ಮಂಗಳೂರು: ಸ್ಫೋಟಕ ಬಳಸಿ ಅಕ್ರಮ ಗಣಿಗಾರಿಕೆಯಲ್ಲಿ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ➤ ಸ್ಟೋನ್ಸ್ ಬಿಲ್ಡರ್ಸ್ ಸಪ್ಲೈಯರ್ಸ್ ಅಸೋಸಿಯೇಶನ್ ಕಾರ್ಯದರ್ಶಿ ಹೇಮಂತ್
(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 03: ದಕ್ಷಿಣ ಕನ್ನಡ ಜಿಲ್ಲೆಯ ಮೆಲ್ಕಾರ್, ನರಹರಿ, ಬೋಳಿಯಾರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಅವ್ಯಾಹತವಾಗಿ ಅಕ್ರಮ ಕಲ್ಲು ಸಾಗಾಟ ನಡೆಯುತ್ತಿದ್ದು ತಕ್ಷಣವೇ ಅದನ್ನ ರದ್ದುಗೊಳಿಸುವಂತೆ ಸ್ಟೋನ್ಸ್ ಬಿಲ್ಡರ್ಸ್ ಸಪ್ಲೈಯರ್ಸ್ ಅಸೋಸಿಯೇಶನ್ ಕಾರ್ಯದರ್ಶಿ ಹೇಮಂತ್ ಕುಮಾರ್ ಒತ್ತಾಯಿಸಿದ್ದಾರೆ. ತುಳುನಾಡ ರಕ್ಷಣಾ ವೇದಿಕೆ ಹಾಗೂ ಸ್ಟೋನ್ ಬಿಲ್ಡರ್ಸ್ ಸಪ್ಲೈಯರ್ಸ್ ಅಸೋಸಿಯೇಶನ್ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಅಕ್ರಮವಾಗಿ ಗಣಿಗಾರಿಕೆ ನಡೆದು ಕೇರಳಕ್ಕೆ ಕಲ್ಲು ಸಾಗಾಟವಾಗುತ್ತಿದ್ದರೂ ಅಧಿಕಾರಿಗಳು ಮೌನವಹಿಸಿದ್ದಾರೆ. ಇದನ್ನ ಗಮನಿಸಿದರೆ ಅಧಿಕಾರಿಗಳು ಕೂಡಾ […]










