arrest

crime, arrest, suspected

ಮಾದಕ ವಸ್ತು ಸಾಗಾಟ: ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 07. ಮಾದಕ ವಸ್ತು ಎಲ್‌ಎಸ್‌ಡಿ ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರನ್ನು ಮೂಲ್ಕಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪ್ರಸ್ತುತ ಹಳೆಯಂಗಡಿ ಬಳಿಯ ಕೊಪ್ಪಳ ಸಮೀಪದಲ್ಲಿ ವಾಸ್ತವ್ಯವಿದ್ದ ಅದಿಲ್ ಮತ್ತು ಮಹಮ್ಮದ್ ನಿಹಾಲ್ ಎಂದು ಗುರುತಿಸಲಾಗಿದೆ. ಬಂಧಿತರು ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದರು. ಬಂಧಿತ ಆರೋಪಿಗಳಿಂದ ಕಾರು ಹಾಗೂ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.  

ಮಾದಕ ವಸ್ತು ಸಾಗಾಟ: ಇಬ್ಬರು ಅರೆಸ್ಟ್..! Read More »

ಕರಾವಳಿ
crime, arrest, suspected

ಸೈನಿಕನೋರ್ವನ ನಗದು ಹಣದ ಬ್ಯಾಗ ಕಳ್ಳತನ: ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಅ. 05. ಬಿಸಿರೋಡಿನ ಎಸ್.ಬಿ.ಐ.ಬ್ಯಾಂಕ್ ನಿಂದ ಹಣ ಡ್ರಾ ಮಾಡಿದ ಗ್ರಾಹಕ ಮಾಜಿ ಸೈನಿಕನೋರ್ವನ ನಗದು ಹಣದ ಬ್ಯಾಗನ್ನು ಕಳವು ಮಾಡಿದ ಆರೋಪಿಯನ್ನು ಬಂಟ್ವಾಳ ಪೋಲೀಸರ ತಂಡ ಬಂಧಿಸಿದೆ. ಆರೋಪಿಯನ್ನು ಬೆಳ್ತಂಗಡಿ ನಿವಾಸಿ ಮಹಮ್ಮದ್ ಫಾರೂಕ್ (32) ಎಂದು ಗುರುತಿಸಲಾಗಿದೆ. ಆರೋಪಿಯ ಪತ್ತೆಗಾಗಿ ರಚಿಸಲಾಗಿದ್ದ ಬಂಟ್ವಾಳ ಉಪ-ವಿಭಾಗದ ವಿಶೇಷ ತನಿಖಾ ತಂಡವು, ಆರೋಪಿಯನ್ನು ವಶಕ್ಕೆ ಪಡೆದು, ಆರೋಪಿಯಿಂದ 80,000 ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.  

ಸೈನಿಕನೋರ್ವನ ನಗದು ಹಣದ ಬ್ಯಾಗ ಕಳ್ಳತನ: ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

1.09 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ: ಮೂವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 02.  ಕೆಲಸದಿಂದ ವಜಾಗೊಳಿಸಿದ್ದಕ್ಕೆ ಮಾಲೀಕನ ಮನೆಯಿಂದ 1.09 ಕೋಟಿ ಮೌಲ್ಯದ ಚಿನ್ನಾಭರಣ ಕದ್ದಿದ್ದ ಆರೋಪಿ ಹಾಗೂ ಆತನ ಇಬ್ಬರು ಸಹಚರರನ್ನು ಸುಬ್ರಹ್ಮಣ್ಯ ನಗರ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಪ್ರಮುಖ ಆರೋಪಿ ಸನ್ಯಾಸಿ ಮಠ ನಂದೀಶ್, ಹೆಚ್.ಎಂ.ನಂದೀಶ್ ಹಾಗೂ ಪ್ರತಾಪ್ ಕುಮಾರ್ ಎಂದು ಗುರುತಿಸಲಾಗಿದೆ. ಈ ಕೃತ್ಯದಲ್ಲಿ ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ಹನುಮೇಗೌಡ ಪತ್ತೆಗೆ ಹುಡುಕಾಟ ಮುಂದುವರೆದಿದೆ.  

1.09 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ: ಮೂವರು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಎಂಡಿಎಂಎ ಮಾದಕ ದ್ರವ್ಯ ಸಾಗಾಟ: 5 ಮಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 02.  ನಿಷೇಧಿತ ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮತ್ತು ಸಾಗಾಟದಲ್ಲಿ ತೊಡಗಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ 70 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಗಳನ್ನು ಶಿವಮೊಗ್ಗ ಟಿಪ್ಪು ನಗರದ ಅಬ್ದುಲ್ ಶಾಕೀರ್ (24). ಬಿ.ಎಸ್.ನಗರ, ಮಂಜೇಶ್ವರ, ಉದ್ಯಾವರ ನಿವಾಸಿ ಹಸನ್ ಆಶೀರ್ (34) ಕಣ್ಣೂರಿನ ಪಯ್ಯನೂರಿನ ಪೆರಿಂಗಂ ನಿವಾಸಿ ರಿಯಾಝ್ ಎ.ಕೆ (31), ಕಾಸರಗೋಡು ವರ್ಕಾಡಿ ಪಾವೂರು ಕೆದಂಬಾಡಿ ಮನೆ ನಿವಾಸಿ ಮಹಮ್ಮದ್ ನೌಶಾದ್ (22), ಮತ್ತು

ಎಂಡಿಎಂಎ ಮಾದಕ ದ್ರವ್ಯ ಸಾಗಾಟ: 5 ಮಂದಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಮಸೀದಿ ಕಚೇರಿಗೆ ನುಗ್ಗಿ ಕಳವಿಗೆ ಯತ್ನ: ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಲ್ಪೆ, ಸೆ.30. ಸೈಯದ್ ಅಬೂಬಕ್ಕರ್ ಸಿದ್ದಿಕ್ ಜಾಮಿಯಾ ಮಸೀದಿಯ ಕಚೇರಿ ಒಳಗೆ ನುಗ್ಗಿ ಕಳವಿಗೆ ಯತ್ನಿಸುತ್ತಿದ್ದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸೆ.28ರಂದು ಮಧ್ಯರಾತ್ರಿ ವೇಳೆ ನಡೆದಿದೆ. ಬಂಧಿತ ಆರೋಪಿಯನ್ನು ಬಿಹಾರ ರಾಜ್ಯದ ಬಿನೋದ್ ರಿಶಿ(40) ಎಂದು ಗುರುತಿಸಲಾಗಿದೆ. ಈತ ಕಚೇರಿಯ ಎದುರಿನ ಕಬ್ಬಿಣದ ಶೆಟರ್‌ನ ಬೀಗವನ್ನು ಮುರಿದು ಒಳನುಗ್ಗಿದ್ದು, ಆಫೀಸಿನ ಗೋಡೆಯ ಮೇಲೆ ಇರಿಸಿದ್ದ ಸಿಸಿ ಕ್ಯಾಮರಾವನ್ನು ಒಡೆದು ಹಾಕಿದ್ದಾನೆ. ಬಳಿಕ ಒಳಗೆ ಹೋಗಿ ಕಚೇರಿಯ ಕಬ್ಬಿಣದ ಕಪಾಟಿನ

ಮಸೀದಿ ಕಚೇರಿಗೆ ನುಗ್ಗಿ ಕಳವಿಗೆ ಯತ್ನ: ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಎಟಿಎಂ ಕಾರ್ಡ್ ಬಳಸಿ ಲಕ್ಷಾಂತರ ಹಣ ವಂಚನೆ –  ಮೂವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಅಜೆಕಾರು, ಸೆ. 26. ಎಟಿಎಂ ಕೇಂದ್ರದಲ್ಲಿ ಹಣ ಡ್ರಾ ಮಾಡಲು ಹೋಗಿದ್ದವರನ್ನು ವಂಚಿಸಿ ಅವರ ಕಾರ್ಡ್‌ ಬಳಸಿಕೊಂಡು ಲಕ್ಷಾಂತರ ರೂ. ಹಣ ವರ್ಗಾವಣೆ ಮಾಡಿಕೊಂಡಿದ್ದ ಮೂವರು ಆರೋಪಿಗಳನ್ನು ಅಜೆಕಾರು ಪೊಲೀಸರು ಮರ್ಣೆ ಗ್ರಾಮದ ಕಾಡುಹೊಳೆ ಪೊಲೀಸ್‌ ಚೆಕ್‌ಪೋಸ್ಟ್‌ ಬಳಿ ಸೆ. 24ರಂದು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಹಾರಾಷ್ಟ್ರದ ಶ್ರವಣ್‌ ಸತೀಶ ಮಿನಜಗಿ (27), ಪ್ರದೀಪ ಮಾರುತಿ ಇಂಗ್ಲೆ (27) ಹಾಗೂ ಕಿರಣ್‌ ಬಾಲು ಚೌಹಾಣ್‌ (28) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನೋರ್ವ ಆರೋಪಿ

ಎಟಿಎಂ ಕಾರ್ಡ್ ಬಳಸಿ ಲಕ್ಷಾಂತರ ಹಣ ವಂಚನೆ –  ಮೂವರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ನಕಲಿ ಪ್ರೊಫೈಲ್ ಗಳ ಮೂಲಕ ಮಹಿಳೆಯರ ವಂಚನೆ: ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 25. ರಾಷ್ಟ್ರರಾಜಧಾನಿ ದಿಲ್ಲಿಯಲ್ಲಿ 20ಕ್ಕೂ ಹೆಚ್ಚು ಮಹಿಳೆಯರಿಗೆ ಪ್ರೀತಿಯ ಹೆಸರಿಲ್ಲಿ ಮೋಸ, ದುಬಾರಿ ವಸ್ತುಗಳನ್ನು ಸುಲಿಗೆ ಮಾಡಿ ಪರಾರಿಯಾಗುತ್ತಿದ್ದ ಆರೋಪಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಂಧಿತ ಆರೋಪಿಯನ್ನು ರಾಹುಲ್ ಚತುರ್ವೇದಿ ಎಂದು ಗುರುತಿಸಲಾಗಿದೆ. ರಾಹುಲ್ ಚತುರ್ವೇದಿ ಮ್ಯಾಟ್ರಿಮೋನಿ ಸೈಟ್ ಗಳಾದ ವಿವಿಧ ಹೆಸರುಗಳಲ್ಲಿ ನಕಲಿ ಪ್ರೊಫೈಲ್ ಗಳನ್ನು ರಚಿಸಿದ್ದಾನೆ. ಈ ಖಾತೆಗಳ ಮೂಲಕ ಆತ ಮಹಿಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ. ಐಐಎಂ ಪದವೀಧರನಾಗಿರುವ ಈತನನ್ನು ಬಿಸ್ರಖ್ ಪೊಲೀಸರು ಬಂಧಿಸಿದ್ದಾರೆ.  

ನಕಲಿ ಪ್ರೊಫೈಲ್ ಗಳ ಮೂಲಕ ಮಹಿಳೆಯರ ವಂಚನೆ: ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲೈಂಗಿಕ ಕಿರುಕುಳ ಪ್ರಕರಣ- ನಟ ಮುಖೇಶ್ ಅರೆಸ್ಟ್

(ನ್ಯೂಸ್ ಕಡಬ) newskadaba.com ಸೆ. 24. ಮಲಯಾಳಂ ಸಿನಿಮಾರಂಗದಲ್ಲಿ ಆಂದೋಲನದ ಹಿನ್ನೆಲೆ ಲೈಂಗಿಕ ಕಿರುಕುಳದ ಪ್ರಕರಣವನ್ನು ದಾಖಲಿಸಿದ ಜನಪ್ರಿಯ ಮಲಯಾಳಂ ನಟ ಮತ್ತು ಸಿಪಿಐ(ಎಂ) ಶಾಸಕ ಮುಖೇಶ್ ಅವರನ್ನು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಬಂಧಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದಿರೋ ಮುಕೇಶ್ ಅವರ ಬಂಧನ ಹಲವು ಚರ್ಚೆಗೆ ಕಾರಣವಾಗಿದೆ.  

ಲೈಂಗಿಕ ಕಿರುಕುಳ ಪ್ರಕರಣ- ನಟ ಮುಖೇಶ್ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊಲೆ ಪ್ರಕರಣ: ಆರೋಪಿಯನ್ನು ಗುಂಡಿಕ್ಕಿ ಬಂಧನ..!

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ.21. ಗ್ರಾಮ ಪಂಚಾಯತ್ ಮಾಜಿ ಸದಸ್ಯ ವಿಶ್ವನಾಥ ಜಮಾದಾರ್ ಕೊಲೆ ಪ್ರಕರಣದ ಆರೋಪಿಯನ್ನು ಇಂದು ಮುಂಜಾನೆ ಕಾಲಿಗೆ ಗುಂಡಿಕ್ಕಿ ಬಂಧಿಸಿರುವ ಘಟನೆ ಆಳಂದ ತಾಲೂಕಿನ ಮಾಡಿಯಾಳ ಗ್ರಾಮದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಲಕ್ಷ್ಮಣ ಪೂಜಾರಿ ಹಿತ್ತಲಸೀರೂರು (45) ಎಂದು ಗುರುತಿಸಲಾಗಿದೆ. ವಿಶ್ವನಾಥ ಜಮಾದಾರ್ ಅವರನ್ನು ಕಳೆದ ಶುಕ್ರವಾರ ಆಳಂದ ತಾಲೂಕಿನ ಜಿಡಗಾ ಕ್ರಾಸ್ ಬಳಿ ಗುಂಡಿಕ್ಕಿ ಕೊಲೆ ಮಾಡಲಾಗಿತ್ತು. ಈ ಹತ್ಯೆ ಪ್ರಕರಣದ ಆರೋಪಿ ಲಕ್ಷ್ಮಣ ಪೂಜಾರಿ ಹಿತ್ತಲಸೀರೂರು ಎಂಬಾತ ಆಳಂದ

ಕೊಲೆ ಪ್ರಕರಣ: ಆರೋಪಿಯನ್ನು ಗುಂಡಿಕ್ಕಿ ಬಂಧನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಗಾಂಜಾ ಸಾಗಾಟ: ಮಹಿಳಾ ಸಿಬ್ಬಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 20.  ಇಲ್ಲಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕಸಗುಡಿಸುವ ಮಹಿಳಾ ಸಿಬ್ಬಂದಿಯೊಬ್ಬರು ಖೈದಿಗಳಿಗೆ ಗಾಂಜಾ ಸಾಗಣೆ ಮಾಡುತ್ತಿದ್ದ ಆರೋಪದಡಿ ಫರಹತಾಬಾದ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪದ್ಮಾವತಿ ಎಂದು ತಿಳಿದು ಬಂದಿದೆ. ಕಾರಾಗೃಹದ ಪ್ರವೇಶ ದ್ವಾರದಲ್ಲಿ ಭದ್ರತಾ ಪಡೆಯ ಸಿಬ್ಬಂದಿಗಳು ಪದ್ಮಾವತಿ ಅವರ ಬ್ಯಾಗ್‌ ತಪಾಸಣೆಗೊಳಪಡಿಸಿದಾಗ ಕರವಸ್ತ್ರದಿಂದ ಸುತ್ತಿದ ಉಂಡೆ ಆಕಾರದ ಅನುಮಾನಾಸ್ಪದ ವಸ್ತು ಕಂಡು ಕಂಡು ಬಂದಿದೆ. ಈ ಬಗ್ಗೆ ಭದ್ರತಾ ಸಿಬ್ಬಂದಿಗಳು ತಪಾಸಣೆ ಮಾಡಿದಾಗ 100 ಗ್ರಾಂ.

ಗಾಂಜಾ ಸಾಗಾಟ: ಮಹಿಳಾ ಸಿಬ್ಬಂದಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top