Accident

ಚಾಲಕನ ನಿಯಂತ್ರಣ ತಪ್ಪಿ ಗೂಡಂಗಡಿಗೆ ನುಗ್ಗಿದ ಲಾರಿ ➤ ಓರ್ವನಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಕಾಫು, ಜ.17. ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಗೂಡಂಗಡಿಯೊಳಗೆ ನುಗ್ಗಿದ ಘಟನೆ ಕಾಪುವಿನಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಾಪು ಪೆಟ್ರೋಲ್ ಪಂಪ್ ಬಳಿಯ ಕೋಟೆ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಘಟನೆ ಸಂಭವಿಸಿದ್ದು, ಗೂಡಂಗಡಿಯಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಫ್ಲೈ ಓವರ್‌ನಲ್ಲಿ ವಾಹನ ಓಡಾಟವನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ವಾಹನಗಳು ಸರ್ವೀಸ್ ರಸ್ತೆಯಲ್ಲೇ ಸಂಚಾರ ನಡೆಸುತ್ತಿವೆ. ಈ ವೇಳೆ ಲಾರಿಯ ಚಾಲಕನ ನಿಯಂತ್ರಣ […]

ಚಾಲಕನ ನಿಯಂತ್ರಣ ತಪ್ಪಿ ಗೂಡಂಗಡಿಗೆ ನುಗ್ಗಿದ ಲಾರಿ ➤ ಓರ್ವನಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಲಾರಿ ..! ➤ ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಮಂಗಳೂರು, ಜ.17. ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ಪ್ರಪಾತಕ್ಕೆ ಉರುಳಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನ ಮೊಗರಿನಲ್ಲಿ ವರದಿಯಾಗಿದೆ. ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ ಪವಾಡ ಸದೃಶ್ಯವಾಗಿ ಪಾರಾಗಿದ್ದಾರೆ ಎನ್ನಲಾಗಿದೆ. ಟ್ರಕ್ ಉರುಳಿ ಬಿದ್ದು ಇಬ್ಬರು ಗಾಯಗೊಂಡಿದ್ದಾರೆ. ಕ್ಲೀನರ್ ನ್ನು ರಕ್ಷಿಸಲಾಗಿದೆ. ಚಾಲಕ ಸ್ಟಿಯರಿಂಗ್ ವೀಲ್ ನಲ್ಲಿ ಸಿಲುಕಿಕೊಂಡಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯವಾಗಿದೆ. ಲಾರಿ ತಮಿಳುನಾಡಿನದ್ದೆಂದು ತಿಳಿದುಬಂದಿದೆ ಎಂದು ವರದಿ ತಿಳಿಸಿದೆ.    

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಲಾರಿ ..! ➤ ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೇಂದ್ರ ಸಚಿವೆ ಬೆಂಗಾವಲು ವಾಹನ ಪಲ್ಟಿ ➤  ಐವರಿಗೆ ಗಂಭೀರ ಗಾಯ..!

(ನ್ಯೂಸ್ ಕಡಬ)newskadaba.com  ಬಕ್ಸರ್, ಜ.16. ಕೇಂದ್ರ ಸಚಿವೆ ಅಶ್ವಿನಿ ಕುಮಾರ್ ಚೌಬೆ ಅವರ ಬೆಂಗಾವಲು ವಾಹನ ಪಲ್ಟಿಯಾಗಿ ಐವರು ಗಂಭೀರ ಗಾಯಗೊಂಡಿರುವ ಘಟನೆ  ಬಿಹಾರದಲ್ಲಿ ವರದಿಯಾಗಿದೆ. ಕೇಂದ್ರ ಸಚಿವರು ಬಕ್ಸರ್ ನಿಂದ ಪಾಟ್ನಾಗೆ ಹೋಗುತ್ತಿದ್ದ ವೇಳೆ ಅವಘಢ ಸಂಭವಿಸಿದೆ ಎನ್ನಲಾಗಿದೆ. ಪೊಲೀಸ್ ಠಾಣೆಯ ನಾಲ್ವರು ಪೊಲೀಸರು ಮತ್ತು ಅವರೊಂದಿಗೆ ಪ್ರಯಾಣಿಸುತ್ತಿದ್ದ ವಾಹನದ ಚಾಲಕ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.  

ಕೇಂದ್ರ ಸಚಿವೆ ಬೆಂಗಾವಲು ವಾಹನ ಪಲ್ಟಿ ➤  ಐವರಿಗೆ ಗಂಭೀರ ಗಾಯ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಂಗ್ ಸೈಡ್‌ನಲ್ಲಿ ಬಂದ ಪೊಲೀಸರ ವಾಹನ ➤ ಓರ್ವ ಬಾಲಕಿ ಮೃತ್ಯು..!

(ನ್ಯೂಸ್ ಕಡಬ)newskadaba.com  ಹರಿಯಾಣ, ಜ.16. ರಾಂಗ್ ಸೈಡ್‌ನಲ್ಲಿ ಬಂದ ಪೊಲೀಸರ ತುರ್ತು ಪ್ರತಿಕ್ರಿಯೆ ವಾಹನವೊಂದು ಬಾಲಕಿಗೆ ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ಗುರುಗ್ರಾಮ್-ಫರಿದಾಬಾದ್ ರಸ್ತೆಯಲ್ಲಿ ಸಂಭವಿಸಿದೆ. ಆರು ವರ್ಷದ ಬಾಲಕಿ ಘಟನೆಯಲ್ಲಿ ಮೃತಪಟ್ಟಿದ್ದು, ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಹಾಗೂ ಕಾರು ಚಾಲಕ ಗಾಯಗೊಂಡಿದ್ದಾರೆ. ಗ್ವಾಲ್ ಪಹಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವ್ಯಾನ್‌ನಲ್ಲಿದ್ದ ಪೊಲೀಸರು ಸ್ಥಳದಿಂದ ಪರಾರಿಯಾಗಿದ್ದಾರೆ. ಇನ್ನು ವ್ಯಾನ್ ಚಾಲಕ ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಎಸಿಪಿ ತಿಳಿಸಿರುವುದಾಗಿ

ರಾಂಗ್ ಸೈಡ್‌ನಲ್ಲಿ ಬಂದ ಪೊಲೀಸರ ವಾಹನ ➤ ಓರ್ವ ಬಾಲಕಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ವಾಹನಕ್ಕೆ ಬೈಕ್ ಢಿಕ್ಕಿ ➤ ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 16. ತೆಲಂಗಾಣದಿಂದ ಬಂಟ್ವಾಳ ಬಿಜೆಪಿ ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ವಾಹನಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತ ಯುವಕನನ್ನು ಬೆಳ್ತಂಗಡಿ ಮೂಲದ ವಿಜಿತ್ ಎಂದು ಗುರುತಿಸಲಾಗಿದೆ. ಬಂಟ್ವಾಳದಲ್ಲಿ ನಡೆಯುವ ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ತೆಲಂಗಾಣ ದಾಖಲೆಯ ವಾಹನಕ್ಕೆ ನರಹರಿ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಢಿಕ್ಕಿಯಾಗಿದ್ದು, ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಯುವಕ ಮೃತಪಟ್ಟಿದ್ದಾನೆ

ಬಂಟ್ವಾಳ: ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ವಾಹನಕ್ಕೆ ಬೈಕ್ ಢಿಕ್ಕಿ ➤ ಸವಾರ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಂದಾಪುರ:  ಬೈಕ್ ಢಿಕ್ಕಿ…!! ➤  ಓರ್ವ ಪಾದಚಾರಿ ಮೃತ್ಯು

(ನ್ಯೂಸ್ ಕಡಬ)newskadaba.com ಕುಂದಾಪುರ, ಜ.16. ಬೈಕ್ ಢಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಕೋಣಿ ಗ್ರಾಮದ ಕಟ್ಕೇರಿಯಲ್ಲಿ ವರದಿಯಾಗಿದೆ. ಚಂದ್ರಕುಮಾರ್ (68) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪ್ರದೀಪ್ ಎಂಬವರು ಕೋಟೇಶ್ವರ ಕಡೆಯಿಂದ ಹಾಲಾಡಿ ಕಡೆಗೆ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಉಳ್ಳೂರಿನ ಕಾರೆಬೈಲು ನಿವಾಸಿ ಚಂದ್ರಕುಮಾರ್ ಅವರಿಗೆ ಢಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಚಂದ್ರಕುಮಾರ್ ಅವರನ್ನು ಕೂಡಲೇ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆ ವೇಳೆ

ಕುಂದಾಪುರ:  ಬೈಕ್ ಢಿಕ್ಕಿ…!! ➤  ಓರ್ವ ಪಾದಚಾರಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಲಂಕಾರು: ರಿಕ್ಷಾ ಮತ್ತು ಬೈಕ್  ನಡುವೆ ಅಪಘಾತ ! ➤  ಚಾಲಕ ಸಹಿತ ಇಬ್ಬರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com  ಆಲಂಕಾರು, ಜ.13. ಬೈಕ್ ಹಾಗೂ ಆಟೋ ರಿಕ್ಷಾವೊಂದರ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾ ಚರಂಡಿಗೆ ಬಿದ್ದು, ರಿಕ್ಷಾ ಚಾಲಕ ಹಾಗೂ ಪ್ರಯಾಣಿಕರೋರ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಮಕುಂಜದಲ್ಲಿ ವರದಿಯಾಗಿದೆ. ರಿಕ್ಷಾ ಚಾಲಕ ಕೊಯಿಲ ಗ್ರಾಮದ ಪಿಲಿಕುಡೇಲು ನಿವಾಸಿ ಅಬ್ದುಲ್ ಸತ್ತಾರ್ ಪಿ. ಹಾಗೂ ಪ್ರಯಾಣಿಕ ರಾಮಕುಂಜ ನಿವಾಸಿ ಕೂಸಪ್ಪ ಎಂಬವರು ಗಾಯಗೊಂಡವರು ಎಂದು ಗುರುತಿಸಲಾಗಿದೆ. ಅಬ್ದುಲ್ ಸತ್ತಾರ್‌ರವರು ತನ್ನ ಆಟೋ ರಿಕ್ಷಾ (KA-21 B-9479)ದಲ್ಲಿ ಆತೂರು ಜಂಕ್ಷನ್‌ನಿಂದ ರಾಮಕುಂಜ

ಆಲಂಕಾರು: ರಿಕ್ಷಾ ಮತ್ತು ಬೈಕ್  ನಡುವೆ ಅಪಘಾತ ! ➤  ಚಾಲಕ ಸಹಿತ ಇಬ್ಬರಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ಬೈಕ್ ಗೆ ಶಾಲಾ ಬಸ್ ಢಿಕ್ಕಿ..! ➤  ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು           

(ನ್ಯೂಸ್ ಕಡಬ) newskadaba.com  ಮಂಜೇಶ್ವರ, ಜ.13. ಶಾಲಾ ವಿದ್ಯಾರ್ಥಿಗಳು ತೆರಳುತ್ತಿದ್ದ ಬೈಕ್‌ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೀಯಪದವಿನ ಪ್ರೀತೇಶ್ ಮತ್ತು ಅಭಿ ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಶಾಲಾ ಬಸ್, ವಿದ್ಯಾರ್ಥಿಗಳು ಹೋಗುತ್ತಿದ್ದ ಬೈಕ್ ಗೆ ಢಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ವರದಿಯಾಗಿದೆ.  

ಕಾಸರಗೋಡು: ಬೈಕ್ ಗೆ ಶಾಲಾ ಬಸ್ ಢಿಕ್ಕಿ..! ➤  ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ಅಪಘಾತ ➤ 6 ಮಂದಿ ವಿದ್ಯಾರ್ಥಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಹಾಸನ, ಜ.12. ಮೂರು ಬೈಕ್ ಗಳಲ್ಲಿ ಸಕಲೇಶಪುರ ತಾಲೂಕಿನ ಬಿಸಿಲೆ ಘಾಟ್ ಗೆ ಹೊರಟಿದ್ದ ನಗರದ ಎನ್ ಡಿಆರ್ ಕೆ ಕಾಲೇಜಿನ ಆರು ವಿದ್ಯಾರ್ಥಿಗಳು, ಅಪಘಾತದಲ್ಲಿ ಗಾಯಗೊಂಡಿರುವ ಘಟನೆ ಹಾಸನದಲ್ಲಿ ವರದಿಯಾಗಿದೆ. ಗಾಯಗೊಂಡವರನ್ನು ಸ್ಮಿತಾ, ರಕ್ಷಿತ್, ರಕ್ಷಿತಾ, ಹರ್ಷಿತ್, ಮಹೇಶ್, ರೋಹಿತ್ ಎಂದು ಗುರುತಿಸಲಾಗಿದೆ. ಇವರನ್ನು ಸಕಲೇಶಪುರದ ಕ್ರಾಫರ್ಢ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಒಂದು ಬೈಕ್, ಪಕ್ಕದಲ್ಲಿ ಸಾಗತ್ತಿದ್ದ ಸ್ನೇಹಿತನ ಬೈಕ್ ಗೆ

ಬೈಕ್ ಅಪಘಾತ ➤ 6 ಮಂದಿ ವಿದ್ಯಾರ್ಥಿಗಳಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಳೆದ ವರ್ಷ ಅಣ್ಣ ಮೃತಪಟ್ಟ ದಿನವೇ ಈ ವರ್ಷ ತಮ್ಮ ಮೃತ್ಯು..!

(ನ್ಯೂಸ್ ಕಡಬ) newskadaba.com  ಹಾಸನ, ಜ.12. ಬೈಕ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಹಾಸನದ ಬೇಲೂರು ತಾಲ್ಲೂಕಿನ ನೆಟ್ಟೆಕೆರೆ ಗ್ರಾಮದಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ದಿಲೀಪ್ (21) ಎಂದು ಗುರುತಿಸಲಾಗಿದೆ. ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಅಚ್ಚರಿ ಎಂದರೆ ದಿಲೀಪ್ ಅಣ್ಣ ಶ್ರೀಧರ್  2022ರ  ಜನವರಿ 9 ರಂದು ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ಘಟನೆ ನಡೆದ ಒಂದು ವರ್ಷದ ಬಳಿಕ ಅದೇ ದಿನಾಂಕದಂದು ದಿಲೀಪ್ ಮೃತಪಟ್ಟಿದ್ದಾರೆ

ಕಳೆದ ವರ್ಷ ಅಣ್ಣ ಮೃತಪಟ್ಟ ದಿನವೇ ಈ ವರ್ಷ ತಮ್ಮ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top