Accident

ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ ►ಮದುವೆ ಮನೆಯಿಂದ ವಾಪಸ್ಸಾಗುತ್ತಿದ್ದ ವೇಳೆ ಘಟನೆ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ನ.2. ಮದುವೆ ಮನೆಯಿಂದ ಜನರನ್ನು ಕರೆದುಕೊಂಡು ವಾಪಾಸ್ಸಾಗುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಶಿಡ್ಲಘಟ್ಟ ತಾಲೂಕಿನ ಬೈಯಪ್ಪನಹಳ್ಳಿ ಗೇಟ್ ಬಳಿ ಬುಧವಾರ ಮಧ್ಯರಾತ್ರಿ ಸಂಭವಿಸಿದೆ. ಬಸ್ ನಲ್ಲಿದ್ದವರು ಬಾಗೇಪಲ್ಲಿಯ ಮಿಟ್ಟೆಮರಿ ಗ್ರಾಮದ ನಿವಾಸಿಗಳಾಗಿದ್ದು, ಬೆಂಗಳೂರಿನ ಸರ್ಜಾಪುರ ಕಲ್ಯಾಣ ಮಂಟಪವೊಂದರಲ್ಲಿ ಮದುವೆಯನ್ನು ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ವೇಳೆ ಮಧ್ಯರಾತ್ರಿ 12.30 ರ ಸುಮಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿ 70ಕ್ಕೂ ಅಧಿಕ ಮಂದಿ […]

ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ ►ಮದುವೆ ಮನೆಯಿಂದ ವಾಪಸ್ಸಾಗುತ್ತಿದ್ದ ವೇಳೆ ಘಟನೆ Read More »

ಕರ್ನಾಟಕ

ಎಲ್ಲಾ ಮಾದರಿಯ ಕಾರುಗಳಿಗೂ ಹೊಸ ರೂಲ್ಸ್ !! ► ಕಾರುಗಳಲ್ಲಿ ಏರ್‌ಬ್ಯಾಗ್‌, ಅಲರಾಂ ಕಡ್ಡಾಯ..!!!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಅ.30. ಭಾರತೀಯ ಕಾರುಗಳನ್ನು ಸುರಕ್ಷಿತವಾಗಿಸಲು ನಿಟ್ಟಿನಲ್ಲಿ ಹೊಸ ಸುರಕ್ಷತಾ ನಿಯಮಗಳನ್ನು 2019ರ ಜುಲೈ 1ರಿಂದ ಜಾರಿಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಹೊಸ ನಿಯಮದಿಂದಾಗಿ ಅಪಘಾತಗಳ ಸಂದರ್ಭದಲ್ಲಿ ಪ್ರಾಣಹಾನಿಯ ಪ್ರಮಾಣ ಕಡಿಮೆಯಾಗಲಿದೆ. ಹೌದು, ಭಾರತದ ರಸ್ತೆಗಳು ಅತ್ಯಂತ ಅಪಾಯಕಾರಿ ಎನ್ನಿಸುವ ಹಂತಕ್ಕೆ ಬಂದು ತಲುಪಿದ್ದು, ದಿನಬೆಳಗ್ಗೆ ಎದ್ದರೆ ಸಾಕು ಟಿವಿ, ಪೇಪರ್‌ಗಳಲ್ಲಿ ಹಾಗು ಸಾಮಾಜಿಕ ಜಾಲತಾಣಗಳಲ್ಲಿ ಬರೀ ಅಪಘಾತಗಳ ಬಗ್ಗೆ ಕೇಳಿ, ಕೇಳಿ ಮನಸ್ಥಿತಿಗಳು ಅಪಘಾತಗಳ ಬಗ್ಗೆ ‘ನಿರ್ಲಕ್ಷ್ಯ’ ಧೋರಣೆ ಹೊಂದುವ ಮಟ್ಟಕ್ಕೆ

ಎಲ್ಲಾ ಮಾದರಿಯ ಕಾರುಗಳಿಗೂ ಹೊಸ ರೂಲ್ಸ್ !! ► ಕಾರುಗಳಲ್ಲಿ ಏರ್‌ಬ್ಯಾಗ್‌, ಅಲರಾಂ ಕಡ್ಡಾಯ..!!! Read More »

ಕರ್ನಾಟಕ

ಕೆಟ್ಟು ನಿಂತ ಟ್ರ್ಯಾಕ್ಟರ್ ಗೆ ಬೊಲೆರೋ ಡಿಕ್ಕಿ ► ಓರ್ವನ ದುರ್ಮರಣ

(ನ್ಯೂಸ್ ಕಡಬ) newskadaba.com ಹಾವೇರಿ, ಅ.30. ಟ್ರ್ಯಾಕ್ಟರ್ ಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾವೇರಿ ನಗರದ ಹೊರವಲಯದಲ್ಲಿರೋ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸೋಮವಾರ ನಡೆದಿದೆ. ಮೃತ ವ್ಯಕ್ತಿಯನ್ನು ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಡ್ಡದಬೇವಿನಹಳ್ಳಿ ಗ್ರಾಮದ ನಿವಾಸಿ ಸಹದೇವಪ್ಪ ಸಂಗಾಪುರ(52) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 32 ವರ್ಷ ಮಂಜುನಾಥ ಎಂಬಾತ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ರಸ್ತೆ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ನ್ನು ರಿಪೇರಿ ಮಾಡುತ್ತಿದ್ದ

ಕೆಟ್ಟು ನಿಂತ ಟ್ರ್ಯಾಕ್ಟರ್ ಗೆ ಬೊಲೆರೋ ಡಿಕ್ಕಿ ► ಓರ್ವನ ದುರ್ಮರಣ Read More »

ಕರ್ನಾಟಕ

ಬೆಳ್ತಂಗಡಿ: ಕಾರುಗಳ ಮಧ್ಯೆ ಢಿಕ್ಕಿ ► ಇಬ್ಬರು ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.29. ಕಾರುಗಳೆರಡರ ನಡುವೆ ಮುಖಾಮುಖಿ ಢಿಕ್ಕಿಯುಂಟಾದ ಪರಿಣಾಮ ಇಬ್ಬರು ಮೃತಪಟ್ಟು,‌ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ಸಮೀಪದ ಗರಡಾಡಿ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತಪಟ್ಟವರನ್ನು ಗುರುವಾಯನಕೆರೆ ಸಮೀಪದ ಕುವೆಟ್ಟು ನಿವಾಸಿಗಳಾದ ವಿನಾಯಕ ಹಾಗು ವಿಶ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ಬೆಳ್ತಂಗಡಿ: ಕಾರುಗಳ ಮಧ್ಯೆ ಢಿಕ್ಕಿ ► ಇಬ್ಬರು ಮೃತ್ಯು, ನಾಲ್ವರು ಗಂಭೀರ Read More »

ಕರಾವಳಿ

ಮರ್ಧಾಳ: ಬೈಕ್ – ಕಾರು ಢಿಕ್ಕಿ ► ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಅ.29. ಬೈಕ್ ಹಾಗೂ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮರ್ಧಾಳ ಬೊಳ್ಳೂರು ರಸ್ತೆಯ ಮಿತ್ತೋಡಿ ಎಂಬಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರರಾದ ಮರ್ಧಾಳ ನಿವಾಸಿ ಮಂಜು ಹಾಗೂ ಸಂತೋಷ್ ಎಂಬವರು ಗಾಯಗೊಂಡಿದ್ದಾರೆ. ಬೊಳ್ಳೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಮರ್ಧಾಳ ಕಡೆಗೆ ತೆರಳುತ್ತಿದ್ದ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿದೆ. ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮರ್ಧಾಳ: ಬೈಕ್ – ಕಾರು ಢಿಕ್ಕಿ ► ಸವಾರರಿಬ್ಬರಿಗೆ ಗಾಯ Read More »

ಕರಾವಳಿ

ಮಾಣಿ: ಖಾಸಗಿ ಬಸ್ ಪಲ್ಟಿ ► ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.26. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ಖಾಸಗಿ ಬಸ್ಸೊಂದು ಪಟ್ಟಿಯಾದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಸುಗಮ ಸಂಸ್ಥೆಯ ಖಾಸಗಿ ಬಸ್ಸು ಬುಡೋಳಿ ಸಮೀಪ ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಮಾಣಿ: ಖಾಸಗಿ ಬಸ್ ಪಲ್ಟಿ ► ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ

ಐಶ್ವರ್ಯ ರೈ ತಾಯಿ ಮನೆಯಲ್ಲಿ ಬೆಂಕಿ ಅವಘಡ ► ಅಪಾಯದಿಂದ ಪಾರು..!!!

(ನ್ಯೂಸ್ ಕಡಬ) newskadaba.com ಮುಂಬೈ, ಅ.25. ನಗರದ ಬಾಂದ್ರಾದಲ್ಲಿ ವಾಸವಾಗಿರುವ ಐಶ್ವರ್ಯ ರೈ ತಾಯಿ ಮನೆ ಲಾ ಮರ್ ಬಿಲ್ಡಂಗ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ. ಮೂಲಗಳ ಪ್ರಕಾರ ಮಧ್ಯರಾತ್ರಿ ಸುಮಾರು 1 ಗಂಟೆಗೆ ಬೆಂಕಿ ಕಾಣಿಸಿಕೊಂಡಿತ್ತು. ಅವಘಡದಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಸರಿಯಾದ ಸಮಯಕ್ಕೆ ಸ್ಥಳಕ್ಕೆ ಭೇಟಿ ನೀಡಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಷಯ ತಿಳಿದ ಕೂಡಲೇ ಅಭಿಷೇಕ್ ಜೊತೆ ಐಶ್ವರ್ಯ ರೈ ತನ್ನ ತಾಯಿ ವೃಂದಾ ರೈ ಮನೆಗೆ

ಐಶ್ವರ್ಯ ರೈ ತಾಯಿ ಮನೆಯಲ್ಲಿ ಬೆಂಕಿ ಅವಘಡ ► ಅಪಾಯದಿಂದ ಪಾರು..!!! Read More »

ಕರ್ನಾಟಕ

ನೆಲ್ಯಾಡಿ: ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾದ ಲಾರಿ ► ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ.24. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಎಂಬಲ್ಲಿ ಬೈಕಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಪಾಪಚ್ಚನ್(60) ಸ್ಥಳದಲ್ಲೇ ಮೃತಪಟ್ಟಿದ್ದು, ಢಿಕ್ಕಿ ಹೊಡೆದ ನಂತರ ಲಾರಿಯೊಂದಿಗೆ ಚಾಲಕ ಬೆಳ್ತಂಗಡಿ ನಿವಾಸಿ ರಮೇಶ್ ಪರಾರಿಯಾಗಿದ್ದು, ಸ್ಥಳೀಯರ ಮಾಹಿತಿಯಂತೆ ನೆಲ್ಯಾಡಿಯಲ್ಲಿ ಲಾರಿಯನ್ನು ಅಡ್ಡಗಟ್ಟಿ ಚಾಲಕನನ್ನು ಹಿಡಿದಿಟ್ಟು ಪೊಲೀಸರ ವಶಕ್ಕೆ ಒಪ್ಪಿಸಲಾಯಿತು. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ

ನೆಲ್ಯಾಡಿ: ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾದ ಲಾರಿ ► ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಲಾರಿ ಢಿಕ್ಕಿ ಹೊಡೆದು ಪಾದಚಾರಿ ತಾಯಿ-ಮಗಳು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23. ಲಾರಿ ಹರಿದು ಇಬ್ಬರು ಪಾದಚಾರಿ ಮಹಿಳೆಯರು ಮೃತಪಟ್ಟ ಘಟನೆ ಬೆಂಗಳೂರಿನ ಬಾಣಸವಾಡಿ ಬಳಿಯ ಬಾಬುಸಾಬ್‍ಪಾಳ್ಯದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮೃತರು ದೀಪಾವಳಿ ಹಬ್ಬ ಮುಗಿಸಿ ತಮಿಳುನಾಡಿನಿಂದ ಬೆಂಗಳೂರಿಗೆ ವಾಪಾಸ್ಸಾಗಿ 6.30ರ ಸುಮಾರಿಗೆ ಬಸ್ಸಿನಿಂದ ಇಳಿದು ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಲಾರಿಯೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು ತಮಿಳುನಾಡು ಮೂಲದ ತಾಯಿ-ಮಗಳು ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಬಾಣಸವಾಡಿ ಸಂಚಾರಿ ಪೊಲೀಸರು ಭೇಟಿ ನೀಡಿ

ಲಾರಿ ಢಿಕ್ಕಿ ಹೊಡೆದು ಪಾದಚಾರಿ ತಾಯಿ-ಮಗಳು ಮೃತ್ಯು Read More »

ಕರ್ನಾಟಕ

ಸುಬ್ರಹ್ಮಣ್ಯ: ಟೆಂಪೊ ಟ್ರಾವೆಲ್ಲರ್ – ಕೆಎಸ್ಸಾರ್ಟಿಸಿ ಬಸ್ ಮುಖಾಮುಖಿ ಢಿಕ್ಕಿ ► ಮೂವರಿಗೆ ಗಾಯ, ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.22. ಟೆಂಪೊ ಟ್ರಾವೆಲ್ಲರ್ ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ ಸಂಭವಿಸಿ ಮೂವರು ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಘಟನೆಯಲ್ಲಿ ಬೆಂಗಳೂರಿನ ಯಲಹಂಕದ ಸೌಮ್ಯ(36), ಗಂಗಮ್ಮ(84) ಗಂಭೀರ ಗಾಯಗೊಂಡಿದ್ದು, ಪೂರ್ಣಿಮಾ(34) ಎಂಬವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ‌.

ಸುಬ್ರಹ್ಮಣ್ಯ: ಟೆಂಪೊ ಟ್ರಾವೆಲ್ಲರ್ – ಕೆಎಸ್ಸಾರ್ಟಿಸಿ ಬಸ್ ಮುಖಾಮುಖಿ ಢಿಕ್ಕಿ ► ಮೂವರಿಗೆ ಗಾಯ, ಇಬ್ಬರು ಗಂಭೀರ Read More »

ಕರಾವಳಿ
Scroll to Top