arrest

ಮಗಳ ಮೇಲೆ ನಿರಂತರ ಅತ್ಯಾಚಾರ – ಆರೋಪಿ ತಂದೆ ಬಂಧನ

(ನ್ಯೂಸ್ ಕಡಬ) newskadaba.com ಬೀದರ್, ಜು. 31. ಮಗಳ ಮೇಲೆ ತಂದೆಯೇ ನಿರಂತರ ಅತ್ಯಾಚಾರ ನಡೆಸಿರುವ ಘಟನೆ ಬೀದರ್ ಬಳಿ ನಡೆದಿದೆ. ಕೊರೋನಾ ಲಾಕ್ ಡೌನ್ ವೇಳೆ ಶಾಲೆಗೆ ರಜೆ ಘೋಷಿಸಿದ ನಂತರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಲವಂತವಾಗಿ ಅತ್ಯಾಚಾರ ನಡೆಸಿ ಯಾರಿಗೂ ವಿಷಯ ಹೇಳದಂತೆ ಬಾಲಕಿಗೆ ಆರೋಪಿ ತಂದೆ ಬೆದರಿಕೆಯೊಡ್ಡಿದ್ದ ಎನ್ನಲಾಗಿದೆ. ಇತ್ತೀಚೆಗೆ ಪ್ರಕರಣ ಬೆಳಕಿಗೆ ಬಂದಿದ್ದು, ದೂರಿನ ಮೇರೆಗೆ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ತಿಳಿಸಿದ್ದಾರೆ.

ಮಗಳ ಮೇಲೆ ನಿರಂತರ ಅತ್ಯಾಚಾರ – ಆರೋಪಿ ತಂದೆ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಮೂವರನ್ನು ಬಂಧಿಸಿದ ವಿಟ್ಲ ಪೊಲೀಸರು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು.31. ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಮೂಡಬಿದರೆ ಮೂಲದ ಪ್ರಸ್ತುತ ಬೆರಿಪದವಿನ ನಿವಾಸಿ ಅಕ್ಷಯ್ ದೇವಾಡಿಗ (24), ಬಾಯಾರು ಗ್ರಾಮದ ಕೊಜಪ್ಪ ನಿವಾಸಿ ಕಮಲಾಕ್ಷ ಬೆಳ್ಚಾಡ (30), ಬೆರಿಪದವು ನಿವಾಸಿ ಸುಕುಮಾರ ಬೆಳ್ಚಾಡ (28) ಎಂದು ಗುರುತಿಸಲಾಗಿದೆ. ಅಕ್ಷಯ್ ಪೈಟಿಂಗ್ ಕೆಲಸ ನಿರ್ವಹಿಸುತ್ತಿದ್ದು, ಕಮಲಾಕ್ಷ ಗಾರೆ ಕೆಲಸ ಹಾಗೂ ಸುಕುಮಾರ ಚಾಲಕ ವೃತ್ತಿಯನ್ನು ನಡೆಸಿಕೊಂಡಿದ್ದರು ಎಂದು ತಿಳಿದುಬಂದಿದೆ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಮೂವರನ್ನು ಬಂಧಿಸಿದ ವಿಟ್ಲ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು.30. ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ಮಂಗಳೂರಿನ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೋಪಿಯನ್ನು ಶಾಫಿ ಎಂದು ಗುರುತಿಸಲಾಗಿದೆ. 12 ವರ್ಷದ ಬಾಲಕಿಯನ್ನು ಆರೋಪಿಯು ಹಲವು ಬಾರಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಿ ಮಹಿಳಾ ಠಾಣೆಗೆ ದೂರು ನೀಡಲಾಗಿತ್ತು. ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು, ಆಕೆ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎನ್ನಲಾಗಿದೆ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿ ಅನುಮಾನಸ್ಪದ ಸಾವು ಪ್ರಕರಣ – ಆರು ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿ ಅನುಮಾನಸ್ಪದ ಮೃತ್ಯು ಪ್ರಕರಣ ಸಂಬಂಧ ಹೆಣ್ಣೂರು ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರೀತಿ ವಿಚಾರಕ್ಕೆ ಕಾಲೇಜು ವಿದ್ಯಾರ್ಥಿ ಮಾರ್ವೇಶ್ನನ್ನು ಕೊಲೆ ಮಾಡಲಾಗಿದೆ. ಕಾರ್ತಿಕ್,ಅಭಿಷೇಕ್, ನೆಲ್ಸನ್ ,ರಾಕಿ,ಡಾನಿಯಲ್, ಶ್ರೀಕಾಂತ್ ಬಂಧಿತ ಆರೋಪಿಗಳಾಗಿದ್ದಾರೆ. ಕೊಲೆಯಾದ ಮಾರ್ವೇಶ್ ಸ್ನೇಹಿತ ಕಾಲೇಜಿನ ಹುಡುಗಿಗೆ ಪ್ರೀತಿಸುತ್ತಿದ್ದೇನೆಂದು ಸತಾಯಿಸುತ್ತಿದ್ದನು, ಯುವತಿ ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದಳು. ಯುವತಿ ಸತಾಯಿಸುತ್ತಿದ್ದ ಬಗ್ಗೆ ತನ್ನ ಬಾಯ್ ಫ್ರೆಂಡ್ ವಿಚಾರ ತಿಳಿಸಿದ್ದಳು. ಯುವತಿ ಬಾಯ್ ಫ್ರೆಂಡ್ ಆರೋಪಿಯಾದ ರಾಕಿಗೆ ತಿಳಿಸಿದ್ದ. ಕೊಲೆ

ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿ ಅನುಮಾನಸ್ಪದ ಸಾವು ಪ್ರಕರಣ – ಆರು ಆರೋಪಿಗಳ ಬಂಧನ Read More »

ಕರ್ನಾಟಕ

ಸಿಎಂ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ – ಬಿಜೆಪಿ ಕಾರ್ಯಕರ್ತೆ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 28. ಸದಾ ವಿವಾದದ ಟ್ವೀಟ್‌ ಮಾಡುತ್ತಲೇ ಇದ್ದು ಸಮಾಜದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣದ ಆರೋಪ ಎದುರಿಸುತ್ತಿರುವ ಬಿಜೆಪಿ ಕಾರ್ಯಕರ್ತೆ ಶಕುಂತಲಾರನ್ನು ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ತುಮಕೂರು ಮೂಲದ ಶಕುಂತಲಾ, ಈ ಹಿಂದೆ ಕೂಡಾ ರೈಲ್ವೇ ದುರಂತಕ್ಕೆ ಸಂಬಂಧಪಟ್ಟಂತೆ ಟ್ವೀಟ್‌ ಮಾಡಿದ್ದು ಆಗ ಕೂಡ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ಹಿಂದೂ ಹುಡುಗಿಯರ ವಿಡಿಯೋ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದು, ಇದಕ್ಕೆ

ಸಿಎಂ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ – ಬಿಜೆಪಿ ಕಾರ್ಯಕರ್ತೆ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಂಕಿತ ಉಗ್ರರ ಖಾತೆಗೆ ವಿದೇಶದಿಂದ ಹಣ ವರ್ಗಾವಣೆ – ಪೊಲೀಸ್ ಮೂಲಗಳಿಂದ ಮಹತ್ವದ ಮಾಹಿತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 28. ಬೆಂಗಳೂರು, ಮೈಸೂರು ಹಾಗೂ ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಬಾಂಬ್‌ ಸ್ಪೋಟಿಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರಿಗೆ ವಿದೇಶದಿಂದ ಸುಮಾರು 15 ಲಕ್ಷ ರೂ. ಬಂದಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಪುರಾವೆ ಸಹಿತ ಮಾಹಿತಿ ಲಭಿಸಿರುವ ಕುರಿತು ವರದಿಯಾಗಿದೆ. ದುಬೈ ಮತ್ತು ಇತರೆ ದೇಶಗಳಲ್ಲಿರುವ ವಿದೇಶಿಯರು ಪ್ರಕರಣದ ಪ್ರಮುಖ ಆರೋಪಿ ಜುನೇದ್‌ ಅಹಮ್ಮದ್‌ ಮೂಲಕ ಶಂಕಿತರ ಖಾತೆಗಳಿಗೆ ಹಣ ಜಮೆ ಮಾಡಿದ್ದಾರೆ. ಶಂಕಿತ ಉಗ್ರರಾದ ಸೈಯದ್‌,

ಶಂಕಿತ ಉಗ್ರರ ಖಾತೆಗೆ ವಿದೇಶದಿಂದ ಹಣ ವರ್ಗಾವಣೆ – ಪೊಲೀಸ್ ಮೂಲಗಳಿಂದ ಮಹತ್ವದ ಮಾಹಿತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಕು ತೋರಿಸಿ ಸುಲಿಗೆ ಪ್ರಕರಣ – 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು.27. ಸುಲಿಗೆ ಪ್ರಕರಣಕ್ಕೆ ಸಂಬಂದಿಸಿದಂತೆ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಉಳ್ಳಾಲ ನಿವಾಸಿ ಆರೋಪಿ ಬಶೀರ್ ಎಂದು ಗುರುತಿಸಲಾಗಿದೆ. 2000ರಲ್ಲಿ ಮಹಿಳೆಯನ್ನು ಅಡ್ಡಗಟ್ಟಿ ಆರೋಪಿಗಳು ಚೂರಿ ತೋರಿಸಿ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಸಿದು ಸುಲಿಗೆ ಮಾಡಿ ಪರಾರಿಯಗಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಹುಸೇನ್ @ ಮೊಹಮ್ಮದ್ ಹುಸೇನ್ ಬಶೀರ್ ಮತ್ತು ಮೊಯ್ದೀನ್ ಕುದ್ರೋಳಿ

ಚಾಕು ತೋರಿಸಿ ಸುಲಿಗೆ ಪ್ರಕರಣ – 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ

ಅಪಹರಣಗೈದು ಅತ್ಯಾಚಾರ – ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ)newskadaba.com ಕೊಲ್ಕತ್ತಾ, ಜು.27. ಶಾಲೆಯಿಂದ ಮನೆಗೆ ವಾಪಸ್ಸಾಗುತ್ತಿದ್ದಾಗ ಅಪಹರಣ- ಅತ್ಯಾಚಾರಕ್ಕೆ ಒಳಗಾಗಿದ್ದ ಒಂಭತ್ತನೇ ತರಗತಿ ವಿದ್ಯಾರ್ಥಿನಿ ಉತ್ತರ ಬಂಗಾಳ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಈ ಪ್ರಕರಣ ಸಂಬಂಧ ಪೊಲೀಸರು ಐದು ಮಂದಿ ಶಂಕಿತರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿಯನ್ನು ಖಾಸಗಿ ಆಸ್ಪತ್ರೆಯಿಂದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲೈಂಗಿಕ ಕಿರುಕುಳದ ವೇಳೆ ಬಾಲಕಿಯ ಮೆದುಳಿಗೆ ಸಾಕಷ್ಟು ಆಮ್ಲಜನಕ ಪೂರೈಕೆಯಾಗದೇ ಆಕೆ ಪ್ರಜ್ಞಾಹೀನ ಸ್ಥಿತಿ ತಲುಪಿದ್ದಾಗಿ ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿತ್ತು.

ಅಪಹರಣಗೈದು ಅತ್ಯಾಚಾರ – ವಿದ್ಯಾರ್ಥಿನಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೊಲೀಸರ ಹೆಸರಿನಲ್ಲಿ ಬ್ಲಾಕ್ ಮೇಲ್ – ವಿದ್ಯಾರ್ಥಿಯಿಂದ ಹಣ ವಸೂಲಿ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜು. 26. ಪೊಲೀಸರ ತನಿಖೆ ವಿಚಾರಣೆ ಶೈಲಿಯನ್ನು ಸರಿಯಾಗಿ ತಿಳಿದುಕೊಂಡು, ಇದನ್ನೇ ಬಂಡವಾಳವಾಗಿಟ್ಟುಕೊಂಡು ಆರೋಪಿಗಳು ಪ್ಯಾರಾಮೆಡಿಕಲ್​ ವಿದ್ಯಾರ್ಥಿಯೋರ್ವನಿಂದ ಹಣ ಸುಲಿಗೆ ಮಾಡಿರುವ ಘಟನೆ ವರದಿಯಾಗಿದೆ. ಆರೋಪಿಗಳು ತಾವು ಪೊಲೀಸರು, ಸ್ಟೇಷನ್ ಗೆ ನಡೆಯಿರಿ ಎಂದು ಹೇಳಿ ವಿದ್ಯಾರ್ಥಿಯನ್ನು ಕಾರು ಹತ್ತಿಸಿ, ಬರೋಬ್ಬರಿ 1 ಲಕ್ಷದ 70 ಸಾವಿರ ಅಕೌಂಟ್​ಗೆ ಹಾಕಿಸಿಕೊಂಡಿದ್ದಾರೆ ಎಂದು ಪೊಲೀಸ್​ ವಿಚಾರಣೆ ವೇಳೆ ಬಯಲಿಗೆ ಬಂದಿದೆ. ನಂತರ ಆರೋಪಿಗಳು ವಿಚಾರ ಬಾಯಿಬಿಟ್ಟರೆ ಕೊಲೆ ಮಾಡುವುದಾಗಿ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದು,

ಪೊಲೀಸರ ಹೆಸರಿನಲ್ಲಿ ಬ್ಲಾಕ್ ಮೇಲ್ – ವಿದ್ಯಾರ್ಥಿಯಿಂದ ಹಣ ವಸೂಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗೃಹಲಕ್ಷ್ಮೀ ಯೋಜನೆ ಹೆಸರಲ್ಲಿ ವಂಚನೆ – ಸೈಬರ್ ಸೆಂಟರ್ ಮಾಲೀಕ ಅರೆಸ್ಟ್

(ನ್ಯೂಸ್ ಕಡಬ)newskadaba.com ಮೈಸೂರು, ಜು.26. ಗೃಹಲಕ್ಷ್ಮಿ ಯೋಜನೆ ನಕಲಿ ಸರ್ಟಿಫಿಕೇಟ್ ಸಿದ್ದಪಡಿಸುತ್ತಿದ್ದ ಸೈಬರ್ ಸೆಂಟರ್ ಮಾಲಿಕನೊಬ್ಬನನ್ನು ಬಂಧಿಸಿರುವ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಸುರೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ನಕುಲ್ ನೆಟ್ ವರ್ಕ್ ಹೆಸರಿನಲ್ಲಿ ಸೈಬರ್ ಸೆಂಟರ್ ನಡೆಸುತ್ತಿದ್ದ ಎನ್ನಲಾಗಿದೆ. ಗೃಹಲಕ್ಷ್ಮಿ ಯೋಜನೆಯ ನಕಲಿ ಸರ್ಟಿಫಿಕೇಟ್ ಸಿದ್ದಪಡಿಸಿ ಜನರನ್ನು ಯಾಮಾರಿಸುತ್ತಿದ್ದ ಎನ್ನಲಾಗಿದೆ. ಈ ಕುರಿತು ಸುಕೇಶ್ ಕುಮಾರ್ ದೂರು ನೀಡಿದ್ದು, ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.  

ಗೃಹಲಕ್ಷ್ಮೀ ಯೋಜನೆ ಹೆಸರಲ್ಲಿ ವಂಚನೆ – ಸೈಬರ್ ಸೆಂಟರ್ ಮಾಲೀಕ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top