Accident

ಮಂಗಳೂರಿನಲ್ಲಿ ರಸ್ತೆ ಅಪಘಾತ – ಕಡಬದ ಯುವಕರಿಬ್ಬರು ಮೃತ್ಯು…!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ನಿಯಂತ್ರಣ ತಪ್ಪಿದ ಬೈಕೊಂದು ಬಿದ್ದ ಪರಿಣಾಮ ಯುವಕರಿಬ್ಬರು ಮೃತಪಟ್ಟ ಘಟನೆ ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ನಡೆದಿದೆ. ಮೃತ ಯುವಕರನ್ನು ರಾಮಕುಂಜ ಗ್ರಾಮದ ಪಾದೆ ನಿವಾಸಿ ಚೆನ್ನಪ್ಪ ಕುಲಾಲ್ ಅವರ ಪುತ್ರ ಚೇತನ್(24) ಹಾಗೂ ಕೋಡಿಕಲ್ ನಿವಾಸಿ ಕಾಶೀನಾಥ್(17) ಎಂದು ಗುರುತಿಸಲಾಗಿದೆ. ಮೃತ ಸವಾರ ಚೇತನ್ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಬೈಕ್‌ ಉರುಳಿಬಿದ್ದಿದೆ. ಇದರಿಂದ ಅವರಿಬ್ಬರು ರಸ್ತೆಗೆ ಎಸೆಯಲ್ಪಟ್ಟಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಮಂಗಳೂರಿನಲ್ಲಿ ರಸ್ತೆ ಅಪಘಾತ – ಕಡಬದ ಯುವಕರಿಬ್ಬರು ಮೃತ್ಯು…! Read More »

ಕರಾವಳಿ, ಕ್ರೈಮ್ ನ್ಯೂಸ್

ಹಳಿದಾಟುತ್ತಿದ್ದ ವೇಳೆ ರೈಲು ಢಿಕ್ಕಿ- ಪೊಲೀಸ್ ಮೃತ್ಯು…!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಸೆ. 06. ಇಯರ್‌ಫೋನ್‌ ಹಾಕಿಕೊಂಡು ಹಳಿದಾಟುತ್ತಿದ್ದ ಪೊಲೀಸ್ ಸಿಬ್ಬಂದಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರನ್ನು ಶಾಮ್ಲಿ ಜಿಲ್ಲೆಯ ನಿವಾಸಿ ಅಕ್ಷಯ್‌ವೀರ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಇವರು ಶಹಜಹಾನ್‌ ಪುರದ ಇಂದಿರಾನಗರ ರೈಲ್ವೇ ಕ್ರಾಸಿಂಗ್‌ನಲ್ಲಿ ಇಬ್ಬರು ಪುರುಷರೊಂದಿಗೆ ರೈಲ್ವೆ ಹಳಿ ದಾಟುತ್ತಿದ್ದ ಸಂದರ್ಭ ಇಯರ್‌ಫೋನ್‌ ಹಾಕಿಕೊಂಡಿದ್ದರಿಂದ ರೈಲು ಬರುವುದು ತಿಳಿಯದೇ ರೈಲು ಢಿಕ್ಕಿಹೊಡೆದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಹಳಿದಾಟುತ್ತಿದ್ದ ವೇಳೆ ರೈಲು ಢಿಕ್ಕಿ- ಪೊಲೀಸ್ ಮೃತ್ಯು…! Read More »

ಕರಾವಳಿ

ಪಾದಚಾರಿಗಳಿಗೆ ಬೈಕ್ ಢಿಕ್ಕಿ ನಾಲ್ವರು ಮೃತ್ಯು- ಮೂವರಿಗೆ ಗಂಭೀರ ಗಾಯ..!

(ನ್ಯೂಸ್ ಕಡಬ) newskadaba.com  ವಿಜಯಪುರ, ಸೆ. 6. ರಸ್ತೆ ದಾಟುತ್ತಿದ್ದ ಪಾದಚಾರಿಗಳಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ದಾರುಣ ಘಟನೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಹೊರ ವಲಯದ ಪಿಕೆಪಿಎಸ್ ಬಳಿ ಗುರುವಾರ ರಾತ್ರಿ 11.10ರ ಸುಮಾರಿಗೆ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮೃತ ಪಟ್ಟವರನ್ನು ಬೈಕ್ ಚಾಲಕ ತಾಳಿಕೋಟೆ ತಾಲೂಕಿನ ಗೊಟಗುಣಕಿ ನಿವಾಸಿ ನಿಂಗರಾಜ ಚೌಡಕಿ(22), ಸಹ ಸವಾರ ದೇವರಹಿಪ್ಪರಗಿ ತಾಲೂಕು ಹಂಚಲಿ ನಿವಾಸಿ ಅನೀಲ ಎಂ. ಖೈನೂರ(23), ರಸ್ತೆ

ಪಾದಚಾರಿಗಳಿಗೆ ಬೈಕ್ ಢಿಕ್ಕಿ ನಾಲ್ವರು ಮೃತ್ಯು- ಮೂವರಿಗೆ ಗಂಭೀರ ಗಾಯ..! Read More »

ಕ್ರೈಮ್ ನ್ಯೂಸ್

ಸಾರಿಗೆ ಬಸ್- ಶಾಲಾ ವಾಹನ ಡಿಕ್ಕಿ: ಇಬ್ಬರು ಮಕ್ಕಳು ಮೃತ್ಯು  ಹಲವರಿಗೆ ಗಂಭೀರ ಗಾಯ     

(ನ್ಯೂಸ್ ಕಡಬ) newskadaba.com  ರಾಯಚೂರು, ಸೆ. 5. ರಾಜ್ಯ ಸಾರಿಗೆ ಸಂಸ್ಥೆ ಬಸ್ ಹಾಗೂ ಶಾಲಾ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಹಲವು ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಬಳಿ ನಡೆದಿದೆ. ಲೊಯಲ್ ಶಾಲಾ ಮಕ್ಕಳನ್ನು ಕರೆದುಕೊಂಡು ಶಾಲೆಗೆ ತೆರಳುತ್ತಿದ್ದ ವಾಹನಕ್ಕೆ ಮಾನ್ವಿ ಪಟ್ಟಣದಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾರಿಗೆ ಬಸ್- ಶಾಲಾ ವಾಹನ ಡಿಕ್ಕಿ: ಇಬ್ಬರು ಮಕ್ಕಳು ಮೃತ್ಯು  ಹಲವರಿಗೆ ಗಂಭೀರ ಗಾಯ      Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ- ಯುವಕ ಮೃತ್ಯು..!  

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 5. ರಸ್ತೆ ಅಪಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್ ನಲ್ಲಿ ಬೆಳಗ್ಗೆ ನಡೆದಿದೆ. ಮೃತ ಯುವಕನನ್ನು ಹಳೆಯಂಗಡಿ ಇಂದಿರಾನಗರಇಂದಿರಾನಗರ ನಿವಾಸಿ ಗಣೇಶ ದೇವಾಡಿಗ (27) ಎಂದು ಗುರುತಿಸಲಾಗಿದೆ. ಗಣೇಶ ಅವರು ಪಣಂಬೂರು ಬಂದರ್ ನಲ್ಲಿ ಉದ್ಯೋಗದಲ್ಲಿದ್ದು, ಬೆಳಗ್ಗೆ 7 ಗಂಟೆಯ ಸುಮಾರಿಗೆ ಕೆಲಸಕ್ಕೆ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಮುಕ್ಕ ಜಂಕ್ಷನ್ ನಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಬಳಿ ಸ್ಕೂಟರ್ ನಿಧಾನಿಸಿದಾಗ ಹಿಂದಿನಿಂದ ಬಂದ

ರಸ್ತೆ ಅಪಘಾತ- ಯುವಕ ಮೃತ್ಯು..!   Read More »

ಕರಾವಳಿ, ಕ್ರೈಮ್ ನ್ಯೂಸ್

ಗೂನಡ್ಕ: ಬಸ್-ಕಾರು ನಡುವೆ ಅಪಘಾತ – ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಗೂನಡ್ಕ, ಸೆ. 05. ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಬುಧವಾರ ಮಧ್ಯರಾತ್ರಿ ಗೂನಡ್ಕದಲ್ಲಿ ನಡೆದಿದೆ. ಮಡಿಕೇರಿಯಿಂದ ಬರುತ್ತಿದ್ದ ಓಮ್ನಿ ಕಾರು ಕಾಸರಗೋಡಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸುಳ್ಯ ಹಾಗೂ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಗೂನಡ್ಕ: ಬಸ್-ಕಾರು ನಡುವೆ ಅಪಘಾತ – ಮೂವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ವಾಹನ ಅಪಘಾತ- 4 ಭಾರತೀಯರು ಮೃತ್ಯು..!

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 04.  ಟೆಕ್ಸಾಸ್‌ ನಲ್ಲಿ ಐದು ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಸೇರಿದಂತೆ ನಾಲ್ವರು ಭಾರತೀಯರು ಸಾವನ್ನಪ್ಪಿದ್ದಾರೆ. ಅರ್ಕಾನ್ಸಾಸ್ ನ ಬೆಂಟೊನ್‌ ವಿಲ್ಲೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಮೃತಪಟ್ಟವರನ್ನು ಆರ್ಯನ್ ರಘುನಾಥ್ ಓರಂಪಾಟಿ, ಫಾರೂಕ್ ಶೇಕ್, ಲೋಕೇಶ್ ಪಾಲಾಚಾರ್ಲ ಮತ್ತು ದರ್ಶಿನಿ ವಾಸುದೇವನ್ ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಟ್ರಕ್ ಹಿಂಬದಿಯಿಂದ ಭಾರತೀಯರಿದ್ದ ಎಸ್‌ ಯುವಿ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು

ವಾಹನ ಅಪಘಾತ- 4 ಭಾರತೀಯರು ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ರಸ್ತೆ ಅಪಘಾತ- ಮೇಲ್ಸೇತುವೆಯಿಂದ ಬಿದ್ದ ಕಾರು ಓರ್ವ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03. ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ನಂತರ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಮೇಲ್ಸೇತುವೆಯಿಂದ ಉರುಳಿಬಿದ್ದ ಪರಿಣಾಮ ಓರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಯಶವಂತಪುರದಲ್ಲಿ ಮಂಗಳವಾರದಂದು ನಸುಕಿನ ವೇಳೆ ನಡೆದಿದೆ. ಮೃತರನ್ನು ತಮಿಳುನಾಡು ಸೇಲಂ ಮೂಲದ ಶಬರೀಶ್(29) ಎಂದು ಗುರುತಿಸಲಾಗಿದೆ. ಗಾಯಗೊಂಡ ಶಂಕರ್ ರಾಮ್, ಅನುಶ್ರೀ, ಮಿಥುನ್ ಹಾಗೂ ಬೈಕ್ ಸವಾರ ಮಂಜುನಾಥ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ಮುಂದುವರಿಸಲಾಗಿದೆ ಎಂದು ಸಂಚಾರ ಪೊಲೀಸರು

ರಸ್ತೆ ಅಪಘಾತ- ಮೇಲ್ಸೇತುವೆಯಿಂದ ಬಿದ್ದ ಕಾರು ಓರ್ವ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ- 5ಮಂದಿಗೆ ಗಂಭೀರ ಗಾಯ..!

(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ. 03. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಯಶವಂತಪುರ ಸರ್ಕಲ್​ ಬಳಿ ಸಂಭವಿಸಿದೆ. ಇಂದು ಮುಂಜಾನೆ 3.45ರ ಸುಮಾರಿಗೆ ಅಪಘಾತ ಸಂಭವಿಸಿದೆ. ಬೈಕ್ ಗೆ ಗುದ್ದಿದ ಕಾರು ಫ್ಲೈಓವರ್​ನಿಂದ ಕೆಳಗೆ ಬಿದ್ದಿದ್ದು, ಪರಿಣಾಮ ಕಾರಿನಲ್ಲಿದ್ದ ಮೂವರು, ಬೈಕ್​ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಪೊಲೀಸರು ಹಾಗೂ ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಇಬ್ಬರು ಪ್ರಾಣಾಪಾಯದಿಂದ

ರಸ್ತೆ ಅಪಘಾತ- 5ಮಂದಿಗೆ ಗಂಭೀರ ಗಾಯ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟ್ರಕ್ ಹಾಗೂ ಕಾರು ನಡುವೆ ಢಿಕ್ಕಿ – ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 31. ಟ್ರಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಪಾಣೆಮಂಗಳೂರು ಸಮೀಪದ ಮಾರ್ನಬೈಲು ಎಂಬಲ್ಲಿ ಶನಿವಾರದಂದು ನಡೆದಿದೆ. ಗಾಯಗೊಂಡವರನ್ನು ಪಾಣೆಮಂಗಳೂರು ಸಮೀಪದ ಬೋಳಂಗಡಿ ನಿವಾಸಿ ಸಾಮಾಜಿಕ ಕಾರ್ಯಕರ್ತ ಎಂ.ಹೆಚ್. ಮುಸ್ತಫಾ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಲ್ಕಾರ್ ನಿಂದ ದೇರಳಕಟ್ಟೆ ಕಡೆಗೆ ಹೋಗುತ್ತಿದ್ದ ಟ್ರಕ್, ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದ್ದು ಕಾರು ಸಂಪೂರ್ಣ ಜಖಂಗೊಂಡಿದೆ. ಹೆಚ್ಚಿನ

ಟ್ರಕ್ ಹಾಗೂ ಕಾರು ನಡುವೆ ಢಿಕ್ಕಿ – ಓರ್ವ ಗಂಭೀರ Read More »

ಕರಾವಳಿ
Scroll to Top