arrest

ಇಬ್ಬರು ನಕ್ಸಲೀಯರ ಬಂಧನ…! ➤ ಸ್ಪೋಟಕ ವಸ್ತು ವಶ

(ನ್ಯೂಸ್ ಕಡಬ)newskadaba.com ಛತ್ತೀಸ್ ಗಢ, ಏ.08. ಇಬ್ಬರು ನಕ್ಸಲೀಯರನ್ನು ಬಂಧಿಸಿ ಅವರಿಂದ ಸ್ಪೋಟಕಗಳನ್ನು ವಶಪಡಿಸಿಕೊಂಡಿರುವ ಘಟನೆ ಛತ್ತೀಸ್‍ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಮುಚಕ್ ಸುಖರಾಮ್ (28) ಮತ್ತು ಮದ್ವಿ ಕೋಸಾ (30) ಎಂದು ಗುರುತಿಸಲಾಗಿದೆ. ಈ ಇಬ್ಬರ ಪತ್ತೆಗೆ ಮಾಹಿತಿ ನೀಡಿದವರಿಗೆ ತಲಾ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು. ಆರೋಪಿಗಳು ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದರು ಎಂದು ಹೇಳಲಾಗಿದೆ.

ಇಬ್ಬರು ನಕ್ಸಲೀಯರ ಬಂಧನ…! ➤ ಸ್ಪೋಟಕ ವಸ್ತು ವಶ Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿ, ಮುಖ್ಯಮಂತ್ರಿ ಯೋಗಿಗೆ ಬೆದರಿಕೆ ಆರೋಪ ➤ 16 ವರ್ಷದ ಬಾಲಕನ ಬಂಧನ

(ನ್ಯೂಸ್ ಕಡಬ)newskadaba.com ನೋಯ್ಡಾ, ಏ.08. ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪದಲ್ಲಿ ಲಕ್ನೋದ 16 ವರ್ಷದ ಬಾಲಕನನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ಮೋದಿ ಹಾಗೂ ಯೋಗಿಯನ್ನು ಮುಗಿಸುವುದಾಗಿ ಮಾಧ್ಯಮ ಸಂಸ್ಥೆಗೆ ಇಮೇಲ್ ಕಳುಹಿಸಿದ ಬಾಲಕನ ವಿರುದ್ಧ ಏಪ್ರಿಲ್ 5 ರಂದು ನೊಯ್ಡಾದ ಸೆಕ್ಟರ್ 20 ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿತ್ತು. ನಂತರ ಈ ವಿಷಯವನ್ನು ತನಿಖೆ ಮಾಡಲಾಯಿತು ಎಂದು ಸಹಾಯಕ

ಪ್ರಧಾನಿ ಮೋದಿ, ಮುಖ್ಯಮಂತ್ರಿ ಯೋಗಿಗೆ ಬೆದರಿಕೆ ಆರೋಪ ➤ 16 ವರ್ಷದ ಬಾಲಕನ ಬಂಧನ Read More »

ರಾಷ್ಟ್ರೀಯ ನ್ಯೂಸ್

85 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ..! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಹಾಸನ, ಏ.08. 85 ವರ್ಷದ ವೃದ್ಧೆಯನ್ನು ಕೊಂದು ಅತ್ಯಾಚಾರ ಎಸಗಿದ್ದ ನೀಚ ಯುವಕನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಏಪ್ರಿಲ್ 1ರಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ವೃದ್ಧೆಯ ಕೊಲೆಯಾಗಿತ್ತು. ಅರಸೀಕೆರೆ ತಾಲೂಕಿನ ಯರೆಹಳ್ಳಿ ಗ್ರಾಮದ ನಿವಾಸಿ 32 ವರ್ಷದ ಮಿಥುನ್ ಬಂಧಿತ ಆರೋಪಿ. ವೃದ್ಧೆ ಜಮೀನಿನ ಬಳಿ ತೆರಳಿದ್ದರು. ಈ ವೇಳೆ ವೃದ್ಧೆ ಮೇಲೆ ಮಿಥುನ್ ಅತ್ಯಾಚಾರಕ್ಕೆ ಯತ್ನಿಸಿದ್ದನು. ವೃದ್ಧೆ ಪ್ರತಿರೋಧ ತೋರಿದ್ದಕ್ಕೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದು ಬಳಿಕ

85 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ..! ➤ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಅಂತರಾಜ್ಯ ವಾಹನ ಚೋರನ ಬಂಧನ

(ನ್ಯೂಸ್ ಕಡಬ)newskadaba.com ಉಳ್ಳಾಲ, ಏ.08. ಕೋಟೆಕಾರು ಬಳಿಯಿಂದ ಪಿಕಪ್ ವಾಹನ ಕಳವು ನಡೆಸಿದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಆತನಿಂದ ಕಳವು ನಡೆಸಿದ ಪಿಕಪ್ ವಾಹನ ವಶಪಡಿಸಿಕೊಳ್ಳಲಾಗಿದೆ. ಕೇರಳ ಮೇಲ್ಪರಂಬ ಮಾಂಗಡ್ ನಿವಾಸಿ ಅಹಮ್ಮದ್ ರಮ್ಸಾನ್ ಯಾನೆ ರಮ್ಸಾನ್ (26) ಬಂಧಿತ ಎಂದು ಗುರುತಿಸಲಾಗಿದೆ. ಕೋಟೆಕಾರು ಸೌತ್ ಇಂಡಿಯಾ ಮರದ ಡಿಪೋ ಬಳಿ ನಿಲ್ಲಿಸಲಾಗಿದ್ದ ಪಿಕಪ್ ಕಳವು ನಡೆದಿತ್ತು.ಈ ಕುರಿತು ಮಾಲೀಕ ಮಹಮ್ಮದ್ ಶರೀಫ್ ಎಂಬವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ಕೈಗೆತ್ತಿಕೊಂಡ ಉಳ್ಳಾಲ

ಉಳ್ಳಾಲ: ಅಂತರಾಜ್ಯ ವಾಹನ ಚೋರನ ಬಂಧನ Read More »

ಕರಾವಳಿ
crime, arrest, suspected

ಕಾಸರಗೋಡು: ಪತಿಯನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಪತ್ನಿ ➤ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.08. ಪತ್ನಿ ಯು ಪತಿಯನ್ನು ಕಡಿದು ಕೊಲೆಗೈದ ದಾರುಣ ಘಟನೆ ಪಾಣತ್ತೂರಿ ನಲ್ಲಿ ನಡೆದಿದೆ. ಪುತ್ತೂರಡ್ಕದ ಬಾಬು(54) ಮೃತ ಪಟ್ಟವರು ಎಂದು ಗುರುತಿಸಲಾಗಿದೆ. ಕೃತ್ಯಕ್ಕೆ ಸಂಬಂಧ ಪಟ್ಟಂತೆ ಪತ್ನಿ ಸೀಮಂತಿನಿ ನನ್ನು ಪೊಲೀಸರು ವಶಕ್ಕೆ ತೆಗೆದು ಕೊಂಡಿದ್ದಾರೆ. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ದಿನಂಪ್ರತಿ ಪಾನ ಮತ್ತರಾಗಿ ಮನೆಗೆ ಬರುತ್ತಿದ್ದ ಬಾಬು ಮನೆಗೆ ಬಂದ ಬಳಿಕ ಇಬ್ಬರ ಜಗಳ ವಾಗಿದ್ದು, ಈ ಸಂದರ್ಭದಲ್ಲಿ ಕತ್ತಿ ಯಿಂದ ಬಾಬು

ಕಾಸರಗೋಡು: ಪತಿಯನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಪತ್ನಿ ➤ ಆರೋಪಿ ಪೊಲೀಸ್ ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಲಿತರ ಮೇಲೆ ಹಲ್ಲೆ ಪ್ರಕರಣ ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಡ್ಯ, ಏ.07. ಶ್ರೀರಂಗಪಟ್ಟಣ ತಾಲೂಕಿನ ನಂದಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ ನಡೆದ ಆರೋಪದ ಮೇರೆಗೆ ಇಬ್ಬರು ಆರೋಪಿಗಳ ಬಂಧಿಸಲಾಗಿದೆ ಎಂದು ವರದಿಯಾಗಿದೆ. ದಲಿತರ ಮೇಲೆ ಹಲ್ಲೆ ನಡೆಸಿದ ಆರೋಪದ ಮೆರೆಗೆ ಬಂಧನ ಮಾಡಲಾಗಿದೆ. ಆರೋಪಿಗಳಾದ ಇಕ್ವಾಲ್‌ ಪಾಷಾ , ನಾಸಿರ್‌ ಎಂದು ಗುರುತಿಸಲಾಗಿದ್ದು, ಆರೋಪಿಗಳನ್ನು ಬಂಧಿಸುವಂತೆ ಶ್ರೀರಂಗಪಟ್ಟಣದಲ್ಲಿ ಇಂದು ವಿಹೆಚ್‌ಪಿ ಸಂಘಟನೆಗಳಿಂದ ಬಂದ್‌ಗೆ ಕರೆ ನೀಡಲಾಗಿದೆ. ಆರೋಪಿಗಳ ಬಂಧನ ಬೆನ್ನಲ್ಲೆ ವ್ಯಾಪಾರ ವಹಿವಾಟು ಪುನಾರಂಭಿಸಿದ್ದಾರೆ.  

ದಲಿತರ ಮೇಲೆ ಹಲ್ಲೆ ಪ್ರಕರಣ ➤ ಆರೋಪಿಗಳು ಅರೆಸ್ಟ್ Read More »

ಕರ್ನಾಟಕ

ರೈಲಿಗೆ ಬೆಂಕಿ ಹಚ್ಚಿ ಮೂವರ ಹತ್ಯೆ ಪ್ರಕರಣ ➤ 14 ದಿನಗಳ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ)newskadaba.com ಕೇರಳ, ಏ.07. ಚಲಿಸುತ್ತಿದ್ದ ರೈಲಿನ ಬೋಗಿಯೊಳಗೆ ಬೆಂಕಿ ಹಚ್ಚಿ ಮೂವರು ಪ್ರಯಾಣಿಕರ ಸಾವಿಗೆ ಕಾರಣನಾಗಿದ್ದ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆರೋಪಿ ಶಾರುಖ್‌ ಸೈಫಿ(24) ಗಾಯಗೊಂಡಿರುವುದರಿಂದ ಆತನನ್ನು ಮಹಾರಾಷ್ಟ್ರದ ರತ್ನಗಿರಿಯಿಂದ ಕಸ್ಟಡಿಗೆ ತೆಗೆದುಕೊಂಡ ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಪಿ ಶಾರುಖ್‌ ಸೈಫಿಯನ್ನು ಸ್ಥಳೀಯ ಮ್ಯಾಜಿಸ್ಟ್ರೇಟ್ ಅವರು ಆಸ್ಪತ್ರೆಗೆ ಆಗಮಿಸಿ ಮತ್ತು ಸೈಫಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ರೈಲಿಗೆ ಬೆಂಕಿ ಹಚ್ಚಿ ಮೂವರ ಹತ್ಯೆ ಪ್ರಕರಣ ➤ 14 ದಿನಗಳ ನ್ಯಾಯಾಂಗ ಬಂಧನ Read More »

ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ನೈತಿಕ ಪೊಲೀಸ್ ಗಿರಿ ➤ ನಾಲ್ವರು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಏ. 06. ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಕುರಿತು ಚಾರ್ಮಾಡಿಯಲ್ಲಿ ನಡೆದಿದೆ.     ಬಂಧಿತರನ್ನು ದಿನೇಶ್, ಸಚಿನ್, ನಿತೇಶ್ ತೋಟಂತಾಡಿ, ಅವಿನಾಶ್ ಯಾನೆ ರಾಹುಲ್ ಎಂದು ಗುರುತಿಸಲಾಗಿದೆ. ಕಕ್ಕಿಂಜೆ ನಿವಾಸಿ ಮೊಹಮ್ಮದ್ ಶಾಹಿಲ್ ಎಂಬಾತ ಬಸ್ ನಲ್ಲಿ  ತೆರಳುತ್ತಿದ್ದ ವೇಳೆ ಪರಿಚಯದ ಯುವತಿಯೊಂದಿಗೆ ಮಾತನಾಡಿದ್ದು, ಯುವತಿ ಬೆಳ್ತಂಗಡಿಯಲ್ಲಿ ಇಳಿದು ಮನೆಗೆ ತೆರಳಿದ್ದಳು. ವಿಚಾರ ತಿಳಿದ ನಾಲ್ವರು ಯುವಕರ ತಂಡವು ಬಸ್ ನಿಂದ

ಬೆಳ್ತಂಗಡಿ: ನೈತಿಕ ಪೊಲೀಸ್ ಗಿರಿ ➤ ನಾಲ್ವರು ಅರೆಸ್ಟ್..! Read More »

ಕರಾವಳಿ

ಕೇಸರಿ ಧ್ವಜಕ್ಕೆ ಅವಮಾನ ಆರೋಪ..! ➤ ಯುವಕ ಅರೆಸ್ಟ್

(ನ್ಯೂಸ್ ಕಡಬ)newskadaba.com ನವದೆಹಲಿ, ಏ.06. ಈಶಾನ್ಯ ದೆಹಲಿಯ ಶಾಸ್ತ್ರಿ ಪಾರ್ಕ್‌ ನ ಬೀದಿಯಲ್ಲಿ ಕೇಸರಿ ಧ್ವಜವನ್ನು ಅವಮಾನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ. ಸ್ಥಳೀಯ ನಿವಾಸಿ ಸಾಗರ್ ಅವರು ದೂರು ನೀಡಲು ಸ್ಥಳೀಯ ಪೊಲೀಸ್ ಠಾಣೆಗೆ ಬಂದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇಸರಿ ಧ್ವಜಕ್ಕೆ ಅವಮಾನ ಆರೋಪ..! ➤ ಯುವಕ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಜಾನುವಾರು ಕಳ್ಳತನ ಆರೋಪ..! ➤ ಇಬ್ಬರ ಬಂಧನ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.06. ಗೋ ಕಳ್ಳತನ‌ದ ಆರೋಪದಲ್ಲಿ ಇಬ್ಬರನ್ನು ಬಂಧಿಸಿರುವ ಘಟನೆ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಅಮ್ಮೆಮಾರ್ ನಿವಾಸಿ ಸಾಹುಲ್ ಹಮೀದ್(33) ಮತ್ತು ಮಹಮ್ಮದ್ ಸಾದಿಕ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿಗಳು ಕಾವೂರು ಗಾಂಧಿನಗರದಲ್ಲಿ ಗೋವಿನ ಕರುವನ್ನು ಕಳವು ಮಾಡಿದ್ದರು ಎನ್ನಲಾಗಿದೆ. ಬಂಧನದ ವೇಳೆ ಪೊಲೀಸರು ಆರೋಪಿಗಳಿಂದ 1,50,000 ಮೌಲ್ಯದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ಠಾಣೆಗಳಲ್ಲಿ ಈ ಮೊದಲು ಪ್ರಕರಣ ದಾಖಲಾಗಿತ್ತು ಎಂದು

ಮಂಗಳೂರು: ಜಾನುವಾರು ಕಳ್ಳತನ ಆರೋಪ..! ➤ ಇಬ್ಬರ ಬಂಧನ Read More »

ಕರಾವಳಿ
Scroll to Top