Accident

ಬೈಕ್‌ ಮತ್ತು ಜೀಪ್ ನಡುವೆ ಅಪಘಾತ     ➤ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ಐದು ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಪುಣೆ, ಮಾ.29. ಬೈಕ್‌ ಗೆ ಜೀಪ್ ಡಿಕ್ಕಿ ಹೊಡೆದು ಐವರು ಮೃತಪಟ್ಟ ಘಟನೆ ನಡೆದಿದೆ. ಈ ಭೀಕರ ಅಪಘಾತದ ಹಿನ್ನೆಲೆ ಜೀಪ್​​ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತರನ್ನು ಸುಂದರಾಬಾಯಿ(28) ಗೌರವ್ ಮಾದೆ (5) ನಿತಿನ್​​ ಮಾದೆ(25) ಮತ್ತೊಂದು ಮಗು ಮೃತಪಟ್ಟಿದೆ ಎನ್ನಲಾಗಿದೆ. ಮೃತರಲ್ಲಿ ಒಬ್ಬರ ಹೆಸರು ಪತ್ತೆಯಾಗಿಲ್ಲ. ಅರ್ಚನಾ ಮಾದೆ ಮತ್ತು ಸುಹಾಸ್​​ ಮಾದೆ ಅವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  

ಬೈಕ್‌ ಮತ್ತು ಜೀಪ್ ನಡುವೆ ಅಪಘಾತ     ➤ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ಐದು ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ..!   ➤ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ)newskadaba.com ಮಂಜೇಶ್ವರ,  ಮಾ.29. ಬೈಕ್ ಗೆ ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ನಡೆದಿದೆ. ಮಂಜೇಶ್ವರ ಕುಂಜತ್ತೂರಿನ ಆದಿಲ್ ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಜೊತೆಯಲ್ಲಿದ್ದ ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡಿದ್ದಾನೆ.  

ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ..!   ➤ ವಿದ್ಯಾರ್ಥಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ಲಾರಿ-ಬೈಕ್ ಢಿಕ್ಕಿ..!     ➤ ಪರೀಕ್ಷೆ ಬರೆದು ಹಿಂತಿರುಗುತ್ತಿದ್ದ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.29. ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ನಡೆದಿದೆ. ಮಂಜೇಶ್ವರ ಕುಂಜತ್ತೂರಿನ ಆದಿಲ್ ಮೃತಪಟ್ಟವನು ಎಂದು ತಿಳಿದುಬಂದಿದೆ. ಜೊತೆಯಲ್ಲಿದ್ದ ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಆದಿಲ್ ಕುಂಬಳೆಯ ಮಹಾತ್ಮ ಕಾಲೇಜಿನ ವಿದ್ಯಾರ್ಥಿಯಾಗಿದ್ದ. ಪರೀಕ್ಷೆ ಬರೆದು ಮರಳುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದು, ಆದಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣವನ್ನುದಾಖಲಿಸಿಕೊಂಡಿದ್ದಾರೆ.  

ಕಾಸರಗೋಡು: ಲಾರಿ-ಬೈಕ್ ಢಿಕ್ಕಿ..!     ➤ ಪರೀಕ್ಷೆ ಬರೆದು ಹಿಂತಿರುಗುತ್ತಿದ್ದ ವಿದ್ಯಾರ್ಥಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಸೌದಿಯಲ್ಲಿ ಅಪಘಾತ ಕರಾವಳಿಯ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.29. ಸೌದಿ ಅರೇಬಿಯಾದ ಜುಬೈಲ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರಾವಳಿಯ ಯುವಕ ಮೃತಪಟ್ಟಿದ್ದಾರೆ. ಮೃತರನ್ನು ಮಂಗಳೂರು ತಾಲೂಕು ಮಲ್ಲೂರಿನ ನಿವಾಸಿ, ಪಲ್ಲಿಬೆಟ್ಟು ಸುಲೈಮಾನ್‌(35) ಎಂದು ಗುರುತಿಸಲಾಗಿದೆ. ಇವರು ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿದ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸುಲೈಮಾನ್‌ ಜುಬೈಲ್ ನ ಲುಮಿನಾಸ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು.  

ಮಂಗಳೂರು: ಸೌದಿಯಲ್ಲಿ ಅಪಘಾತ ಕರಾವಳಿಯ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸೌದಿ ಅರೇಬಿಯಾದಲ್ಲಿ ಬಸ್ ಅಪಘಾತ     ➤ 20 ಮಂದಿ ಹಜ್ ಯಾತ್ರಿಕರ ದುರ್ಮರಣ

(ನ್ಯೂಸ್ ಕಡಬ)newskadaba.com ಸೌದಿ, ಮಾ.28. ಸೌದಿ ಅರೇಬಿಯಾದಲ್ಲಿ ಹಜ್ ಯಾತಾರ್ಥಿಗಳನ್ನು ಪವಿತ್ರ ಮೆಕ್ಕಾ ನಗರಕ್ಕೆ ಕರೆದೊಯ್ಯುತ್ತಿದ್ದ ಬಸ್, ಸೇತುವೆಯೊಂದಕ್ಕೆ ಢಿಕ್ಕಿ ಹೊಡೆದು ಬೆಂಕಿ ಹೊತ್ತುಕೊಂಡ ಪರಿಣಾಮ 20 ಮಂದಿ ಸಜೀವ ದಹನಗೊಂಡಿದ್ದಾರೆ. ಸಂಭವಿಸಿದ ಈ ಭೀಕರ ಅಪಘಾತದಲ್ಲಿ 2 ಡಜನ್‌ಗೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಸೌದಿ ಸರ್ಕಾರಿ ಮಾಧ್ಯಮ ವರದಿ ಮಾಡಿದೆ.  

ಸೌದಿ ಅರೇಬಿಯಾದಲ್ಲಿ ಬಸ್ ಅಪಘಾತ     ➤ 20 ಮಂದಿ ಹಜ್ ಯಾತ್ರಿಕರ ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಯುವಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಮಾ.28. ಬೈಕ್‌ ಗಳೆರಡು ಮುಖಾಮುಖಿ ಢಿಕ್ಕಿಯಾಗಿ ಅಪಘಾತ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಕಕ್ಕೆಪದವಿನಲ್ಲಿ ನಡೆದಿದೆ. ಮೃತ ಯುವಕನನ್ನು ಮಡಂತ್ಯಾರು ಸಮೀಪದ ಬಂಗೇರುಕಟ್ಟೆ ನಿವಾಸಿ ಫಯಾಝ್ (22) ಎಂದು ಗುರುತಿಸಲಾಗಿದೆ. ಫಯಾಝ್ ಕೆಲಸಕ್ಕೆ ಹೋಗಿ ಮನೆಗೆ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಫಯಾಝ್ ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.      

ಉಪ್ಪಿನಂಗಡಿ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಯುವಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಲಾರಿಗೆ ಸರಕು ವಾಹನ ಢಿಕ್ಕಿ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಮೊಳಕಾಲ್ಮುರು, ಮಾ.27, ಬೆಳಗಿವ ಜಾವ ಸರಕು ವಾಹನವೊಂದು ಲಾರಿಗೆ ಢಿಕ್ಕಿ ಹೊಡೆದು ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೀಮಾಂಧ್ರದ ರಾಯದುರ್ಗ ತಾಲ್ಲೂಕು ಬೊಮ್ಮನಾಳ್ ಮಂಡಲ ಗೋವಿಂದವಾಡ ಗ್ರಾಮದ ದಾಸರಿ ಕೇಶಪ್ಪ (30) ಮತ್ತು ಯ ವಂಡ್ರಪ್ಪ (64) ಮೃತಪಟ್ಟವರು. ಕುಮ್ಮರಿ ಸೋಮಣ್ಣ ಗಾಯಗೊಂಡಿದ್ದಾರೆ. ಅವರು ಸರಕು ವಾಹನದಲ್ಲಿ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಮೆಣಸಿನಕಾಯಿಯನ್ನು ಮಾರಾಟ ಮಾಡಲು ಹಾವೇರಿ ಜಿಲ್ಲೆ ಬ್ಯಾಡಗಿ ಮಾರುಕಟ್ಟೆಗೆ ಹೋಗುತ್ತಿದ್ದರು.    

ಲಾರಿಗೆ ಸರಕು ವಾಹನ ಢಿಕ್ಕಿ ➤ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು, ಬೈಕ್ ಮತ್ತು ಬಸ್ ನಡುವೆ ಸರಣಿ ಅಪಘಾತ ➤ ಯುವಕ ಮೃತ್ಯು..!

(ನ್ಯೂಸ್ ಕಡಬ)newskadaba.com ಕುಂದಾಪುರ, ಮಾ.27. ಕುಂಭಾಶಿಯಿಂದ ಕುಂದಾಪುರ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದ ಯುವಕನಿಗೆ ಕುಂಭಾಶಿ ಪಾಕಶಾಲಾ ಸಮೀಪದ ಕಡೆಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಕುಂಭಾಶಿಯಲ್ಲಿ ನಡೆದಿದೆ. ಕುಂಭಾಶಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಳೆಕಟ್ಟು ನಿವಾಸಿ ಪ್ರಶಾಂತ್ ಹಾಗೂ ಅವರ ಸ್ನೇಹಿತ ವಿಘ್ನೇಶ್ ಕೆಲಸದನಿಮಿತ್ತ ಕುಂದಾಪುರ ಕಡೆಗೆ ಹೋಗುವಾಗ ಈ ಅಪಘಾತ ಸಂಭವಿಸಿದ್ದು ಬೈಕ್ ಚಾಲನೆ ಮಾಡುತ್ತಿದ್ದ ಯುವಕ ಪ್ರಶಾಂತ್ ಪೂಜಾರಿ (25) ತೀವ್ರ ಸ್ವರೂಪದ ಗಾಯಗಳಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ

ಕಾರು, ಬೈಕ್ ಮತ್ತು ಬಸ್ ನಡುವೆ ಸರಣಿ ಅಪಘಾತ ➤ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಎಕ್ಸ್‌ಪ್ರೆಸ್ ವೇಯಲ್ಲಿ ಅಪಘಾತ ಕೊಡಗಿನ ತಾಯಿ- ಮಗ ಸಾವು

(ನ್ಯೂಸ್ ಕಡಬ) Newskadaba.com ಬೆಂಗಳೂರು; ಮಾ,25  ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಗೂಡ್ಸ್ ಟೆಂಪೊ ಹಠಾತ್‌ ಬ್ರೇಕ್‌ ಹಾಕಿದ ಕಾರಣ ಹಿಂದೆ ಬರುತ್ತಿದ್ದ ಕಾರು ಡಿಕ್ಕಿಯಾಗಿ  ಭೀಕರ ಅಪಘಾತ ಸಂಭವಿಸಿದೆ. ಕೊಡಗು ಜಿಲ್ಲೆ, ನಾಪೋಕ್ಲು ಬಲಮುರಿ ನಿವಾಸಿಗಳಾದ ಕವಿತಾ (47), ಅವರ ಪುತ್ರ ಆರ್ಯ ಅಯ್ಯಪ್ಪನ್ (14) ಮೃತಪಟ್ಟಿದ್ದಾರೆ.ಕಾರು ಚಾಲನೆ ಮಾಡುತ್ತಿದ್ದ ಆರ್ಯ ತಂದೆ ಮುತ್ತಪ್ಪ (54) ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ವಾಸಿಸುತ್ತಿದ್ದ ಕುಟುಂಬ ಯುಗಾದಿ ಹಬ್ಬಕ್ಕಾಗಿ ಸ್ವಗ್ರಾಮಕ್ಕೆ ಬಂದಿತ್ತು. ಹಬ್ಬ

ಎಕ್ಸ್‌ಪ್ರೆಸ್ ವೇಯಲ್ಲಿ ಅಪಘಾತ ಕೊಡಗಿನ ತಾಯಿ- ಮಗ ಸಾವು Read More »

ರಾಷ್ಟ್ರೀಯ ನ್ಯೂಸ್

ಗೋದಾಮಿನಲ್ಲಿ ಅಗ್ನಿ ಅವಘಡ ➤3,400 ಜನರನ ಸ್ಥಳಾಂತರ

(ನ್ಯೂಸ್ ಕಡಬ) Newskadaba.com: ಹಾಂಗ್ ಕಾಂಗ್; ಮಾ,25  ನಗರದ ಕೈಗಾರಿಕಾ ಪ್ರದೇಶವಾದ ಕೌಲೂನ್‌ನ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಸರ್ಕಾರ ತಿಳಿಸಿದೆ.ಬೆಂಕಿಯ ಪರಿಣಾಮ ಕಟ್ಟಡದಿಂದ ದಟ್ಟ ಹೊಗೆ ಹೊರಬರುತ್ತಿರುವುದು ಕಂಡು ಬಂದಿದೆ. ಹೀಗಾಗಿ ಹತ್ತಿರದಲ್ಲಿನ ನಾಲ್ಕು ಶಾಲೆಯ ವಿದ್ಯಾರ್ಥಿಗಳು ಹಾಗೂ ಹತ್ತಿರದಲ್ಲಿದ್ದ ಕಟ್ಟಡಗಳಲ್ಲಿನ ನಿವಾಸಿಗಳು ಸೇರಿ 3,400 ಜನರನ್ನು ಸ್ಥಳಾಂತರಿಸಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.ಈ ಘಟನೆಯಲ್ಲಿ, ಹೊಗೆ ಸೇವಿಸಿ ಇಬ್ಬರು ಕಾರ್ಮಿಕರು ಅಸ್ವಸ್ಥರಾಗಿದ್ದಾರೆ. ಬೆಂಕಿ ಕಾಣಿಸಿಕೊಂಡಿರುವುದಕ್ಕೆ ನಿಖರ ಕಾರಣ

ಗೋದಾಮಿನಲ್ಲಿ ಅಗ್ನಿ ಅವಘಡ ➤3,400 ಜನರನ ಸ್ಥಳಾಂತರ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top