Accident

ಮುಲ್ಕಿ : ಬೈಕ್ ಗೆ ಕಾರು ಡಿಕ್ಕಿ ➤ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಕೊಲ್ನಾಡು ಜಂಕ್ಷನ್ ಬಳಿ ಕಾರು ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಾಳು ಬೈಕ್ ಸವಾರನನ್ನು ಕೃಷ್ಣಾಪುರ ಕಾಟಿಪಳ್ಳ ನಿವಾಸಿ ಅಜೀಂ(20) ಗುರುತಿಸಲಾಗಿದೆ. ಬೈಕ್ ಸವಾರ ಸುರತ್ಕಲ್ ಕಾಟಿಪಳ್ಳ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ ಮುಲ್ಕಿ ಸಮೀಪದ ಕೊಲ್ನಾಡು ಜಂಕ್ಷನ್ ಬಳಿ ಕೊಲ್ನಾಡು ಇಂಡಸ್ಟ್ರಿಯಲ್ ಏರಿಯಾ ಒಳ ರಸ್ತೆಯಿಂದ ಏಕಾಏಕಿ ಹೆದ್ದಾರಿ ಕ್ರಾಸ್ […]

ಮುಲ್ಕಿ : ಬೈಕ್ ಗೆ ಕಾರು ಡಿಕ್ಕಿ ➤ ಸವಾರ ಗಂಭೀರ Read More »

ಕರಾವಳಿ

ಬೆಳ್ತಂಗಡಿ :ಟೆಂಪೋ ಟ್ರಾವೆಲರ್ ಗುದ್ದಿ ವಿದ್ಯುತ್ ಕಂಬ ತುಂಡು ➤ ಪಾನಮತ್ತ ಚಾಲಕ ಎಸ್ಕೇಪ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.14 :ಕುಡಿದ ಮತ್ತಿನಲ್ಲಿ ಟೆಂಪೋ ಟ್ರಾವೆಲರ್ ಚಲಾಯಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉಜಿರೆ- ಧರ್ಮಸ್ಥಳ ಮಧ್ಯೆ ಕನ್ಯಾಡಿ ಸಮೀಪದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿ ರಸ್ತೆ ಮಧ್ಯೆ ಬಿದ್ದು ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.ಟೆಂಪೋ ಟ್ರಾವೆಲರ್ ನಲ್ಲಿದ್ದ ಚಾಲಕ ಹಾಗೂ ಆತನ ಸ್ನೇಹಿತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತ ನಡೆಸಿ ಸ್ಥಳದಿಂದ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕಾಗಮಿಸಿದ ಮೆಸ್ಕಾಂ ಸಿಬ್ಬಂದಿ, ರಸ್ತೆ

ಬೆಳ್ತಂಗಡಿ :ಟೆಂಪೋ ಟ್ರಾವೆಲರ್ ಗುದ್ದಿ ವಿದ್ಯುತ್ ಕಂಬ ತುಂಡು ➤ ಪಾನಮತ್ತ ಚಾಲಕ ಎಸ್ಕೇಪ್ Read More »

ಕರಾವಳಿ

ವಿಟ್ಲ :ಬೈಕ್ ಅಪಘಾತ ➤ ಖ್ಯಾತ ಪಾಕಪ್ರವೀಣ ಕಾಂತಡ್ಕ ಶಂಕರನಾರಾಯಣ ಭಟ್ ಮೃತ್ಯು

(ನ್ಯೂಸ್ ಕಡಬ) newskadaba.com ಫರಂಗಿಪೇಟೆ, ಡಿ.12: ಬಂಟ್ವಾಳ ತಾಲೂಕಿನ ಫರಂಗಿಪೇಟೆ ರಾ.ಹೆ. 75ರಲ್ಲಿ ಗುರುವಾರ ಇಳಿಸಂಜೆ ಬೈಕ್ ಸ್ಕಿಡ್ ಆಗಿ ನಡೆದ ಅಪಘಾತದಲ್ಲಿ ವಿಟ್ಲದ ಜನಪ್ರಿಯ ಬಾಣಸಿಗ ಕಾಂತಡ್ಕ ಶಂಕರನಾರಾಯಣ ಭಟ್ (58) ಮೃತಪಟ್ಟಿದ್ದಾರೆ. ಮಂಗಳೂರು ಕಡೆಯಿಂದ ಬೈಕಿನಲ್ಲಿ ವಿಟ್ಲ ಕಡೆಗೆ ಬರುತ್ತಿದ್ದ ಅವರ ಬೈಕ್, ಫರಂಗಿಪೇಟೆಯ ಮೀನು ಮಾರುಕಟ್ಟೆ ಬಳಿ ಪಲ್ಟಿಯಾಗಿ ಅಪಘಾತ ಘಟಿಸಿದ್ದಾಗಿ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ವಿಟ್ಲ :ಬೈಕ್ ಅಪಘಾತ ➤ ಖ್ಯಾತ ಪಾಕಪ್ರವೀಣ ಕಾಂತಡ್ಕ ಶಂಕರನಾರಾಯಣ ಭಟ್ ಮೃತ್ಯು Read More »

ಕರಾವಳಿ

ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಕಾರು ➤ ಕೆಎಂಎಫ್‌ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.09: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತಪಟ್ಟಿದ್ದಾರೆ. ಅವರು ಶಂಕರನಾರಾಯಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಶಂಕರನಾರಾಯಣ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಹದ್ದೂರು ರಾಜೀವ್ ಶೆಟ್ಟಿಯವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆತರುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.  

ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಕಾರು ➤ ಕೆಎಂಎಫ್‌ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತ್ಯು Read More »

ಕರಾವಳಿ, ಕರ್ನಾಟಕ

ಪಡೀಲ್‌ನಲ್ಲಿ ಭೀಕರ ಅಪಘಾತ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.09: ನಗರದ ಪಡೀಲ್ ಸಮೀಪ ಓಮ್ನಿ ಇಕೋ ಕಾರು ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.   ಚಿಕ್ಕಮಗಳೂರು ಮೂಲದ ಸುಮಂತ್ (21) ಮೃತ ಬೈಕ್ ಸವಾರ. ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.  ಪಡೀಲ್ ಸಮೀಪದಲ್ಲಿ ಓಮ್ನಿ ಇಕೋ ಕಾರಿಗೆ ಸುಮಂತ್ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸುಮಂತ್ ಗಂಭೀರವಾಗಿ ಗಾಯಗೊಂಡಿದ್ದು, ರಸ್ತೆಗೆ ಎಸೆಯಲ್ಪಟ್ಟಿದ್ದರು.

ಪಡೀಲ್‌ನಲ್ಲಿ ಭೀಕರ ಅಪಘಾತ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ

ಪುತ್ತೂರು : ಟೈಲ್ಸ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.08: ಪುತ್ತೂರಿನ ಸೆಂಟ್ಯಾರ್ ಬಳಿ ಟೈಲ್ಸ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾಗಿದೆ. ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಸೆಂಟ್ಯಾರ್ ಸಮೀಪ ಟೈಲ್ಸ್ ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಕಳೆದ ದಿನ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಯತೀಶ್ ರವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಘಟನಾ ಸ್ಥಳಕ್ಕೆ ಪುತ್ತೂರು ಸಂಪ್ಯ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

ಪುತ್ತೂರು : ಟೈಲ್ಸ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ Read More »

ಕರಾವಳಿ

ಹಳೆಯಂಗಡಿ ಬಳಿ ಟೆಂಪೋ ಡಿಕ್ಕಿ ಪ್ರಕರಣ ➤ ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ, ಡಿ. 07: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಕೆನರಾ ಬ್ಯಾಂಕ್ ಬಳಿ ಕಳೆದ ದಿನ ಬೆಳಿಗ್ಗೆ ಟೆಂಪೋ ಡಿಕ್ಕಿ ಹೊಡೆದು ನಡೆದ ಅಪಘಾತದಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಹಳೆಯಂಗಡಿ ಬಸ್ ನಿಲ್ದಾಣ ಬಳಿಯ ನಿವಾಸಿಗಳಾದ ತಾಯಿ ಸುಖಲತಾ(44) ಅವರ ಮಗ ಚಿರಾಗ್(10) ರಸ್ತೆ ಬದಿ ನಡೆದುಕೊಂಡು ಹೋಗುತ್ತಿರುವಾಗ ಉಡುಪಿ ಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಟೆಂಪೋ ಹಳೆಯಂಗಡಿ ಸಮೀಪಿಸುತ್ತಿದಂತೆಯೇ ಚಾಲಕನ ನಿಯಂತ್ರಣ ತಪ್ಪಿ ನಡೆದುಕೊಂಡು ಹೋಗುತ್ತಿದ್ದ ತಾಯಿ ಮತ್ತು ಮಗನಿಗೆ ಡಿಕ್ಕಿ ಹೊಡೆದು ಬಳಿಕ

ಹಳೆಯಂಗಡಿ ಬಳಿ ಟೆಂಪೋ ಡಿಕ್ಕಿ ಪ್ರಕರಣ ➤ ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಮಹಿಳೆ ಮೃತ್ಯು Read More »

ಕರಾವಳಿ

ಮಂಗಳೂರು: ಲಾರಿ ಮತ್ತು ಸ್ಕೂಟರ್ ಢಿಕ್ಕಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 06: ಲಾರಿ ಹಾಗೂ ಸ್ಕೂಟರ್‌ ನಡುವೆ ಅಪಘಾತ ಸಂಭವಿಸಿದ್ದು ಸ್ಕೂಟರ್‌ ಸವಾರ ಹಾಗೂ ಸಹಸವಾರರಿಗೆ ಗಂಭೀರ ಗಾಯಗಳಾಗಿದ್ದು,  ರಾ.ಹೆ 66 ರ ತಲಪಾಡಿ ಉಚ್ಚಿಲ ಬಳಿ ನಡೆದಿದೆ.     ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿ ಕೇರಳ ಮೂಲದವರಾಗಿದ್ದು, ಒಬ್ಬರು ಮಂಜೇಶ್ವರ ನಿವಾಸಿ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಘಟನೆಯ ಬಗ್ಗೆ ನಾಗುರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಮಂಗಳೂರು: ಲಾರಿ ಮತ್ತು ಸ್ಕೂಟರ್ ಢಿಕ್ಕಿ ➤ ಇಬ್ಬರಿಗೆ ಗಾಯ Read More »

ಕರಾವಳಿ

ಮಂಗಳೂರು: ರಸ್ತೆ ದಾಟುತ್ತಿದ್ದ ಸಂದರ್ಭ ಕಾರು ಅಪಘಾತ ➤ ಗಾಯಗೊಂಡ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಡಿ.4ರ ಶುಕ್ರವಾರದಂದು ಸಂಜೆ ಐಯಾನ್‌‌ ತನ್ನ ಮನೆಯ ಮುಂದಿನ ರಸ್ತೆ ದಾಟುತ್ತಿದ್ದ ಸಂದರ್ಭ ತಲಪಾಡಿಯಿಂದ ಮಂಗಳೂರಿಗೆ ಹೋಗುತ್ತಿದ್ದ ರಿಟ್ಜ್‌‌ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡಿದ್ದು, ಬಳಿಕ ರಸ್ತೆ ಬದಿಯಲ್ಲಿದ್ದ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದಿತ್ತು. ಇದೀಗ ಗಾಯಗೊಂಡಿದ್ದ ಬಾಲಕ ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಬಶೀರ್ ಅಹ್ಮದ್ ಹಾಗೂ ರಿಯಾನ್ ದಂಪತಿಗಳ ಹಿರಿಯ ಪುತ್ರ ಐಯಾನ್(16)

ಮಂಗಳೂರು: ರಸ್ತೆ ದಾಟುತ್ತಿದ್ದ ಸಂದರ್ಭ ಕಾರು ಅಪಘಾತ ➤ ಗಾಯಗೊಂಡ ಬಾಲಕ ಮೃತ್ಯು Read More »

ಕರಾವಳಿ

ಮಂಗಳೂರು: ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಕಳೆದ ದಿನ ಬೈಕ್‍ಗೆ ಬಸ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ನಗರದ ಕೂಳೂರು ಸೇತುವೆ ಮೇಲೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪಂಜಿಮೊಗರು ನಿವಾಸಿ ಅಹಮ್ಮದ್ ಕಬೀರ್ (22) ಎಂದು ಗುರುತಿಸಲಾಗಿದೆ.     ಕೂಳೂರು ಕಡೆಯಿಂದ ಕೆಐಒಸಿಎಲ್ ಕಡೆಗೆ ಬೈಕ್ ನಲ್ಲಿ ಹೋಗುತ್ತಿರುವಾಗ ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ದ್ವಿಚಕ್ರ ಸವಾರ ಗಂಭೀರ ಗಾಯಗೊಂಡಿದ್ದು, ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಂಗಳೂರು: ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top