arrest

ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ- 14 ದಿನ ಅವಧಿ ವಿಸ್ತರಣೆ

(ನ್ಯೂಸ್ ಕಡಬ)newskadaba.com ಉಡುಪಿ, ಅ. 31. ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ಪ್ರಕರಣದ 10 ಮಂದಿ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಉಡುಪಿ ನ್ಯಾಯಾಲಯ ಬುಧವಾರ ಆದೇಶಿಸಿದೆ. ಉಡುಪಿಯ ಹೂಡೆ, ಸಂತೆಕಟ್ಟೆ, ಕಾರ್ಕಳದ ಮಾಳದಲ್ಲಿ 10 ಮಂದಿ ಆರೋಪಿಗಳನ್ನು ಬಂಧಿಸಿ, ಅವರನ್ನೆಲ್ಲಾ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಉಡುಪಿಯ ಪ್ರಧಾನ ಎರಡನೇ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇದೀಗ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ […]

ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ- 14 ದಿನ ಅವಧಿ ವಿಸ್ತರಣೆ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಸಿಲಿಂಡರ್ ಕಳವು ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ವಿಟ್ಲ, ಅ. 31. ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಮತ್ತು ಇನ್ನಿತರ ಸಾಮಗ್ರಿಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೋಳಿಯಾರ್ ಧರ್ಮ ನಗರ ನಿವಾಸಿ ರಿಯಾಝ್(38) ಮತ್ತು‌ ಹಳೆಕೋಟೆ ನಿವಾಸಿ ಇಮ್ತಿಯಾಝ್‌ (38) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 1.35 ಲಕ್ಷ ರೂ. ಮೌಲ್ಯದ ಗ್ಯಾಸ್ ಸಿಲಿಂಡರ್ ಹಾಗೂ ಮನೆ ಸಾಮಗ್ರಿಗಳು ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ಅಟೊ ರಿಕ್ಷಾ ವಶಪಡಿಸಿಕೊಳ್ಳಲಾಗಿದೆ ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು

ಸಿಲಿಂಡರ್ ಕಳವು ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಆಸ್ಪತ್ರೆಯಿಂದ ಪರಾರಿಯಾದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಸುಳ್ಯ, ಅ.28. ಆಸ್ಪತ್ರೆಯಿಂದ ಪರಾರಿಯಾಗಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಘವನ್ ಕೆದೀಶ್ವರನ್ ಆಲಿಯಾಸ್ ಕೋಳಿ ಕರಣ್ ಎಂದು ಗುರುತಿಸಲಾಗಿದೆ. ಕಳ್ಳತನ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ, ಸುಳ್ಯ ಪೊಲೀಸ್ ಠಾಣೆಗೆ ಬೇಕಾಗಿದ್ದ ಆರೋಪಿ ರಾಘವನ್ ಕೆದೀಶ್ವರನ್ ನನ್ನು ಕೆಲವು ದಿನಗಳ ಹಿಂದೆ ಪೊಲೀಸರು ಬಂಧಿಸಿ ಕರೆ ತಂದ ಸಂದರ್ಭದಲ್ಲಿ ಆತ ಸುಳ್ಯದ ಆಸ್ಪತ್ರೆಯಿಂದ ಪರಾರಿಯಾಗಿದ್ದ. ಪೊಲೀಸರು ಆರೋಪಿಯನ್ನು ತಮಿಳುನಾಡಿನ ಸತ್ಯಮಂಗಲ ಎಂಬಲ್ಲಿ ಬಂಧಿಸಿದ್ದಾರೆ ಎನ್ನಲಾಗಿದೆ.    

ಆಸ್ಪತ್ರೆಯಿಂದ ಪರಾರಿಯಾದ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಟ್ರಾಫಿಕ್ ಪೊಲೀಸರ ಕರ್ತವ್ಯಕ್ಕೆ ಅಡ್ಡಿ..! ಬಂಟ್ವಾಳ ಮೂಲದ ಚಾಲಕನ ಬಂಧನ

(ನ್ಯೂಸ್ ಕಡಬ) newskadaba.com ಅ.26. ಕರ್ತವ್ಯನಿರತ ಸಂಚಾರಿ ಪೊಲೀಸರ ಸೂಚನೆಯನ್ನು ನಿರ್ಲಕ್ಷಿಸಿ ಕಾರು ಚಲಾಯಿಸಿ, ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಕೊಡಗು ಪೊಲೀಸರು ಬಂಟ್ವಾಳ ಮೂಲದ ಚಾಲಕನನ್ನು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳ ತಾಲ್ಲೂಕಿನ ಮುನ್ನೂರು ಗ್ರಾಮದ ನಂದವಾರಕೋಟೆ ನಿವಾಸಿ ನಝೀರ್‌ (27) ಎಂದು ಗುರುತಿಸಲಾಗಿದೆ. ಘಟನೆಯ ಸಂದರ್ಭ ಆತ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಮಡಿಕೇರಿಯ ಜನರಲ್‌ ತಿಮ್ಮಯ್ಯ ವೃತ್ತದ ಬಳಿ ಅ.20 ರಂದು ಎರಡು ವಾಹನಗಳ ನಡುವೆ ಢಿಕ್ಕಿಯಾಗಿದ್ದರಿಂದ ವಾಹನ ದಟ್ಟಣೆ ಉಂಟಾಗಿತ್ತು. ಈ ಸಂದರ್ಭದಲ್ಲಿ ಅಲ್ಲಿ ಕರ್ತವ್ಯದಲ್ಲಿದ್ದ

ಟ್ರಾಫಿಕ್ ಪೊಲೀಸರ ಕರ್ತವ್ಯಕ್ಕೆ ಅಡ್ಡಿ..! ಬಂಟ್ವಾಳ ಮೂಲದ ಚಾಲಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆಗೈದ ಪತ್ನಿ..!

(ನ್ಯೂಸ್ ಕಡಬ) newskadaba.com ಅ. 25. ಪ್ರಿಯಕರನೊಂದಿಗೆ ಸೇರಿ ವಿಷವುಣಿಸಿ ಬಳಿಕ ಉಸಿರುಗಟ್ಟಿಸಿ ಪತಿಯನ್ನೇ ಉಸಿರುಗಟ್ಟಿಸಿ ಕೊಲೆಗೈದ ಘಟನೆಗೆ ಸಂಬಂಧಿಸಿ ಇಬ್ಬರನ್ನು ಬಂಧಿಸಿದ ಘಟನೆ ಉಡುಪಿಯ ಮರ್ಣೆ ಗ್ರಾಮದಲ್ಲಿ ನಡೆದಿದೆ. ಕೊಲೆಗೀಡಾದವರನ್ನು ಬಾಲಕೃಷ್ಣ ಎಂದು ಗುರುತಿಸಲಾಗಿದೆ. ಕಳೆದ 25 ದಿನಗಳಿಂದ ಜ್ವರ ಹಾಗೂ ವಾಂತಿಯ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕೃಷ್ಣ ಅವರಿಗೆ ಕಾಮಾಲೆ ರೋಗ ಎಂದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಅ.20ರಂದು ಬಾಲಕೃಷ್ಣ ಮನೆಯಲ್ಲೇ ಸಾವನ್ನಪ್ಪಿದ್ದರು. ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಪ್ರತಿಮಾಳ ಸಹೋದರ ನೀಡಿದ

ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆಗೈದ ಪತ್ನಿ..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಜಾಮೀನು ಪಡೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಾಪು, ಅ.25. ಕಾರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದಿಂದ ಜಾಮೀನು ಪಡೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಪು ಪೊಲೀಸರು ಅ. 22ರಂದು ಕೇರಳದ ಕಣ್ಣೂರು ಏರ್‌ಪೋರ್ಟ್‌ನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಶ್ಮತ್ ಅಲಿ(35) ಎಂದು ಗುರುತಿಸಲಾಗಿದೆ. ಆರೋಪಿ ಅಶ್ಮತ್ ಅಲಿ ವಿರುದ್ಧ 2019ರಲ್ಲಿ ಕಾಪು ಪೊಲೀಸ್ ಠಾಣೆಯಲ್ಲಿ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿ ಅದನ್ನು ವೀಡಿಯೋ ಮಾಡಿ ಬ್ಲಾಕ್‌ಮೇಲ್ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಆರೋಪಿಯು ಉಡುಪಿಯ 2ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ 2019ರ ಸೆ.

ಜಾಮೀನು ಪಡೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಬೈಕ್ ಕಳ್ಳತನ ಆರೋಪ: ಇಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಕಲಬುರಗಿ, ಅ. 24. ಸೇಡಂ ಪಟ್ಟಣದ ವಿವಿಧೆಡೆ ನಿಲ್ಲಿಸಿದ್ದ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಕಳುವಾಗಿದ್ದ 10 ಬೈಕ್‌ಗಳನ್ನು ಪತ್ತೆಹಚ್ಚುವಲ್ಲಿ ಸೇಡಂ ಪೊಲೀಸರು ಯಶಸ್ವಿಯಾಗಿದ್ದಾರೆ. ಸೇಡಂ ಪಟ್ಟಣದ ವೆಂಕಟೇಶ ನಗರ ನಿವಾಸಿ ಉಮರ್ ಮಹಿಬೂಬಖಾನ್, ಗಣೇಶ ನಗರ ನಿವಾಸಿ ಅಲ್ತಾಫ್ ಅಬ್ದುಲ್ ಸಲೀಂ ಎಂಬುವವರನ್ನು ಕಳ್ಳತನದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಂದ 73 ಲಕ್ಷ ರೂ. ಮೌಲ್ಯದ 10 ಬೈಕ್‌ ವಶಕ್ಕೆ ಪಡೆಯಲಾಗಿದೆ

ಬೈಕ್ ಕಳ್ಳತನ ಆರೋಪ: ಇಬ್ಬರು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಅಕ್ರಮ ಮೂವರು ಬಾಂಗ್ಲಾ ವಲಸಿಗರ ಬಂಧನ..!

(ನ್ಯೂಸ್ ಕಡಬ) newskadaba.com ಅ.23. ನಕಲಿ ಆಧಾರ್ ಕಾರ್ಡ್ ಬಳಸಿ ನಗರದಲ್ಲಿ ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಜಿಲ್ಲಾ ಅಪರಾಧ ಪತ್ತೆ ದಳ ವಿಭಾಗದ ಪೊಲೀಸರು ಬಂಧಿಸಿರುವ ಕುರಿತು ಶಿವಮೊಗ್ಗದಲ್ಲಿ ನಡೆದಿದೆ. ಬಂಧಿತರನ್ನು ಜಮಾಲ್ ಅಲಿ, ಫಾರೂಕ್ ಅಲಿ ಮತ್ತು ಅಕ್ಟಲ್ ಅಕ್ಕು ಎಂದು ಗುರುತಿಸಲಾಗಿದೆ. ಇವರು ಹಾಸನ ನಗರದ 80 ಅಡಿ ರಸ್ತೆಯ, ಗದ್ದೆಹಳ್ಳದ ನಾಲ್ಕನೇ ಅಡ್ಡ ರಸ್ತೆಯ ಜುಬೇರ್‌ ಎಂಬವರ ಮನೆಯಲ್ಲಿ ವಾಸವಿದ್ದು, ಕಟ್ಟಡದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಪಶ್ಚಿಮ ಬಂಗಾಳದಲ್ಲಿ

ಅಕ್ರಮ ಮೂವರು ಬಾಂಗ್ಲಾ ವಲಸಿಗರ ಬಂಧನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಗಾಂಜಾ ಮಾರಾಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ.23. ಗಾಂಜಾ ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಉಳ್ಳಾಲ ಓಲಪೇಟೆಯ ಟಿ.ಸಿ.ರಸ್ತೆ ನಿವಾಸಿ ಸಲೀಂ ಅಲಿಯಾಸ್ ಮಹಮ್ಮದ್ ಸಲೀಂ (38) ಎಂದು ಗುರುತಿಸಲಾಗಿದೆ. ಆರೋಪಿಯು 2019ರಲ್ಲಿ ಗಾಂಜಾ ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ನಾಲ್ಕು ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ. ಸಲೀಂ ಬಂಧನದಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.

ಗಾಂಜಾ ಮಾರಾಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಅಬಕಾರಿ ಕಾರ್ಯಾಚರಣೆ: ಮದ್ಯ, ಗಾಂಜಾ ವಶ

(ನ್ಯೂಸ್ ಕಡಬ) newskadaba.com ಅ.23. ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ/ಸಾಗಾಟ ಚಟುವಟಿಕೆಗಳನ್ನು ತಡೆಗಟ್ಟುವ ಸಂಬಂಧ ಅಬಕಾರಿ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ತೀವ್ರ ಕಾರ್ಯಾಚರಣೆ ನಡೆಸಿ ಅಕ್ಟೋಬರ್ ತಿಂಗಳಿನಲ್ಲಿ ಒಟ್ಟು 5.051 ಗಾಂಜಾ ಹಾಗೂ ಒಟ್ಟು 9.460 ಗ್ರಾಂ MDMA (Methylene dioxy- Methyl amphetamine) ಜಪ್ತಿ ಮಾಡಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಅಕ್ಟೋಬರ್ 18ರಂದು ಕೆ.ಎಸ್.ಬಿ.ಸಿ.ಎಲ್ ಡಿಪೊ-2, ಬೈಕಂಪಾಡಿ, ಇಲ್ಲಿಗೆ ಹಾಸನದಿಂದ ಒಟ್ಟು 1100 ಪೆಟ್ಟಿಗೆ (10,680 ಲೀ) ಬಿಯರ್ ಅವಧಿ ಮೀರಿದ ರಹದಾರಿ

ಅಬಕಾರಿ ಕಾರ್ಯಾಚರಣೆ: ಮದ್ಯ, ಗಾಂಜಾ ವಶ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top