arrest

ಸಿನಿಮಾ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ತಾಂಡವ್ ರಾಮ್ ಅರೆಸ್ಟ್

(ನ್ಯೂಸ್ ಕಡಬ) newskadaba.com  ನ. 19 ಬೆಂಗಳೂರು: ‘ಮುಗಿಲ್ ಪೇಟೆ’ ಸಿನಿಮಾ ನಿರ್ದೇಶಕ ಭರತ್ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ ಆರೋಪದ ಮೇರೆಗೆ ನಟ ತಾಂಡವ್ ರಾಮ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ನಿರ್ದೇಶಕ ಭರತ್ ಸಿನಿಮಾವೊಂದನ್ನು ನಿರ್ದೇಶಿಸುತ್ತಿದ್ದು, ಅದರಲ್ಲಿ ತಾಂಡವ್ ರಾಮ್ ಕೂಡ ನಟಿಸುತ್ತಿದ್ದರು. ಆದರೆ ಆ ಸಿನಿಮಾವನ್ನು ಭರತ್ ಅರ್ಧಕ್ಕೆ ನಿಲ್ಲಿಸಿದ ಕಾರಣ ಸಿಟ್ಟಾಗಿ ತಾಂಡವ್ ರಾಮ್, ನಿರ್ದೇಶಕ ಭರತ್ ಗೆ ಬಂದೂಕು ತೋರಿಸಿ […]

ಸಿನಿಮಾ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ತಾಂಡವ್ ರಾಮ್ ಅರೆಸ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂವರು ಯುವತಿಯರ ಮೃತ್ಯು ಪ್ರಕರಣ: ಇಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಉಳ್ಳಾಲ, ನ. 18. ಉಚ್ಚಿಲದ ವಾಝ್ಕೋ ಬೀಚ್ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರೆಸಾರ್ಟ್ ಮಾಲೀಕ ಮನೋಹರ್ ಹಾಗೂ ಮೆನೇಜರ್ ಭರತ್ ಎಂದು ಗುರುತಿಸಲಾಗಿದೆ. ಅವರ ನಿರ್ಲಕ್ಷ್ಯ ಧೋರಣೆಯಿಂದ ಈ ಅನಾಹುತ ಸಂಭವಿಸಿದ್ದು, ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈಜು ಕೊಳದಲ್ಲಿ ಮೃತಪಟ್ಟ ಕೀರ್ತನ, ನಿಶಿತಾ ಹಾಗೂ ಪಾರ್ವತಿ ಅವರ ಪೋಷಕರು ರವಿವಾರ ತಡರಾತ್ರಿ

ಮೂವರು ಯುವತಿಯರ ಮೃತ್ಯು ಪ್ರಕರಣ: ಇಬ್ಬರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ನಟ ಶಾರುಖ್ ಖಾನ್‌ಗೆ ಬೆದರಿಕೆ ಹಾಕಿದ ವಕೀಲ ಫೈಜನ್‌ ಖಾನ್‌ ಅರೆಸ್ಟ್‌

(ನ್ಯೂಸ್ ಕಡಬ) newskadaba.com ರಾಯ್ ಪುರ, ನ. 12. ಬಾಲಿವುಡ್‌ ಬಾದ್‌ಶಾ ಶಾರುಖ್ ಖಾನ್‌ಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಛತ್ತೀಸ್‌ಗಢದ ರಾಯ್‌ಪುರದಲ್ಲಿ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಇಂದು ಬಂಧಿಸಿದ್ದಾರೆ. ಬಂಧಿತನನ್ನು ವಕೀಲ ಫೈಜನ್‌ ಖಾನ್‌ ಎಂದು ಗುರುತಿಸಲಾಗಿದ್ದು, ಈತ ಕಳೆದ ವಾರ ಬಾಂದ್ರಾ ಪೊಲೀಸ್ ಠಾಣೆಗೆ ಕರೆ ಮಾಡಿ ಶಾರುಖ್ ಖಾನ್ ಅವರನ್ನು ಬೆದರಿಸಿ ₹50 ಲಕ್ಷ ಬೇಡಿಕೆ ಇಟ್ಟಿದ್ದ. ಇನ್ನು ಬಂಧಿತ ಆರೋಪಿ ಫೈಜನ್‌ ಖಾನ್‌ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್)

ನಟ ಶಾರುಖ್ ಖಾನ್‌ಗೆ ಬೆದರಿಕೆ ಹಾಕಿದ ವಕೀಲ ಫೈಜನ್‌ ಖಾನ್‌ ಅರೆಸ್ಟ್‌ Read More »

ಕ್ರೈಮ್ ನ್ಯೂಸ್
crime, arrest, suspected

ಕೊಲೆ ಯತ್ನ ಪ್ರಕರಣ: 4 ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ನ. 12. ತಲಪಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರ ಕೆಸಿ ರಸ್ತೆ-ಉಚ್ಚಿಲ ಮಾರ್ಗದ ಬಳಿ ನವೆಂಬರ್ 8ರಂದು ನಡೆದಿದ್ದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಬಡಾಜೆ ಕಡಂಬಾರ್ ಶಾಲೆಯ ಬಳಿಯ ಫಾತಿಮಾ ಮಂಜಿಲ್ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಮೊಹಮ್ಮದ್ ಆಸಿಫ್ (33) ಮಂಗಳೂರಿನಿಂದ ಕೇರಳಕ್ಕೆ ಕುಟುಂಬ ಸಮೇತ ಮನೆಗೆ ತೆರಳುತ್ತಿದ್ದಾಗ ರಾತ್ರಿ 7:40 ರ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಕೊಲೆ ಯತ್ನ ಪ್ರಕರಣ: 4 ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಸಲ್ಮಾನ್ ಖಾನ್ ಗೆ ಜೀವಬೆದರಿಕೆ ಪ್ರಕರಣ- ಆರೋಪಿ ಹಾವೇರಿಯಲ್ಲಿ ಅರೆಸ್ಟ್

(ನ್ಯೂಸ್ ಕಡಬ) newskadaba.com ನ. 07. ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಒಂದರ ಮೇಲೊಂದರಂತೆ ಜೀವ ಬೆದರಿಕೆಗಳು ಬರುತ್ತಿದ್ದು, ಈಗ ಕರ್ನಾಟಕದಿಂದಲೂ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಲಾದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಹಾವೇರಿಯಲ್ಲಿ ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಬಿಕಾರಾಮ್‌ ಎಂದು ಗುರುತಿಸಲಾಗಿದೆ. ಮೂಲತಃ ರಾಜಸ್ಥಾನದ ಮೂಲದವನಾಗಿರುವ ಬಿಕಾರಾಂ, ಒಂದೂವರೆ ತಿಂಗಳ ಹಿಂದೆ ಕೂಲಿ ಕೆಲಸಕ್ಕೆಂದು ಹಾವೇರಿಗೆ ಬಂದಿದ್ದು, ಇಲ್ಲಿನ ಗೌಡರ ಓಣಿಯಲ್ಲಿನ ರೂಮ್ ನಲ್ಲಿ ಕೂಲಿಕಾರರೊಂದಿಗೆ ವಾಸವಾಗಿ ಗ್ರಿಲ್ ಕೆಲಸ ಮಾಡಿಕೊಂಡಿದ್ದ

ಸಲ್ಮಾನ್ ಖಾನ್ ಗೆ ಜೀವಬೆದರಿಕೆ ಪ್ರಕರಣ- ಆರೋಪಿ ಹಾವೇರಿಯಲ್ಲಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ದೇವಸ್ಥಾನದಲ್ಲಿ ಕಳವು ಪ್ರಕರಣ: ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ನ. 07. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದಲ್ಲಿರುವ ಸುಬ್ರಹ್ಮಣ್ಯದ ಅಭಯ ಆಂಜನೇಯ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ.   ಬಂಧಿತ ಆರೋಪಿಯನ್ನು ಧಾರವಾಡದ ವೀರಣ್ಣ ಗೌಡ (26) ಎಂದು ಗುರುತಿಸಲಾಗಿದ್ದು, ನ.3ರಂದು ರಾತ್ರಿ ದೇವಸ್ಥಾನದಲ್ಲಿ ಪೂಜಾ ಪರಿಕರಗಳು ಹಾಗೂ ಸಿಸಿಟಿವಿ ಕ್ಯಾಮರಾ ಕದ್ದೊಯ್ದಿದ್ದಾರೆ. ಕುಕ್ಕೆ ದೇವಸ್ಥಾನದ ಸಿಇಒ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರೋಪಿಯು ಗೋಣಿ ಚೀಲದಲ್ಲಿ ಕದ್ದ

ದೇವಸ್ಥಾನದಲ್ಲಿ ಕಳವು ಪ್ರಕರಣ: ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಕುಡಿತದ ಮತ್ತಿನಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ: ಇಬ್ಬರು ವಶಕ್ಕೆ

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ನ. 07. ಕುಡಿತದ ನಶೆಯಲ್ಲಿ ಕೇರಳ ಮೂಲದ ಯುವಕರಿಬ್ಬರು ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಸರಣಿ ಅಪಘಾತ ನಡೆಸಿ ಕೇರಳದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಕೇರಳ ಮೂಲದ ದೀರಜ್ ಹಾಗೂ ಗೌತಮ್ ಎಂಬ ಇಬ್ಬರು ಯುವಕರು ಉಡುಪಿಗೆ ಬಂದು ತಿರುಗಾಟ ನಡೆಸಿ ಕಂಠಪೂರ್ತಿ ಕುಡಿದು ಮರಳಿ ಕೇರಳಕ್ಕೆ ಹೋಗಲು ಮುಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾಂಗಾಳದಲ್ಲಿ ಕಾರೊಂದಕ್ಕೆ ಡಿಕ್ಕಿಯಾಗಿ ನಿಲ್ಲಿಸದೆ ಮುಂದೋಡಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ

ಕುಡಿತದ ಮತ್ತಿನಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ: ಇಬ್ಬರು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ನ. 01. ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿಯೊಂದನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ ಆಂಟಿ ಡ್ರಗ್ ಟೀಂ ನೇತೃತ್ವದ ಪೊಲೀಸ್ ತಂಡವು ಬಂಧಿಸಿ 8 ಕೆಜಿ ಗಾಂಜಾ ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕಿನ್ಯಾ ರೆಹಮತ್ ನಗರ ಕಜೆ ಬಾಕಿಮಾರು ಎಂಬಲ್ಲಿ ನಡೆದಿದೆ. ಬಂಧಿತರನ್ನು ಮಾಡೂರು ನಿವಾಸಿ ನಜೀರ್ ಹುಸೈನ್ ಮತ್ತು ಅಫ್ಸಾತ್ (37) ಎಂದು ಗುರುತಿಸಲಾಗಿದೆ. ಗಾಂಜಾ ಮಾರಾಟದ ಖಚಿತ ಮಾಹಿತಿಯನ್ನು ಪಡೆದ  ಪೊಲೀಸ್ ತಂಡವು ದಾಳಿ

ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಜಿಂಕೆ ಮಾಂಸ ಸಾಗಾಟ: ಓರ್ವ ಅರೆಸ್ಟ್

(ನ್ಯೂಸ್ ಕಡಬ)newskadaba.com ಕುಂದಾಪುರ, ಅ. 31.  ಬೈಕ್ ನಲ್ಲಿ ಜಿಂಕೆ ಮಾಂಸ ಸಾಗಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಸಿದ್ದಾಪುರ ವನ್ಯಜೀವಿ ವಲಯ ದ ಸಿಬ್ಬಂದಿಗಳು ಬಂಧಿಸಿದ್ದು ಇಬ್ಬರು ಪರಾರಿಯಾಗಿದ್ದಾರೆ. ಬಂಧಿತ ವ್ಯಕ್ತಿ ಕೊಡ್ಲಾಡಿ ಗ್ರಾಮದ ಜಗದೀಶ್ ಮೇಸ್ತ(49) ನನ್ನು ನವೆಂಬರ್ 8 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತ ವ್ಯಕ್ತಿಯಿಂದ 23kg ಜಿಂಕೆ ಮಾಂಸ, ಬೈಕ್, ಚೂರಿ, ಗನ್ ಪೌಡರ್ ವಶಪಡಿಸಿಕೊಳ್ಳಲಾಗಿದೆ. ಪ್ರಕರಣವನ್ನು ಕುಂದಾಪುರ ಪ್ರಾದೇಶಿಕ ವಲಯಕ್ಕೆಒಪ್ಪಿಸಲಾಗಿದ್ದು ತನಿಖೆ ಮುಂದುವರೆದಿದೆ.    

ಜಿಂಕೆ ಮಾಂಸ ಸಾಗಾಟ: ಓರ್ವ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top