b.c.road

ಜಿಲ್ಲಾ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ನೇಮಕ – ಭೂಷಣ್ ಜಿ. ಬೊರಸೆ ಬೆಂಗಳೂರಿಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.21. ಕಳೆದ ಕೆಲವು ದಿನಗಳಿಂದೀಚೆಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮು ಗಲಭೆಗಳನ್ನು ನಿಯಂತ್ರಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನರ್ವಹಿಸುತ್ತಿದ್ದ ಭೂಷಣ್ ಗುಲಾಬ್ ರಾವ್ ಬೊರಸೆಯವರನ್ನು ಬೆಂಗಳೂರು ಆಡಳಿತ ವಿಭಾಗದ ಡಿಸಿಪಿಯಾಗಿ ವರ್ಗಾಯಿಸಿದ್ದು, ಪ್ರಸ್ತುತ ಮಂಡ್ಯ ಜಿಲ್ಲಾ ಎಸ್ಪಿಯಾಗಿ ಕರ್ತವ್ಯದಲ್ಲಿದ್ದ C.H. ಸುಧೀರ್ ಕುಮಾರ್ ರೆಡ್ಡಿಯವರನ್ನು ಜಿಲ್ಲಾ ಎಸ್ಪಿಯಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.  

ಜಿಲ್ಲಾ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ನೇಮಕ – ಭೂಷಣ್ ಜಿ. ಬೊರಸೆ ಬೆಂಗಳೂರಿಗೆ ವರ್ಗಾವಣೆ Read More »

ಕರ್ನಾಟಕ

SDPI ಮುಖಂಡನ ಬರ್ಬರ ಹತ್ಯೆ: ಜಿಲ್ಲೆಯಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.21. SDPI ಮುಖಂಡ ಕಲಾಯಿ ಅಶ್ರಫ್ ಬರ್ಬರವಾಗಿ ಕೊಲೆಗೀಡಾದ ನಂತರ ಜಿಲ್ಲೆಯ ಅಲ್ಲಲ್ಲಿ ಕಲ್ಲು ತೂರಾಟ ನಡೆಯುತ್ತಿದ್ದು, ಶಾಂತಿಪ್ರಿಯರನ್ನು ಆತಂಕಕ್ಕೀಡುಮಾಡಿದೆ. ಕಳೆದ ಹಲವು ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ಕಲ್ಲಡ್ಕದಲ್ಲಿ ಪೊಲೀಸರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಸೂಚನೆ ನೀಡುತ್ತಿದ್ದಾಗ ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಸಂಗಡಿಗರು ಬಂದು ಆಕ್ಷೇಪ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಎರಡೂ ಕೋಮಿನ ಜನರು ಸೇರತೊಡಗಿದ್ದರಿಂದ ಪರಿಸ್ಥಿತಿ ಕೈ ಮೀರುವುದನ್ನರಿತ ಪೊಲೀಸರು ಲಾಠಿಚಾರ್ಜ್ ನಡೆಸಿ ಜನರನ್ನು ಚದುರಿಸಿದರು. ಅಶ್ರಫ್

SDPI ಮುಖಂಡನ ಬರ್ಬರ ಹತ್ಯೆ: ಜಿಲ್ಲೆಯಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರ Read More »

ಕರಾವಳಿ

ಕಲ್ಲಡ್ಕ ಗಲಭೆ ಹಿನ್ನೆಲೆ: ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.14. ಕಳೆದ ಹಲವಾರು ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ಕಲ್ಲಡ್ಕ ಪರಿಸರದಲ್ಲಿ ಮಂಗಳವಾರದಂದು ಸಂಜೆ ನಡೆದ ಗಲಭೆ ಹಿನ್ನೆಲೆಯಲ್ಲಿ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂ.13 ನೇ ಮಂಗಳವಾರ ಮಧ್ಯರಾತ್ರಿಯಿಂದ ಜೂ.14 ನೇ ಬುಧವಾರ ಮಧ್ಯರಾತ್ರಿ 12.00 ಗಂಟೆಯವರೆಗೆ 144 ಸೆಕ್ಷನ್ ಜಾರಿಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆಯವರ ಪ್ರಸ್ತಾವನೆಯಂತೆ ಅಪರ ಜಿಲ್ಲಾಧಿಕಾರಿ ಕುಮಾರ್ ಆದೇಶಿಸಿದ್ದಾರೆ. ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಹಾಗೂ ಸುಳ್ಯ

ಕಲ್ಲಡ್ಕ ಗಲಭೆ ಹಿನ್ನೆಲೆ: ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ Read More »

ಕರಾವಳಿ

ಮೆಲ್ಕಾರ್: ಯುವಕನಿಗೆ ತಲವಾರು ದಾಳಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.14. ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನೋರ್ವನಿಗೆ ದುಷ್ಕರ್ಮಿಗಳಿಬ್ಬರ ತಂಡ ಹಲ್ಲೆ ನಡೆಸಿ ಪರಾರಿಯಾದ ಘಟನೆ ಮಂಗಳವಾರ ರಾತ್ರಿ ಮೆಲ್ಕಾರ್ ಆರ್.ಆರ್. ಮಿಲ್ ಬಳಿ ನಡೆದಿದೆ. ಮೆಲ್ಕಾರ್ ಪೆಟ್ರೋಲ್ ಬಂಕ್ ಮಾಲಕನ ಪುತ್ರ ಪವನ್ (28) ದುಷ್ಕರ್ಮಿಗಳ ದಾಳಿಗೊಳಗಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪವನ್ ಪೆಟ್ರೋಲ್ ಬಂಕ್‌ನಿಂದ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಮೆಲ್ಕಾರ್ ಆರ್.ಆರ್. ಮಿಲ್ ಬಳಿ ಪೊದೆಯಲ್ಲಿ ಅವಿತು ಕುಳಿತಿದ್ದ ಇಬ್ಬರು ದುಷ್ಕರ್ಮಿಗಳು ಬೈಕನ್ನು ಅಡ್ಡಗಟ್ಟಿ ತಲವಾರಿನಿಂದ ದಾಳಿ

ಮೆಲ್ಕಾರ್: ಯುವಕನಿಗೆ ತಲವಾರು ದಾಳಿ Read More »

ಕರಾವಳಿ

ಹಿಂದೂವಿನ ಶವ ಮೇಲಕ್ಕೆತ್ತಿದ ಮುಸ್ಲಿಂಗೆ ಸಹಕರಿಸಿದ ಕ್ರಿಶ್ಚಿಯನ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.11. ನದಿಯಲ್ಲಿ ಮುಳುಗಿ ಮೃತಪಟ್ಟ ಹಿಂದೂ ವ್ಯಕ್ತಿಯ ಮೃತದೇಹವನ್ನು ಮೇಲಕ್ಕೆತ್ತಿದ ಮುಸ್ಲಿಮರಿಗೆ ಶವವನ್ನು ಆಸ್ಪತ್ರೆಗೆ ಸಾಗಿಸಲು ಕ್ರಿಶ್ಚಿಯನ್ ಸಹೋದರನೋರ್ವ ತನ್ನ ಅಂಬ್ಯುಲೆನ್ಸ್ ನ್ನು ನೀಡಿ ಸಹಕರಿಸಿದ ಮಾನವೀಯ ಘಟನೆಗೆ ಬಂಟ್ವಾಳದ ನಗರ ಠಾಣಾ ವ್ಯಾಪ್ತಿಯ ಬಿ ಮೂಡ ಗ್ರಾಮದ ಗೂಡಿನ ಬಳಿ ಶನಿವಾರ ಸಾಕ್ಷಿಯಾಯಿತು. ಸದಾ ಒಂದಿಲ್ಲೊಂದು ಕೋಮು ಪ್ರಚೋದಿತ ಘಟನೆಗಳಿಂದ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಡುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹ ಮಾನವೀಯ ಘಟನೆಗಳೂ ನಡೆಯುತ್ತದೆ ಎಂಬುವುದಕ್ಕೆ ಪುಷ್ಟಿ ನೀಡಿತು. ಪುದು

ಹಿಂದೂವಿನ ಶವ ಮೇಲಕ್ಕೆತ್ತಿದ ಮುಸ್ಲಿಂಗೆ ಸಹಕರಿಸಿದ ಕ್ರಿಶ್ಚಿಯನ್ Read More »

ಕರಾವಳಿ
Scroll to Top