arrest

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಪು, ಅ. 14. ಹತ್ತು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಾಪು ಪೊಲೀಸರು ಮುಂಬಯಿಯಲ್ಲಿ ಬಂಧಿಸಿ, ಕರೆ ತಂದು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಉದ್ಯಾವರ ಅಂಕುದ್ರು ನಿವಾಸಿ ಗಣೇಶ್‌ ಪೂಜಾರಿ (44) ಎಂದು ಗುರುತಿಸಲಾಗಿದೆ. ಆರೋಪಿಯು 2013 ಮತ್ತು 2014ರಲ್ಲಿ ಕಾಪು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು ಮನೆಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆತನ ವಿರುದ್ಧ ವಾರಂಟ್‌ […]

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದ ಬಂಟ್ವಾಳ ಪೊಲೀಸರು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 14. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಉತ್ತರ ಪ್ರದೇಶ ಮೂಲದ ಬಬುಲು ಸಹಾನಿ, ರಾಮ್ ಗೋವಿಂದ ಸಹಾನಿ, ಅಮಿತ್ ಕುಮಾರ್, ಸತ್ಯೇಂದ್ರ ಸಹಾನಿ, ಸೈದಾನ್ ಸಹಾನಿ ಹಾಗೂ ಅಭಯ್ ನಾರಾಯಣ್ ಎಂದು ಗುರುತಿಸಲಾಗಿದೆ. ಪರಂಗಿಪೇಟೆಯಲ್ಲಿ ಅಕ್ರಮ ಮರಳು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ

ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದ ಬಂಟ್ವಾಳ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಅಕ್ರಮ ಜಾನುವಾರು ಸಾಗಾಟ- ಪಿಕಪ್ ಹಾಗೂ ಜಾನುವಾರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ. 05. ಪಿಕಪ್ ಒಂದರಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದುದನ್ನು ಕಡಬ ಪೊಲೀಸರು ವಶಕ್ಕೆ ಪಡೆದ ಘಟನೆ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದೆ. ಜಾನುವಾರು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಕಡಬ ಪೊಲೀಸರು ದಾಳಿ ನಡೆಸಿ, ಜಾನುವಾರು ಹಾಗೂ ಸಾಗಾಟಕ್ಕೆ ಬಳಸಿದ ಪಿಕಪ್ ನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಡಬ: ಅಕ್ರಮ ಜಾನುವಾರು ಸಾಗಾಟ- ಪಿಕಪ್ ಹಾಗೂ ಜಾನುವಾರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಕ್ಕಳಿಗೆ ಹಣದಾಸೆ ಮೂಡಿಸಿ ಲೈಂಗಿಕ ದೌರ್ಜನ್ಯ ಆರೋಪ – ಹೋಟೆಲ್ ಕುಕ್ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಅ. 04. ಚಿಕ್ಕ ಮಕ್ಕಳಿಗೆ ಚಾಕೊಲೇಟ್ ಆಮಿಷ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಕ್ಕೆ ಸಂಬಂಧಿಸಿ ಪ್ರತಿಷ್ಠಿತ ಹೋಟೆಲ್ ಒಂದರ ಕುಕ್ ನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಹಳೇ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಹೊಸೂರ ಬಳಿ ಇರುವ ಪ್ರತಿಷ್ಠಿತ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ ಒಡಿಶಾ ಮೂಲದ ಕುಕ್​, ಅಪ್ರಾಪ್ತ ಮಕ್ಕಳಿಗೆ ಚಾಕೊಲೇಟ್​ ಹಾಗೂ ಹಣದ ಆಸೆ ಮೂಡಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ಮಕ್ಕಳನ್ನು ಬೆತ್ತಲೆಗೊಳಿಸಿ, ತಾನೇ ವಿಡಿಯೋ ಮಾಡಿ ಹಣಕ್ಕೆ

ಮಕ್ಕಳಿಗೆ ಹಣದಾಸೆ ಮೂಡಿಸಿ ಲೈಂಗಿಕ ದೌರ್ಜನ್ಯ ಆರೋಪ – ಹೋಟೆಲ್ ಕುಕ್ ಅರೆಸ್ಟ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಂಡಿಎಂಎ ಮಾರಾಟಕ್ಕೆ ಯತ್ನ- ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 26. ಕಾಲೇಜಿನ ಸುತ್ತ ನಿಷೇಧಿತ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದವನನ್ನು ಉಳ್ಳಾಲ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ದೇರಳಕಟ್ಟೆ ನಿವಾಸಿ ಶರೀಫ್ (30) ಎಂದು ಗುರುತಿಸಲಾಗಿದೆ. ಈತ ದೇರಳಕಟ್ಟೆ ಸಮೀಪ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದು ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಳ್ಳಾಲ‌ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಎಂಡಿಎಂಎ ಮಾರಾಟಕ್ಕೆ ಯತ್ನ- ಓರ್ವನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಲಕನಿಗೆ ಲೈಂಗಿಕ ದೌರ್ಜನ್ಯ – ಮೌಲ್ವಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕುಮಟಾ, ಸೆ. 24. ಧಾರ್ಮಿಕ ಶಿಕ್ಷಣ ಕಲಿಕೆಗೆ ಬರುತಿದ್ಧ ಅಪ್ರಾಪ್ತ ಬಾಲಕನ ಮೇಲೆ ಮೌಲ್ವಿಯೊಬ್ಬ ಮಸೀದಿಯಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಪಟ್ಟಣದ ಮಸೀದಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳ ಮೂಲದ ಅಬ್ಬುಲ್ ಸಮದ್ ಜಿಯಾಯಿ (25) ಎಂದು ಗುರುತಿಸಲಾಗಿದೆ. ಈತ ಶನಿವಾರದಂದು ರಾತ್ರಿ ವೇಳೆ ಬಾಲಕನಿಗೆ ಮಸೀದಿಯಲ್ಲಿ ಬಟ್ಟೆಗಳನ್ನು ತೆಗೆಯುವಂತೆ ಹೇಳಿ ಲೈಂಗಿಕ ದೌರ್ಜನ್ಯವೆಸಗಿದ್ದನು. ಈ ಕುರಿತು ಬಾಲಕನ ತಂದೆಯ ದೂರಿನನ್ವಯ ಮೌಲ್ವಿಯನ್ನು ಕುಮಟಾ ಠಾಣಾ ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ

ಬಾಲಕನಿಗೆ ಲೈಂಗಿಕ ದೌರ್ಜನ್ಯ – ಮೌಲ್ವಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಏರ್ಪೋರ್ಟ್ ನಲ್ಲಿ 30 ಐಫೋನ್ ಹಾಗೂ 28 ಲ್ಯಾಪ್ ಟಾಪ್ ಗಳನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ಅಬುಧಾಬಿಯಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಚೆನ್ನೈಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬನಿಂದ 30 ಐಫೋನ್, 28 ಲ್ಯಾಪ್ ಟಾಪ್ ಮತ್ತು ಕ್ರೆಡಿಟ್ ಕಾರ್ಡ್ ನಲ್ಲಿ ಇರಿಸಲಾಗಿದ್ದ 55 ಗ್ರಾಂ ಚಿನ್ನಾಭರಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಕುರಿತು ಸೆ. 17ರಂದು ವರದಿಯಾಗಿದೆ. ಆರೋಪಿಯ ವಿರುದ್ಧ ಕಸ್ಟಮ್ಸ್ ಆಕ್ಟ್, 1962 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಯಾಣಿಕರು ನೀಡಿದ ಮಾಹಿತಿಯ ಆಧಾರದ ಮೇಲೆ ಬ್ಯಾಗೇಜ್ ಬೆಲ್ಟ್ ನಿಂದ ಲಗೇಜ್ ನ್ನು

ಏರ್ಪೋರ್ಟ್ ನಲ್ಲಿ 30 ಐಫೋನ್ ಹಾಗೂ 28 ಲ್ಯಾಪ್ ಟಾಪ್ ಗಳನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಮಾನದಲ್ಲಿ ತುರ್ತು ಬಾಗಿಲು ತೆರೆಯಲು ಯತ್ನ – ಪ್ರಯಾಣಿಕ ವಶಕ್ಕೆ

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ. 21. ದಿಲ್ಲಿಯಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಇಂಡಿಗೋ ಏರ್ ಲೈನ್ಸ್ ವಿಮಾನದ ಪ್ರಯಾಣಿಕನೋರ್ವ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಯತ್ನಿಸಿದ್ದು, ಆತನನ್ನು ವಶಕ್ಕೆ ತೆಗೆದುಕೊಂಡ ಸಿಐಎಸ್‌ಎಫ್ ಅಧಿಕಾರಿಗಳು ಬಳಿಕ ಪೊಲೀಸರಿಗೆ ಹಸ್ತಾಂತರಿಸಿದ ಘಟನೆ ನಡೆದಿದೆ. ಬಂಧಿತನನ್ನು ಮಣಿಕಂಡನ್ ಎಂದು ಗುರುತಿಸಲಾಗಿದೆ. ಮಣಿಕಂಡನ್ ವಿರುದ್ಧ ಇಂಡಿಗೋ ಅಧಿಕೃತ ದೂರನ್ನೂ ಪೊಲೀಸ್ ಠಾಣೆಗೆ ಸಲ್ಲಿಸಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ.

ವಿಮಾನದಲ್ಲಿ ತುರ್ತು ಬಾಗಿಲು ತೆರೆಯಲು ಯತ್ನ – ಪ್ರಯಾಣಿಕ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಲಕಿಯ ಅತ್ಯಾಚಾರ ಆರೋಪ- ವೃದ್ಧನ ಬಂಧನ

(ನ್ಯೂಸ್ ಕಡಬ) newskadaba.com ಸಕಲೇಶಪುರ, ಸೆ. 17. ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ವೃದ್ಧನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಮೀಸೆ ಮಂಜಯ್ಯ (73) ಎಂದು ಗುರುತಿಸಲಾಗಿದೆ. ಈತನನ್ನು ಸಕಲೇಶಪುರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಗಳಿಗಾದ ಅನ್ಯಾಯದಿಂದ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯ ತಾಯಿಯು ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಯ ಅತ್ಯಾಚಾರ ಆರೋಪ- ವೃದ್ಧನ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ – ಮಹಿಳೆ ಸಹಿತ ಮೂವರು ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 13. ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಎಂಡಿಎಂಎ ಮಾದಕ ವಸ್ತು ಸಹಿತ ಮಹಿಳೆ ಸೇರಿದಂತೆ ಮೂವರನ್ನು ವಿದ್ಯಾನಗರ ಠಾಣಾ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಮುಟ್ಟತ್ತೋಡಿಯ ಖಮರುನ್ನಿಸಾ (42), ಪಿ. ಎ ಮುಹಮ್ಮದ್ ಶರೀಫ್ (40) ಮತ್ತು ಚೇರೂರಿನ ಮುಹಮ್ಮದ್ ಇರ್ಷಾದ್ (38) ಎಂದು ಗುರುತಿಸಲಾಗಿದೆ. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ತಪಾಸಣೆ ನಡೆಸಿದ ಪೊಲೀಸರು ಕಾರನ್ನು ತಡೆದು ಪರಿಶೀಲಿಸಿದಾಗ ಮಾದಕ ವಸ್ತು ಪತ್ತೆಯಾಗಿದೆ. ಕಾರಿನಿಂದ ಆರೋಪಿಗಳ ಸಹಿತ 3.99 ಗ್ರಾಂ

ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ – ಮಹಿಳೆ ಸಹಿತ ಮೂವರು ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top