arrest

5 ವರ್ಷದ ಹಿಂದೆ ನಡೆದಿದ್ದ ಬುಡಕಟ್ಟು ಯುವಕನ ಕೊಲೆ ಪ್ರಕರಣ ➤ 14 ಮಂದಿ ದೋಷಿ

 (ನ್ಯೂಸ್ ಕಡಬ)newskadaba.com ಕೇರಳ, ಏ.05. 5 ವರ್ಷಗಳ ಹಿಂದೆ ಕೇರಳದಲ್ಲಿ ನಡೆದಿದ್ದ ಬುಡಕಟ್ಟು ಯುವಕನೊಬ್ಬನ ಕೊಲೆಗೆ ಸಂಬಂಧಿಸಿದಂತೆ 14 ಮಂದಿ ಆರೋಪಿಗಳನ್ನು ದೋಷಿಗಳೆಂದು ಪರಿಗಣಿಸಿ ಕೇರಳದ ಪಾಲಕ್ಕಾಡ್‌ನ ಮನ್ನಾರ್‌ಕಾಡ್‌ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಮಧು ಎಂಬ ಬುಡಕಟ್ಟು ಯುವಕನನ್ನು ಫೆ. 22, 2018 ರಂದು ಕೊಲೆಗೈದ ಕಾರಣಕ್ಕೆ ಒಟ್ಟು 16 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯ 14 ಮಂದಿಯನ್ನು ದೋಷಿಗಳೆಂದು ಹೇಳಿದೆ.

5 ವರ್ಷದ ಹಿಂದೆ ನಡೆದಿದ್ದ ಬುಡಕಟ್ಟು ಯುವಕನ ಕೊಲೆ ಪ್ರಕರಣ ➤ 14 ಮಂದಿ ದೋಷಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಬುದ್ಧಿಮಾಂದ್ಯೆಯ ಮೇಲೆ ಅತ್ಯಾಚಾರ ➤ 65 ವರ್ಷದ ವೃದ್ದನ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.05. ಬುದ್ಧಿಮಾಂದ್ಯೆಯನ್ನು ಅತ್ಯಾಚಾರಗೈದ ಆರೋಪದಲ್ಲಿ 65 ವರ್ಷದ ವೃದ್ಧನ ವಿರುದ್ಧ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 65 ವರ್ಷ ಪ್ರಾಯದ ರಾಜ್‌ ಭಟ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಸೂರಿಂಜೆ ಮೂಲದ ಆರೋಪಿ ರಾಜ್‌ಭಟ್ ಬ್ರೋಕರ್ ಕೆಲಸ ಮಾಡಿಕೊಂಡಿದ್ದು, ಆತನು ಮಂಗಳೂರು ಹೊರವಲಯದ ಸುರತ್ಕಲ್ ಪ್ರದೇಶದ ಬುದ್ಧಿಮಾಂದ್ಯೆಯನ್ನು ಆಕೆಯ ಮನೆಯಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯು ವಿವಾಹಿತನಾಗಿದ್ದು, ಪತ್ನಿ ಮತ್ತು ಮಕ್ಕಳಿಂದ ದೂರವಾಗಿದ್ದಾನೆ ಎಂದು ತಿಳಿದುಬಂದಿದೆ.

ಮಂಗಳೂರು: ಬುದ್ಧಿಮಾಂದ್ಯೆಯ ಮೇಲೆ ಅತ್ಯಾಚಾರ ➤ 65 ವರ್ಷದ ವೃದ್ದನ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

ಮಂಗಳೂರು: ವಿವಿಧ ಠಾಣೆಗಳಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ➤ ನಾಲ್ವರ ಬಂಧನ, ಸೊತ್ತು ವಶಕ್ಕೆ

(ನ್ಯೂಸ್ ಕಡಬ)newskadaba.com ಕಾಪು, ಏ.05. ರಾಷ್ಟ್ರೀಯ ಹೆದ್ದಾರಿ 66ರ ಉಳಿಯಾರಗೋಳಿ ಕೋತಲ ಕಟ್ಟೆಯಲ್ಲಿ ಕಾರಿಗೆ ಲಾರಿ ಢಿಕ್ಕಿ ಹೊಡೆದು ಕಾರು ಜಖಂಗೊಂಡ ಘಟನೆ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರಿಗೆ ಲಾರಿ ಢಿಕ್ಕಿ ಹೊಡೆದಿದ್ದು ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಕಾರು ಡಿವೈಡರ್ ಮೇಲೇರಿ, ಉಡುಪಿ – ಮಂಗಳೂರು ರಸ್ತೆಗೆ ಅಡ್ಡಲಾಗಿ ನಿಂತು ಬಿಟ್ಟಿದೆ. ಎದುರಿನಿಂದ ಯಾವುದೇ ವಾಹನಗಳು ಬಾರದೇ ಇದ್ದುದರಿಂದ ಕಾರು ಚಾಲಕ ಪವಾಢ ಸಧೃಢ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಪು ಪೊಲೀಸರು ಸ್ಥಳಕ್ಕೆ

ಮಂಗಳೂರು: ವಿವಿಧ ಠಾಣೆಗಳಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ➤ ನಾಲ್ವರ ಬಂಧನ, ಸೊತ್ತು ವಶಕ್ಕೆ Read More »

ಕರಾವಳಿ

ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್ ಬಂಧನ

(ನ್ಯೂಸ್ ಕಡಬ)newskadaba.com ನ್ಯೂಯಾರ್ಕ್, ಏ.05. ಲೈಂಗಿಕ ಹಗರಣ ಮುಚ್ಚಿಡಲು ಪೋರ್ನ್ ಸ್ಟಾರ್ಗೆ ಹಣ ನೀಡಿದ್ದ ಪ್ರಕರಣದಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ (76) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೂ ಮುನ್ನ ದೋಷಾರೋಪಣಾ ಪಟ್ಟಿ ಸಲ್ಲಿಕೆಯಾಗಿದ್ದ ಹಿನ್ನೆಲೆಯಲ್ಲಿ ಟ್ರಂಪ್ ಮ್ಯಾನ್ಹಾಟನ್ ಕೋರ್ಟ್ಗೆ ಶರಣಾಗಿದ್ದರು. ಅಮೆರಿಕದ ಇತಿಹಾಸದಲ್ಲೇ ಕ್ರಿಮಿನಲ್‌ ಆರೋಪ ಪ್ರಕರಣದ ವಿಚಾರಣೆ ಎದುರಿಸಿದ ಹಾಗೂ ಬಂಧನಕ್ಕೆ ಒಳಗಾದ ಮೊದಲ ಅಧ್ಯಕ್ಷ ಟ್ರಂಪ್‌ ಆಗಿದ್ದಾರೆ. ಬಂಧನದ ಹಿನ್ನಲೆ ನ್ಯೂಯಾರ್ಕ್ನಲ್ಲಿ ಗಲಭೆ ನಡೆಯಬಹುದು ಎಂಬ ಅನುಮಾನದ ಮೇರೆಗೆ ಹೈ ಅಲರ್ಟ್

ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್ ಬಂಧನ Read More »

ರಾಷ್ಟ್ರೀಯ ನ್ಯೂಸ್

ಹಣ ಕೊಂಡೊಯ್ಯುತ್ತಿದ್ದ ವರನ ಬಂಧಿಸಿದ ಪೊಲೀಸರು

(ನ್ಯೂಸ್ ಕಡಬ)newskadaba.com ತುಮಕೂರು, ಏ.04.  ತೋವಿನಕೆರೆ ಸಮೀಪದ ಜೋನಿಗರಹಳ್ಳಿ ಕ್ರಾಸ್‌ನಲ್ಲಿರುವ ಚೆಕ್‌ಪೋಸ್ಟ್ ನಲ್ಲಿ  1.20 ಲಕ್ಷ ರೂ. ಹಣ ಕೊಂಡೊಯ್ಯುತ್ತಿದ್ದ ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಪಟ್ಟಣದ ಆಭರಣ ವ್ಯಾಪಾರಿಗೆ ಪಾವತಿಸಲು ಹಣವನ್ನು ಸಾಗಿಸುತ್ತಿದ್ದರು. ಚೆಕ್‌ಪೋಸ್ಟ್ ನಲ್ಲಿ ಅವರನ್ನು ತಡೆದ ಅಧಿಕಾರಿಗಳ ಹಣದ ಬಗ್ಗೆ ತಿಳಿಸುವಂತೆ ಹೇಳಿದ್ದಾರೆ.  

ಹಣ ಕೊಂಡೊಯ್ಯುತ್ತಿದ್ದ ವರನ ಬಂಧಿಸಿದ ಪೊಲೀಸರು Read More »

ಕರ್ನಾಟಕ

ಹಿಟ್ & ರನ್ – ರಸ್ತೆ ಬದಿ ಮಲಗಿದ್ದ ವ್ಯಕ್ತಿ ಮೃತ್ಯು ➤ ಆರೋಪಿ ವಶಕ್ಕೆ..!

(ನ್ಯೂಸ್ ಕಡಬ) newskadaba.com ಗುಂಡ್ಯ, ಏ. 04. ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮಂಗಳೂರು ಮಧ್ಯೆ ಗುಂಡ್ಯ ಎಂಬಲ್ಲಿ ರಸ್ತೆಯ ಬದಿಯಲ್ಲಿ ಮಲಗಿದ ವ್ಯಕ್ತಿಯ ಮೇಲೆ ಲಾರಿಯೊಂದು ಚಲಾಯಿಸಿ ಸಾರಿ ಸಮೇತ ಚಾಲಕ ಪರಾರಿಯಾದ ಕೆಲವೇ ಕ್ಷಣದಲ್ಲಿ ಚಾಲಕ ಹಾಗೂ ಲಾರಿಯನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಘಟನೆಯಲ್ಲಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತಪಟ್ಟ ವ್ಯಕ್ತಿಯನ್ನು ಕೇರಳದ ಪೊನ್ನಪ್ಪನ್(50) ಎಂದು ಗುರುತಿಸಲಾಗಿದೆ. ಇವರು ಕಳೆದ 15 ವರ್ಷದಿಂದ ಗುಂಡ್ಯ ಪರಿಸರದಲ್ಲಿ ಒಬ್ಬಂಟಿಯಾಗಿ ಜೀವಿಸುತ್ತಾ, ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಂಡು

ಹಿಟ್ & ರನ್ – ರಸ್ತೆ ಬದಿ ಮಲಗಿದ್ದ ವ್ಯಕ್ತಿ ಮೃತ್ಯು ➤ ಆರೋಪಿ ವಶಕ್ಕೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಏ.04. ಅಕ್ರಮವಾಗಿ ಪಿಸ್ತೂಲ್‌ ಹೊಂದಿದ್ದ ವ್ಯಕ್ತಿಯೋರ್ವನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ನಗರದ ಕದ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಜಾರ್ಜ್‌ ಮಾರ್ಟಿಸ್‌ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಶಿಶಿರ್‌ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನಿಂದ ಒಂದು ಪಿಸ್ತೂಲ್‌ ಮತ್ತು ಬುಲೆಟ್‌ ವಶಪಡಿಸಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ. ತನ್ನ ಮನೆಯ ಒಂದು ಮಹಡಿಯಲ್ಲಿ ಸುಮಾರು ಐದು ತಿಂಗಳಿಂದ ಬಾಡಿಗೆ ಇದ್ದ ಶಿಶಿರ್‌ ಬಳಿ ಪಿಸ್ತೂಲ್‌ ಇರುವ ಬಗ್ಗೆ ಮನೆಯ ಮಾಲಕರು ಪೊಲೀಸರಿಗೆ ದೂರು ನೀಡಿದ್ದರು.

ಮಂಗಳೂರು: ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ಮಗುವಿನ ತಲೆಗೆ ಕಲ್ಲಿನಿಂದ ಚಚ್ಚಿ ಹತ್ಯೆ ಮಾಡಿದ ಪಾಪಿ ತಂದೆ !

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಏ.03. 5 ರೂಪಾಯಿ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಎಂಟು ವರ್ಷದ ಮಗುವಿನ ತಲೆಗೆ ಕಲ್ಲಿನಿಂದ ಚಚ್ಚಿ ಹತ್ಯೆಗೈದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಈ ಭೀಕರ ಕೊಲೆ ಬೇಧಿಸಿದ ಪೊಲೀಸರಿಗೆ ಅಚ್ಚರಿಯಾಗಿದ್ದು, ಎಂಟು ವರ್ಷದ ನದೀಂ ಎನ್ನುವ ಬಾಲಕ ಶಾಲೆ ರಜೆ ಕೊಟ್ಟಿದ್ದರಿಂದ ಬೆಂಡಿಗೇರಿ ಪೊಲೀಸ್ ಠಾಣೆಯ ಹತ್ತಿರವಿರುವ ದೊಡ್ಮನಿ ಕಾಲೋನಿಯಲ್ಲಿನ ಅಜ್ಜಿ ಮನೆಗೆಂದು ಬಂದಿದ್ದು, ಈ ವೇಳೆ ಸೈಕೋ ಕಿಲ್ಲರ್ ರವಿ ಬಳ್ಳಾರಿ ಎಂಬ ವ್ಯಕ್ತಿ ಕೇವಲ 5 ರೂಪಾಯಿ ಕೇಳಿದ್ದಕ್ಕೆ ಮಗುವನ್ನು ಕೊಲೆ

ಕ್ಷುಲ್ಲಕ ಕಾರಣಕ್ಕೆ ಮಗುವಿನ ತಲೆಗೆ ಕಲ್ಲಿನಿಂದ ಚಚ್ಚಿ ಹತ್ಯೆ ಮಾಡಿದ ಪಾಪಿ ತಂದೆ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ‘ಮೆಡಿಕಲ್‌ ಸೀಟು ಕೊಡಿಸುವುದಾಗಿ ವಂಚನೆ’ ➤ಆರೋಪಿ ಬಂಧನ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.03. ನಗರದ ಖಾಸಗಿ ವೈದ್ಯಕೀಯ ಕಾಲೇಜಿನ ಹೆಸರಿನಲ್ಲಿ ಮೆಡಿಕಲ್‌ ಸೀಟು ಕೊಡಿಸುವುದಾಗಿ ಹೇಳಿ ಮೋಸ ಮಾಡಿದ್ದ ಪ್ರಕರಣದಲ್ಲಿ ನೋಯ್ಡಾ ಮೂಲದ ಆರೋಪಿಯನ್ನು ಮಹಾರಾಷ್ಟ್ರದ ಪೊಲೀಸರು ಮುಂಬೈನ ನೆರೋಲ್ ನಲ್ಲಿ ಬಂಧಿಸಿ ಉಳ್ಳಾಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತನನ್ನು ಇಫ್ತಿಕರ್ ಅಹ್ಮದ್ (31) ಉತ್ತರ ಪ್ರದೇಶದ ನೋಯ್ಡಾ ನಿವಾಸಿಯೆಂದು ಗುರುತಿಸಲಾಗಿದೆ. ಬೀದರ್‌ ಮೂಲದ ವ್ಯಕ್ತಿಯೋರ್ವರು, ತಮ್ಮಿಂದ 22.5 ಲಕ್ಷ ರೂ. ಪಡೆದು ಖಾಸಗಿ ಮೆಡಿಕಲ್‌ ಕಾಲೇಜಿನಲ್ಲಿ ಸೀಟು ದೊರಕಿಸುವುದಾಗಿ ನಂಬಿಸಿ ಇಫ್ತಿಕರ್ ಅಹ್ಮದ್

ಮಂಗಳೂರು: ‘ಮೆಡಿಕಲ್‌ ಸೀಟು ಕೊಡಿಸುವುದಾಗಿ ವಂಚನೆ’ ➤ಆರೋಪಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪತ್ರಕರ್ತನ ಮೇಲೆ ದಾಳಿ ಪ್ರಕರಣ..!     ➤ ಇಬ್ಬರು​ ಉಗ್ರರ ಬಂಧನ

(ನ್ಯೂಸ್ ಕಡಬ)newskadaba.com ಶ್ರೀನಗರ, ಏ.01. ಪತ್ರಕರ್ತ ವಸೀಮ್​​ ಅಹ್ಮದ್​ ವಾನಿ(27) ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ದ ರೆಸಿಸ್ಟೆಂಟ್​​​ ಫ್ರಂಟ್​ ಸಂಘಟನೆಗೆ(TRF) ಸೇರಿದ್ದ ಇಬ್ಬರು ಹೈಬ್ರಿಡ್​ ಉಗ್ರರನ್ನು ಜಮ್ಮು-ಕಾಶ್ಮೀರದ ಶೋಫಿಯಾನ್​ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಪತ್ರಕರ್ತನ ಮೇಲಿನ ದಾಳಿಗೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ(SIT)ಅನ್ನು ರಚಿಸಲಾಗಿತ್ತು. ತಾಂತ್ರಿಕ ಸಾಕ್ಷಿಗಳ ಆಧಾರದ ಮೇಲೆ ಹಲವು ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು ಎಂದು ತನಿಖಾ ದಳದ ಸದಸ್ಯರೊಬ್ಬರು ತಿಳಿಸಿದ್ದಾರೆ.  

ಪತ್ರಕರ್ತನ ಮೇಲೆ ದಾಳಿ ಪ್ರಕರಣ..!     ➤ ಇಬ್ಬರು​ ಉಗ್ರರ ಬಂಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top