arrest

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ    ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com ಸುರತ್ಕಲ್, ಮಾ.29. ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸುರತ್ಕಲ್ ಪೊಲೀಸರು ಬಂಧಿಸಿ ಅಪಾರ ಪ್ರಮಾಣದ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಒರಿಸ್ಸಾ ಮೂಲದ ಚಿಂತಾಮಣಿ ಮತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದು, ಇವರಿಂದ 3.180 ಕೆಜಿ ಗಾಂಜಾವನ್ನು ವಶಕ್ಕೆ ಪಡೆಲಾಗಿದೆ ಎಂದು ತಿಳಿಸಿದ್ದಾರೆ. ಬಂಧಿತರು ಇಲ್ಲಿನ ಇಡ್ಯಾ ಗ್ರಾಮದ ಗೋವಿಂದದಾಸ ಕಾಲೇಜು ಬಳಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಕುರಿತ ಖಚಿತ ವರ್ತಮಾನದ ಹಿನ್ನೆಲೆಯಲ್ಲಿ ಸುರತ್ಕಲ್ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ ನೇತೃತ್ವದ […]

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ    ➤ ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ

ಅಪ್ರಾಪ್ತೆ ಮೇಲೆ ಅತ್ಯಾಚಾರ….!      ➤ ಆರೋಪಿಗೆ 10 ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29. ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ 21 ವರ್ಷದ ಆರೋಪಿಗೆ ನ್ಯಾಯಾಲಯ ಪೋಕ್ಸೋ ಕಾಯ್ದೆಯಡಿ 10 ವರ್ಷಗಳ ಕಠಿಣ ಸಜೆ ಜೊತೆಗೆ 10 ಸಾವಿರ ರೂ. ದಂಡ ವಿಧಿಸಿದೆ. ಅಲ್ಲದೇ ಸಂತ್ರಸ್ತೆಗೆ ಆರೋಪಿಯು 4 ಲಕ್ಷ ರೂ ಪರಿಹಾರ ನೀಡುವಂತೆ ಆದೇಶಿಸಿದೆ. 14 ವರ್ಷದ ಬಾಲಕಿ ಕುರಿ ಕಾಯಲು ಹೋಗುತ್ತಿದ್ದಾಗ ಆಕೆಯನ್ನು ಆರೋಪಿ, ಅಜ್ಜಿಯೊಬ್ಬರು ರಸ್ತೆಯಲ್ಲಿ ಬಿದ್ದಿದ್ದಾರೆ ನೋಡಲು ಬನ್ನಿ ಎಂದು ಆನೇಕಲ್ ತಾಲೂಕಿನ ಜಿಗಣಿ ಹೊರವಲಯಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ.  

ಅಪ್ರಾಪ್ತೆ ಮೇಲೆ ಅತ್ಯಾಚಾರ….!      ➤ ಆರೋಪಿಗೆ 10 ವರ್ಷ ಜೈಲು ಶಿಕ್ಷೆ Read More »

ಕರ್ನಾಟಕ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ..! ➤ ಮುಖ್ಯೋಪಾಧ್ಯಾಯ ಅಮಾನತು

(ನ್ಯೂಸ್ ಕಡಬ)newskadaba.com  ತುಮಕೂರು, ಮಾ.28. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಣ ಇಲಾಖೆ ಮಂಗಳವಾರ ತುಮಕೂರು ಜಿಲ್ಲೆಯ ಶಾಲೆಯೊಂದರ ಶಿಕ್ಷಕ ಮತ್ತು ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಿದೆ. ಮೂಲಗಳ ಪ್ರಕಾರ, ಬೋರಗುಂಟೆ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಮಂಜುನಾಥ, ವಿದ್ಯಾರ್ಥಿನಿಯರೊಂದಿಗೆ ಪ್ರತಿದಿನ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ವೇಳೆ ಕರ್ತವ್ಯಲೋಪ ಆರೋಪದಡಿ ಮುಖ್ಯ ಶಿಕ್ಷಕ ನಟರಾಜ್ ಅವರನ್ನು ಅಮಾನತುಗೊಳಿಸಲಾಗಿದೆ.  

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ..! ➤ ಮುಖ್ಯೋಪಾಧ್ಯಾಯ ಅಮಾನತು Read More »

ಕರ್ನಾಟಕ

ಮಂಗಳೂರು: ಜೂಜು ಅಡ್ಡೆಗೆ ದಾಳಿ 14 ಮಂದಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.27. ನಗರದ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಜೂಜು ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 14 ಮಂದಿಯನ್ನು ಬಂಧಿಸಿದ್ದಾರೆ. ಅಕ್ರಮವಾಗಿ ಜೂಜು ಅಡ್ಡೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಜೂಜಿನಲ್ಲಿ ನಿರತರಾಗಿದ್ದ 14ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಬಂಧಿತರಿಂದ 78,810 ರೂ. ನಗದು, 2 ಬೈಕ್ ಗಳು ಹಾಗೂ 11 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಣಂಬೂರು

ಮಂಗಳೂರು: ಜೂಜು ಅಡ್ಡೆಗೆ ದಾಳಿ 14 ಮಂದಿ ಅರೆಸ್ಟ್ Read More »

ಕರಾವಳಿ

ಐದನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.25. ಮುನ್ಸಿಪಲ್ ಕಾರ್ಪೊರೇಷನ್ ನಡೆಸುತ್ತಿದ್ದ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿಯ ಮೇಲೆ ಶಾಲಾ ಸಿಬ್ಬಂದಿಯಿಂದ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ದೆಹಲಿಯಲ್ಲಿ ನಡೆದಿದೆ. ಆರೋಪಿ ಶಾಲಾ ಸಹಾಯಕ ಅಜಯ್ನಲನ್ನು ಪೊಲೀಸರು ಬಂಧಿಸಿದ್ದಾರೆ. ಹಾಗೂ ಆತನ ಮೂವರು ಸಹಚರರ ಬಂಧನಕ್ಕೆ ಬಲೆ ಬೀಸಿದ್ದಾರೆ. ಘಟನೆಯ ನಂತರ ಬಾಲಕಿ ಶಾಲೆಗೆ ಹೋಗುವುದನ್ನು ನಿಲ್ಲಿಸಿದ್ದಳು. ಪರೀಕ್ಷೆಗೆ ಸಹ ಹಾಜರಾಗಿರಲಿಲ್ಲ. ಶಿಕ್ಷಕರು ಆಕೆಯ ಸಹೋದರನನ್ನು ಸಂಪರ್ಕಿಸಿ ಅಂತಿಮ ಪರೀಕ್ಷೆಗೆ ಹಾಜರಾಗದ ಬಗ್ಗೆ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆಯ

ಐದನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ➤ ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಣದೋಚಿ ಪರಾರಿಯಾಗಿದ್ದ ಆರೋಪಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಮಾ.25. ವ್ಯಕ್ತಿಯೋರ್ವರ ಕೈಯಲ್ಲಿದ್ದ 10 ಲಕ್ಷ ರೂ. ಹಣದ ಕಟ್ಟನ್ನು ಕಿತ್ತೊಯ್ದ ಪ್ರಕರಣದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಈ ಬಗ್ಗೆ ದೂರು ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು, ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ನೇತೃತ್ವದಲ್ಲಿ ತನಿಖೆ ನಡೆಸಿ, ಈತನನ್ನು ಬಂಧಿಸಿ, ಆತನಲ್ಲಿದ್ದ 9 ಲಕ್ಷ ರೂ.ವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಮುಸ್ತಾಫಾ ಈ ಹಿಂದೆ ಹಾಸನ ಜಿಲ್ಲೆಯ ಬೇಲೂರು

ಹಣದೋಚಿ ಪರಾರಿಯಾಗಿದ್ದ ಆರೋಪಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ನವಜಾತ ಶಿಶುವನ್ನು 4.5 ಲಕ್ಷಕ್ಕೆ ಮಾರಾಟ ಮಾಡಿದ ತಾಯಿ ➤ 11 ಮಂದಿ ಬಂಧನ

(ನ್ಯೂಸ್ ಕಡಬ)newskadaba.com ಮಾ.24. ಹೆರಿಗೆಯಾದ ತಕ್ಷಣ ಗಂಡು ಶಿಶುವನ್ನು ತಾಯಿಯೇ 4.5 ಲಕ್ಷಕ್ಕೆ ಮಾರಾಟ ಮಾಡಿರುವ ಘಟನೆ ಜಾರ್ಖಂಡ್ನವ ಛತ್ರಾ ಜಿಲ್ಲೆಯಲ್ಲಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ನವಜಾತ ಶಿಶುವಿನ ತಾಯಿ ಆಶಾದೇವಿ ಸೇರಿದಂತೆ 11 ಜನರನ್ನು ಬಂಧಿಸಲಾಗಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಅವಿನಾಶ್ ಕುಮಾರ್ ತಿಳಿಸಿದ್ದಾರೆ. ಛತ್ರ ಜಿಲ್ಲೆಯ ಮಕ್ಕಳ ಕಲ್ಯಾಣ ಇಲಾಖೆಯ ಉಪ ಆಯುಕ್ತ ಅಬು ಇಮ್ರಾನ್ ಮಾಹಿತಿ ನೀಡಿದ ಕೂಡಲೇ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು 24 ಗಂಟೆಗಳಲ್ಲಿ ಬೊಕಾರೊ ಜಿಲ್ಲೆಯಿಂದ ನವಜಾತ ಶಿಶುವನ್ನು

ನವಜಾತ ಶಿಶುವನ್ನು 4.5 ಲಕ್ಷಕ್ಕೆ ಮಾರಾಟ ಮಾಡಿದ ತಾಯಿ ➤ 11 ಮಂದಿ ಬಂಧನ Read More »

ಕ್ರೈಮ್ ನ್ಯೂಸ್

ವಿಮಾನದಲ್ಲಿ ಮದ್ಯ ಸೇವಿಸಿ ಗಲಾಟೆ ➤ ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಮುಂಬೈ, ಮಾ. 24. ದುಬೈ-ಮುಂಬೈ ಇಂಡಿಗೋ ಏರ್‌ಲೈನ್ಸ್’ನಲ್ಲಿ ಮದ್ಯ ಸೇವಿಸಿ ಗಲಾಟೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಪ್ರಯಾಣಿಕರನ್ನು ಪೊಲೀಸರು ಬಂಧಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ ಈ ಇಬ್ಬರು ಪ್ರಯಾಣಿಕರು ವಿಮಾನ ಹಾರಾಟದಲ್ಲಿದ್ದ ವೇಳೆ ಗಲಾಟೆ ಸೃಷ್ಟಿಸಿ ಸಿಬ್ಬಂದಿ ಮತ್ತು ಸಹ ಪ್ರಯಾಣಿಕರಿಗೂ ಕಿರಿಕಿರಿಯುಂಟು ಮಾಡಿದ್ದರು. ಏರ್ ಲೈನ್ ಸಿಬ್ಬಂದಿಯ ದೂರಿನ ಮೇರೆಗೆ ಎಫ್’ಐಆರ್ ದಾಖಲಿಸಿ ಪಾಲ್ಘರ್ ಜಿಲ್ಲೆಯ ಜಾನ್ ಜಿ ಡಿಸೋಜಾ (49) ಮತ್ತು ಕೊಲ್ಲಾಪುರದ ಮಾನ್ಬೆಟ್ನ ದತ್ತಾತ್ರೇಯ ಬಾಪರ್ಡೇಕರ್ (47) ಎಂಬವರನ್ನು

ವಿಮಾನದಲ್ಲಿ ಮದ್ಯ ಸೇವಿಸಿ ಗಲಾಟೆ ➤ ಇಬ್ಬರು ಆರೋಪಿಗಳು ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ: ಸಾರ್ವಜನಿಕ ಸ್ಥಳದಲ್ಲೇ ಗಾಂಜಾ ಸೇವನೆ..!   ➤ ಐವರು ವಿದ್ಯಾರ್ಥಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com  ಉಡುಪಿ, ಮಾ.23. ಅಪಾರ್ಟ್ಮೆಂಟ್ ವೊಂದರ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿರುವ ಘಟನೆ ಮಣಿಪಾಲದಲ್ಲಿ ವರದಿಯಾಗಿದೆ. ವಶಕ್ಕೆ ಪಡೆದಿರುವ ವಿದ್ಯಾರ್ಥಿಗಳನ್ನು ನಿಖಿಲ್ ಎಂ. (22), ತನ್ವೀರ್ ರೆಡ್ಡಿ (25), ಶರಣ್ ಶೆಟ್ಟಿ (22), ರಾಹುಲ್ ಸೀಮಾ (21), ತುಶಾರ್ ಜಿ. (21) ಎಂದು ಗುರುತಿಸಲಾಗಿದೆ.  

ಉಡುಪಿ: ಸಾರ್ವಜನಿಕ ಸ್ಥಳದಲ್ಲೇ ಗಾಂಜಾ ಸೇವನೆ..!   ➤ ಐವರು ವಿದ್ಯಾರ್ಥಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಚೂರಿಯಿಂದ ಇರಿದು ಯುವಕನ ಕೊಲೆಗೆ ಯತ್ನ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 23. ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆಗೆ ಪ್ರಯತ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೋಲೀಸ್ ಠಾಣಾ ಇನ್ಸ್ ಪೆಕ್ಟರ್ ವಿವೇಕಾನಂದ ಮತ್ತು ಎಸ್.ಐ.ರಾಮಕೃಷ್ಣ ಅವರ ನೇತೃತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತನನ್ನು ನರಿಕೊಂಬು ಗ್ರಾಮದ ಪಿತ್ತಲಗುಡ್ಡೆ ನಿವಾಸಿ ನಿಸಾರ್ ಯಾನೆ ನಿಸಾರ್ ಆಹಮ್ಮದ್ ಎಂದು ಗುರುತಿಸಲಾಗಿದೆ. ಈತ ಸುಲೈಮಾನ್ ಎಂಬಾತನಿಗೆ ಕತ್ತರಿಯಿಂದ ಇರಿದು ಕೊಲೆಗೆ ಪ್ರಯತ್ನಿಸಿದ್ದ ಎಂದು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಂಟ್ವಾಳ: ಚೂರಿಯಿಂದ ಇರಿದು ಯುವಕನ ಕೊಲೆಗೆ ಯತ್ನ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top