Bangalore

ಶೀಘ್ರವೇ ಕೋವಿಡ್ ಮಾರ್ಗಸೂಚಿ ಬಿಡುಗಡೆ  ➤ ಸಚಿವ ಡಾ.ಕೆ.ಸುಧಾಕರ್‌ 

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಜಪಾನ್‌, ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ರಾಜ್ಯದಲ್ಲಿ ಸದ್ಯಕ್ಕೆ ಆತಂಕವಿಲ್ಲ. ಆದರೂ ಕೆಲವೊಂದು ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೀನಾ, ಜಪಾನ್‌ ಸೇರಿದಂತೆ ಹಲವೆಡೆ ಕೋವಿಡ್‌ ಪ್ರಕರಣಗಳು ಪತ್ತೆಯಾಗುತ್ತಿವೆ. ಅದರಲ್ಲೂ ಚೀನಾದಲ್ಲಿ ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ರಾಜ್ಯದಲ್ಲಿ ಲಸಿಕಾಕರಣ ನೂರಕ್ಕೆ ನೂರರಷ್ಟು ಆಗಿದೆ. 3ನೇ ಡೋಸ್‌ […]

ಶೀಘ್ರವೇ ಕೋವಿಡ್ ಮಾರ್ಗಸೂಚಿ ಬಿಡುಗಡೆ  ➤ ಸಚಿವ ಡಾ.ಕೆ.ಸುಧಾಕರ್‌  Read More »

ಕರಾವಳಿ

ಟಿಕೇಟ್ ರಹಿತ ಪ್ರಯಾಣ ➤ 6 ಲಕ್ಷ ರೂ. ದಂಡ ವಸೂಲಿ..!         

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಟಿಕೆಟ್ ಪಡೆಯದೇ ಸಂಚರಿಸುವ ಪ್ರಯಾಣಿಕರಿಂದ 6,56,030 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ಸಂಸ್ಥೆಯ ತನಿಖಾ ತಂಡಗಳು ನವೆಂಬರ್-2022 ರ ಮಾಹೆಯಲ್ಲಿ ಒಟ್ಟು 15,530 ಟ್ರಿಪ್ ಗಳನ್ನು ತಪಾಸಣೆ ನಡೆಸಿ, 3326 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ

ಟಿಕೇಟ್ ರಹಿತ ಪ್ರಯಾಣ ➤ 6 ಲಕ್ಷ ರೂ. ದಂಡ ವಸೂಲಿ..!          Read More »

ಕರ್ನಾಟಕ

ಸಿಸಿಬಿ ಪೊಲೀಸರ ದಾಳಿ  ➤ ಫಾರ್ಮ್ ನಲ್ಲಿ 29 ವನ್ಯಜೀವಿಗಳು ಪತ್ತೆ    

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಎಸ್​.ಎಸ್. ಮಲ್ಲಿಕಾರ್ಜುನ ಅವರ ರೈಸ್ ಮಿಲ್​ನಲ್ಲಿ ವನ್ಯ‌ಜೀವಿಗಳು ಪತ್ತೆಯಾಗಿದ್ದು, ದಾವಣಗೆರೆ ನಗರದ ಬಂಬೂ ಬಜಾರ್ ರಸ್ತೆಯಲ್ಲಿ ಇರುವ ಕಲ್ಲೇಶ್ವರ ರೈಸ್ ಮಿಲ್​ ಮೇಲೆ ಬೆಂಗಳೂರು ಸಿಸಿಬಿ ಹಾಗೂ ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ವೇಳೆ 29 ವನ್ಯ ಜೀವಿಗಳು ಪತ್ತೆಯಾಗಿದ್ದು,  ಏಳು ಚುಕ್ಕೆ ಜಿಂಕೆಗಳು, 10 ಕೃಷ್ಣಮೃಗಗಳು, ಏಳು ಕಾಡುಹಂದಿಗಳು, ಮೂರು ಮುಂಗುಸಿಗಳು, ಎರಡು ನರಿಗಳು ಸಿಕ್ಕಿವೆ. ಅವುಗಳನ್ನು ರಕ್ಷಿಸಿ ಅರಣ್ಯ

ಸಿಸಿಬಿ ಪೊಲೀಸರ ದಾಳಿ  ➤ ಫಾರ್ಮ್ ನಲ್ಲಿ 29 ವನ್ಯಜೀವಿಗಳು ಪತ್ತೆ     Read More »

ಕರ್ನಾಟಕ, ಕ್ರೈಮ್ ನ್ಯೂಸ್

5 IPS ಅಧಿಕಾರಿಗಳ ದಿಢೀರ್ ವರ್ಗಾವಣೆ….!!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ. 21. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದ್ದು, ಇತ್ತೀಚೆಗಷ್ಟೆ ಕೆಲ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಬೆನ್ನಲ್ಲೇ ಇದೀಗ ಮತ್ತೆ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆರ್. ಚೇತನ್ –  ಗುಪ್ತಚರ ಇಲಾಖೆ ಬೆಂಗಳೂರು ಎಸ್ ಪಿ ಸೀಮಾ ಲಾಟ್ಕರ್ -ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಎ ಐ ಜಿಪಿ, ಸಿಸಿಬಿ – ಬೆಂಗಳೂರು ಎಂ.ಮುತ್ತುರಾಜ್ –

5 IPS ಅಧಿಕಾರಿಗಳ ದಿಢೀರ್ ವರ್ಗಾವಣೆ….!! Read More »

ಕರ್ನಾಟಕ

ಯುವಕನ ಬರ್ಬರ ಕೊಲೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಯುವಕನೋರ್ವನನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹೆಗಡೆನಗರದ ಬಾಲಾಜಿ ಲೇಔಟ್ ಬಳಿ ಸಂಭವಿಸಿದೆ. ಕೊಲೆಯಾದ ಯುವಕನನ್ನು ಹೆಗಡೆನಗರ ನಿವಾಸಿ ಸಲ್ಮಾನ್ (17) ಎಂದು ಗುರುತಿಸಲಾಗಿದೆ. ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದ ಈತ, ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಂದ ಹಂತಕರು ಯುವಕನನ್ನು ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಂಪಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಯುವಕನ ಬರ್ಬರ ಕೊಲೆ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು : 7ನೇ ಮಹಡಿಯಿಂದ ಬಿದ್ದು ಕಾರ್ಮಿಕ ಮೃತ್ಯು..!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ. 21. ಕಟ್ಟಡದ 7 ನೇ ಮಹಡಿಯಿಂದ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹೊಸೂರು ರಸ್ತೆಯಲ್ಲಿರುವ ಪಿಇಎಸ್ ಕಾಲೇಜು ಆವರಣದಲ್ಲಿ ಸಂಭವಿಸಿದೆ. ಮೃತ ಕಾರ್ಮಿಕರನ್ನು ಪಶ್ಚಿಮ ಬಂಗಾಳದ ಮೂಲದ ಎಸ್.ಕೆ.ಜಿಯಾರುಲ್ (24) ಎಂದು ಗುರುತಿಸಲಾಗಿದೆ. ಮಗನ ಸಾವಿನ ಕುರಿತು ತಾಯಿ ನೀಡಿರುವ ದೂರಿನನ್ವಯ, ಕಟ್ಟಡ ನಿರ್ಮಾಣದ ಗುತ್ತಿಗೆ ಪಡೆದಿದ್ದ ಎವಿಎಸ್ ಕಂಪನಿಯ ಜವಾಹರ್, ಎಂಜಿನಿಯರ್ ನಂಬಿರಾಜನ್, ಉಸ್ತುವಾರಿ ಕುಮಾರ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಬೆಂಗಳೂರು : 7ನೇ ಮಹಡಿಯಿಂದ ಬಿದ್ದು ಕಾರ್ಮಿಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಜೋಡಿ ಕೊಲೆ ಪ್ರಕರಣ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಕೋರಮಂಗಲ ಜೋಡಿ ಕೊಲೆ ಪ್ರಕರಣ ಭೇಧಿಸಿದ ಪೊಲೀಸರು ಪ್ರಮುಖ ಆರೋಪಿ ಉದ್ಯಮಿಯ ಮಾಜಿ ಕಾರು ಚಾಲಕ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೊಪಿಯನ್ನು ಜಗದೀಶ್ (24), ಅಭಿಷೇಕ್ (22) ಮತ್ತು ಆತನ ಸಹೋದರ ಕಿರಣ್ (19) ಎಂದು ಗುರುತಿಸಲಾಗಿದೆ. ಉದ್ಯಮಿ ರಾಜಗೋಪಾಲ್ ರೆಡ್ಡಿ ಅವರ ಮಾಜಿ ಚಾಲಕನಾಗಿದ್ದ ಜಗದೀಶ್ ಪ್ರಕರಣದ ಪ್ರಮುಖ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತ ಆರೋಪಿಗಳಿಂದ ರೂ. 5

ಜೋಡಿ ಕೊಲೆ ಪ್ರಕರಣ ➤ ಮೂವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಗಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ..!             

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಅಂಗವೈಕಲ್ಯತೆಯಿಂದ ಬಳಲುತ್ತಿದ್ದ 10 ವರ್ಷದ ಮಗಳನ್ನು ಕೊಂದು ತಾಯಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬ್ಯಾಡರಹಳ್ಳಿಯಲ್ಲಿ ಎಂಬಲ್ಲಿ ಸಂಭವಿಸಿದೆ. ಕೊಲೆಯಾದ ಬಾಲಕಿಯನ್ನು ಪ್ರಿಯಾಂಕಾ (10) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಯತ್ನಿಸಿರುವ ತಾಯಿ ಸುಮಾ (28) ಅವರನ್ನು ಸಹೋದರಿ ಮತ್ತು ನೆರೆಹೊರೆಯವರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸುಮಾ, ಅದರಿಂದ ಬಂದ ವೇತನದಲ್ಲಿ ಜೀವನ ನಿರ್ವಹಣೆ ಮಾಡುತ್ತಿದ್ದರು. ಮಗಳು ಪ್ರಿಯಾಂಕಾಗೆ ಅಂಗವೈಕಲ್ಯವಿತ್ತು, ಹೀಗಾಗಿ ಆಕೆಯನ್ನು ಯಾರಾದರೂ ಒಬ್ಬರು ನೋಡಿಕೊಳ್ಳಬೇಕಾಗಿತ್ತು.

ಮಗಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ..!              Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿದ್ದ ಅಡ್ಡಕ್ಕೆ ಸಿಸಿಬಿ ದಾಳಿ …..!    ➤ ಆರೋಪಿಗಳು ಬಂಧನ              

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.20  ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿದ್ದ ಅಡ್ಡದ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆಂದು ತಿಳಿದುಬಂದಿದೆ. ಪೊಲೀಸ್ ಅಧಿಕಾರಿಗಳು ಒಟ್ಟು 16 ಆರೋಪಿಗಳನ್ನು ಬಂಧಿಸಿದ್ದು, ಬಂಧಿತ ಆರೋಪಿಗಳಿಂದ 8 ಲಕ್ಷದ 10 ಸಾವಿರ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎನ್ನಲಾಗಿದೆ. ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಈ ರೀತಿಯ ಜೂಜಾಟ ಧಂಧೆಗಳು

ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿದ್ದ ಅಡ್ಡಕ್ಕೆ ಸಿಸಿಬಿ ದಾಳಿ …..!    ➤ ಆರೋಪಿಗಳು ಬಂಧನ               Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಿಬಿಎಂಪಿ ಕಸದ ಲಾರಿಗಳಿಂದ ಕೆರೆ ನೀರಿಗೆ ವಿಷಕಾರಿ ದ್ರವ ಸೋರಿಕೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.19  ವರ್ತೂರು ಕೆರೆ ಸೇತುವೆ ಮೇಲೆ ನಿಲ್ಲುತ್ತಿರುವ ಬಿಬಿಎಂಪಿ ಕಸದ ಲಾರಿಗಳಿಂದ ಕೆರೆ ನೀರಿಗೆ ವಿಷಕಾರಿ ದ್ರವ ಸೇರುತ್ತಿರುವುದು ಕಂಡು ಬಂದಿದೆ ಎನ್ನಲಾಗಿದೆ. ಲೀಟೆಜ್ ಒಂದು ದ್ರವವಾಗಿದ್ದು ಕಸದ ವಸ್ತುಗಳಿಂದ ಸಂಗ್ರಹಗೊಂಡು ಹಾನಿಕಾರಕ ದ್ರವ ಅಥವಾ ವಿಷಕಾರಿ ದ್ರವವಾಗಿ ಮಾರ್ಪಾಡುತ್ತದೆ  ಎಂದು ತಿಳಿದುಬಂದಿದೆ. ವಿಷಕಾರಿ ದ್ರವ ಕೆರೆ ನೀರಿಗೆ ಸೇರುತ್ತಿರುವ ಸಂಬಂಧ ಈಗಾಗಲೇ ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ವರದಿ ತಿಳಿಸಿದೆ.    

ಬಿಬಿಎಂಪಿ ಕಸದ ಲಾರಿಗಳಿಂದ ಕೆರೆ ನೀರಿಗೆ ವಿಷಕಾರಿ ದ್ರವ ಸೋರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top