Accident

ಜೀಪು – ಸ್ಕೂಟರ್ ಢಿಕ್ಕಿ ➤ಸ್ಕೂಟರ್ ಸವಾರಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ.13.ಜೀಪು ಮತ್ತು ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಗಾಯಗೊಂಡ  ಘಟನೆ  ಇಂದು  ಅಪರಾಹ್ನ ಕುಂಬ್ರ ಜಂಕ್ಷನ್ ನಲ್ಲಿ ನಡೆದಿದೆ.  ಪುತ್ತೂರಿನಿಂದ ಸುಳ್ಯದ ಕಡೆಗೆ ತೆರಳುತ್ತಿದ್ದ ಜೀಪು ಹಾಗೂ ಕೌಡಿಚ್ಚಾರ್ ನಿಂದ ಕುಂಬ್ರಕ್ಕೆ ಬರುತ್ತಿದ್ದ  ಸ್ಕೂಟರ್ ನಡುವೆ ಕುಂಬ್ರ ಜಂಕ್ಷನ್ ನಲ್ಲಿ ಅಪಘಾತ ಸಂಭವಿಸಿದೆ.ಪರಿಣಾಮ ಸ್ಕೂಟರ್ ಸವಾರನಿಗೆ ಸ್ವಲ್ಪ ಗಾಯಗಳಾಗಿವೆ. ಢಿಕ್ಕಿಯನ್ನು ತಪ್ಪಿಸುವ ಭರದಲ್ಲಿ ಜೀಪು ಚಾಲಕ ತನ್ನ ವಾಹನವನ್ನು ರಸ್ತೆ ಬದಿಗೆ ಇಳಿಸಿದ್ದು ಈ ವೇಳೆ ರಸ್ತೆ […]

ಜೀಪು – ಸ್ಕೂಟರ್ ಢಿಕ್ಕಿ ➤ಸ್ಕೂಟರ್ ಸವಾರಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಭೀಕರ ರಸ್ತೆ ಅಪಘಾತ ➤‌ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಗದದ, ಫೆ.13.  ಗದಗ ಜಿಲ್ಲೆ ಬೆಟಗೇರಿ ಗಜೇಂದ್ರಗಡ ರಸ್ತೆಯ ಬಸವೇಶ್ವರ ದೇವಸ್ಥಾನದ ಬಳಿ ಭೀಕರ ರಸ್ತೆ ಅಪಘಾತಕ್ಕೆ ಮೂವರು ಮೃತಪಟ್ಟಿದ್ದಾರೆ. ಆಟೋ ಹಾಗೂ  ಟೆಂಪೋ ನಡುವೆ ಡಿಕ್ಕಿ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದ್ದ ಮದುವೆ ಮುಗಿಸಿ ಬೆಟಗೇರಿ ಕಡೆ ಬರುತ್ತಿದ್ದ ಮಿನಿ ಬಸ್, ನರೇಗಲ್ ಕಡೆ ಹೊರಟಿದ್ದ ಎಲ್​​ಪಿಜಿ ಆಟೋ ನಡುವೆ ಅಪಘಾತ ನಡೆದಿದೆ. ನರಸಾಪೂರ ಆಶ್ರಯ ಕಾಲೋನಿಯ ಸಯ್ಯದ್ ಅಲಿ ಹಾಗೂ ಪ್ರದೀಪ್, ಮಂಜುನಾಥ್ ನಗರದ ನಿವಾಸಿ ನಿಖಿಲ್ ಮೃತರು. ಆಟೋ

ಭೀಕರ ರಸ್ತೆ ಅಪಘಾತ ➤‌ ಮೂವರು ಮೃತ್ಯು Read More »

ಕರ್ನಾಟಕ

ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತ್ಯು               

(ನ್ಯೂಸ್ ಕಡಬ)newskadaba.com ತುಮಕೂರು, ಫೆ.12. ತುಮಕೂರಿನಲ್ಲಿ ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಚಿಕ್ಕ ಹುಲಿಕುಂಟೆಯ ಅನಿಲ್ ಹಾಗೂ ಆಂದ್ರದ ಶ್ರೀಧರ್ ಎಂದು ಗುರುತಿಸಲಾಗಿದೆ. ಇಬ್ಬರು ಬೈಕ್ ನಲ್ಲಿ ಸೌತೆಕಾಯಿ ವ್ಯಾಪಾರಕ್ಕೆ ತೆರಳುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಈ ಸಂಬಂಧ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.    

ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತ್ಯು                Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ ಬಸ್ ಅಪಘಾತ ➤ಯುವತಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ.12.   ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಧರೆಗೆ ಢಿಕ್ಕಿಯಾದ ಪರಿಣಾಮ ಓರ್ವ ಪ್ರಯಾಣಿಕ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ವಿಟ್ಲ ಸಮೀಪದ ಕೆಲಿಂಜ ಸಂಭವಿಸಿದೆ. ವಿಟ್ಲದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಸೆಲಿನಾ ಬಸ್ ಅಪಘಾತದ ವೇಳೆ ಬಸ್ ನ ಮುಂಭಾಗದ ಗಾಜು ಒಡೆದು ಯುವತಿ ಹೊರಕ್ಕೆ ಎಸೆಯಲ್ಪಟ್ಟಿದ್ದಾಳೆ.ಯುವತಿಗೆ ಗಂಭೀರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಉಳಿದಂತೆ ಅನೇಕ ಪ್ರಯಾಣಿಕರಿಗೂ ಗಾಯವಾಗಿದ ಎಂದು

ಖಾಸಗಿ ಬಸ್ ಅಪಘಾತ ➤ಯುವತಿಗೆ ಗಂಭೀರ ಗಾಯ Read More »

ಕರ್ನಾಟಕ

ಕಾರು ಮತ್ತು ಲಾರಿ  ಡಿಕ್ಕಿ  ➤ನವದಂಪತಿ ದುರ್ಮರಣ

(ನ್ಯೂಸ್ ಕಡಬ) newskadaba.com ತುಮಕೂರು, ಫೆ.11.   ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ನವದಂಪತಿಗಳ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ನಡೆದಿದೆ. ಇಂದು ಮಧ್ಯಾಹ್ನ ಅಪಘಾತ ಸಂಭವಿಸಿದ್ದು ಮದುವೆಯಾಗಿ ಕೇವಲ ಒಂದೂವರೆ ತಿಂಗಳಾಗಿದ್ದು. ಸಾಫ್ಟ್ ವೇರ್ ಟೆಕ್ಕಿ ಜೋಡಿ ಮೃತಪಟ್ಟಿದೆ. ಮೃತರನ್ನು ಅರಸಿಕೆರೆ ಮೂಲದ 35 ವರ್ಷದ ರಘು ಮತ್ತು ಕೇವಲ ಒಂದೂವರೆ ತಿಂಗಳ ತಿಗಳನಹಳ್ಳಿ ಮೂಲದ 28 ವರ್ಷದ ಅನುಷಾ ಎಂದು

ಕಾರು ಮತ್ತು ಲಾರಿ  ಡಿಕ್ಕಿ  ➤ನವದಂಪತಿ ದುರ್ಮರಣ Read More »

ಕರ್ನಾಟಕ

 ಸರಣಿ ಅಪಘಾತ ➤ ಅದೃಷ್ಟವಶಾತ್  ತಪ್ಪಿದ ಪ್ರಾಣಾಪಾಯ

(ನ್ಯೂಸ್ ಕಡಬ)newskadaba.com.ಬೆಂಗಳೂರು. ಫೆ.11. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್, ಗೂಡ್ಸ್ ವಾಹನ, ಲಾರಿ ಹಾಗೂ ಕಾರಿನ ನಡುವೆ ಸರಣಿ ಅಪಘಾತ  ಸಂಭವಿಸಿದ  ಘಟನೆ ಬೆಂಗಳೂರು ಹೊನ್ನಾವರ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಡೆದಿದೆ. ಸರಣಿ ಅಪಘಾತದಲ್ಲಿ ನಾಲ್ಕು ವಾಹನಗಳು ಜಖಂ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಸಾಗರ ಕಡೆಯಿಂದ ಬಂದ ಖಾಸಗಿ ಬಸ್, ಚೋರಡಿ ಗ್ರಾಮದಲ್ಲಿ ಪ್ರಯಾಣಿಕರು ಇಳಿಯಲು ನಿಲ್ಲಿಸಲಾಗಿತ್ತು. ಈ ವೇಳೆ ಹಿಂಬದಿಯಿಂದ ಗೂಡ್ಸ್ ಆಟೋ ಬಂದಿದೆ. ಅದರ ಹಿಂದೆ ಬಂದ ಲಾರಿಯೊಂದು, ಗೂಡ್ಸ್

 ಸರಣಿ ಅಪಘಾತ ➤ ಅದೃಷ್ಟವಶಾತ್  ತಪ್ಪಿದ ಪ್ರಾಣಾಪಾಯ Read More »

ಕರ್ನಾಟಕ

➤ ಟ್ರಾಕ್ಟರ್ ಹಾಗೂ ಲಾರಿಗೆ ಡಿಕ್ಕಿ ಹೊಡೆದ ಕಾರು ➤ ಇಬ್ಬರು ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com. ದಾವಣಗೆರೆ .ಫೆ.9.   ಕಾರೊಂದು ಎಕ ಕಾಲಕ್ಕೆ ಟ್ರಾಕ್ಟರ್ ಹಾಗೂ ಲಾರಿಗೆ ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಫೆ.9 ರಂದು ತಾಲೂಕಿನ ರಾಮಗೊಂಡನಹಳ್ಳಿ ಬಳಿ ನಡೆದಿದೆ. ದಾವಣಗೆರೆಯಲ್ಲಿ ಮದ್ವೆ ಮುಗಿಸಿಕೊಂಡ ಸ್ವ ಗ್ರಾಮ ಚನ್ನಗಿರಿ ತಾಲೂಕಿನ ಪಾಂಡೊಮಟ್ಟಿಗೆ ಹೋಗುತ್ತಿದ್ದ ಯುವಕರು. ರಾತ್ರಿ ಎದುರಿಗೆ ಬರುತ್ತಿದ್ದ ಟ್ರಾಕ್ಟರ್​ಗೆ ಹೊಡೆದು ನಂತರ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಕಾರಿನಲ್ಲಿದ್ದ ಮೂವರಲ್ಲಿ ಇಬ್ಬರಾದ ಮಂಜುನಾಥ(24) ಹಾಗೂ ಅಮೃತ್(23) ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದ್ದು, ದಾವಣಗೆರೆಯ ಎಸ್

➤ ಟ್ರಾಕ್ಟರ್ ಹಾಗೂ ಲಾರಿಗೆ ಡಿಕ್ಕಿ ಹೊಡೆದ ಕಾರು ➤ ಇಬ್ಬರು ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಬಲಿ!

(ನ್ಯೂಸ್ ಕಡಬ)newskadaba.com ದಾವಣಗೆರೆ, ಫೆ.08.   ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆನಗೋಡು ಬಳಿ‌ ನಡೆದಿದೆ. ಚಿರತೆಯೊಂದು ರಸ್ತೆ ದಾಟುವಾಗ ಈ ಅವಘಡ‌ ನಡೆದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಅಪರಿಚಿತ ವಾಹನವೊಂದು ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವು ಕಂಡಿದೆ. ವಾಹನ ಡಿಕ್ಕಿಯಾದ ರಭಸಕ್ಕೆ ಚಿರತೆ  ತಲೆ ದೇಹದ ಭಾಗಕ್ಕೆ ತೀವ್ರ  ಗಾಯಗಳಾಗಿವೆ. ಆನಗೋಡು ಸುತ್ತಮುತ್ತ ಚಿರತೆ ಓಡಾಡುತ್ತಿದ್ದ ಬಗ್ಗೆ ಗ್ರಾಮಸ್ಥರು ಭಯಭೀತರಾಗಿದ್ದರು. ಈ ಬಗ್ಗೆ ಅರಣ್ಯ ಅಧಿಕಾರಿಗಳ ಗಮನಕ್ಕೂ ತಂದಿದ್ದರು.

ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಬಲಿ! Read More »

ಕರ್ನಾಟಕ

ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ➤ 30 ಮಂದಿ ಸಾವು, 15 ಜನರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಪಾಕಿಸ್ತಾನ, ಫೆ.08.  ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ 30 ಮಂದಿ ಮೃತಪಟ್ಟಿದ್ದು, 15 ಜನರಿಗೆ ಗಂಭೀರ ಗಾಯಗಳಾಗಿವೆ. ಖೈಬರ್ ಪಖ್ತುಂಖ್ವಾದ ಕೊಹಿಸ್ತಾನ್ ಜಿಲ್ಲೆಯ ಕಾರಕೋರಂ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಗಿಲ್ಗಿಟ್‌ನಿಂದ ರಾವಲ್ಪಿಂಡಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಬಸ್ ಪ್ರಾಂತ್ಯದ ಶಿತಿಯಾಲ್ ಪ್ರದೇಶದಲ್ಲಿ ಎದುರು ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಮಾಹಿತಿ ಲಭ್ಯವಾಗಿದೆ. ಈ ಘಟನೆ ಸಂಬಂಧ ಪಾಕಿಸ್ತಾನದ ಅಧ್ಯಕ್ಷ ಡಾ. ಆರಿಫ್ ಅಲ್ವಿ, ಪ್ರಧಾನಿ ಶೆಹಬಾಜ್ ಷರೀಫ್

ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ➤ 30 ಮಂದಿ ಸಾವು, 15 ಜನರಿಗೆ ಗಂಭೀರ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್

ಉಳ್ಳಾಲ: ಟಯರ್ ಸಿಡಿದು ಟೆಂಪೋ ಪಲ್ಟಿ ➤ ರಸ್ತೆಯಲ್ಲಿ ಮೀನು ಚಲ್ಲಾಪಿಲ್ಲಿ

(ನ್ಯೂಸ್ ಕಡಬ)newskadaba.com ಉಳ್ಳಾಲ, ಫೆ.06. ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಘಟನೆ ವರದಿಯಾಗಿದೆ. ಲಾರಿ ಚಾಲಕ ಸಾದಿಕ್ ಸ್ವಲ್ಪ ಗಾಯದಿಂದ ಪಾರಾಗಿದ್ದಾರೆ. ಮಂಗಳೂರು ಧಕ್ಕೆಯಿಂದ ಉಳ್ಳಾಲ ಫಿಷ್ ಮಿಲ್ ಗೆ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ, ಚಾಲಕನ ನಿಯಂತ್ರಣ ತಪ್ಪಿ ವಾಲಿದ್ದು, ಈ ವೇಳೆ ಟಯರ್ ಸಿಡಿದು ರಸ್ತೆಗೆ ಉರುಳಿದೆ ಎನ್ನಲಾಗಿದೆ. ಘಟನೆಯಿಂದ ರಸ್ತೆಯಲ್ಲಿ ಮೀನು ಚಲ್ಲಾಪಿಲ್ಲಿಯಾಗಿ ಹರಡಿಕೊಂಡಿದ್ದು ರಸ್ತೆ ಸಂಚಾರದಲ್ಲಿ ಅಡಚಣೆಯುಂಟಾಗಿದೆ. ಮಂಗಳೂರು

ಉಳ್ಳಾಲ: ಟಯರ್ ಸಿಡಿದು ಟೆಂಪೋ ಪಲ್ಟಿ ➤ ರಸ್ತೆಯಲ್ಲಿ ಮೀನು ಚಲ್ಲಾಪಿಲ್ಲಿ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top