Accident

ಸುಳ್ಯ: ಎರಡು ಕಾರುಗಳ ನಡುವೆ ಡಿಕ್ಕಿ-ಮೂವರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.05:  ಸುಳ್ಯ ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಎರಡು ಕಾರುಗಳಿಗೆ ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಘಟನೆ ಸುಳ್ಯದ ಅರಂತೋಡು ಮಸೀದಿ ಬಳಿ ನಡೆದಿದೆ. ಅಪಘಾತವಾದ ಕಾರುಗಳಲ್ಲಿಇದ್ದವರಲ್ಲಿ ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಗೆ ಗಾಯಗಳಾಗಿದ್ದು, ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜು ಬಿಟ್ಟು ಮನೆಗೆ ಹೋಗುತ್ತಿದ್ದ ಮಕ್ಕಳು ಕಾರಿನ ಅಪಘಾತದಿಂದ ಅಲ್ಪ ಅಂತರದಿಂದ ಪಾರಾಗಿದ್ದಾರೆ.

ಸುಳ್ಯ: ಎರಡು ಕಾರುಗಳ ನಡುವೆ ಡಿಕ್ಕಿ-ಮೂವರಿಗೆ ಗಾಯ Read More »

ಕರಾವಳಿ

ತೆಲಂಗಾಣ: ಬಸ್-ಟ್ರಕ್ ನಡುವೆ ಭೀಕರ ಅಪಘಾತ-20 ಮಂದಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ನ.03: ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್‌ ಲಾರಿಯೊಂದು ಸಾರಿಗೆ ಬಸ್‌‍ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ 20 ಜನರು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ತೆಲಂಗಾಣಾದ ರಂಗಾ ರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿ ನಡೆದಿದೆ. ಟಿಪ್ಪರ್‌ ತೆಲಂಗಾಣ ರಸ್ತೆ ಸಾರಿಗೆ ನಿಗಮ (ಆರ್‌ಟಿಸಿ) ವಾಹನಕ್ಕೆ ಡಿಕ್ಕಿ ಹೊಡೆದ ಡಿಕ್ಕಿ ರಭಸಕ್ಕೆ ಬಸ್‌‍ ಬಸ್‌‍ ಒಳಗೆ ಜಲ್ಲಿಕಲ್ಲು ಬಿದ್ದಿದ್ದು ಸ್ಥಳದಲ್ಲೇ 16 ಜನರು ಸಾವನ್ನಪ್ಪಿದರು, ಎಂಟು ಮಂದಿ ಗಾಯಗೊಂಡರು ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತೆಲಂಗಾಣ: ಬಸ್-ಟ್ರಕ್ ನಡುವೆ ಭೀಕರ ಅಪಘಾತ-20 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಪಘಾತದಲ್ಲಿ ಇಬ್ಬರು ಯುವಕರ ಸಾವು

(ನ್ಯೂಸ್‌ ಕಡಬ) newskadaba.com,  ಅ..24: ತಾಲೂಕಿನ ರಾಮಯ್ಯನಪಾಳ್ಯದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.ಮೃತರನ್ನು ಚಿಕ್ಕತಿಮನಹಳ್ಳಿ ಗ್ರಾಮದ ನಂದನ್‌ಕುಮಾರ್‌ (22), ರವಿಕುಮಾರ್‌ (24) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಇಬ್ಬರೂ ಕೆಲಸದ ನಿಮಿತ್ತ ದೊಡ್ಡಬಳ್ಳಾಪುರ ಕಡೆಗೆ ಬರುತ್ತಿದ್ದ ವೇಳೆ, ರಾಮಯ್ಯನಪಾಳ್ಯದ ಬಳಿ ದ್ವಿಚಕ್ರವಾಹನ ನಿಯಂತ್ರಣ ತಪ್ಪಿ ನೆಲಕ್ಕುರುಳಿದೆ. ಈ ವೇಳೆ ಅದೇ ಮಾರ್ಗವಾಗಿ ಹೋಗುತ್ತಿದ್ದ ಆಟೋವೊಂದು ಕೆಳಗೆ ಬಿದ್ದಿದ್ದ ಇವರ ಮೇಲೆ ಹರಿದು ಈ ಘಟನೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ

ಅಪಘಾತದಲ್ಲಿ ಇಬ್ಬರು ಯುವಕರ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನ್ಯೂಯಾರ್ಕ್ ಏರ್ಪೋರ್ಟ್ ರನ್ವೇನಲ್ಲಿ ಎರಡು ವಾಣಿಜ್ಯ ವಿಮಾನಗಳು ಪರಸ್ಪರ ಡಿಕ್ಕಿ

(ನ್ಯೂಸ್‌ ಕಡಬ) newskadaba.com,  ಅ.02  ವಾಷಿಂಗ್ಟನ್: ಬುಧವಾರ ರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ, ಟ್ಯಾಕ್ಸಿಂಗ್ ಸಮಯದಲ್ಲಿ ಡೆಲ್ಟಾ ಏರ್‌ಲೈನ್ಸ್‌ಗೆ ಸೇರಿದ 2  ವಿಮಾನಗಳು ಪರಸ್ಪರ ಡಿಕ್ಕಿಯಾಗಿ, ಒಂದು ವಿಮಾನದ ರೆಕ್ಕೆ ಸಂಪೂರ್ಣ ಮುರಿದು ಬಿದ್ದಿದೆ. ಅಪಘಾತವು ಸ್ಥಳೀಯ ಸಮಯದ ಪ್ರಕಾರ ರಾತ್ರಿ 9:56ಕ್ಕೆ ನಡೆದಿದೆ. ಏರ್ ಟ್ರಾಫಿಕ್ ಕಂಟ್ರೋಲ್ ಆಡಿಯೋನ ಪ್ರಕಾರ, 2 ವಿಮಾನಗಳು ಚಲಾಯಿಸುತ್ತಿದ್ದ ಸಮಯದಲ್ಲಿ, ಒಂದು ಜೆಟ್‌ನ ಮುಂಭಾಗವು ಮತ್ತೊಂದು ಜೆಟ್‌ನ ಬಲಭಾಗದ ರೆಕ್ಕೆಗೆ ಡಿಕ್ಕಿ ಹೊಡೆದಿದೆ. ಪೈಲಟ್‌ಗಳು ತಮ್ಮ ವಿಂಡ್‌ಶೀಲ್ಡ್‌ಗೆ ಹಾನಿಯಾಗಿದೆ

ನ್ಯೂಯಾರ್ಕ್ ಏರ್ಪೋರ್ಟ್ ರನ್ವೇನಲ್ಲಿ ಎರಡು ವಾಣಿಜ್ಯ ವಿಮಾನಗಳು ಪರಸ್ಪರ ಡಿಕ್ಕಿ Read More »

ಕರಾವಳಿ

ಏಕಾಏಕಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ KSRTC ಬಸ್ ಅಪಘಾತ

(ನ್ಯೂಸ್‌ ಕಡಬ) newskadaba.com,  ಸೆ.26 ರಾಯಚೂರು: ಸರ್ಕಾರಿ ಸಾರಿಗೆ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಪಲ್ಟಿಯಾದ ಪರಿಣಾಮ ಒಬ್ಬ ಪ್ರಯಾಣಿಕನ ಕಾಲು ಮುರಿದಿದ್ದು 8 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ರಾಯಚೂರಿನ ಹೊರವಲಯದ ಸಾಥಮೈಲ್ ಕ್ರಾಸ್ ಹತ್ತಿರ ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದೆ. ದಾವಣಗೆರೆಯಿಂದ ರಾಯಚೂರಿಗೆ ಬರುತ್ತಿದ್ದ ಬಸ್ ಇದಾಗಿದೆ. ಏಕಾಏಕಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕ ಬಸ್​ ಅನ್ನು ಎಡಕ್ಕೆ ತಿರುಗಿಸಿದ್ದಾನೆ. ಆಗ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ

ಏಕಾಏಕಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ KSRTC ಬಸ್ ಅಪಘಾತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ನಿಂತಿದ್ದ ಪಿಕ್ ಅಪ್ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ; ಪಾದಚಾರಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.26 ಉಡುಪಿ: ಟಿಪ್ಪರ್ ಲಾರಿಯೊಂದು ನಿಂತಿದ್ದ ಪಿಕ್ ಅಪ್ ವಾಹನಕ್ಕೆ ಡಿಕ್ಕಿ ಹೊಡೆದು, ಬಳಿಕ ಪಾದಚಾರಿಯೊಬ್ಬರಿಗೆ ಗುದ್ದಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯ ಕಾಮತ್ ಪೆಟ್ರೋಲ್ ಪಂಪ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೆಪ್ಟೆಂಬರ್ 25ರಂದು ಸಂಭವಿಸಿದೆ. ಮೃತರನ್ನು ಬಿಹಾರ ಮೂಲದ ರಾಜಕುಮಾರ್ ಶರ್ಮಾ (23) ಎಂದು ಗುರುತಿಸಲಾಗಿದೆ. ಮೃತರು ಎರ್ಮಾಳ್‌ನಲ್ಲಿರುವ ಪ್ಲೈವುಡ್ ಕಾರ್ಖಾನೆಯಲ್ಲಿ ವಲಸೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅಪಘಾತ ಸಂಭವಿಸುವಾಗ ಅವರು ತಮ್ಮ ಸಹೋದ್ಯೋಗಿಗಳೊಂದಿಗೆ ಪಡುಬಿದ್ರಿಯ ಕಡೆಗೆ

ಉಡುಪಿ: ನಿಂತಿದ್ದ ಪಿಕ್ ಅಪ್ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ; ಪಾದಚಾರಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಸೌದಿ ಅರೇಬಿಯಾದಲ್ಲಿ ಭೀಕರ ಬಸ್ ಅಪಘಾತ; ಉಳ್ಳಾಲದ ಯುವಕನೋರ್ವ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.16 ಮಂಗಳೂರು : ಸೌದಿ ಅರೇಬಿಯಾದಲ್ಲಿ ರವಿವಾರ ಸಂಜೆ ನಡೆದ ಭೀಕರ ಬಸ್ ಅಪಘಾತದಲ್ಲಿ ಉಳ್ಳಾಲದ ಮಿಲ್ಲತ್ ನಗರದ ಯುವಕ ಸಾವನ್ನಪ್ಪಿದ್ದಾರೆ. ಮೃತರನ್ನು ಉಳ್ಳಾಲದ ಮಿಲ್ಲತ್ ನಗರದ ನಿವಾಸಿ ಮೊಹಮ್ಮದ್ ಅವರ ಪುತ್ರ ಅಬ್ದುಲ್ ರಝಿಕ್ (27) ಎಂದು ಗುರುತಿಸಲಾಗಿದೆ. ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ರಝಿಕ್, ರವಿವಾರ ಸಂಜೆ ನೈಟ್ ಶಿಫ್ಟ್‌ಗೆ ತೆರಳುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಬಸ್ ಇನ್ನೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೊಹಮ್ಮದ್

ಮಂಗಳೂರು: ಸೌದಿ ಅರೇಬಿಯಾದಲ್ಲಿ ಭೀಕರ ಬಸ್ ಅಪಘಾತ; ಉಳ್ಳಾಲದ ಯುವಕನೋರ್ವ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಕಾರು-ಟ್ಯಾಂಕರ್ ನಡುವೆ ಡಿಕ್ಕಿ- ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಬಳಿಯ ಕಡೇಪಾಲ ಬಳಿ ಬುಧವಾರ ಬೆಳಿಗ್ಗೆ ಕಾರು ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಕೊಡಗು ಜಿಲ್ಲೆಯ ಸಿದ್ದಾಪುರದ ನೆಲ್ಲಿಹುದಿಕೇರಿಯ ನಿವಾಸಿ ಶೋಭಾ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಟ್ಯಾಂಕರ್ ಮಡಿಕೇರಿಯಿಂದ ಸುಳ್ಯದ ಕಡೆಗೆ ಚಲಿಸುತ್ತಿತ್ತು, ಆದರೆ ಕಾರು ಮಡಿಕೇರಿ ಕಡೆಗೆ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿತ್ತು. ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ

ಸುಳ್ಯ: ಕಾರು-ಟ್ಯಾಂಕರ್ ನಡುವೆ ಡಿಕ್ಕಿ- ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಾಯಗೊಂಡಿರುವ ಘಟನೆ ಮುಕ್ಕ ಜಂಕ್ಷನ್ ನಲ್ಲಿ ನಡೆದಿದೆ. ಮೃತಪಟ್ಟವರನ್ನು ಚೇಳಾಯರು ನಿವಾಸಿ ಕರುಣಾಕರ ಶೆಟ್ಟಿ ಎಂದು ಗುರುತಿಸಲಾಗಿದೆ. ಗಾಯಗೊಂಡ ವಿಶ್ವನಾಥ (16) ಎಂಬವರು ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತ ನಡೆಸಿದ್ದ ಕಾರು ಚಾಲಕ ಹಳೆಯಂಗಡಿ ನಿವಾಸಿ ಮುಹಮ್ಮದ್ ತೌಫೀಕ್ ಎಂಬಾತನನ್ನು ಸಂಚಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕಾರು ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳಗಾವಿ ಹುಬ್ಬಳ್ಳಿಯಿಂದ ಪುಣೆಗೆ ಹೊರಟ್ಟಿದ್ದ ಬಸ್ ಪಲ್ಟಿ- ಸ್ಥಳದಲ್ಲೇ ಇಬ್ಬರು ಸಾವು

(ನ್ಯೂಸ್‌ ಕಡಬ) newskadaba.com, ಆ.28: ಬೆಳಗಾವಿ: ಸಮೀಪದ ಬಡೇಕೊಳ್ಳ ಕ್ರಾಸ್ ಬಳಿ ಬುಧವಾರ ರಾತ್ರಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 11 ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯಿಂದ ಪುಣೆಯತ್ತ ಹೊರಟಿದ್ದ ಗೋಗಟೆ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್‌ನಲ್ಲಿ ಒಟ್ಟು 12 ಜನರು ಪ್ರಯಾಣಿಸುತ್ತಿದ್ದು, ಇದರಲ್ಲಿ ಒಬ್ಬ ಮಹಿಳೆ ಮತ್ತು ಒಬ್ಬ ಪುರುಷ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಉಳಿದವರಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಕೆಲವು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪ್ರಾಥಮಿಕ

ಬೆಳಗಾವಿ ಹುಬ್ಬಳ್ಳಿಯಿಂದ ಪುಣೆಗೆ ಹೊರಟ್ಟಿದ್ದ ಬಸ್ ಪಲ್ಟಿ- ಸ್ಥಳದಲ್ಲೇ ಇಬ್ಬರು ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top