Accident

ಚಲಿಸುತ್ತಿದ್ದಾಗಲೇ ಕಳಚಿದ ಕೆಎಸ್ಸಾರ್ಟಿಸಿ ಬಸ್ಸಿನ ನಾಲ್ಕು ಚಕ್ರಗಳು ► ಮುಂದೇನಾಯಿತೆಂಬ ಕುತೂಹಲವೇ…?

(ನ್ಯೂಸ್ ಕಡಬ) newskadaba.com ಮಡಿಕೇರಿ, ನ.23. ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದರ ಹಿಂಬದಿಯ ನಾಲ್ಕೂ ಚಕ್ರಗಳು ಒಟ್ಟಿಗೆ ಕಳಚಿದ ಘಟನೆ ಮಡಿಕೇರಿಯ ಕುಶಾಲನಗರದಲ್ಲಿ ನಡೆದಿದೆ. ಮೈಸೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮಡಿಕೇರಿಯ ಸೋಮವಾರ ಪೇಟೆ ತಾಲೂಕಿನ ಕುಶಾಲನಗರ ಸಮೀಪದ ಕೊಪ್ಪಳ ಎಂಬಲ್ಲಿ ತಲುಪಿದಾಗ ಹಿಂಬದಿಯ ಚಕ್ರಗಳು ಒಟ್ಟಾಗಿ ಚಾಸಿಸ್ ನಿಂದ ವಿಭಜನೆಗೊಂಡು ಹೊರಕ್ಕುರುಳಿದೆ. ಬಸ್ಸಿನಲ್ಲಿ ಉಂಟಾದ ಈ ಅವಘಡವನ್ನು ಕಂಡು ಬಸ್ ನಲ್ಲಿದ್ದ ಪ್ರಯಾಣಿಕರು ಬೆಚ್ಚಿ ಬಿದ್ದಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ‌. ಅದೃಷ್ಟವಶಾತ್ […]

ಚಲಿಸುತ್ತಿದ್ದಾಗಲೇ ಕಳಚಿದ ಕೆಎಸ್ಸಾರ್ಟಿಸಿ ಬಸ್ಸಿನ ನಾಲ್ಕು ಚಕ್ರಗಳು ► ಮುಂದೇನಾಯಿತೆಂಬ ಕುತೂಹಲವೇ…? Read More »

ಕರ್ನಾಟಕ

ಖಾಸಗಿ ಬಸ್ ಡಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.23. ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ ತಡರಾತ್ರಿ ನಡೆದಿದೆ. ಮೃತ ದುರ್ದೈವಿಯನ್ನು ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ನಿವಾಸಿ ಸುನೀಲ್ ಕುಮಾರ್(40) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿ ಸುಗಮ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್‍ವೊಂದು ವೇಗವಾಗಿ ಬಂದಿದ್ದು, ಕತ್ತಲೆ ಇದ್ದ ಕಾರಣ ನಡೆದುಕೊಂಡು ಹೋಗುತ್ತಿದ್ದ

ಖಾಸಗಿ ಬಸ್ ಡಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಬೆಳ್ತಂಗಡಿ: ರಿಕ್ಷಾ – ಪಿಕಪ್ ಢಿಕ್ಕಿ ► ಎಲ್.ಕೆ.ಜಿ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.22. ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ರಿಕ್ಷಾ ಮತ್ತು ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ LKG ವಿದ್ಯಾರ್ಥಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಬಾರ್ಯ ಎಂಬಲ್ಲಿ ಬುಧವಾರದಂದು ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬಾರ್ಯ ಗ್ರಾಮದ ಮುದ್ದಡ್ಕ ಮದೀನತ್ತುಲ್ ಮುನವ್ವರ ಆಂಗ್ಲ ಮಾಧ್ಯಮ ಶಾಲೆಯ ಎಲ್.ಕೆ.ಜಿ. ವಿದ್ಯಾರ್ಥಿ ಮಹಮ್ಮದ್ ಸನದ್ ಎಂದು ಗುರುತಿಸಲಾಗಿದೆ. ವಾಹನದಲ್ಲಿದ್ದ ಉಳಿದ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ

ಬೆಳ್ತಂಗಡಿ: ರಿಕ್ಷಾ – ಪಿಕಪ್ ಢಿಕ್ಕಿ ► ಎಲ್.ಕೆ.ಜಿ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ವಿಟ್ಲ: ಚರಂಡಿಗಿಳಿದ ಟಾಟಾ ಮ್ಯಾಜಿಕ್ ಐರಿಸ್ ► ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ನ.22. ಪ್ರಯಾಣಿಕರನ್ನು ಕುಳ್ಳಿರಿಸಿ ಚಾಲಕ ಕೆಳಗಿಳಿದಾಗ ಹಠಾತ್ ಚಲಿಸಿದ ಟಾಟಾ ಮ್ಯಾಜಿಕ್ ಐರಿಸ್ ವಾಹನವೊಂದು ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಕಲ್ಲಡ್ಕ ಸಮೀಪದ ಪಡಿಬಾಗಿಲು ಎಂಬಲ್ಲಿ ಮಂಗಳವಾರ ನಡೆದಿದೆ. ಟಾಟಾ ಮ್ಯಾಜಿಕ್ ಐರಿಸ್ ವಾಹನದಲ್ಲಿದ್ದ ಪ್ರಯಾಣಿಕ ಮಹಿಳೆಯೋರ್ವರು ಪಡಿಬಾಗಿಲು ಜಂಕ್ಷನ್ ನಲ್ಲಿ ಅಂಗಡಿಯಿಂದ ಸಾಮಾನು ಖರೀದಿಸಲೆಂದು ತೆರಳಿದ್ದು, ಆ ಸಂದರ್ಭದಲ್ಲಿ ಚಾಲಕನೂ ವಾಹನದಿಂದ ಇಳಿದು ಹೋಗಿದ್ದಾರೆ ಎನ್ನಲಾಗಿದೆ. ಆ ಸಮಯದಲ್ಲಿ ಇದ್ದಕ್ಕಿಂದಂತೆ ಚಲಿಸಿದ ಟಾಟಾ ಮ್ಯಾಜಿಕ್ ಸುಮಾರು ೨೦ ಅಡಿ ಆಳದ ಕಂದಕಕ್ಕೆ

ವಿಟ್ಲ: ಚರಂಡಿಗಿಳಿದ ಟಾಟಾ ಮ್ಯಾಜಿಕ್ ಐರಿಸ್ ► ನಾಲ್ವರಿಗೆ ಗಾಯ Read More »

ಕರಾವಳಿ

ಪುತ್ತೂರು: ವಾಕಿಂಗ್ ಹೋಗುತ್ತಿದ್ದಾಗ ಬೈಕ್ ಢಿಕ್ಕಿ ► ಗಂಭೀರ ಗಾಯಗೊಂಡಿದ್ದ ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ನ.21. ಬೆಳಗ್ಗಿನ ಜಾವ ವಾಕಿಂಗ್ ಹೋಗುತ್ತಿದ್ದ ಸಂದರ್ಭ ಬೈಕೊಂದು ಢಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದ ಪಾದಚಾರಿಯು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಪುತ್ತೂರಿನ ಕೆಮ್ಮಾಯಿ ನೀರ್ಪಾಜೆ ನಿವಾಸಿ ರಾಮಚಂದ್ರ ಶಾಸ್ತ್ರಿ(78ವ) ಎಂದು ಗುರುತಿಸಲಾಗಿದೆ. ರಾಮಚಂದ್ರ ಶಾಸ್ತ್ರಿಯವರು ಇತ್ತೀಚೆಗೆ ಎಂದಿನಂತೆ ಬೆಳಿಗ್ಗಿನ ಜಾವ ವಾಕಿಂಗ್ ಹೋಗುತ್ತಿದ್ದಾಗ ಬೈಕೊಂದು ಢಿಕ್ಕಿಯಾಗಿತ್ತು. ಢಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡಿದ್ದ ರಾಮಚಂದ್ರ ಶಾಸ್ತ್ರಿಯವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ

ಪುತ್ತೂರು: ವಾಕಿಂಗ್ ಹೋಗುತ್ತಿದ್ದಾಗ ಬೈಕ್ ಢಿಕ್ಕಿ ► ಗಂಭೀರ ಗಾಯಗೊಂಡಿದ್ದ ಪಾದಚಾರಿ ಮೃತ್ಯು Read More »

ಕರಾವಳಿ

ಬುಡೋಳಿ: ಆಟೋ ರಿಕ್ಷಾಗೆ ಢಿಕ್ಕಿ ಹೊಡೆದ ಟ್ಯಾಂಕರ್ ► ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ನ.20. ಟ್ಯಾಂಕರೊಂದು ಆಟೊ ರಿಕ್ಷಾದ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಆಟೊ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ‌‌ ಸೋಮವಾರದಂದು‌ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ನಡೆದಿದೆ. ಗಾಯಾಳು ಆಟೋ ಚಾಲಕನನ್ನು ಬುಡೋಳಿ ನಿವಾಸಿ ಆದಂ ಎಂದು ಗುರುತಿಸಲಾಗಿದೆ. ಬುಡೋಳಿಯಿಂದ ಮಾಣಿ ಕಡೆಗೆ ತೆರಳಲು ತನ್ನ ಆಟೊದಲ್ಲಿ ಜನರನ್ನು ಹತ್ತಿಸುತ್ತಿದ್ದ ವೇಳೆ ಹಿಂದಿನಿಂದ ಬಂದ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಆಟೊ ಚಾಲಕ ಗಾಯಗೊಂಡಿದ್ದಾರೆ. ವಿಟ್ಲ ಠಾಣೆ ಪೊಲೀಸರು ಸ್ಥಳಕ್ಕೆ

ಬುಡೋಳಿ: ಆಟೋ ರಿಕ್ಷಾಗೆ ಢಿಕ್ಕಿ ಹೊಡೆದ ಟ್ಯಾಂಕರ್ ► ಚಾಲಕನಿಗೆ ಗಾಯ Read More »

ಕರಾವಳಿ

ಕಾಣಿಯೂರು: ಬೋರ್ ಪೈಪ್ ಮೈಮೇಲೆ ಬಿದ್ದು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ನ.19. ಬೋರ್‍ವೆಲ್ ಲಾರಿಯಿಂದ ಕಬ್ಬಿಣದ ಪೈಪೊಂದು ಮೈಮೇಲೆ ಬಿದ್ದ ಪರಿಣಾಮ ಕಾರ್ಮಿಕ ಮೃತಪಟ್ಟ ಘಟನೆ ಭಾನುವಾರ ಸಂಜೆ ಕಾಣಿಯೂರು ಗ್ರಾಮದ ನಾವೂರು ಎಂಬಲ್ಲಿ ನಡೆದಿದೆ. ಮೃತನನ್ನು ಬೋರ್‍ವೆಲ್ ಯಂತ್ರದ ಕಾರ್ಮಿಕ ಛತ್ತಿಸ್‍ಗಡ ನಿವಾಸಿ ಸತೀಶ್(19) ಎಂದು ಗುರುತಿಸಲಾಗಿದೆ. ಭಾನುವಾರದಂದು ಸಂಜೆ ನಾವೂರು ಬಳಿ ಬೋರ್‍ವೆಲ್ ಕೊರೆಸುತ್ತಿದ್ದ ವೇಳೆ ಲಾರಿಯಿಂದ ಡ್ರಿಲ್ಲಿಂಗ್ ಪೈಪ್ ಮೈಮೇಲೆ ಬಿದ್ದ ಪರಿಣಾ‌ಮ ಸತೀಶ್ ಗಂಭೀರ ಗಾಯಗೊಂಡಿದ್ದು, ಆಂಬ್ಯುಲೆನ್ಸ್ ಮೂಲಕ‌ ಪುತ್ತೂರು ಆಸ್ಪತ್ರೆಗೆ ದಾಖಲಿಸುವ ಹಾದಿ ಮಧ್ಯೆ ಮೃತಪಟ್ಟನೆನ್ನಲಾಗಿದೆ.

ಕಾಣಿಯೂರು: ಬೋರ್ ಪೈಪ್ ಮೈಮೇಲೆ ಬಿದ್ದು ಕಾರ್ಮಿಕ ಮೃತ್ಯು Read More »

ಕರಾವಳಿ

ಕಡಬ: ಟಾಟಾ ನ್ಯಾನೋ – ಬೈಕ್ ಢಿಕ್ಕಿ

(ನ್ಯೂಸ್ ಕಡಬ) newskadaba.com ಕಡಬ, ನ.19. ಟಾಟಾ ನ್ಯಾನೋ ಕಾರು ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಸವಾರ ಗಾಯಗೊಂಡ ಘಟನೆ ಕಡಬ ಸಮೀಪದಲ್ಲಿ ನಡೆದಿದೆ. ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ ಎಂಬಲ್ಲಿ ಕಾರು ಹಾಗೂ ಬೈಕ್‌ ಮಧ್ಯೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡಿದ್ದಾರೆ‌. ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ‌. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಡಬ: ಟಾಟಾ ನ್ಯಾನೋ – ಬೈಕ್ ಢಿಕ್ಕಿ Read More »

ಕರಾವಳಿ

ಇಚಿಲಂಪಾಡಿ: ಖಾಸಗಿ ಬಸ್ – ಓಮ್ನಿ ಢಿಕ್ಕಿ ► ಓರ್ವ ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ನ.18. ಖಾಸಗಿ ಬಸ್ ಹಾಗೂ ಓಮ್ನಿ ಕಾರು ನಡುವೆ ಢಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು ನಾಲ್ವರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಎಂಬಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳ ಮೂಲಕ ಸುಬ್ರಹ್ಮಣ್ಯ ಕ್ಕೆ ತೆರಳುತ್ತಿದ್ದ ಕುಕ್ಕೇಶ್ರೀ ಹೆಸರಿನ ಖಾಸಗಿ ಬಸ್ ಹಾಗೂ ಧರ್ಮಸ್ಥಳ ಕ್ಕೆ ತೆರಳುತ್ತಿದ್ದ ಉಡುಪಿ ಮೂಲದ ಓಮ್ನಿ ಕಾರು ಢಿಕ್ಕಿಯಾಗಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವ ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

ಇಚಿಲಂಪಾಡಿ: ಖಾಸಗಿ ಬಸ್ – ಓಮ್ನಿ ಢಿಕ್ಕಿ ► ಓರ್ವ ಮೃತ್ಯು, ನಾಲ್ವರು ಗಂಭೀರ Read More »

ಕರಾವಳಿ

ಕೆಎಸ್ಸಾರ್ಟಿಸಿ ಬಸ್ – ಸ್ಕೂಲ್ ಬಸ್ ಢಿಕ್ಕಿ ► ಮೂವರು ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್ ಕಡಬ) newskadaba.com ನ.16, ರಾಮನಗರ, ಚಾಲಕನ ನಿಯಂತ್ರಣ ತಪ್ಪಿದ ಸ್ಕೂಲ್ ಬಸ್ಸೊಂದು ಕೆಎಸ್‍ಆರ್ ಟಿಸಿ ಬಸ್‍ಗೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಗುದ್ದಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಕನಕಪುರ ತಾಲೂಕಿನ ದೊಡ್ಡಮರಳವಾಡಿ ಸಮೀಪದ ಅನ್ನಪೂರ್ಣೇಶ್ವರಿ ಆಶ್ರಮದ ಬಳಿ ನಡೆದಿದೆ. ಗುರುಕುಲ ಶಾಲೆಯ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮೃತ ವಿದ್ಯಾರ್ಥಿಗಳ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಕನಕಪುರ-ತೇರುಬೀದಿ ಮಾರ್ಗವಾಗಿ ಮರಳವಾಡಿ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗೆ ಸ್ಕೂಲ್ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಲ್ ಬಸ್ ನ ಛಾವಣಿ

ಕೆಎಸ್ಸಾರ್ಟಿಸಿ ಬಸ್ – ಸ್ಕೂಲ್ ಬಸ್ ಢಿಕ್ಕಿ ► ಮೂವರು ವಿದ್ಯಾರ್ಥಿಗಳು ಮೃತ್ಯು Read More »

ಕರಾವಳಿ
Scroll to Top