arrest

ಏರ್‌ಪೋರ್ಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ಸುಮಾರು 10 ಕೋಟಿ ರೂ. ಮೌಲ್ಯದ ಕೊಕೈನ್‌ ಡ್ರಗ್ಸ್‌ ಅನ್ನು ಗುಳಿಗೆಗಳ ರೂಪದಲ್ಲಿ ಹೊಟ್ಟೆಯಲ್ಲಿಟ್ಟುಕೊಂಡು ಅಂತಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ನೈಜಿರಿಯಾ ಮಹಿಳೆಯೊಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ. ವಿಮಾನ ನಿಲ್ದಾಣದ ಕಂದಾಯ ನಿರ್ದೇಶನಾಲಯದ ವಿಚಕ್ಷಣಾ ದಳಕ್ಕೆ ಈ ಮಹಿಳೆ ಮಾದಕ ವಸ್ತುವನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿಯನ್ವಯ ಈಕೆಯನ್ನು ಬಂಧಿಸಲಾಗಿದೆ. .  

ಏರ್‌ಪೋರ್ಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನೇಕಲ್‌ ಪುರಸಭಾ ಸದಸ್ಯ ಸ್ಕ್ರ್ಯಾಪ್ ಹತ್ಯೆ ಪ್ರಕರಣ ಆರೋಪಿ ಕಾಲಿಗೆ ಗುಂಡೇಟು, ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ಆನೇಕಲ್ ಪುರಸಭಾ ಸದಸ್ಯ ಸ್ಕ್ರ್ಯಾಪ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆನೇಕಲ್ ಪೊಲೀಸರು 30 ವರ್ಷದ ರೌಡಿ ಶೀಟರ್ ಒಬ್ಬನ ಕಾಲಿಗೆ ಗುಂಡಿನ ಹಾರಿಸಿ ಬಂಧನಕ್ಕೊಳಪಡಿಸಿದ್ದಾರೆ. ಪುರಸಭಾ ಸದಸ್ಯ ಸ್ಕ್ರಾಪ್‌ ರವಿಯನ್ನು ಮಾರಕಾಸಗಳಿಂದ ಚುಚ್ಚಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಹರೀಶ್‌ ಅಲಿಯಾಸ್‌‍ ಹಂದಿ ಹರೀಶ್‌, ವಿನಯ್‌ ಅಲಿಯಾಸ್‌‍ ವಿನಿ ಎಂಬುವರು ಸ್ವಯಂ ಆಗಿ ನ್ಯಾಯಾಲಯಕ್ಕೆ ಶರಣಾಗಿದ್ದರು. ಆದರೆ ಪ್ರಮುಖ ಆರೋಪಿ ಕಾರ್ತಿಕ್‌ ತಲೆ ಮರೆಸಿಕೊಂಡಿದ್ದನು ಎನ್ನಲಾಗಿದೆ.

ಆನೇಕಲ್‌ ಪುರಸಭಾ ಸದಸ್ಯ ಸ್ಕ್ರ್ಯಾಪ್ ಹತ್ಯೆ ಪ್ರಕರಣ ಆರೋಪಿ ಕಾಲಿಗೆ ಗುಂಡೇಟು, ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದನದ ಮಾಂಸ ಸಾಗಾಟ…! ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬಜ್ಪೆ, ಜು.30. ವಾಹನದಲ್ಲಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ಆರೀಫ್ (24) ಮೊಹಮ್ಮದ್ ಸುಲ್ತಾನ್ (19) ಎಂದು ಗುರುತಿಸಲಾಗಿದೆ. ಆರೋಪಿಗಳು ಬಜ್ಪೆಯ ಪೋಲಿಸ್ ಠಾಣಾ ವ್ಯಾಪ್ತಿಯ ಬಡಗ ಎಡಪದವು ಗ್ರಾಮದ ಬೈತಾರಿ ಎಂಬಲ್ಲಿ ವಾಹನದಲ್ಲಿ ದನದ ಮಾಂಸ ಸಾಗಾಟ ಮಾಡುತ್ತಿದ್ದರು. ಬಜಪೆ ಠಾಣೆಯ ಪಿಎಸ್‌ಐ ರೇವಣಸಿದ್ದಪ್ಪ ಅವರು ಸಿಬ್ಬಂದಿಯೊಂದಿಗೆ ತಪಾಸಣೆ ನಡೆಸುತ್ತಿದ್ದ ವೇಳೆ ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಜೊತೆಗೆ

ದನದ ಮಾಂಸ ಸಾಗಾಟ…! ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ದಲಿತ ಯುವಕನ ಕೈ ಕತ್ತರಿಸಿದ್ದ ಇಬ್ಬರು ರೌಡಿಶೀಟರ್‌ಗಳ ಬಂಧನ    

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29.  ದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಕೈ ಕತ್ತರಿಸಿದ ಆರೋಪದ ಮೇಲೆ ಕನಕಪುರದಲ್ಲಿ ಇಬ್ಬರು ರೌಡಿಶೀಟರ್‌ಗಳ ಕಾಲುಗಳಿಗೆ ಪೊಲೀಸರು ಗುಂಡು ಹಾರಿಸುವ ಮೂಲಕ ಅವರನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಆರೋಪಿಗಳನ್ನು ಹರ್ಷ ಅಲಿಯಾಸ್ ಕೈಮಾ ಮತ್ತು ಕರುಣೇಶ್ ಅಲಿಯಾಸ್ ಕಣ್ಣ ಎಂದು ಗುರುತಿಸಲಾಗಿದೆ. ಇಬ್ಬರು ರೌಡಿಶೀಟರ್‌ ಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಲಿತ ಯುವಕ ಅನೀಶ್‌ಕುಮಾರ್‌ ಕುಟುಂಬದ ಮೇಲೆ ದಾಳಿ ನಡೆಸಿದ ಒಕ್ಕಲಿಗ ಸಮುದಾಯದ ಏಳು ಮಂದಿ ಶಸ್ತ್ರಧಾರಿಗಳ

ದಲಿತ ಯುವಕನ ಕೈ ಕತ್ತರಿಸಿದ್ದ ಇಬ್ಬರು ರೌಡಿಶೀಟರ್‌ಗಳ ಬಂಧನ     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೋಚಿಂಗ್ ಸೆಂಟರ್‌ ನಲ್ಲಿ ನಡೆದ ಅವಘಡ ಪ್ರಕರಣ ಮಾಲೀಕ, ನಿರ್ವಾಹಕನಿಗೆ 14 ದಿನ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.29. ಕೋಚಿಂಗ್ ಸೆಂಟರ್ ನಲ್ಲಿ ಐಎಎಸ್ ಆಕಾಂಕ್ಷಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಚಿಂಗ್ ಸೆಂಟರ್‌ನ ಮಾಲೀಕ ಹಾಗೂ ನಿರ್ವಾಹಕರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೋಚಿಂಗ್ ಸೆಂಟರ್ ಮಾಲೀಕ ಅಭಿಷೇಕ್ ಗುಪ್ತಾ ಮತ್ತು ನಿರ್ವಾಹಕ ದೇಶಪಾಲ್ ಸಿಂಗ್ ಅವರನ್ನು ದೆಹಲಿಯ ಮ್ಯಾಜಿಸ್ಟ್ರಿಯಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇವರಿಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯವು ಆದೇಶ ಹೊರಡಿಸಿದೆ.

ಕೋಚಿಂಗ್ ಸೆಂಟರ್‌ ನಲ್ಲಿ ನಡೆದ ಅವಘಡ ಪ್ರಕರಣ ಮಾಲೀಕ, ನಿರ್ವಾಹಕನಿಗೆ 14 ದಿನ ನ್ಯಾಯಾಂಗ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಪ್ರಾಪ್ತ ಬಾಲಕಿಯ ಅತ್ಯಾಚಾರ 27 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

(ನ್ಯೂಸ್ ಕಡಬ)newskadaba.com ಉಡುಪಿ, ಜು.27. ಅಪ್ರಾಪ್ತ ಬಾಲಕಿಯ ಅತ್ಯಾಚಾರಗೈದು, ಪ್ರಕರಣದ ವಿಚಾರಣೆ ವೇಳೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಡುಬಿದ್ರಿ ಪೊಲೀಸರು ಮಹತ್ವ ಕಾರ್ಯಚರಣೆ ನಡೆಸಿ 27 ವರ್ಷಗಳ ಬಳಿಕ ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ಹುಡುಗಿ ದಿನಾಂಕ ಆಗಸ್ಟ್ 07 ರಂದು ಅವಳ ಮನೆಗೆ ಹೋಗುವಾಗ ದಾರಿ ತಪ್ಪಿ ಮಣಿಪಾಲದಲ್ಲಿ ನಿಂತಿದ್ದಾಗ ಆರೋಪಿ ಕುಂದಾಪುರದ ನಿವಾಸಿ ಜಮಾಲ್ ಎಂಬಾತನು ಮೋಟಾರು ಸೈಕಲಿನಲ್ಲಿ ಬಂದು ಹುಡುಗಿಯನ್ನು ಪುಸಲಾಯಿಸಿ ಮಣಿಪಾಲದ ಲಾಡ್ಜ್ ಒಂದರಲ್ಲಿ ರೂಂ ನಲ್ಲಿ ಸುಮಾರು 12

ಅಪ್ರಾಪ್ತ ಬಾಲಕಿಯ ಅತ್ಯಾಚಾರ 27 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮಾದಕ ವಸ್ತು ಸೇವನೆ    ಯುವಕ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು.26. ಮಾದಕ ವಸ್ತು ಸೇವಿಸಿ ತೂರಾಡುತ್ತಿದ್ದ ಯುವಕನನ್ನು ಆ್ಯಂಟಿ ಡ್ರಗ್ಸ್‌ ಟೀಮ್‌ನ ಪಿಎಸ್‌ಐ ಪ್ರದೀಪ್‌ ಟಿ.ಆರ್‌ ಅವರ ನೇತೃತ್ವದ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಯನ್ನು ಪುತ್ತೂರು ಎಂಪಿಎಂಸಿ ರಸ್ತೆಯ ನಿವಾಸಿ ಜೋಸ್ವಿನ್‌ ಮಸ್ಕರೇನ್ಹಸ್‌ (24)  ಎಂದು ಗುರುತಿಸಲಾಗಿದೆ. ಪೊಲೀಸರು ಯುವಕನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆತ ಗಾಂಜಾ ಸೇವಿಸಿರುವುದನ್ನು ಒಪ್ಪಿಕೊಂಡಿದ್ದಾನೆ. ಜೊತೆಗೆ ಆತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಈ ವೇಳೆ ಯುವಕ ಟೆಟ್ರಾ ಹೆಡ್ರಾಕೆನಬಿನಾಯ್ಡ ಎಂಬ

ಮಂಗಳೂರು: ಮಾದಕ ವಸ್ತು ಸೇವನೆ    ಯುವಕ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಟ ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು. 25. ಸಾರ್ವಜನಿಕ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಡುತ್ತಾ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದ ಮೂವರು ಯುವಕರನ್ನು ಸ್ಥಳೀಯರೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ. ಮೂವರು ಯುವಕರು ಡ್ರಗ್ ನಶೆಯಲ್ಲಿ ತೇಲಾಡುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ನಾರ್ಶ KPಬೈಲಿನ ಮನೆಯೊಂದರಲ್ಲಿ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದಾಗ ಸಾರ್ವಜನಿಕರು ಸುತ್ತುವರಿದು ತರಾಟೆಗೆ ತೆಗೆದುಕೊಂಡಿದ್ದರು. ವಿಟ್ಲ ಪೊಲೀಸರು ಬರುವಷ್ಟರಲ್ಲಿ ಸ್ಥಳದಿಂದ ಪರಾರಿಯಾಗಿದ್ದರೂ ಒಬ್ಬಾತ

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಟ ಆರೋಪಿಗಳು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮೂವರು ಮನೆಗಳ್ಳರ ಬಂಧನ 4.64 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20. ಮನೆಗಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಆರೋಪಿಗಳನ್ನು ವೆಂಕಟೇಶ್ ಅಲಿಯಾಸ್ ವೆಂಕಿ(21), ಸಾಗರ್ (21), ರಂಜಿತ್(20) ಎಂದು ಗುರುತಿಸಲಾಗಿದೆ. ಉರ್ವ ಠಾಣಾ ವ್ಯಾಪ್ತಿಯ ಕೋಡಿಕಲ್ ವಿವೇಕಾನಂದ ನಗರ ಎಂಬಲ್ಲಿ ಮನೆಗೆ ನುಗ್ಗಿ ಕಳ್ಳರು 80 ಗ್ರಾಂನಷ್ಟು ಚಿನ್ನಾಭರಣ ಕಳವು ಮಾಡಿದ್ದು, ಸದ್ಯ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಕಳವುಗೈದ ಸುಮಾರು 4,64,750 ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಅಲ್ಲದೆ ಕೃತ್ಯಕ್ಕೆ ಬಳಸಿದ

ಮಂಗಳೂರು: ಮೂವರು ಮನೆಗಳ್ಳರ ಬಂಧನ 4.64 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಗಾಂಜಾ ಸೇವನೆ…! ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.20. ಗಾಂಜಾ ಸೇವನೆ ಮಾಡುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಆರೋಪಿಗಳನ್ನು ಮಂಗಳೂರು ಬಲ್ಮಠದ ಆರ್ಯ ಸಮಾಜ ರಸ್ತೆ, ಸನ್ಯಾಸಿಗುಡ್ಡೆಯ ನಿವಾಸಿ ನೌಫಾಲ್ (38), ಕುಪ್ಪೆಪದವಿನ ಕಿಲೆಂಜಾರು ಗ್ರಾಮದ ನಿವಾಸಿ ಹಂಝು(59) ಹಾಗೂ ಬಂಡಿಹೊಳೆ ಗ್ರಾಮದ ನಿವಾಸಿ ಸುದಾರ್ಶನ್ (25) ಎಂದು ಗುರುತಿಸಲಾಗಿದೆ. ಬಜಪೆ ಪೊಲೀಸ್ ನಿರೀಕ್ಷಕರಾದ ಸಂದೀಪ್ ಜಿ.ಎಸ್ ಅವರ ತಂಡ ಆರೋಪಿಗಳನ್ನು ಪತ್ತೆಹಚ್ಚಿದ್ದು, ಆರೋಪಿಗಳ ವಿರುದ್ದ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು: ಗಾಂಜಾ ಸೇವನೆ…! ಆರೋಪಿಗಳು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top