Accident

ಬೈಕ್ ಅಪಘಾತ ➤ ವೈದ್ಯ ವಿದ್ಯಾರ್ಥಿ ದುರ್ಮರಣ 

(ನ್ಯೂಸ್ ಕಡಬ) newskadaba.com  ಉಳ್ಳಾಲ, ಡಿ. 13.  ಬೈಕ್ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿಯೋರ್ವ ಮೃತಪಟ್ಟು, ಸಹಸವಾರ ಗಾಯಗೊಂಡ ಘಟನೆ ಕುತ್ತಾರು ಮದಕ ಕ್ವಾಟ್ರಗುತ್ತು ಎಂಬಲ್ಲಿ ಸಂಭವಿಸಿದೆ.   ಮೃತಪಟ್ಟವರನ್ನು ಬೆಂಗಳೂರು ಯಶವಂತಪುರ ನಿವಾಸಿ ಶಿಕ್ಷಕ ಸಿದ್ದರಾಜುರವರ ಪುತ್ರ ನಿಶಾಂತ್ (22) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಬೀದರ್ ನಿವಾಸಿ ಶಕೀಬ್ ಎಂದು ತಿಳಿದುಬಂದಿದೆ. ಇವರಿಬ್ಬರೂ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪೂರೈಸಿ ದ್ವಿತೀಯ ವರ್ಷದ ಇಂಟರ್ನ್ ಶಿಪ್ ನಡೆಸುತ್ತಿದ್ದು, ಕುತ್ತಾರು ಸಿಲಿಕೋನಿಯಾ ಫ್ಲ್ಯಾಟ್ ನಲ್ಲಿ ವಾಸಿಸುತ್ತಿದ್ದ ಇವರು ರಾತ್ರಿ ಬೈಕಿನಲ್ಲಿ […]

ಬೈಕ್ ಅಪಘಾತ ➤ ವೈದ್ಯ ವಿದ್ಯಾರ್ಥಿ ದುರ್ಮರಣ  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ➤ಪರಾರಿಯಾಗಿದ್ದ ಆರೋಪಿಯ ಸೆರೆ

 (ನ್ಯೂಸ್ ಕಡಬ) newskadaba.com  ಬಂಟ್ವಾಳ, ಡಿ.12  ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನನ್ನು ಟ್ರಾಫಿಕ್ ಪೋಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮೆಲ್ಕಾರ್ ನಲ್ಲಿ ನಡೆದಿದೆ. ಪ್ರಕರಣದ ಆರೋಪಿಯನ್ನು ಮುಹಮ್ಮದ್ ಶೇಕ್ ಫೈಝಿಲ್ ಎಂದು ಗುರುತಿಸಲಾಗಿದೆ. ತಲಪಾಡಿ ಎಂಬಲ್ಲಿ ಬಿಸಿರೋಡಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ರಿಕ್ಷಾಕ್ಕೆ ಹಿಂಬದಿಯಿಂದ ಕಾರೊಂದು ಡಿಕ್ಕಿಯಾಗಿ ಪರಾರಿಯಾಗಿತ್ತು. ಡಿಕ್ಕಿಯಾದ ರಭಸಕ್ಕೆ ರಿಕ್ಷಾ ಪಲ್ಟಿಯಾಗಿ ರಿಕ್ಷಾ ಚಾಲಕ ಪುರುಷೋತ್ತಮ ಹಾಗೂ ಪ್ರಯಾಣಿಕ ಹೃತಿಕ ಎಂಬರಿಗೆ ಗಾಯವಾಗಿದ್ದು, ಗಾಯಗೊಂಡವರು ಖಾಸಗಿ ಆಸ್ಪತ್ರೆಯಲ್ಲಿ ‌ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಳುಗಳು

ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ➤ಪರಾರಿಯಾಗಿದ್ದ ಆರೋಪಿಯ ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ರನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

( ನ್ಯೂಸ್ ಕಡಬ ) newskadaba.com ಚಿಕ್ಕಮಗಳೂರು, ಡಿ.12 ಮೂಡಿಗೆರೆ ತಾಲೂಕಿನಲ್ಲಿ ಅಪಘಾತಕ್ಕಿಡಾಗಿ ಆಸ್ಪತ್ರೆಯಲ್ಲಿ ಸಾವುಬದುಕಿನ ಹೋರಾಟ ನಡೆಸುತ್ತಿದ್ದ ಧನ್ಯ ಕುಮಾರ್ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ. ಮಗನ ಸಾವಿನ ದುಃಖದಲ್ಲೂ ಪೋಷಕರು ಮಗನ ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದು, ಇತರೆ ಅಂಗಾಂಗಗಳಿಗೆ ಯಾವುದೇ ಹಾನಿಯಾಗಿಲ್ಲ. ಹೀಗಾಗಿ ಹೃದಯ, ಕಿಡ್ನಿ, ಲಿವರ್, ಕಣ್ಣು ಸೇರಿದಂತೆ ದೇಹದ ಪ್ರಮುಖ ಭಾಗಗಳ ಅಂಗಾಂಗ ದಾನ ಮಾಡಲು ಧನ್ಯ ಕುಮಾರ್ ಪೋಷಕರು ಒಪ್ಪಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ

ಪುತ್ರನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಸ್ ಅಪಘಾತ ➤ಓರ್ವ ಮಹಿಳೆ ಬಲಿ …!!!!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 10. ಬಸ್ ಚಾಲಕನ ನಿರ್ಲಕ್ಷದಿಂದಾಗಿ ಓರ್ವ ಮಹಿಳೆ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.     ಮೃತ ಮಹಿಳೆಯನ್ನು ಮೇಘ ರಂಜಿತ್(34) ಎಂದು ಗುರುತಿಸಲಾಗಿದೆ. ಚಾಲಕನ ಅತಿವೇಗದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಈ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಮೀಪದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.      

ಬಸ್ ಅಪಘಾತ ➤ಓರ್ವ ಮಹಿಳೆ ಬಲಿ …!!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಾಲಾ ವಾಹನ ಢಿಕ್ಕಿ ➤ ಪಾದಾಚಾರಿ ಸ್ಥಳದಲ್ಲೇ ಮೃತ್ಯು…!!!!

(ನ್ಯೂಸ್ ಕಡಬ) newskadaba.com  ಪುತ್ತೂರು, ಡಿ. 10. ಶಾಲಾ ವಾಹನ ಡಿಕ್ಕಿಯಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಪಡುಬಿದ್ರೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಎಂಬಲ್ಲಿ ಸಂಭವಿಸಿದೆ.   ಮೃತರನ್ನು ಕಾಪು ಮಲ್ಲಾರು ನಿವಾಸಿ ರವೀಂದ್ರನಾಥ ಶೆಟ್ಟಿರವರ ಪತ್ನಿ ಸಪ್ನ(54) ಎಂದು ಗುರುತಿಸಲಾಗಿದೆ. ಇವರು ದಿನಸಿ ಅಂಗಡಿಗೆ ತೆರಳಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಮಂಗಳೂರಿನಿಂದ ಉಡುಪಿಗೆ ಚಲಿಸುತ್ತಿದ್ದ ಖಾಸಗಿ ವಿದ್ಯಾಸಂಸ್ಥೆಯ ವಾಹನ ಡಿಕ್ಕಿ ಹೊಡೆದಿದ್ದು, ತಲೆಗೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.    

ಶಾಲಾ ವಾಹನ ಢಿಕ್ಕಿ ➤ ಪಾದಾಚಾರಿ ಸ್ಥಳದಲ್ಲೇ ಮೃತ್ಯು…!!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದ ಬಾಲಕ ➤ ಮುಂದುವರಿದ ರಕ್ಷಣಾ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಡಿ. 07. ಮೈದಾನದಲ್ಲಿ ಆಟವಾಡುತ್ತಿದ್ದ ಬಾಲಕನೋರ್ವನು ಆಕಸ್ಮಿಕವಾಗಿ ಕೊಳವೆಬಾವಿಗೆ ಬಿದ್ದ ಆತಂಕಕಾರಿ ಘಟನೆ ಬುಧವಾರದಂದು ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಮಾಂಡವಿ ಗ್ರಾಮದಲ್ಲಿ ನಡೆದಿದೆ.   ಕೊಳವೆಬಾವಿಗೆ ಬಿದ್ದ ಬಾಲಕ ತನ್ಮಯ್ ಎಂದು ಗುರುತಿಸಲಾಗಿದೆ. ಈತ ಆಟವಾಡುತ್ತಿದ್ದ ವೇಳೆ ಕೊಳವೆಬಾವಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಬಾಲಕನ ರಕ್ಷಣಾ ಕಾರ್ಯಚರಣೆ ನಡೆಸಲಾಗುತ್ತಿದ್ದು, ಆಕ್ಸಿಜನ್ ಒದಗಿಸುವ ವ್ಯವಸ್ಥೆಯು ಸಹ ನಡೆಯುತ್ತಿದೆ ಎಂದು ವರದಿ ತಿಳಿಸಿದೆ..  

ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದ ಬಾಲಕ ➤ ಮುಂದುವರಿದ ರಕ್ಷಣಾ ಕಾರ್ಯಾಚರಣೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಕಾಲೇಜು ವಿದ್ಯಾರ್ಥಿನಿ ರೈಲ್ವೇ ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ…!

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 07. ಕಾಲೇಜು ವಿದ್ಯಾರ್ಥಿನಿಯೋರ್ವಳು ರೈಲ್ವೇ ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತರನ್ನು ಸೈಂಟ್ ಅಲೋಶಿಯಸ್ ಕಾಲೇಜಿನ ಎಂಎಸ್ಸಿ ಬಯೋ ಕೆಮಿಸ್ಟ್ರಿ ವಿದ್ಯಾರ್ಥಿನಿ, ಚೌಕಿ ಕಾವುಗೋಳಿ ಕಡಪ್ಪುರದ ಸುರೇಂದ್ರನ್ ರವರ ಪುತ್ರಿ ಅಂಜನಾ ಎಸ್.(22) ಎಂದು ಗುರುತಿಸಲಾಗಿದೆ. ಸೋಮವಾರದಂದು ರಾತ್ರಿ ಊಟ ಮಾಡಿ ಮಲಗಿದ್ದ ಅಂಜನಾ ಬೆಳಿಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದಳು. ಹುಡುಕಾಡಿದಾಗ ಮನೆಯ ಅಲ್ಪ ದೂರದ ರೈಲು ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು ಎನ್ನಲಾಗಿದೆ. ಘಟನಾ

ಮಂಗಳೂರು: ಕಾಲೇಜು ವಿದ್ಯಾರ್ಥಿನಿ ರೈಲ್ವೇ ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಬಸ್ ನಿಂದ ಬಿದ್ದು ಪ್ರಯಾಣಿಕ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 06. ಕೆಎಸ್ಸಾರ್ಟಿಸಿ ಬಸ್‌ನಿಂದ ಪ್ರಯಾಣಿಕರೊಬ್ಬರು ಬಿದ್ದು ಮೃತಪಟ್ಟ ಘಟನೆ ಕೆಮ್ಮಾಯಿ ಸಮೀಪ ನಡೆದಿದೆ.   ಮೃತರನ್ನು ಕೆದಿಲ ಗ್ರಾಮದ ಮುದ್ರಾಜೆ ನಿವಾಸಿ ಪ್ರಸ್ತುತ ಕೆಮ್ಮಾಯಿಯಲ್ಲಿ ಬಾಡಿಗೆ ಮನೆಯಲ್ಲಿರುವ ಸೋಮಪ್ಪ ನಾಯ್ಕ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನಿಂದ ಉಪ್ಪಿನಂಗಡಿಯ ಹಳೆನೇರಂಕಿ ಕಡೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದು, ಕೆಮ್ಮಾಯಿ ಬಳಿ ಬಸ್ ನಿಲುಗಡೆ ವೇಳೆ ಬಸ್‌ನಿಂದ ಬಿದ್ದು ತೀವ್ರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದರಾದರೂ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಬಸ್ ನಿಂದ ಬಿದ್ದು ಪ್ರಯಾಣಿಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತನ್ನ ಕಾರು ಬೈಕಿಗೆ ಢಿಕ್ಕಿ ಹೊಡೆದರೂ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸದ ಶಾಸಕ ➤ ನೀನ್ಯಾವ ಸೀಮೆ ಎಂಎಲ್’ಸಿ ಎಂದು ತರಾಟೆಗೆತ್ತಿದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.04. ವಿಧಾನ ಪರಿಷತ್ ಸದಸ್ಯನ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಭಾನುವಾರದಂದು ಕೋಲಾರದಲ್ಲಿ ನಡೆದಿದೆ.   ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ, ಎಂಎಲ್ಸಿ ಎನ್. ರವಿಕುಮಾರ್ ಅವರ ಕಾರು ಶಿವನಪುರ ನಿವಾಸಿ ಗೋಪಾಲ್ ಎಂಬವರ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಗೋಪಾಲ್‌ರನ್ನು ಎಂಎಲ್ಸಿ ರವಿಕುಮಾರ್ ಆಸ್ಪತ್ರೆಗೆ ದಾಖಲಿಸಲು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ. ಈ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಎಂಎಲ್ಸಿ ರವಿಕುಮಾರ್

ತನ್ನ ಕಾರು ಬೈಕಿಗೆ ಢಿಕ್ಕಿ ಹೊಡೆದರೂ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸದ ಶಾಸಕ ➤ ನೀನ್ಯಾವ ಸೀಮೆ ಎಂಎಲ್’ಸಿ ಎಂದು ತರಾಟೆಗೆತ್ತಿದ ಸ್ಥಳೀಯರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಉರುಳುಬಿದ್ದ ಕಾರು..! ➤ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 12. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಜೂಮ್ ಸಂಸ್ಥೆಗೆ ಒಳಪಟ್ಟ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಅಗಲೀಕರಣದ ಹೊಂಡಕ್ಕೆ ಬಿದ್ದ ಘಟನೆ ಮಂಗಳೂರು ಬೆಂಗಳೂರು ರಾ.ಹೆ ಪೆರಿಯಶಾಂತಿ ಎಂಬಲ್ಲಿ ಬುಧವಾರದಂದು ಬೆಳಗ್ಗೆ ಸಂಭವಿಸಿದೆ. ಘಟನೆಯ ಸಂದರ್ಭ ಇಬ್ಬರು ಪ್ರಯಾಣಿಕರಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.  

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಉರುಳುಬಿದ್ದ ಕಾರು..! ➤ ಪ್ರಯಾಣಿಕರು ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top