Accident

ಮಂಗಳೂರು: ದ್ವಿಚಕ್ರ ವಾಹನದಿಂದ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.07. ದ್ವಿಚಕ್ರ ವಾಹನದಿಂದ ಮಹಿಳೆಯೋರ್ವರು ಬಿದ್ದು ಮೃತಪಟ್ಟ ಘಟನೆ ಕಟೀಲು ಸಮೀಪದ ಕಲ್ಲಕುಮೇರು ಬಳಿ ನಡೆದಿದೆ ಎಂದು ವರದಿ ತಿಳಿಸಿದೆ. ಮೃತ ಮಹಿಳೆಯನ್ನು ಕಾರ್ಕಳದ ಈದು ಗ್ರಾಮದ ಮಮತಾ ಶೆಟ್ಟಿ (35) ಎಂದು ಗುರುತಿಸಲಾಗಿದೆ. ಮಮತಾ ಕಾರ್ಕಳದಿಂದ ಕಟೀಲಿಗೆ ತನ್ನ ಪತಿಯ ಜೊತೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದರು. ವೇಗವಾಗಿ ಬರುತ್ತಿದ್ದ ದ್ವಿಚಕ್ರವಾಹನ ಕಲ್ಲಕುಮೇರು ಬಳಿ ಹಂಪ್ಸ್ ಗಮನಿಸದ ಹಿನ್ನೆಲೆ ವೇಗವಾಗಿ ಬಂದ ಕಾರಣ ಮಮತಾ ದ್ವಿಚಕ್ರ ವಾಹನದಿಂದ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮಂಗಳೂರು: ದ್ವಿಚಕ್ರ ವಾಹನದಿಂದ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಮ್ರಾ ಯಾತ್ರಾರ್ಥಿಗಳು ತೆರಳುತ್ತಿದ್ದ ಕಾರು ಅಪಘಾತ ➤ ಐವರು ಭಾರತೀಯರು ಮೃತ್ಯು

(ನ್ಯೂಸ್ ಕಡಬ)newskadaba.com ಸೌದಿ ಅರೇಬಿಯಾ, ಏ.07. ಉಮ್ರಾಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಮಕ್ಕಳು ಸೇರಿದಂತೆ ಐವರು ಭಾರತೀಯರು ಮೃತಪಟ್ಡಿರುವ ಬಗ್ಗೆ ವರದಿಯಾಗಿದೆ. ಸೌದಿ ಅರೇಬಿಯಾದ ರಿಯಾದ್ ನಿಂದ ಉಮ್ರಾ ಯಾತ್ರೆಗೆ ಹೊರಟಿದ್ದ ಭಾರತೀಯ ಮೂಲದ ತಂಡ ಪ್ರಯಾಣಿಸುತ್ತಿದ್ದ ಕಾರು ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.  

ಉಮ್ರಾ ಯಾತ್ರಾರ್ಥಿಗಳು ತೆರಳುತ್ತಿದ್ದ ಕಾರು ಅಪಘಾತ ➤ ಐವರು ಭಾರತೀಯರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಕೋಲಾರ, ಏ.06. ಎರಡು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಪರವನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಬಂಗಾರಪೇಟೆ ತಾಲೂಕಿನ ತಂಗೇಡಿಮಿಟ್ಟೆಯ ಗೋಪಾಲ್(25), ಪರವನಹಳ್ಳಿಯ ನಿವಾಸಿ ನವೀನ್(26) ಎಂದು ಗುರುತಿಸಲಾಗಿದೆ. ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.  

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ
Death, deadbody, Waterfall

ಕುಂದಾಪುರ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಢಿಕ್ಕಿ ➤ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ)newskadaba.com ಕುಂದಾಪುರ, ಏ.06. ರಸ್ತೆ ದಾಟುತಿದ್ದ ಪಾದಚಾರಿಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ವಡೇರಹೋಬಲಿ ಗ್ರಾಮದ ನೆಹರೂ ಮೈದಾನದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ದಾಟುತಿದ್ದ ಅವರಿಗೆ ಕುಂದಾಪುರದಿಂದ ಉಡುಪಿಯತ್ತ ವೇಗವಾಗಿ ಸಾಗುತಿದ್ದ ಬೈಕ್ ಡಿಕ್ಕಿ ಹೊಡೆದಿತ್ತು. ಇದರಿಂದ ರಸ್ತೆಗೆ ಎಸೆಯಲ್ಪಟ್ಟು ತಲೆ, ಹೊಟ್ಟೆಗೆ ಗಂಭೀರವಾಗಿ ಗಾಯಗೊಂಡ ಹೊನ್ನೂರು ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದರು ಎನ್ನಲಾಗಿದೆ.

ಕುಂದಾಪುರ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಢಿಕ್ಕಿ ➤ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.06. ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ ನಡೆದ ಘಟನೆ ನಾಟೆಕಲ್ ಕಣಚೂರು ಆಸ್ಪತ್ರೆ ಮುಂಭಾಗದಲ್ಲಿ ನಡೆದಿದೆ ಎನ್ನಲಾಗಿದೆ. ಗುತ್ತಿಗೆದಾರ ನಾಸಿರ್ ಎಂಬವರ ಇನ್ನೋವಾ ಕಾರು ಮಂಗಳೂರಿನಿಂದ ಕೊಣಾಜೆ ಕಡೆಗೆ ತೆರಳುವ ಸಂದರ್ಭ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಹಣ್ಣು ಹಂಪಲು ಮಾರುತ್ತಿದ್ದ ಅಂಗಡಿಗೆ ನುಗ್ಗಿದೆ ಎಂದು ವರದಿ ತಿಳಿಸಿದೆ.

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಇಬ್ಬರು ಸ್ಥಳದಲ್ಲಿಯೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.04. ಮಗಳನ್ನು ಶಾಲೆಗೆ ಬಿಡಲು ಬೈಕ್’ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದು ತಂದೆ- ಮಗಳು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಾಗಡಿಯ ಸಾಬರಪಾಳ್ಯದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಾಗಡಿಯ ಕಲ್ಯಾ ಗ್ರಾಮದ ಯೋಗೇಶ್ (47) ಮಗಳು ಹರ್ಷಿತಾ(14) ಮೃತಪಟ್ಟವರು. ಪ್ರತಿನಿತ್ಯ ಶಾಲೆಗೆ ಬಿಡುತ್ತಿದ್ದಂತೆ ಮಗಳನ್ನು ಬೈಕ್’ನಲ್ಲಿ ಕೂರಿಸಿಕೊಂಡು ತಂದೆ ಶಾಲೆಯತ್ತ ಸಾಬರಪಾಳ್ಯದ ಮಾರ್ಗವಾಗಿ ಹೋಗುತ್ತಿದ್ದಾಗ ಜವರಾಯನಾಗಿ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.  

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಇಬ್ಬರು ಸ್ಥಳದಲ್ಲಿಯೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಮತ್ತು ಟ್ಯಾಂಕರ್ ನಡುವೆ ಢಿಕ್ಕಿ ➤ ನವ ದಂಪತಿ ಮೃತ್ಯು..!

(ನ್ಯೂಸ್ ಕಡಬ)newskadaba.com ಬೆಳಗಾವಿ, ಏ.03. ಕಾರು ಹಾಗೂ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವ ದಂಪತಿ ಮೃತಪಟ್ಟ ಘಟನೆ ಮೂಡಲಗಿ ತಾಲೂಕಿನ ಹಳ್ಳೂರು ಗ್ರಾಮದ ನಿಪ್ಪಾಣಿ- ಮುದೋಳ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಕಳೆದ 10 ದಿನಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಇಂದ್ರಜಿತ್​ ಮೋಹನ್ ಡಮ್ಮಣಗಿ(27) ಹಾಗೂ ಕಲ್ಯಾಣಿ ಇಂದ್ರಜಿತ್ ಡಮ್ಮಣಗಿ(24) ಮೃತರು ಎಂದು ತಿಳಿದುಬಂದಿದೆ. ಮಹಾರಾಷ್ಟ್ರದ ಮೂಲದ ದಂಪತಿ ಬಾಗಲಕೋಟೆ ಜಿಲ್ಲೆಯ ಸುಪ್ರಸಿದ್ಧ ಬಾದಾಮಿ ಬನಶಂಕರಿ ದೇವಿ ದರ್ಶನ ಪಡೆದು ಮರಳಿ‌ ಮನೆಗೆ ತೆರಳುವಾಗ

ಕಾರು ಮತ್ತು ಟ್ಯಾಂಕರ್ ನಡುವೆ ಢಿಕ್ಕಿ ➤ ನವ ದಂಪತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್‌ ಪಲ್ಟಿ..!!   ➤ನಾಲ್ವರು ಪ್ರಾಣಪಾಯದಿಂದ ಪಾರು

(ನ್ಯೂಸ್ ಕಡಬ)Newskadaba.com ಕಾರ್ಕಳ, ಮಾ.31. ಕಾರ್ಕಳ ರೋಟರಿ ಆಸ್ಪತ್ರೆಯ ಆ್ಯಂಬುಲೆನ್ಸ್‌ ಕಾರ್ಕಳದಿಂದ ಎಳ್ಳಾರೆ ಸಾಗುತ್ತಿದ್ದ ವೇಳೆ ಬಂಗ್ಲೆಗುಡ್ಡೆಯಲ್ಲಿ ಬೈಕ್‌ ಒಂದು ಅಡ್ಡ ಬಂದ ಪರಿಣಾಮ ಆ್ಯಂಬುಲೆನ್ಸ್‌ ಚಾಲಕ ಅದನ್ನು ತಪ್ಪಿಸಲು ಯತ್ನಿಸಿದ್ದನು. ಈ ಸಂದರ್ಭ ಆ್ಯಂಬುಲೆನ್ಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಆ್ಯಂಬುಲೆನ್ಸ್‌ನಲ್ಲಿದ್ದ ನಾಲ್ವರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ನಾಲ್ವರು ರೋಟರಿ ಆಸ್ಪತ್ರೆಯಲ್ಲಿ ಕಣ್ಣಿನ ಶಿಬಿರದಲ್ಲಿ ಸರ್ಜರಿ ಮಾಡಿಸಿಕೊಂಡು ಆಸ್ಪತ್ರೆಯ ಆ್ಯಂಬುಲೆನ್ಸ್‌ ನಲ್ಲಿ ಮನೆಗೆ ವಾಪಸಾಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಗಾಯಗೊಂಡವರನ್ನು ಕಾರ್ಕಳ ರೋಟರಿ ಆಸ್ಪತ್ರೆಗೆ ಕರೆಯೊಯ್ಯಲಾಗಿದ್ದು

ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್‌ ಪಲ್ಟಿ..!!   ➤ನಾಲ್ವರು ಪ್ರಾಣಪಾಯದಿಂದ ಪಾರು Read More »

ಕರಾವಳಿ

ಕಾಸರಗೋಡು: ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಅಪಘಾತ ➤ ಇಬ್ಬರು ಸವಾರರು ಮೃತ್ಯು

(ನ್ಯೂಸ್ ಕಡಬ)newskadaba.com  ಕಾಸರಗೋಡು, ಮಾ.31. ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಮೃತಪಟ್ಟ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ನೀಲೇಶ್ವರ ಚಾಯೋತ್ ನ ದೀಪಕ್ (33) ಮತ್ತು ಕನ್ನಾಟಿಪಾರೆಯ ಶೋಭಿತ್ (27) ಮೃತ ಪಟ್ಟವರು ಎಂದು ಗುರುತಿಸಲಾಗಿದೆ. ದೀಪಕ್ ಖಾಸಗಿ ಬಸ್ಸಿನ ಚಾಲಕರಾಗಿದ್ದರು. ಶೋಭಿತ್ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು. ಸ್ನೇಹಿತರಾಗಿದ್ದ ಇವರು ರಾತ್ರಿ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ ಎನ್ನಲಾಗಿದೆ.  

ಕಾಸರಗೋಡು: ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಅಪಘಾತ ➤ ಇಬ್ಬರು ಸವಾರರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್ ಢಿಕ್ಕಿ ➤ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.30. ನಗರದ ಬೆಂದೂರ್ ವೆಲ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತರನ್ನು ಐರಿನ್ ಡಿಸೋಜ(55) ಎಂದು ಗುರುತಿಸಲಾಗಿದೆ. ಸಿಟಿ ಬಸ್ ಬೆಂದೂರ್ ವೆಲ್ ಜಂಕ್ಷನ್ ನಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿದ್ದು, ಈ ವೇಳೆ ಅದೇ ಬಸ್ಸಿನಿಂದ ಇಳಿದು ಬಸ್ಸಿನ ಮುಂಭಾಗದಿಂದ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಮಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್ ಢಿಕ್ಕಿ ➤ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top