arrest

crime, arrest, suspected

ಅಕ್ರಮ ಗೋವಾ ಮದ್ಯ ಸಾಗಾಟ- ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 20.  ಅಕ್ರಮ ಗೋವಾ ಮದ್ಯವನ್ನು ಸಾಗಾಟ ಮಾಡುತ್ತಿದ್ದ ವೇಳೆ ಓರ್ವ ಆರೋಪಿಯನ್ನು ವಶಕ್ಕೆ ಪಡೆದ ಘಟನೆ ಮಣಿಪಾಲದಲ್ಲಿ ನಡೆದಿದೆ. ಬಂಧಿತನನ್ನು ಅನಂತ ದೇವದಾಸ ಎಂದು ಗುರುತಿಸಲಾಗಿದೆ. ಈತ ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್‌ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ದುಬಾರಿ ದರದ ವಿವಿಧ ಬ್ರಾಂಡ್‌ನ ಅಂದಾಜು 1,42,798 ರೂ. ಮೌಲ್ಯದ ಒಟ್ಟು 31.000 ಲೀಟರ್ ಗೋವಾ ರಾಜ್ಯದ ಮದ್ಯವನ್ನು ಸಾಗಾಟ ಮಾಡುತ್ತಿದ್ದ ವೇಳೆ […]

ಅಕ್ರಮ ಗೋವಾ ಮದ್ಯ ಸಾಗಾಟ- ಓರ್ವನ ಬಂಧನ Read More »

ಕರಾವಳಿ

ಅತ್ಯಾಚಾರ ಆರೋಪ: ರಾಷ್ಟ್ರಪ್ರಶಸ್ತಿ ವಿಜೇತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅರೆಸ್ಟ್

(ನ್ಯೂಸ್ ಕಡಬ) newskadaba.com ಹೈದರಾಬಾದ್, ಸೆ. 19.  ತಮ್ಮ ಸಹಾಯಕ ನೃತ್ಯ ನಿರ್ದೇಶಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಸೈಬರಾಬಾದ್ ಪೊಲೀಸರು ರಾಷ್ಟ್ರಪ್ರಶಸ್ತಿ ವಿಜೇತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅಲಿಯಾಸ್ ಶೇಕ್ ಜಾನಿ ಬಾಶಾರನ್ನು ಇಂದು ಬಂಧಿಸಿದ್ದಾರೆ. ಜಾನಿ ಮಾಸ್ಟರ್ ಅವರನ್ನು ಗೋವಾದ ಹೋಟೆಲ್ ಒಂದರಿಂದ ಬಂಧಿಸಲಾಗಿದ್ದು, ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ, ಟ್ರಾನ್ಸಿಟ್ ವಾರಂಟ್ ಗಾಗಿ ಸ್ಥಳೀಯ ನ್ಯಾಯಾಲಯವೊಂದರ ಮುಂದೆ ಹಾಜರುಪಡಿಸಲಾಯಿತು. ಇದಕ್ಕೂ ಮುನ್ನ, ತಮ್ಮ ಸಹಾಯಕ ನೃತ್ಯ ನಿರ್ದೇಶಕಿಯ ಮೇಲೆ ಅತ್ಯಾಚಾರವೆಸಗಿ,

ಅತ್ಯಾಚಾರ ಆರೋಪ: ರಾಷ್ಟ್ರಪ್ರಶಸ್ತಿ ವಿಜೇತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆಗೆ ನುಗ್ಗಿ ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಎರಡೂವರೆ ವರ್ಷಗಳ ಹಿಂದೆ ನಗರದ ಕುಲಶೇಖರದ ಕಾಸ್ತಾಲಿನೊ ಕಾಲೋನಿ ಸೆಕ್ರೆಡ್ ಹಾರ್ಟ್ ಎಂಬಲ್ಲಿನ ಮನೆಯಿಂದ ಚಿನ್ನಾಭರಣ ಕಳವುಗೈದ ಪ್ರಕರಣದ ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕಾರ್ಕಳದ ಬೆಳ್ಮಣ್ ನಿವಾಸಿ ರೋಹಿತ್ ಮಥಾಯಿಸ್ ಎಂದು ಗುರುತಿಸಲಾಗಿದೆ. ಆರೋಪಿ ಮಥಾಯಿಸ್ ಮುಂಬೈಗೆ ಪರಾರಿಯಾಗಿದ್ದನು. ಬಂಧಿತ ಆರೋಪಿಯಿಂದ 7 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಪ್ರಕಟನೆ ತಿಳಿಸಿದೆ.

ಮನೆಗೆ ನುಗ್ಗಿ ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ದಾರಿಯಲ್ಲಿ ಸಿಕ್ಕ ಯುವಕನ ವಶಕ್ಕೆ ಪಡೆದ ಪೊಲೀಸರು – ತನಿಖೆಯ ವೇಳೆ ಬಯಲಾಯಿತು ಆತನ ಕರಾಮತ್ತು

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 13. ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ಯುವಕನನ್ನು, ಸಂಶಯದ ಮೇರೆಗೆ ಪೊಲೀಸರು ವಿಚಾರಿಸಿದಾಗ ಆತ ದರೋಡೆಕೋರ ಎನ್ನುವುದು ಹೊರ ಬಿದ್ದಿದೆ. ಮಂಜೇಶ್ವರ ಪೊಲೀಸರು ರಾತ್ರಿ ವೇಳೆ ಗಸ್ತು ನಿರತರಾಗಿದ್ದ ವೇಳೆ ಅನುಮಾನಾಸ್ಪದವಾಗಿ ನಡೆದಾಡುತ್ತಿದ್ದ ಯುವಕನನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಿ ಠಾಣೆಗೆ ಕರೆತಂದಿದ್ದು, ಬಳಿಕ ತನಿಖೆ ನಡೆಸಿದಾಗ ಒರ್ವ ದರೋಡೆಕೋರನೆಂದು ತಿಳಿದು ಬಂದಿದೆ. ಈತನನ್ನು ಕರ್ನಾಟಕದ ಉಪ್ಪಿನಂಗಡಿ ನಿವಾಸಿ ಗೋಲಿ ಹನೀಫ (34) ಯಾನೆ ಮೊಹಮ್ಮದ್ ಹನೀಫ ಎಂದು ಗುರುತಿಸಲಾಗಿದೆ. ವಿಚಾರಣೆ ನಡೆಸಿದಾಗ

ದಾರಿಯಲ್ಲಿ ಸಿಕ್ಕ ಯುವಕನ ವಶಕ್ಕೆ ಪಡೆದ ಪೊಲೀಸರು – ತನಿಖೆಯ ವೇಳೆ ಬಯಲಾಯಿತು ಆತನ ಕರಾಮತ್ತು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾದಕ ವಸ್ತು ಗಾಂಜಾ ಮಾರಾಟ: ಇಬ್ಬರು ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13.  ಒರಿಸ್ಸಾದಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 8.650 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಮಂಗಳೂರು ನಗರದ ಕರ್ನಾಟಕ-ಕೇರಳ ಗಡಿ ಪ್ರದೇಶದ ತಲಪಾಡಿ ದೇವಿಪುರ ರಸ್ತೆಯ ತಚ್ಚಾಣಿ ಪರಿಸರದಲ್ಲಿ ಅಕ್ರಮವಾಗಿ ಗಾಂಜಾ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಒರಿಸ್ಸಾದ ಬುಲುಬಿರೊ(24) ಹಾಗೂ ಪಶ್ಚಿಮ ಬಂಗಾಳದ ದಿಲ್ ದಾರ್ ಆಲಿ (28) ಎಂಬವರನ್ನು ವಶಕ್ಕೆ ಪಡೆದುಕೊಂಡು 

ಮಾದಕ ವಸ್ತು ಗಾಂಜಾ ಮಾರಾಟ: ಇಬ್ಬರು ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಪಡಿತರ ಅಕ್ಕಿ ಅಕ್ರಮ ಸಾಗಾಟ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 12. ಅಕ್ರಮವಾಗಿ ಸಾಗಿಸುತ್ತಿದ್ದ 900 ಕೆ.ಜಿ. ಪಡಿತರ ಅಕ್ಕಿ ಸಹಿತ ಆರೋಪಿಗಳಿಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಂಧಿತರನ್ನು ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಹಳೇ ನರಿಪುರ ಗ್ರಾಮದ ಇಮ್ರಾನ್ ಅಲಿ(39) ಹಾಗೂ ಗರ್ಗೇಶ್ವರಿಯ ಮುಹಮ್ಮದ್ ಸಲ್ಮಾನ್ (20) ಎಂದು ಗುರುತಿಸಲಾಗಿದೆ. ಆರೋಪಿಗಳು ಚಾಮರಾಜನಗರದ ಗಾಳಿಪುರ ಕಡೆಯಿಂದ ಬೈಪಾಸ್‌ ರಸ್ತೆಯಲ್ಲಿ ಟಿ.ನರಸೀಪುರಕ್ಕೆ ಟಾಟಾ ಏಸ್ ವಾಹನದಲ್ಲಿ 19 ಪ್ಲಾಸ್ಟಿಕ್ ಚೀಲಗಳಲ್ಲಿ ಸುಮಾರು 900 ಕೆ. ಜಿ.ಪಡಿತರ ಅಕ್ಕಿಯನ್ನು

ಪಡಿತರ ಅಕ್ಕಿ ಅಕ್ರಮ ಸಾಗಾಟ- ಇಬ್ಬರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

900 ಕೆ.ಜಿ.ಪಡಿತರ ಅಕ್ಕಿಯ ಅಕ್ರಮ ಸಾಗಾಟ: ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 12.  ಅಕ್ರಮವಾಗಿ ಸಾಗಿಸುತ್ತಿದ್ದ 900 ಕೆ.ಜಿ.ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದಿರುವ ಪಟ್ಟಣ ಠಾಣೆ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ನಗರದ ಬೈಪಾಸ್ ರಸ್ತೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಆರೋಪಿಗಳನ್ನು ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಹಳೇ ನರಿಪುರ ಗ್ರಾಮದ ಇಮ್ರಾನ್ ಅಲಿ(39) ಹಾಗೂ ಗರ್ಗೇಶ್ವರಿಯ ಮುಹಮ್ಮದ್ ಸಲ್ಮಾನ್ (20) ಎಂದು ಗುರುತಿಸಲಾಗಿದೆ. ಆರೋಪಿಗಳು ಚಾಮರಾಜನಗರದ ಗಾಳೀಪುರ ಕಡೆಯಿಂದ ಬೈಪಾಸ್‌ ರಸ್ತೆಯಲ್ಲಿ ಟಿ.ನರಸೀಪುರಕ್ಕೆ ಟಾಟಾ ಏಸ್ ವಾಹನದಲ್ಲಿ 19 ಪ್ಲಾಸ್ಟಿಕ್

900 ಕೆ.ಜಿ.ಪಡಿತರ ಅಕ್ಕಿಯ ಅಕ್ರಮ ಸಾಗಾಟ: ಇಬ್ಬರು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಿನ್ನಾಭರಣ ಕಳ್ಳತನ: ಆರೋಪಿ ಮಹಿಳೆ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 12.  ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಸುಮಾರು 27 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದ ಆರೋಪಿ ಮಹಿಳೆಯನ್ನು ಪತ್ತೆಹಚ್ಚಿ, 432 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ತಿಳಿಸಿದ್ದಾರೆ. ಆರೋಪಿ ಮಹಿಳೆಯನ್ನು ತಮಿಳುನಾಡಿನ ಲಕ್ಷ್ಮೀ(43) ಎಂದು ಗುರುತಿಸಲಾಗಿದೆ. ಈಕೆಯಿಂದ 432 ಗ್ರಾಂ. ಚಿನ್ನಾಭರಣವನ್ನು ವಶಪಡಿಸಿಕೊಂಡು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದರು. ದೂರು ದಾಖಲಿಸಿಕೊಂಡ ಚಾಮರಾಜನಗರ ಪಟ್ಟಣ ಠಾಣೆಯ ಪೊಲೀಸರು, ಪೊಲೀಸ್ ವರಿಷ್ಠಾಧಿಕಾರಿ

ಚಿನ್ನಾಭರಣ ಕಳ್ಳತನ: ಆರೋಪಿ ಮಹಿಳೆ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ: 50 ಮಂದಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 12.  ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ಉಂಟಾಗಿದ್ದ ಪ್ರಕ್ಷುಬ್ಧ ಪರಿಸ್ಥಿತಿ ಹತೋಟಿಗೆ ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದಲ್ಲಿ ಮೂರು ದಿವಸಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಆಯಕಟ್ಟಿನ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 50 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಗಣೇಶನ ಮೆರವಣಿಗೆಯು ದರ್ಗಾದ ಎದುರು ಹೆಚ್ಚು ಹೊತ್ತು ನಿಂತಿದ್ದರಿಂದ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ: 50 ಮಂದಿ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಗಾಂಜಾ ಮಾರಾಟಕ್ಕೆ ಯತ್ನ- ಪುತ್ತೂರು ಮೂಲದ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 12. ಸಹೋದರಿಯ ಮದುವೆ ಮಾಡಲು ಒಡಿಶಾದಿಂದ ರೈಲಿನ ಮೂಲಕ ಗಾಂಜಾ ತಂದು ಬೆಂಗಳೂರಿನಲ್ಲಿ ಮಾರಾಟಕ್ಕೆ ಸಿದ್ಧತೆ ನಡೆಸಿದ್ದ ದ.ಕ ಜಿಲ್ಲೆಯ ಆರೋಪಿಯನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ದ.ಕ. ಜಿಲ್ಲೆಯ ಪುತ್ತೂರು ಮೂಲದ ಬದ್ರುದ್ದೀನ್‌ ಎಮದು ಗುರುತಿಸಲಾಗಿದೆ. ಆತನಿಂದ 1 ಲಕ್ಷ ರೂ. ಮೌಲ್ಯದ 5 ಕೆ.ಜಿ 20 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿರುವುದಾಗಿ ತಿಳಿದುಬಂದಿದೆ. ನಗರದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯು ಪರಿಚಿತನೊಬ್ಬನ ಸಲಹೆಯಂತೆ ಒಡಿಶಾಕ್ಕೆ

ಗಾಂಜಾ ಮಾರಾಟಕ್ಕೆ ಯತ್ನ- ಪುತ್ತೂರು ಮೂಲದ ಯುವಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top