arrest

ಇಬ್ಬರು ಬಾಲಕಿಯರನ್ನು ಕೊಲೆಗೈದ ಮಲತಂದೆ ಆರೆಸ್ಟ್

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27.   ಇಬ್ಬರು ಬಾಲಕಿಯರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದ ಮಲತಂದೆಯನ್ನು ಅಮೃತಹಳ್ಳಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ ಎನ್ನಲಾಗಿದೆ. ಆರೋಪಿಯನ್ನು ಕಾವೇರಿ ಲೇಔಟ್ ನಿವಾಸಿ ಕ್ಯಾಬ್ ಡ್ರೈವರ್ ಸುಮಿತ್ ಮೋಹನ್ (45) ಎಂದು ಗುರುತಿಸಲಾಗಿದೆ. ಹತ್ಯೆಯಾದ ಬಾಲಕಿಯನ್ನು ಸೃಷ್ಟಿ (14) ಹಾಗೂ ಸೋನಿಯಾ (16) ಎಂದು ಗುರುತಿಸಲಾಗಿದೆ. ಬಾಲಕಿಯರು ಕ್ರಮವಾಗಿ 8 ಮತ್ತು 9ನೇ ತರಗತಿ ಓದುತ್ತಿದ್ದರು. ಹಿರಿಯ ಮಗಳು ಫೋನ್ ನಲ್ಲಿ ಮಾತನಾಡುತ್ತಿದ್ದು, ಊಟ ಬಡಿಸುವಂತೆ ಪದೇ ಪದೇ ಕೇಳಿದರೂ ಕಿವಿಗೊಡದ […]

ಇಬ್ಬರು ಬಾಲಕಿಯರನ್ನು ಕೊಲೆಗೈದ ಮಲತಂದೆ ಆರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೌಡಿಶೀಟರ್ ಗಳ ಮನೆ ಮೇಲೆ ದಿಢೀರ್ ಪೊಲೀಸ್ ದಾಳಿ – ಹಲವರು ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 27. ಬೆಂಗಳೂರಿನ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ರೌಡಿಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿ, ಹಲವರನ್ನು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ.   ಪೊಲೀಸರು ಇಂದು ಮುಂಜಾನೆ ಐದು ಗಂಟೆಯಿಂದ ಬೆಂಗಳೂರಿನ ವಿದ್ಯಾರಣ್ಯಪುರ ಸೇರಿದಂತೆ ಹಲವು ಕಡೆ ರೌಡಿಶೀಟರ್ ಗಳ ಮನೆ ದಾಳಿ ನಡೆಸಿರುವುದಾಗಿ ಹಲವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ. ದಾಳಿ ವೇಳೆ ರೌಡಿಶೀಟರ್ ಗಳ ಮನೆಯಲ್ಲಿ ಲಾಂಗ್ ಪತ್ತೆಯಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರೌಡಿಶೀಟರ್ ಗಳ ಮನೆ ಮೇಲೆ ದಿಢೀರ್ ಪೊಲೀಸ್ ದಾಳಿ – ಹಲವರು ವಶಕ್ಕೆ Read More »

ಕರ್ನಾಟಕ

ಟೆಲಿಗ್ರಾಂ ಸಿಇಒ ಪಾವೆಲ್ ದುರೋವ್ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಪ್ಯಾರಿಸ್, ಆ. 26.  ಟೆಲಿಗ್ರಾಮ್ ಪ್ಲಾಟ್‌ ಫಾರ್ಮ್ ಗೆ ಸಂಬಂಧಪಟ್ಟ ಅಪರಾಧಗಳಿಗೆ ಸಂಬಂಧಿಸಿದ ವಾರಂಟ್ ಅಡಿಯಲ್ಲಿ ಟೆಲಿಗ್ರಾಂ ಸಿಇಒ ಪಾವೆಲ್ ದುರೋವ್ ಅವರನ್ನು ಫ್ರೆಂಚ್ ಅಧಿಕಾರಿಗಳು ಪ್ಯಾರಿಸ್ ವಿಮಾನ ನಿಲ್ದಾಣದಲ್ಲಿ ಬಂಧಿಸಿರುವುದಾಗಿ ಅಧಿಕಾರಿಗಳು ಮೂಲಗಳು ಮಾಹಿತಿ ನೀಡಿದ್ದಾರೆ. ದುರೋವ್ ಅವರ ಬಂಧನದ ಸುದ್ದಿ ಕೇಳಿ ಕೆಲವು ರಷ್ಯಾದ ರಾಜಕಾರಣಿಗಳು ಮತ್ತು ರಾಜತಾಂತ್ರಿಕರು ಫ್ರಾನ್ಸ್ ನ ಕ್ರಮವನ್ನು ಖಂಡಿಸಿದ್ದಾರೆ. ವಿಶ್ವಾದ್ಯಂತ ಫ್ರೆಂಚ್ ರಾಯಭಾರ ಕಚೇರಿಗಳಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಸುಮಾರು 900 ಮಿಲಿಯನ್ ಸಕ್ರಿಯ ಬಳಕೆದಾರರನ್ನು ಹೊಂದಿರುವ ಟೆಲಿಗ್ರಾಮ್

ಟೆಲಿಗ್ರಾಂ ಸಿಇಒ ಪಾವೆಲ್ ದುರೋವ್ ಅರೆಸ್ಟ್..! Read More »

ಅಂತರ್ರಾಷ್ಟ್ರೀಯ ನ್ಯೂಸ್

ಆನ್‌ಲೈನ್‌ ಟ್ರೇಡಿಂಗ್‌ ಮೋಸ..!  4 ಆರೋಪಿಗಳು ಅರೆಸ್ಟ್..!     

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 23.  ಆನ್‌ಲೈನ್‌ ಟ್ರೇಡಿಂಗ್‌ ಮೋಸದ ಕುರಿತು ಸೆನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 4 ಜನ ಆರೋಪಿಗಳನ್ನು ಬಂಧಿಸಿ, ರೂ. 13,00,000/- ನಗದು ವಶಪಡಿಸಿಕೊಳ್ಳಲಾಗಿದೆ. ಉಪೇಂದ್ರಭಟ್ ಎಂಬವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಅವರನ್ನು ಮೋತಿಲಾಲ್ ಒಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್‌ಮೆಂಟ್ ಗ್ರೂಪ್‌ ಗೆ ಸೇರಿಸಿದ್ದಾರೆ ಎಂದು ನಂಬಿಸಿ, WhatsApp ಮೂಲಕ ಲಾಭಾಂಶಗಳ ಬಗ್ಗೆ ಮಾಹಿತಿ ನೀಡಿ‌ ಅವರಿಗೆ VIP-203-845 ಎಂಬ ಅಕೌಂಟ್ ನಂಬರನ್ನು ನೀಡಿದ್ದಾರೆ. ಹೆಚ್ಚಿನ ಲಾಭಾಂಶದ ಆಸೆ ತೋರಿಸಿ,

ಆನ್‌ಲೈನ್‌ ಟ್ರೇಡಿಂಗ್‌ ಮೋಸ..!  4 ಆರೋಪಿಗಳು ಅರೆಸ್ಟ್..!      Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರತ್ಯೇಕ ಮುಸ್ಲಿಂ ರಾಜ್ಯ ಸ್ಥಾಪನೆ ಸಂಚು    14 ಆರೋಪಿಗಳು ಅರೆಸ್ಟ್       

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 23.  ಭಾರತದಲ್ಲೇ ಪ್ರತ್ಯೇಕ ಮುಸ್ಲಿಂ ರಾಜ್ಯ ಸ್ಥಾಪನೆ ಉದ್ದೇಶ ಹೊಂದಿದ್ದ 14 ಜನರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ ಖೈದಾ ಪ್ರೇರಿತ ಭಯೋತ್ಪಾದನಾ ಘಟಕವನ್ನು ಭೇದಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.   ಗುಪ್ತಚರ ಮಾಹಿತಿ ಪಡೆದ ನಂತರ, ವಿವಿಧ ರಾಜ್ಯಗಳ ಪೊಲೀಸ್ ಪಡೆಗಳೊಂದಿಗೆ ಕಾರ್ಯಾಚರಣೆ ನಡೆಸಲಾಯಿತು. ಭೇದಿಸಲಾದ ಮಾಡ್ಯೂಲ್‌ಗೆ ಜಾರ್ಖಂಡ್‌ನ ರಾಂಚಿಯ ಡಾ। ಇಶ್ತಿಯಾಕ್ ಎಂಬಾತ ನೇತೃತ್ವ ವಹಿಸಿದ್ದು, ಇದು ‘ಖಿಲಾಫತ್’ ಅಂದರೆ ಬಂಡಾಯ ಸಾರಿ ಭಾರತದಲ್ಲೇ ಪ್ರತ್ಯೇಕ ಮುಸ್ಲಿಂ

ಪ್ರತ್ಯೇಕ ಮುಸ್ಲಿಂ ರಾಜ್ಯ ಸ್ಥಾಪನೆ ಸಂಚು    14 ಆರೋಪಿಗಳು ಅರೆಸ್ಟ್        Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

 ಮನೆ ದರೋಡೆಗೆ ಯತ್ನ ಪ್ರಕರಣ..!       ಇಬ್ಬರು ಆರೋಪಿಗಳು ಆರೆಸ್ಟ್..!          

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 22.  ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ದರೋಡೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ತಾಲೂಕಿನ ಕೋಟದ ಮಣೂರು ಗ್ರಾಮದ ಮಣೂರು ಬಸ್ ನಿಲ್ದಾಣದ ಬಳಿಯ ಕವಿತಾ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಸ್ವಿಫ್ಟ್ ಮತ್ತು ಇನ್ನೋರ್ವ ಕಾರುಗಳಲ್ಲಿ ಆಗಮಿಸಿದ ಸುಮಾರು 6-8 ಅಪರಿಚಿತ ವ್ಯಕ್ತಿಗಳ ಗುಂಪು, ಮನೆ ಗೇಟ್ ಹಾರಿ, ಅಕ್ರಮವಾಗಿ ಆವರಣಕ್ಕೆ ನುಗ್ಗಿ, ಮನೆ ಬಾಗಿಲು ತೆರೆಯಲು ವಿಫಲ ಯತ್ನ ನಡೆಸಿದೆ ಎನ್ನಲಾಗಿದೆ.

 ಮನೆ ದರೋಡೆಗೆ ಯತ್ನ ಪ್ರಕರಣ..!       ಇಬ್ಬರು ಆರೋಪಿಗಳು ಆರೆಸ್ಟ್..!           Read More »

ಕರಾವಳಿ, ಕ್ರೈಮ್ ನ್ಯೂಸ್

32 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿ ಆರೆಸ್ಟ್..!

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 22.  32 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟಿನ ಆರೋಪಿಯನ್ನು ಪತ್ತೆ ಮಾಡಿದ್ದು, ಮಣಿಪಾಲ ಪೋಲಿಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 1992 ರಲ್ಲಿ, ಶಿವರಾಮ ಎಂಬವರು ಮಣಿಪಾಲ ಠಾಣೆಯಲ್ಲಿ ಪ್ರಕರಣ 12 ಜನರ ವಿರುದ್ಧ ಹಲ್ಲೆ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಪ್ರಮುಖ ಆರೋಪಿ ಗಣೇಶ್‌ ಪ್ರಭು (54), ಬಡಗಬೆಟ್ಟು, ಮಣಿಪಾಲ, ಉಡುಪಿ, ಅವರು 2001 ರಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ, ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.  

32 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿ ಆರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಐಷಾರಾಮಿ ಪ್ರದೇಶಗಳನ್ನು ಗುರಿಯಾಗಿಸಿ ಖತರ್ನಾಕ್ ಗ್ಯಾಂಗ್ ದರೋಡೆ..!     ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 21.  ನಗರದ ಐಷಾರಾಮಿ ಪ್ರದೇಶಗಳಲ್ಲಿನ ಮನೆಗಳನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ವೊಂದನ್ನು ಇಂದಿರಾನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಗಳನ್ನು ಮುರಳಿ (38), ಸೆಂಥಿಲ್ (50), ಮೂರ್ತಿ (49) ಮತ್ತು ಜಾನ್ (35) ಎಂದು ಗುರುತಿಸಲಾಗಿದೆ. ಆರೋಪಿಗಳೆಲ್ಲರೂ ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯವರಾಗಿದ್ದು, ಕಳ್ಳತನ ಮಾಡಲು ಬೆಂಗಳೂರಿಗೆ ಬರುತ್ತಿದ್ದರು ಎನ್ನಲಾಗಿದೆ.                                                       

ಐಷಾರಾಮಿ ಪ್ರದೇಶಗಳನ್ನು ಗುರಿಯಾಗಿಸಿ ಖತರ್ನಾಕ್ ಗ್ಯಾಂಗ್ ದರೋಡೆ..!     ಆರೋಪಿಗಳು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಫುಟ್ಬಾಲ್ ಪಂದ್ಯದ ವೇಳೆ ವಿವಾದ – ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ನಗರದ ನೆಹರೂ ಮೈದಾನದಲ್ಲಿ ಇತ್ತೀಚೆಗೆ ಫುಟ್ಬಾಲ್ ಪಂದ್ಯದ ವೇಳೆ ಉಂಟಾದ ವಿವಾದಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ತಂಡವೊಂದು ಮೂವರು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆಗೈದಿರುವ ಘಟನೆ ಸೋಮವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಮಂಗಳೂರಿನ ಎರಡು ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳ ನಡುವೆ ಈ ಘಟನೆ ನಡೆದಿದೆ. ದಿಯಾನ್, ತಸ್ಲೀಮ್, ಸಲ್ಮಾನ್ ಎಂಬವರ ಸಹಿತ ಅಪ್ರಾಪ್ತ ವಯಸ್ಸಿನ ಇನ್ನಿಬ್ಬರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಯದ್ವಾತದ್ವಾ ಹೊಡೆದು ಸಿಗರೇಟ್ ನಿಂದ ಸುಟ್ಟು ಹಲ್ಲೆಗೈದಿರುವ

ಫುಟ್ಬಾಲ್ ಪಂದ್ಯದ ವೇಳೆ ವಿವಾದ – ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಮುಂಬೈನಲ್ಲಿ ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಕಾಪು, ಆ. 20.  ಆಸ್ತಿ ವಿವಾದ ಪ್ರಕರಣದಲ್ಲಿ ಆರೋಪಿಯಾಗಿದ್ದು, ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅನುರಾಧಾ ಕರ್ಕೇರ ಅವರನ್ನು ಕಾಪು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ. 2012ರಲ್ಲಿ ಮೂಳೂರಿನಲ್ಲಿ ಸಂಬಂಧಿಕರ ನಡುವೆ ಆಸ್ತಿ ವಿವಾದ ಉಂಟಾಗಿತ್ತು. ಅನುರಾಧ ಅವರ ಸಹೋದರಿ ನೀತಾ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅನುರಾಧಾ 2017 ರವರೆಗೆ ನಿಯಮಿತವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು, ನಂತರ ಅವರು ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.  

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಮುಂಬೈನಲ್ಲಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top