Bangalore

ಬುದ್ಧಿ ಹೇಳಿದ ಸಂಬಂಧಿಕನಿಗೆ ಇರಿದು ಹತ್ಯೆ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಮನೆಗೆ ಹೋಗುವಂತೆ ಹೇಳಿದ್ದಕ್ಕೆ ಸಿಟ್ಟಾಗಿ ವ್ಯಕ್ತಿಯೊಬ್ಬ ತನ್ನ ಇಬ್ಬರು ಸಂಬಂಧಿಕರಿಗೆ ಚಾಕುವಿನಿಂದ ಇರಿದ ಪರಿಣಾಮ ಒಬ್ಬ ಮೃತಪಟ್ಟು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪೀಣ್ಯ ಎರಡನೇ ಹಂತದ ತಿಗಳರಪಾಳ್ಯ ಮುಖ್ಯರಸ್ತೆಯ ನಿವಾಸಿ ಕೇಶವಮೂರ್ತಿ(32) ಕೊಲೆಯಾದ ವ್ಯಕ್ತಿ. ಈತನ ಬಾವ ಮೈದುನ ಕಲ್ಲೇಶ್‌ (27) ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಮುಂದುವರೆದಿದೆ. ಘಟನೆ ಸಂಬಂಧ ಆರೋಪಿ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದ ನಿವಾಸಿ […]

ಬುದ್ಧಿ ಹೇಳಿದ ಸಂಬಂಧಿಕನಿಗೆ ಇರಿದು ಹತ್ಯೆ ➤ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎಸ್ಸಿ-ಎಸ್ಟಿ ಜಾಗ ಮಾರಾಟ ನಿಷೇಧ ಕಾಯ್ದೆ ಜಾರಿಗಾಗಿ ಮುಂದುವರಿದ ಪ್ರತಿಭಟನೆ..!  

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ‘ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಭೂ ಪರಭಾರೆ ನಿಷೇಧ (ಪಿಟಿಸಿಎಲ್‌) ಕಾಯ್ದೆ-1978’ ಯಥಾವತ್ತಾಗಿ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಿ ಪರಿಶಿಷ್ಟಜಾತಿ ಮತ್ತು ಪಂಗಡಗಳ ಜನರ ಭೂಮಿಯನ್ನು ರಕ್ಷಿಸಬೇಕು ಎಂದು ಭೂಮಿ ಹೋರಾಟ ಸಮಿತಿ ಅಧ್ಯಕ್ಷ ಚಂದ್ರಪ್ಪ ಆಗ್ರಹಿಸಿದರು. ‘ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ-ಕರ್ನಾಟಕ’ ಸಂಘಟನೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಸುತ್ತಿರುವ ಧರಣಿಯ 13 ನೇ ದಿನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಹಿಂದೆ ದೇವರಾಜ ಅರಸು ಅವರ ನೇತೃತ್ವದ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದ

ಎಸ್ಸಿ-ಎಸ್ಟಿ ಜಾಗ ಮಾರಾಟ ನಿಷೇಧ ಕಾಯ್ದೆ ಜಾರಿಗಾಗಿ ಮುಂದುವರಿದ ಪ್ರತಿಭಟನೆ..!   Read More »

ಕರ್ನಾಟಕ

ವಿದ್ಯುತ್ ದರ ಏರಿಕೆಗೆ ಎಸ್ಕಾಂ ಚಿಂತನೆ..!!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.15. ವಿದ್ಯುತ್ ದರವನ್ನು ಹೆಚ್ಚಳ ಮಾಡುವ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟ (ಎಫ್‌ಕೆಸಿಸಿಐ) ವಿರೋಧ ವ್ಯಕ್ತಪಡಿಸಿದೆ. ವಿದ್ಯುತ್ ದರಗಳ ಪರಿಷ್ಕರಿಸುವಂತೆ ರಾಜ್ಯದ ವಿದ್ಯುತ್ ಸರಬರಾಜು ನಿಗಮಗಳು (ಎಸ್ಕಾಂ) ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಈ ಹಿಂದೆ ಪತ್ರ ಬರೆದಿತ್ತು. ಗೃಹ ಗ್ರಾಹಕರಿಗೆ ನೀಡಿರುವ ಸೌರ ನೀರಿನ ರಿಯಾಯಿತಿ, ಮುಕ್ತ ಪ್ರವೇಶ ಗ್ರಾಹಕರಿಗೆ ಗ್ರಿಡ್ ಬೆಂಬಲ ಶುಲ್ಕ ವಿಧಿಸುವುದು ಮತ್ತು ನಿಗದಿತ ಶುಲ್ಕವನ್ನು ಹೆಚ್ಚಿಸುವುದು ಸೇರಿದಂತೆ ವಿಶೇಷ ಪ್ರೋತ್ಸಾಹಕ ಯೋಜನೆಗಳನ್ನು

ವಿದ್ಯುತ್ ದರ ಏರಿಕೆಗೆ ಎಸ್ಕಾಂ ಚಿಂತನೆ..!! Read More »

ಕರ್ನಾಟಕ

ಮದ್ಯ ಖರೀದಿಯ ಕನಿಷ್ಟ ವಯಸ್ಸು 21ರಿಂದ 18ಕ್ಕೆ ಇಳಿಸಲು ಸರ್ಕಾರ ಸಿದ್ಧತೆ.!!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.15. ಮದ್ಯ ಖರೀದಿ ಮತ್ತು ಮಾರಾಟಕ್ಕೆ ನಿಗದಿಪಡಿಸಿದ್ದ 21 ವರ್ಷಗಳ ವಯೋಮಿತಿಯನ್ನು ಸಡಿಲಿಸಿ 18 ವರ್ಷಕ್ಕೆ ಇಳಿಕೆ ಮಾಡುವ ನಿಟ್ಟಿನಲ್ಲಿ ‘ಕರ್ನಾಟಕ ಅಬಕಾರಿ ಪರವಾನಗಿಗಳ (ಸಾಮಾನ್ಯ ಷರತ್ತು) ನಿಯಮಗಳು-1967’ ಕ್ಕೆ ತಿದ್ದುಪಡಿ ತರಲು ಅಬಕಾರಿ ಇಲಾಖೆಯು ಕರಡು ಪ್ರಸ್ತಾವನೆಯನ್ನು ಪ್ರಕಟಿಸಿದೆ. ಆದರೆ ಈ ಪ್ರಸ್ತಾವಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ಯುವಜನತೆ ಧೂಮಪಾನ, ಮದ್ಯಪಾನ ಮತ್ತಿತರ ದುಶ್ಚಟಗಳಿಗೆ ದಾಸರಾಗುತ್ತಿದ್ದು, ವಯಸ್ಸು ಇಳಿಕೆ ಮಾಡಿದರೆ ಇನ್ನೂ ಹೆಚ್ಚಿನ ಯುವಕರು ಮದ್ಯ ವ್ಯಸನಿಗಳಾಗುವ ಸಾಧ್ಯತೆ ಇದೆ

ಮದ್ಯ ಖರೀದಿಯ ಕನಿಷ್ಟ ವಯಸ್ಸು 21ರಿಂದ 18ಕ್ಕೆ ಇಳಿಸಲು ಸರ್ಕಾರ ಸಿದ್ಧತೆ.!! Read More »

ಕರ್ನಾಟಕ

ಪುತ್ತೂರಿನ ಯುವ ವಕೀಲ ತ್ವಾಹ ಖಲೀಲ್ ನ್ಯಾಯಾಧೀಶರಾಗಿ ಆಯ್ಕೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.15. ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಯುವ ವಕೀಲ ತ್ವಾಹ ಖಲೀಲ್ ಕೆ.ಎ. ಅವರು ಉತ್ತೀರ್ಣರಾಗಿದ್ದು ನ್ಯಾಯಾದೀಶರಾಗಿ ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ. ತ್ವಾಹ ಖಲೀಲ್ ಪುತ್ತೂರಿನವರಾಗಿದ್ದು ಬೆಂಗಳೂರಿನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. 40 ಮಂದಿ ಆಯ್ಕೆಯಾದ ನ್ಯಾಯಾದೀಶರ ಪಟ್ಟಿಯನ್ನು ಹೈಕೋರ್ಟ್ ಬಿಡುಗಡೆ ಮಾಡಿದ್ದು, ನ್ಯಾಯವಾದಿ ರಾಹುಲ್ ಶೆಟ್ಟಿಗಾರ್ ಪ್ರಥಮ ಸ್ಥಾನ ಪಡೆದಿದ್ದಾರೆ.    

ಪುತ್ತೂರಿನ ಯುವ ವಕೀಲ ತ್ವಾಹ ಖಲೀಲ್ ನ್ಯಾಯಾಧೀಶರಾಗಿ ಆಯ್ಕೆ..! Read More »

ಕರಾವಳಿ, ಕರ್ನಾಟಕ

ಫೆ.17 ರಂದು 2023-24ನೇ ಸಾಲಿನ ಬಜೆಟ್ ಮಂಡನೆ ಸಾಧ್ಯತೆ..! ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.14. ಫೆಬ್ರವರಿ 17 ರಂದು 2023-24ನೇ ಸಾಲಿನ ರಾಜ್ಯ ಬಜೆಟ್‌ ಮಂಡಿಸುವ ಸಾಧ್ಯತೆ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಜೆಟ್‌ ಅಧಿವೇಶನ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ಈಗಾಗಲೇ ಬಜೆಟ್ ಸಂಬಂಧ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ. ಏಪ್ರಿಲ್, ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಈ ಬಾರಿ ಸಿಎಂ ಮತದಾರರನ್ನು ಓಲೈಸಲು, ಜನಪ್ರಿಯ

ಫೆ.17 ರಂದು 2023-24ನೇ ಸಾಲಿನ ಬಜೆಟ್ ಮಂಡನೆ ಸಾಧ್ಯತೆ..! ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಕೌಟುಂಬಿಕ ಕಲಹ ಹಿನ್ನೆಲೆ ತಾಯಿ ಆತ್ಮಹತ್ಯೆ   ➤ ನೊಂದ ಮಗ ನೇಣಿಗೆ ಶರಣು..!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.14. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿ- ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರದ ಕುಮಾರಸ್ವಾಮಿ ಲೇಔಟ್‌ನಲ್ಲಿ ನಡೆದಿದೆ. ಕುಮಾರಸ್ವಾಮಿ ಲೇಔಟ್‌ನ ವಿಜಯಲಕ್ಷ್ಮಿ (50) ಹಾಗೂ ಅವರ ಪುತ್ರ ಹರ್ಷ (25) ಎಂದು ಗುರುತಿಸಲಾಗಿದೆ. ತಾಯಿ ವಿಜಯಲಕ್ಷ್ಮಿ ಜೊತೆ ಊಟದ ವಿಚಾರಕ್ಕೆ ಮಗ ಹರ್ಷ ರಾತ್ರಿ ಜಗಳವಾಡಿದ್ದ. ಮಗನ ಮಾತಿನಿಂದ ಮನನೊಂದ ವಿಜಯಲಕ್ಷ್ಮಿ ಮನೆಯ ಬಳಿ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬಳಿಕ ವಿಜಯಲಕ್ಷ್ಮಿ ಅವರನ್ನ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಕೌಟುಂಬಿಕ ಕಲಹ ಹಿನ್ನೆಲೆ ತಾಯಿ ಆತ್ಮಹತ್ಯೆ   ➤ ನೊಂದ ಮಗ ನೇಣಿಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೋಂದಣಿ ರಹಿತ ಪೆಟ್‌ಶಾಪ್‌ಗಳಿಗೆ ಸಚಿವ ಚವ್ಹಾಣ್‌ ಎಚ್ಚರಿಕೆ..!    

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.14. ಸಾಕು ಪ್ರಾಣಿ ಮಾರಾಟಗಾರರು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಳ್ಳದೆ ಪೆಟ್‌ಶಾಪ್‌ ತೆರೆದಿದ್ದರೆ ಯಾವುದೇ ಮುನ್ಸೂಚನೆ ನೀಡದೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್‌ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಬಹುತೇಕ ಅಂಗಡಿಗಳಲ್ಲಿ ಅನೇಕ ಪಕ್ಷಿಗಳನ್ನು ಒಂದೇ ಪಂಜರದಲ್ಲಿ ಇರಿಸಿರುವುದು, ಪಕ್ಷಿಗಳು ಮತ್ತು ಪ್ರಾಣಿಗಳು ಸ್ಥಳ ಹಾಗೂ ತಾಜಾ ಗಾಳಿಗಾಗಿ ಹೆಣಗಾಡುತ್ತಿರುವುದು, ನೀರು ಅಥವಾ ಆಹಾರ ಪೂರೈಕೆ ಇಲ್ಲದಿರುವುದು ಶುಚಿತ್ವ ಇಲ್ಲದಿರುವುದು, ಸಣ್ಣ ಮರಿಗಳನ್ನೇ ಮಾರಾಟ

ನೋಂದಣಿ ರಹಿತ ಪೆಟ್‌ಶಾಪ್‌ಗಳಿಗೆ ಸಚಿವ ಚವ್ಹಾಣ್‌ ಎಚ್ಚರಿಕೆ..!     Read More »

ಕರ್ನಾಟಕ

ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.13. ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥ್ ನನ್ನು ಪೊಲೀಸರು ಗುಜಾರಾತ್ ನಲ್ಲಿ ಬಂಧಿಸಿರುವುದಾಗಿ ವರದಿಯಾಗಿದೆ. ವಿವಿಧ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಸ್ಯಾಂಟ್ರೋ ರವಿಯ ಬಂಧನಕ್ಕೆ ರಾಜ್ಯ ಪೊಲೀಸರ ವಿಶೇಷ ತಂಡವೊಂದು ಕಾರ್ಯಾಚರಣೆ ನಡೆಸಿ, ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಸ್ಯಾಂಟ್ರೋ ರವಿಯ ಕಾರು ಚಾಲಕ ಗಿರೀಶ್ ನನ್ನು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆ ನಡೆಸಲಾಗಿತ್ತು. ಬಳಿಕ ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.  

ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ ➤ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್..!                                                

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.13. ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಬೆಂಗಳೂರಿನ ನಾಗವಾರದ ಹೆಣ್ಣೂರು ಕ್ರಾಸ್‌ ಬಳಿ ಮೆಟ್ರೊ ಪಿಲ್ಲರ್‌ ನಿರ್ಮಾಣಕ್ಕಾಗಿ ಅಳವಡಿಸಿದ್ದ ಕಬ್ಬಿಣದ ಚೌಕಟ್ಟು ಈಚೆಗೆ ಕುಸಿದು ಬಿದ್ದು ತಾಯಿ ಮತ್ತು ಗಂಡು ಮಗು ಸಾವನ್ನಪ್ಪಿದ ಪ್ರಕರಣ ಹಾಗೂ ಬ್ರಿಗೇಡ್‌ ರಸ್ತೆಯಲ್ಲಿ ಗುಂಡಿ ಬಿದ್ದಿರುವ ವಿಚಾರದ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸುದ್ದಿಯನ್ನು ಪರಿಗಣಿಸಿ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿಕೊಂಡಿದೆ

ಬೆಂಗಳೂರು ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ ➤ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್..!                                                 Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top