಯೊಂದು ಢಿಕ್ಕಿ ಹೊಡೆದಿದ್ದು,

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..!                                                  Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಬೈಕ್ ಹಾಗೂ ಶಾಲಾ ವಾಹನದ ನಡುವೆ ಅಪಘಾತ – ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 19. ಬೈಕ್ ಮತ್ತು ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಪುತ್ತೂರಿನ ತಾಲೂಕಿನ ಸರ್ವೇ ಗ್ರಾಮದ ಭಕ್ತಕೋಡಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ಬೈಕ್ ಸವಾರ ನವಾಝ್ ಎಂದು ಗುರುತಿಸಲಾಗಿದೆ. ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ಬರುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾಣಿಯೂರಿನ ಖಾಸಗಿ ವಿದ್ಯಾಸಂಸ್ಥೆಯ ಬಸ್ ಮಧ್ಯೆ ಅಪಘಾತ ಸಂಭವಿಸಿದೆನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ನವಾಝ್ ರಸ್ತೆಗೆಸೆಯಲ್ಪಟ್ಟಿದ್ದು ಅವರ

ಪುತ್ತೂರು: ಬೈಕ್ ಹಾಗೂ ಶಾಲಾ ವಾಹನದ ನಡುವೆ ಅಪಘಾತ – ಬೈಕ್ ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು- ಟೆಂಪೋ ಢಿಕ್ಕಿ: ಹಲವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 19.  ಕಾರು ಮತ್ತು ಗೂಡ್ಸ್ ಟೆಂಪೋ ನಡುವೆ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕು ಮಣಿಗೆರೆ ಬಳಿ ಇಂದು ಬೆಳಗ್ಗೆ ನಡೆದಿದೆ. ಟೆಂಪೋ ಚಾಲಕ ದುರ್ಗೇಶ್ (21), ಕಾರು ಚಾಲಕ ರಾಜೇಶ್ (28), ಕಾರಿನಲ್ಲಿದ್ದ,ಅಭಿ, ಚಂದನ್, ಮೋಹನ, ಬಾಲ, ಟೆಂಪೋದಲ್ಲಿದ್ದ ಕಾಂತರಾಜೇ ಅರಸ್, ವರಲಕ್ಷ್ಮೀ, ಶೆಟ್ಟಮ್ಮಣ್ಣಿ, ನಾಗರಾಜೇ ಅರಸ್, ಕಾಂಚನ ಅವರಿಗೆ ಗಂಭೀರ ಗಾಯಗಳಾಗಿವೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಾಳಾಗಿದ್ದು, ಯಾವುದೇ ಸಾವು ಸಂಭವಿಸಿಲ್ಲ. ಅಪಘಾತ ನಡೆದ ಸ್ಥಳ

ಕಾರು- ಟೆಂಪೋ ಢಿಕ್ಕಿ: ಹಲವರಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ದ್ವಿಚಕ್ರ ವಾಹನಗಳ ಢಿಕ್ಕಿ- ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಸೆ. 19. ಸ್ಕೂಟರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಕುಂತೂರು ಚರ್ಚ್ ಬಳಿ ನಡೆದಿದೆ. ಕುಂತೂರು ಕೆಮ್ಮಣ್ಣು ನಿವಾಸಿ ಶಶಿಧರ ಎಂಬವರು ಆಲಂಕಾರಿನಿಂದ ಕುಂತೂರಿಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಎದುರುಗಡೆ ಹೋಗುತ್ತಿದ್ದ ಉಮೇಶ ಎಂಬವರು ತನ್ನ ಬೈಕನ್ನು ಯಾವುದೇ ಮುನ್ಸೂಚನೆ ನೀಡದೇ ಒಮ್ಮಲೇ ಬಲಭಾಗಕ್ಕೆ ತಿರುಗಿಸಿದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಸ್ಕೂಟರ್ ಬೈಕ್ ಗೆ ಢಿಕ್ಕಿಯಾಗಿ ಸವಾರ ಸಹಿತ ರಸ್ತೆಗೆ ಬಿದ್ದಿದ್ದಾರೆ ಎನ್ನಲಾಗಿದೆ.

ಕಡಬ: ದ್ವಿಚಕ್ರ ವಾಹನಗಳ ಢಿಕ್ಕಿ- ಸವಾರರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಎಂಟಿಸಿ ಬಸ್ ಹರಿದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಯಿಂದ ವಿಕಲಚೇತನ ಯುವಕ ಮೃತಪಟ್ಟ ಘಟನೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ನಡೆದಿದೆ. ವಿಶೇಷ ಚೇತನ ಯುವಕನೋರ್ವ ಬಸ್ ನಿಲ್ದಾಣದ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಅತಿ ವೇಗವಾಗಿ ಬಂದ ಬಿಎಂಟಿಸಿ ಬಸ್ ನಿಯಂತ್ರಣ ಸಿಗದೇ ಯುವಕನ ಮೇಲೆಯೇ ಹರಿದಿದ್ದು, ಪರಿಣಾಮ ಗಂಭೀರ ಗಾಯಗೊಂಡ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಬಸ್ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣವೆನ್ನಲಾಗಿದೆ.

ಬಿಎಂಟಿಸಿ ಬಸ್ ಹರಿದು ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಕೂಟರ್ ಗೆ ಕಂಟೈನರ್ ಢಿಕ್ಕಿ- ಸಹಸವಾರೆ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಸ್ಕೂಟರ್‌ಗೆ ಕಂಟೈನರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ನಲ್ಲಿದ್ದ ಸಹಸವಾರೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕೂಳೂರು ಬಳಿ ನಡೆದಿದೆ. ಮೃತ ಸಹಸವಾರೆಯನ್ನು ಲಾವಣ್ಯ (27) ಎಂದು ಗುರುತಿಸಲಾಗಿದೆ. ಶಕೀಲ್ ಸುವರ್ಣ ಎಂಬವರು ಪತ್ನಿ ಲಾವಣ್ಯ ಅವರೊಂದಿಗೆ ಪಣಂಬೂರಿನಿಂದ ಕಾವೂರು ಕಡೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಕೂಳೂರು ನದಿ ಸೇತುವೆಯಲ್ಲಿ ಪಣಂಬೂರು ಕಡೆಯಿಂದ ಬರುತ್ತಿದ್ದ ಕಂಟೈನರ್ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಇದರಿಂದಾಗಿ ಶಕೀಲ್ ಸುವರ್ಣ ಮತ್ತು ಲಾವಣ್ಯ ಸ್ಕೂಟರ್ ಸಮೇತ ರಸ್ತೆಗೆ

ಸ್ಕೂಟರ್ ಗೆ ಕಂಟೈನರ್ ಢಿಕ್ಕಿ- ಸಹಸವಾರೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ 15ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಹಾವೇರಿ, ಸೆ. 18. ಬೆಂಗಳೂರಿನಿಂದ ಗೋವಾಕ್ಕೆ ಹೊರಟಿದ್ದ ಖಾಸಗಿ ಬಸ್ಸೊಂದು ಉರುಳಿಬಿದ್ದ ಪರಿಣಾಮ 15ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಹಾವೇರಿ ತಾಲೂಕಿನ ವರದಾಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಮುಂಜಾನೆ ನಡೆದಿದೆ. ನಸುಕಿನ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಸರ್ವೀಸ್ ರಸ್ತೆಗೆ ಉರುಳಿಬಿದ್ದಿದೆ. ಇದರಿಂದ 15ಕ್ಕೂ ಅಧಿಕ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.  

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ 15ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಟೋ- ಬಸ್ ಢಿಕ್ಕಿ: ಸವಾರರಿಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 14. ಆಟೋಗೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಹಾಗೂ ಪ್ರಯಾಣಿಕ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ನಗರದ ನಲ್ಲೂರು ಗೇಟ್ ಬಳಿ ಸಂಭವಿಸಿದೆ. ಮೃತರನ್ನು ಮಲ್ಲೇದೇವರನಹಳ್ಳಿ ಗ್ರಾಮದ ಚಂದ್ರಶೇಖರ್(38), ರಾಘವೇಂದ್ರ (40) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ರಾತ್ರಿ ಮೂಡಿಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಸಾರಿಗೆ ಬಸ್ ಚಿಕ್ಕಮಗಳೂರು ನಗರ ಸಮೀಪದ ನಲ್ಲೂರು

ಆಟೋ- ಬಸ್ ಢಿಕ್ಕಿ: ಸವಾರರಿಬ್ಬರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top