arrest

ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಪೋಸ್ಟರ್      ➤ 6 ಮಂದಿ ಬಂಧನ, 100ಕ್ಕೂ FIR..!

(ನ್ಯೂಸ್ ಕಡಬ)newskadaba.com  ನವದೆಹಲಿ, ಮಾ.22. ಪ್ರಧಾನಿ ನರೇಂದ್ರ ಮೋದಿ ವಿರುದ್ದ ದೆಹಲಿ ನಗರಾದ್ಯಂತ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಪ್ರಕರಣ ಸಂಬಂಧ 100ಕ್ಕೂ ಎಫ್‌ಐಆರ್ ದಾಖಲಾಗಿದೆ. ಪ್ರಿಂಟಿಂಗ್ ಪ್ರೆಸ್ ಆಕ್ಟ್ & ಡಿಫೇಸ್ಮೆಂಟ್ ಆಫ್ ಪ್ರಾಪರ್ಟಿ ಆಕ್ಟ್‌ನಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ವ್ಯಾನ್‌ವೊಂದು ಆಮ್ ಆದ್ಮಿ ಪಕ್ಷದ ಕಚೇರಿಯಿಂದ ಹೊರಟಿದ್ದು, ಕೂಡಲೇ ಆ ವ್ಯಾನ್‌ನ್ನು ಅಡ್ಡಗಟ್ಟಿ ಕೆಲವು ಪೋಸ್ಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ. […]

ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಪೋಸ್ಟರ್      ➤ 6 ಮಂದಿ ಬಂಧನ, 100ಕ್ಕೂ FIR..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

16ರ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಡಿಪ್ಲೋಮಾ ವಿದ್ಯಾರ್ಥಿ ➤ ದೂರು ದಾಖಲು..!

(ನ್ಯೂಸ್ ಕಡಬ)newskadaba.com  ಕಾರವಾರ, ಮಾ.22. 16 ವರ್ಷದ ಬಾಲಕಿಯ ಮೇಲೆ ಡಿಪ್ಲೊಮಾ ವಿದ್ಯಾರ್ಥಿಯೋರ್ವ ಅತ್ಯಾಚಾರ ನಡೆಸಿರುವ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ. ಆರೋಪಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನವನು ಎನ್ನಲಾಗಿದ್ದು, ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ ಈತ ಕಳೆದ ಜನವರಿ ತಿಂಗಳಿನಲ್ಲಿ ಅಂಕೋಲಾಕ್ಕೆ ಬಂದಿದ್ದಾಗ ಬಾಲಕಿಯನ್ನು ಬೀಚ್‌ಗೆ ಕರೆದೊಯ್ದು ಬಲವಂತವಾಗಿ ಅತ್ಯಾಚಾರ ಎಸಗಿದ್ದ ಎಂದು ದೂರು ದಾಖಲಾಗಿದೆ.

16ರ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಡಿಪ್ಲೋಮಾ ವಿದ್ಯಾರ್ಥಿ ➤ ದೂರು ದಾಖಲು..! Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಐವರು ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ)newskadaba.com ಲಕ್ನೋ, ಮಾ, 22. ಕಳೆದ ಕೆಲ ಸಮಯದಿಂದ ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಐವರು ಬಾಂಗ್ಲಾದೇಶದ ಪ್ರಜೆಗಳನ್ನು ಭಯೋತ್ಪಾದನಾ ನಿಗ್ರಹ ದಳ ಮತ್ತು ಯುಪಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಆಗ್ರಾದ ತಾಜ್‌ಗಂಜ್ ಟೋರಾ ಚೌಕಿ ಪ್ರದೇಶದಲ್ಲಿ ಬಂಧಿಸಲಾಗಿದೆ. ಕಳೆದ ಮೂರು ವರ್ಷಗಳಿಂದ ಇವರು ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಇಬ್ರಾಹಿಂ ಶೇಖ್, ಮೊಹಮ್ಮದ್ ಅಜೀಜುರ್ ಗಾಜಿ, ರಾಜು ಶೇಖ್, ಜನ್ನತ್ ಬೇಗಂ ಮತ್ತು ಮುಕ್ತಾ ಶೇಖ್ ಬಂಧಿತರು ಎಂದು ಗುರುತಿಸಲಾಗಿದೆ. ಇನ್ನು ನಕಲಿ ಆಧಾರ್ ಕಾರ್ಡ್‌ಗಳು, ಬಾಂಗ್ಲಾದೇಶದ

ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಐವರು ಆರೋಪಿಗಳು ಅರೆಸ್ಟ್..! Read More »

ರಾಷ್ಟ್ರೀಯ ನ್ಯೂಸ್

ಖ್ಯಾತ ಪತ್ರಕರ್ತ ಇರ್ಫಾನ್ ಮೆಹ್ರಾಜ್ ಬಂಧಿಸಿದ NIA ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 21. ಕಾಶ್ಮೀರ ಮೂಲದ ಪತ್ರಕರ್ತ ಇರ್ಫಾನ್ ಮೆಹ್ರಾಜ್ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ದೆಹಲಿಯ ಎನ್ಐಎಯಲ್ಲಿ ದಾಖಲಾದ ಎಫ್ಐಆರ್ ಸಂಖ್ಯೆ ಆರ್ಸಿ -37/2020 ಗೆ ಸಂಬಂಧಿಸಿದಂತೆ ಮೆಹ್ರಾಜ್ ಅವರನ್ನು ಎನ್ಐಎ ವಿಚಾರಣೆಗಾಗಿ ಬಂಧಿಸಿದೆ.

ಖ್ಯಾತ ಪತ್ರಕರ್ತ ಇರ್ಫಾನ್ ಮೆಹ್ರಾಜ್ ಬಂಧಿಸಿದ NIA ಅಧಿಕಾರಿಗಳು Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಬರೊಬ್ಬರಿ 1ಕೋಟಿ ರೂ.ವಂಚನೆ ➤ ಕೇರಳ ಮೂಲದ ಆರೋಪಿ ಅರೆಸ್ಟ್ 

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 21. ಹೂಡಿಕೆದಾರರಿಗೆ 1 ಕೋಟಿ ರೂ.ವಂಚಿಸಿದ ಆರೋಪದ ಮೇಲೆ ಮಂಗಳೂರು ಸೆನ್  ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಕೇರಳದ ಕ್ಯಾಲಿಕಟ್ ನಿವಾಸಿ ಜಿಜೋ ಜಾನ್ ಪಿ ಕೆ(29) ಎಂದು ಗುರುತಿಸಲಾಗಿದೆ. ಈತ ಮಂಗಳೂರಿನ ಶಕ್ತಿನಗರದ ಹೂಡಿಕೆದಾರರಿಂದ ಹೆಚ್ಚಿನ ಆದಾಯವನ್ನು ತಂದುಕೊಡುವ ಭರವಸೆ ನೀಡಿ, ಹಣವನ್ನು ಪಡೆದುಕೊಂಡಿದ್ದ. ಇದೀಗ ಆತನ ಭರವಸೆ ಸುಳ್ಳು ಎಂದು ಸಾರ್ವಜನಿಕರಿಗೆ ತಿಳಿದುಬಂದಿದ್ದು, ಹಣವನ್ನು ಹಿಂದಿರುಗಿಸಲು ವಿಫಲವಾಗಿದ್ದಾನೆ. ಈ ಕುರಿತು ಆರೋಪಿ ವಿರುದ್ಧ ದೂರು ನೀಡಲಾಗಿದ್ದು, ಪೊಲೀಸರು

ಮಂಗಳೂರು: ಬರೊಬ್ಬರಿ 1ಕೋಟಿ ರೂ.ವಂಚನೆ ➤ ಕೇರಳ ಮೂಲದ ಆರೋಪಿ ಅರೆಸ್ಟ್  Read More »

ಕರಾವಳಿ, ಕ್ರೈಮ್ ನ್ಯೂಸ್

ಆಸ್ಪತ್ರೆಯಲ್ಲಿಯೇ ಮಹಿಳೆಯೋರ್ವರ ಮೇಲೆ ಅತ್ಯಾಚಾರವೆಸಗಿದ ಪಾಪಿ

(ನ್ಯೂಸ್ ಕಡಬ)newskadaba.com ಕಲಬುರಗಿ, ಮಾ.18. ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 36 ವರ್ಷದ ಮಹಿಳೆ ವ್ಯಕ್ತಿಯೊಬ್ಬ ಅತ್ಯಾಚಾರ ವೆಸಗಿದ ಘಟನೆ  ನಡೆದಿದೆ. ನಗರದ ಇಸ್ಲಾಬಾಬಾದ್ ಕಾಲೋನಿಯ ಮಹೆಬೂಬ್ ಪಾಶಾ ತಂದೆ ಮದರಸಾಬ್ (40) ಎಂಬಾತನೆ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದ್ದು, ಆತನನ್ನು ಬ್ರಹ್ಮಪುರ ಪೊಲೀಸ್ ಬಂಧಿಸಿದ್ದಾರೆ.

ಆಸ್ಪತ್ರೆಯಲ್ಲಿಯೇ ಮಹಿಳೆಯೋರ್ವರ ಮೇಲೆ ಅತ್ಯಾಚಾರವೆಸಗಿದ ಪಾಪಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಾಖಲಾತಿ ಇಲ್ಲದೇ 20 ಲಕ್ಷ ರೂ. ಸಾಗಾಟ ➤ ಆರೋಪಿ ಸಹಿತ ನಗದು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೈಂದೂರು, ಮಾ. 17. ಸೂಕ್ತ ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ.ಗಳನ್ನು ಆರೋಪಿ ಸಹಿತ ಬೈಂದೂರು ಠಾಣಾ ಪೊಲೀಸರು ವಶಪಡಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ಕಾರು ಚಲಾಯಿಸುತ್ತಿದ್ದ ಬೆಳ್ತಂಗಡಿ ಶಿರ್ಲಾಲು ಮಂಜಿಲಪಲ್ಕೆ ನಿವಾಸಿ ಬಶೀರ್ (42) ಎಂದು ಗುರುತಿಸಲಾಗಿದೆ. ಉಡುಪಿ ಜಿಲ್ಲೆಯ ಗಡಿಭಾಗದ ಶಿರೂರು ಚೆಕ್‌ಪೋಸ್ಟ್‌ನಲ್ಲಿ ಮಾ.16ರಂದು ವಾಹನ ತಪಾಸಣೆ ನಡೆಸುತ್ತಿದ್ದ ಎಸ್‌ಐ ನಿರಂಜನಗೌಡ ಮತ್ತು ಸಿಬ್ಬಂದಿ ಭಟ್ಕಳದಿಂದ ಬಂದ ನೋಂದಣಿ ನಂಬರ್ ಪ್ಲೇಟ್ ಇಲ್ಲದ ಕಾರನ್ನು ತಡೆ ಹಿಡಿದು,

ದಾಖಲಾತಿ ಇಲ್ಲದೇ 20 ಲಕ್ಷ ರೂ. ಸಾಗಾಟ ➤ ಆರೋಪಿ ಸಹಿತ ನಗದು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರಿನ ಮೇಲೆ ನಿಂತು ಬರ್ತ್ ಡೇ ಪಾರ್ಟಿ ➤ ಯುಟ್ಯೂಬರ್ ದೀಕ್ಷಿತ್ ಬಂಧನ

(ನ್ಯೂಸ್ ಕಡಬ) newskadaba.com ಕೋಲಾರ, ಮಾ. 17. ಕಾರಿನ ಮೇಲೆ ನಿಂತು ಹುಟ್ಟುಹಬ್ಬ ಆಚರಿಸಿಕೊಳ್ಳುವ ಮೂಲಕ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಯುಟ್ಯೂಬರ್ ಪ್ರಿನ್ಸ್ ದೀಕ್ಷಿತ್ ಎಂಬಾತನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಪ್ರಿನ್ಸ್ ದೀಕ್ಷಿತ್ ರಾಷ್ಟ್ರೀಯ ಹೆದ್ದಾರಿ 24ರಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ನಿಂತು ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು, ಬಳಿಕ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ದೀಕ್ಷೀತ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಕಾರಿನ ಮೇಲೆ ನಿಂತು ಬರ್ತ್ ಡೇ ಪಾರ್ಟಿ ➤ ಯುಟ್ಯೂಬರ್ ದೀಕ್ಷಿತ್ ಬಂಧನ Read More »

ಕರ್ನಾಟಕ

ಡ್ರಮ್ ನಲ್ಲಿ ಮಹಿಳೆಯ ಮೃತದೇಹ ಪತ್ತೆ ಪ್ರಕರಣ ➤ ಮೂವರ ಬಂಧನ         

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಬೆಂಗಳೂರಿನ ಬೈಯಪ್ಪನಹಳ್ಳಿ ರೈಲ್ವೇ ನಿಲ್ದಾಣದ ಬಳಿ ಡ್ರಮ್ ಒಂದರಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾದ ಪ್ರಕರಣವನ್ನು ಭೇಧಿಸಿದ ರೈಲ್ವೇ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಕೊಲೆಯಾದ ಮಹಿಳೆಯನ್ನು ಬಿಹಾರ ಮೂಲದ ತಮನ್ನಾ ಎಂದು ಗುರುತಿಸಲಾಗಿದೆ. ಕೊಲೆ ಪ್ರಕರಣದಲ್ಲಿ ಒಟ್ಟು ಎಂಟು ಮಂದಿ ಭಾಗವಹಿಸಿದ್ದು ಸಿಟಿ ಮಾರ್ಕೆಟ್ ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಮಾಲ್(21), ತನ್ವೀರ್(24) ಶಕೀಬ್(25) ಎಂಬವರನ್ನು ಬಂಧಿಸಲಾಗಿದ್ದು, ಉಳಿದವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು

ಡ್ರಮ್ ನಲ್ಲಿ ಮಹಿಳೆಯ ಮೃತದೇಹ ಪತ್ತೆ ಪ್ರಕರಣ ➤ ಮೂವರ ಬಂಧನ          Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಅಕ್ರಮ ಮಾದಕ ವಸ್ತು ಗಾಂಜಾ ಮಾರಾಟ ಪ್ರಕರಣ ➤ ಓರ್ವ ಅರೆಸ್ಟ್, ಇನ್ನೋರ್ವ ಆರೋಪಿ ಪರಾರಿ

(ನ್ಯೂಸ್ ಕಡಬ)newskadaba.com ಪುತ್ತೂರು, ಮಾ.17. ಮಾದಕ ಪದಾರ್ಥ ಗಾಂಜಾವನ್ನು ಮಾರಾಟ ಮಾಡಲು ಉದ್ದೇಶದಿಂದ ಕಾರಿನಲ್ಲಿ ಸಾಗಾದ ಮಾಡುತ್ತಿದ್ದ ಸಂಧರ್ಭ ಸಂಪ್ಯ ಪೊಲೀಸ್ ಕಾರ್ಯಾಚರಣೆ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುತ್ತೂರಿನ ಅಬೂಬಕ್ಕರ್ ಸಿದ್ದಿಕ್ ಎಂದು ಗುರುತಿಸಲಾಗಿದೆ. ಪರಾರಿಯಾದವನನ್ನು ಸುಳ್ಯದ ಸರ್ಪುದ್ದಿನ್ ಎಂದು ಗುರುತಿಸಲಾಗಿದೆ.

ಅಕ್ರಮ ಮಾದಕ ವಸ್ತು ಗಾಂಜಾ ಮಾರಾಟ ಪ್ರಕರಣ ➤ ಓರ್ವ ಅರೆಸ್ಟ್, ಇನ್ನೋರ್ವ ಆರೋಪಿ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top