Accident

ಹಳಿ ತಪ್ಪಿದ ಉತ್ಕಲ್ ಎಕ್ಸ್‌ಪ್ರೆಸ್‌ ರೈಲು ► 10 ಕ್ಕೂ ಅಧಿಕ ಮೃತ್ಯು, 100 ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ.19. ಪುರಿ – ಹರಿದ್ವಾರ್ – ಕಳಿಂಗ ಉತ್ಕಲ್ ಎಕ್ಸ್‌ಪ್ರೆಸ್‌ನ 6 ಬೋಗಿಗಳು ಹಳಿತಪ್ಪಿದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟಿದ್ದು, ಮಹಿಳೆಯರು, ಮಕ್ಕಳು ಸೇರಿದಂತೆ 70ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ. ಹಳಿತಪ್ಪಿದ ಬೋಗಿಗಳಲ್ಲಿದ್ದ 100ಕ್ಕೂ ಅಧಿಕ ಪ್ರಯಾಣಿಕರನ್ನು ಪಾರು ಮಾಡಲಾಗಿದ್ದು, ಸ್ಥಳೀಯ ನಿವಾಸಿಗಳು ತಕ್ಷಣವೇ ಧಾವಿಸಿ ಬೋಗಿಗಳ ನಡುವೆ ಸಿಲುಕಿಕೊಂಡವರನ್ನು ರಕ್ಷಿಸಲು ನೆರವಾದರು. ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದುರಂತಕ್ಕೆ ಸಂಬಂಧಿಸಿದಂತೆ […]

ಹಳಿ ತಪ್ಪಿದ ಉತ್ಕಲ್ ಎಕ್ಸ್‌ಪ್ರೆಸ್‌ ರೈಲು ► 10 ಕ್ಕೂ ಅಧಿಕ ಮೃತ್ಯು, 100 ಕ್ಕೂ ಅಧಿಕ ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಲಾರಿ, ಕ್ರೂಸರ್ ಮುಖಾಮುಖಿ ಡಿಕ್ಕಿ ►► ಒಂದೇ ಕುಟುಂಬದ 12 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ದಾವಣಗೆರೆ, ಆ .19, ಲಾರಿ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ 12 ಮಂದಿಗೆ ಗಾಯಗಳಾದ ಘಟನೆ ಶನಿವಾರ ನಡೆದಿದೆ. ಶನಿವಾರ ಮುಂಜಾನೆ ಜಗಳೂರು ತಾಲೂಕಿನ ದೇವಿಕೆರೆ ಬಳಿ ಈ ಅವಘಡ ಸಂಭವಿಸಿದೆ. ಇಬ್ಬರು ಚಿಕ್ಕಮಕ್ಕಳು ಸೇರಿದಂತೆ ಆರು ಜನರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಗಾಯಾಳುಗಳನ್ನು ದಾವಣಗೆರೆ ನಿಟ್ಟುವಳ್ಳಿಯ ಶ್ರಿನಿವಾಸ್, ಪರಶುರಾಮ, ದೀಪಿಕಾ, ಮಹಾಲಕ್ಷ್ಮಿ, ರೇಣುಕಮ್ಮ, ಸಿಂಚನಾ, ಇಂಚರಾ, ರವಿಕುಮಾರ್, ನೇತ್ರಾವತಿ, ಶಶಿಕಲಾ, ಮಣಿ, ಜಯಲಕ್ಷ್ಮಿ ಎಂದು ಗುರುತಿಸಲಾಗಿದೆ. ಪಾವಗಡ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ದೇವಿಕೆರೆ

ಲಾರಿ, ಕ್ರೂಸರ್ ಮುಖಾಮುಖಿ ಡಿಕ್ಕಿ ►► ಒಂದೇ ಕುಟುಂಬದ 12 ಮಂದಿಗೆ ಗಾಯ Read More »

ಕರ್ನಾಟಕ

ರಸ್ತೆ ದಾಟುತ್ತಿದ್ದ ವ್ಯಕ್ತಿಯ ಪ್ರಾಣ ಉಳಿಸಲು ಹೋಗಿ; ಉದ್ಯಮಿಯ ಪುತ್ರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ .16, ಇಬ್ಬರು ಸ್ನೇಹಿತರೊಂದಿಗೆ ಬೈಕ್ ರೇಸಿಂಗ್ ನಡೆಸಿದ 24ರ ಹರೆಯದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಬೈಕ್ ರೇಸ್‌ನಲ್ಲಿ ಪ್ರಾಣ ಕಳೆದುಕೊಂಡ ಯುವಕನನ್ನು ದೆಹಲಿಯ ಉದ್ಯಮಿ ವಿವೇಕ್‌ ವಿಹಾರ್‌ ಮಗ ಹಿಮಾಂಶು ಬನ್ಸಾಲ್ ಎಂದು ಗುರುತಿಸಲಾಗಿದೆ. ಘಟನೆಯ ಸಂಪೂರ್ಣ ವಿವರ ದೆಹಲಿಯ ಮಂಡಿ ಹೌಸ್‌ ಮೆಟ್ರೋ ನಿಲ್ದಾಣದಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಸಿನೀಮಿಯ ರೀತಿಯಲ್ಲಿ ಘಟನೆ ಸೆರೆಯಾಗಿದೆ. ಮೂವರು ಬೈಕ್‌ ರೈಡರ್‌ಗಳು ಪಾರ್ಟಿ ಮುಗಿಸಿಕೊಂಡು ಹಿಂದಿರುಗುವಾಗ ದೆಹಲಿ ಮಧ್ಯಭಾಗದ

ರಸ್ತೆ ದಾಟುತ್ತಿದ್ದ ವ್ಯಕ್ತಿಯ ಪ್ರಾಣ ಉಳಿಸಲು ಹೋಗಿ; ಉದ್ಯಮಿಯ ಪುತ್ರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಲಾರಿ ಮರಕ್ಕೆ ಢಿಕ್ಕಿ: ಮೂವರು ಮೃತ್ಯು ► ಆರು ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕೋಲಾರ, ಆ.12. ಲಾರಿಯೊಂದು‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿನ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಓರ್ವ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಹೃದಯ ವಿದ್ರಾವಕ‌ ಘಟನೆ ಶನಿವಾರದಂದು ನಡೆದಿದೆ. ಮಾಲೂರಿನಿಂದ ಕೋಲಾರದ ಕಡೆಗೆ ತೆರಳುತ್ತಿದ್ದ ಲಾರಿಯಲ್ಲಿ ಒಟ್ಟು 9 ಮಂದಿಯಿದ್ದರು. ಘಟನೆಯಲ್ಲಿ ರಮೇಶ್(35) ಹಾಗೂ ನಾಗರಾಜ್ (34) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ‌. ಲಾರಿಯ ಚಾಲಕ ಹಾಗೂ ನಿರ್ವಾಹಕ ಸೇರಿದಂತೆ ಇನ್ನುಳಿದ 6 ಮಂದಿಗೆ ಗಂಭೀರ ಗಾಯಗಳಾಗಿವೆ.

ಲಾರಿ ಮರಕ್ಕೆ ಢಿಕ್ಕಿ: ಮೂವರು ಮೃತ್ಯು ► ಆರು ಮಂದಿಗೆ ಗಂಭೀರ ಗಾಯ Read More »

ಕರ್ನಾಟಕ

ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದವರ ಕಾರು ಅಪಘಾತ ► ಐವರು ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಕಾರವಾರ, ಆ.10. ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಸ್ವಿಫ್ಟ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಕಾರವಾರದ ಅಂಕೋಲಾ ತಾಲೂಕಿನ ಹೊನ್ನಳ್ಳಿ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಕುಕ್ಕೇ ಸುಬ್ರಹ್ಮಣ್ಯ ದೇವರ ದರ್ಶನಕ್ಕೆಂದು ಬಿಜಾಪುರ ಜಿಲ್ಲೆಯ ಜಮನಾಳ ನಿವಾಸಿಗಳು 9 ಮಂದಿ ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ಲಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಪುರುಷರು, ಓರ್ವ ಮಹಿಳೆ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟರೆನ್ನಲಾಗಿದೆ.

ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದವರ ಕಾರು ಅಪಘಾತ ► ಐವರು ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ Read More »

ಕರ್ನಾಟಕ

ಕಳಾರ: ಬೈಕ್ – ಆ್ಯಕ್ಟಿವಾ ಢಿಕ್ಕಿ ► ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಆ.09. ಉಪ್ಪಿನಂಗಡಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಳಾರ ಎಂಬಲ್ಲಿ ಬೈಕ್ ಹಾಗೂ ಹೋಂಡಾ ಆ್ಯಕ್ಟಿವಾ ಮಧ್ಯೆ ಢಿಕ್ಕಿ ಸಂಭವಿಸಿ ಸವಾರರಿಬ್ಬರು ಗಾಯಗೊಂಡ ಘಟನೆ ಬುಧವಾರ ಅಪರಾಹ್ನ ನಡೆದಿದೆ. ಘಟನೆಯಲ್ಲಿ ಹೋಂಡಾ ಆ್ಯಕ್ಟಿವಾ ಸವಾರ ಕಡಬ ಕುಟ್ರುಪ್ಪಾಡಿ ನಿವಾಸಿ ಪದ್ಮಯ್ಯ ಗೌಡ(48) ಹಾಗೂ ಬೈಕ್ ಸವಾರ ಕಾಣಿಯೂರು ಸಮೀಪದ ಬರೆಪ್ಪಾಡಿ ಕಾೖಮಣ ನಿವಾಸಿ ಪದ್ಮಯ್ಯ(55) ರವರು ಗಾಯಗೊಂಡಿದ್ದು, ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಳಾರ: ಬೈಕ್ – ಆ್ಯಕ್ಟಿವಾ ಢಿಕ್ಕಿ ► ಸವಾರರಿಗೆ ಗಾಯ Read More »

ಕರಾವಳಿ

ಇನ್ನೋವಾಗಳೆರಡು ಮುಖಾಮುಖಿ ಢಿಕ್ಕಿ ► ಮಹಿಳೆ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕೋಲಾರ, ಆ.09. ಇನ್ನೋವಾ ಕಾರುಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಕೋಲಾರದಲ್ಲಿ ನಡೆದಿದೆ. ಕೋಲಾರ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಇನ್ನೋವಾ ಕಾರು ಎದುರಿನಿಂದ ಬರುತ್ತಿದ್ದ ಇನ್ನೋವಾಗೆ ಕೋಲಾರ ತಾಲೂಕಿನ ಪಟ್ನಾ ಗ್ರಾಮದ ಬಳಿ ಮುಖಾಮುಖಿ ಢಿಕ್ಕಿಯಾದುದರಿಂದ ಬೆಂಗಳೂರು ರಾಮಮೂರ್ತಿ ನಗರ ನಿವಾಸಿ ರೂಪಾ(28) ಎಂಬವರು ಸ್ಥಳದಲ್ಲೇ ಮೃತಪಟ್ಟರೆನ್ನಲಾಗಿದೆ. ಘಟನೆಯಲ್ಲಿ ಕೋಲಾರ ನಗರಸಭೆ 27 ನೇ ವಾರ್ಡ್ ಸದಸ್ಯೆ ಸಾಕಮ್ಮ ಹಾಗೂ ಪ್ರಭಾಕರ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಕೋಲಾರದ ಖಾಸಗಿ

ಇನ್ನೋವಾಗಳೆರಡು ಮುಖಾಮುಖಿ ಢಿಕ್ಕಿ ► ಮಹಿಳೆ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಚಲಿಸುತ್ತಿದ್ದಾಗ ಕಳಚಿದ ಕೆಎಸ್ಸಾರ್ಟಿಸಿ ಬಸ್ಸಿನ ಚಕ್ರ ► ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಬಿಜಾಪುರ, ಆ.07. ಚಲಿಸುತ್ತಿದ್ದ ಬಸ್ಸಿನ ಮುಂಭಾಗದ ಚಕ್ರವೊಂದು ಹಠಾತ್ತಾಗಿ ಕಳಚಿದ್ದು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಿಂದಗಿ ತಾಲ್ಲೂಕಿನ ರಾಂಪೂರ ಗ್ರಾಮದ ಸಮೀಪದಲ್ಲಿ 40 ಕ್ಕೂ ಹೆಚ್ಚಿನ ಪ್ರಯಾಣಿಕರು ಸಾಗುತ್ತಿದ್ದ ಬಸ್ಸಿನ ಮುಂಭಾಗದ ಬಲ ಬದಿಯ ಚಕ್ರ ಕಳಚಿ ಬಂದಿದ್ದರಿಂದಾಗಿ ಒಂದು ಕ್ಷಣ ಪ್ರಯಾಣಿಕರು ಉಸಿರು ಬಿಗಿ ಹಿಡಿಯುವಂತಾಗಿತ್ತು. ಅಪಾಯದ ಮುನ್ಸೂಚನೆ ಅರಿತ ಚಾಲಕ ಸಮಯ ಪ್ರಜ್ಞೆಯಿಂದ ಬಸ್ಸನ್ನು ಹತೋಟಿಗೆ ತಂದಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ನಿರುಪಯುಕ್ತ ಬಸ್ಸುಗಳನ್ನು ಓಡಿಸುತ್ತಿರುವ ಸಿಂದಗಿ

ಚಲಿಸುತ್ತಿದ್ದಾಗ ಕಳಚಿದ ಕೆಎಸ್ಸಾರ್ಟಿಸಿ ಬಸ್ಸಿನ ಚಕ್ರ ► ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ Read More »

ಕರ್ನಾಟಕ

ನೆಲ್ಯಾಡಿ: ಜೀಪು – ಕಾರು ಢಿಕ್ಕಿ ► ಐವರು ಗಂಭೀರ – ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.06. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಆರ್ಲ ಎಂಬಲ್ಲಿ ಜೀಪು ಹಾಗೂ ಎರ್ಟಿಗಾ ಕಾರು ನಡುವೆ ಢಿಕ್ಕಿ ಸಂಭವಿಸಿ ಐವರು ಗಂಭೀರ ಗಾಯಗೊಂಡ ಘಟನೆ ಭಾನುವಾರ ಸಂಜೆ ನಡೆದಿದೆ. ಗಾಯಾಳುಗಳನ್ನು ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಗಾಯಗೊಂಡಿರುವ ಐವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ನೆಲ್ಯಾಡಿ: ಜೀಪು – ಕಾರು ಢಿಕ್ಕಿ ► ಐವರು ಗಂಭೀರ – ಹಲವರಿಗೆ ಗಾಯ Read More »

ಕರಾವಳಿ

ಮರ್ಧಾಳ: ಬೈಕಿಗೆ ಢಿಕ್ಕಿ ಹೊಡೆದು ಹೊಟೇಲಿಗೆ ನುಗ್ಗಿದ ಜೀಪು ► ಎರಡು ಬೈಕ್ ಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ಕಡಬ, ಆ.05. ಜೀಪೊಂದು ಎರಡು ಬೈಕುಗಳಿಗೆ ಢಿಕ್ಕಿ ಹೊಡೆದು ಹೋಟೆಲೊಂದಕ್ಕೆ ನುಗ್ಗಿದ ಪರಿಣಾಮ ಬೈಕ್ ನಜ್ಜುಗುಜ್ಜಾಗಿದ್ದು, ಹೊಟೇಲಿನ ಕಂಬಗಳೆರಡು ಹಾನಿಯಾದ ಘಟನೆ ಶನಿವಾರ ಸಂಜೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಜಂಕ್ಷನ್ ನಲ್ಲಿ ನಡೆದಿದೆ. ಜೀಪು ಚಲಾಯಿಸಲು ಕಲಿಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಬೈಕಿಗೆ ಢಿಕ್ಕಿ ಹೊಡೆದು ಹೊಟೇಲಿನ ಕಂಬಕ್ಕೆ ಢಿಕ್ಕಿಯಾಗಿ ಜೀಪು ನಿಂತಿದೆ. ಸಂಜೆ ಸಮಯದಲ್ಲಿ ಶಾಲಾ ಮಕ್ಕಳು ಇದೇ ಹೊಟೇಲಿನ ಮುಂಭಾಗದಲ್ಲಿ ಬಸ್ಸಿಗೆ ಕಾಯುತ್ತಿದ್ದು, ಅಪಘಾತದ

ಮರ್ಧಾಳ: ಬೈಕಿಗೆ ಢಿಕ್ಕಿ ಹೊಡೆದು ಹೊಟೇಲಿಗೆ ನುಗ್ಗಿದ ಜೀಪು ► ಎರಡು ಬೈಕ್ ಗಳಿಗೆ ಹಾನಿ Read More »

ಕರಾವಳಿ
Scroll to Top