ಸಾಮಾಜಿಕ ಜಾಲತಾಣದಲ್ಲಿ ದೇಯಿಬೈದೆತಿಯ ಅವಹೇಳನ ಪ್ರಕರಣ ► ವಿಹಿಂಪ, ಬಜರಂಗದಳದಿಂದ ನಾಳೆ ಕಡಬದಲ್ಲಿ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಕಡಬ, ಸೆ.12. ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯರ ತಾಯಿ ದೇಯಿಬೈದೆತಿಯ ಪುತ್ತಳಿಯ ಸಮೀಪ ಕುಳಿತು ಅಶ್ಲೀಲವಾಗಿ ಫೊಟೊ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಾಳೆ (ಸೆಪ್ಟೆಂಬರ್ 13) ಕಡಬದಲ್ಲಿ ಪ್ರತಿಭಟನೆ ನಡೆಯಲಿದೆ. ಇತ್ತೀಚೆಗೆ ಈಶ್ವರ ಮಂಗಲದ ಹನೀಫ್ ಎಂಬಾತ ದೇಯಿಬೈದಿತಿಯ ನೆನಪಿಗೋಸ್ಕರ ಸರಕಾರದಿಂದ ನಿರ್ಮಿಸಲ್ಪಟ್ಟ ದೇಯಿಬೈದಿತಿ ಔಷಧಿ ವನದಲ್ಲಿ ಬೈದೆತಿಯ ಎದೆಯ ಭಾಗವನ್ನು ಮುಟ್ಟಿ ಅಶ್ಲೀಲ ರೀತಿಯಲ್ಲಿ ಫೋಟೊ ತೆಗೆದು ಸಾಮಾಹಿಕ ಜಾಲತಾಣದಲ್ಲಿ […]

