Bangalore

ಗ್ಯಾರಂಟಿ ಯೋಜನೆಗಳಿಗೆ ಎಸ್ ಸಿ/ಎಸ್ ಟಿ ಅನುದಾನ ಬಳಕೆ..! ಕಾಂಗ್ರೆಸ್ ಜೊತೆ ಮುನಿಸಿಕೊಂಡಿರುವ ದಲಿತ ವಿಚಾರವಾದಿಗಳು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ‘ಜನಾಂದೋಲನ’ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಪಾರ ಬೆಂಬಲ ವ್ಯಕ್ತವಾಗಿದ್ದರೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗಳಿಗೆ ಮೀಸಲಿಟ್ಟಿದ್ದ 25 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಬಳಸಿರುವ ಬಗ್ಗೆ ಬಗ್ಗೆ ಮೌನ ವಹಿಸಿರುವ ಪಕ್ಷದ ದಲಿತ ಶಾಸಕರ ಮೇಲೆ ಅಸಮಾಧಾನಗೊಂಡು ದಲಿತ ವಿಚಾರವಾದಿಗಳ ಒಂದು ಭಾಗ ದೂರ ಉಳಿದಿತ್ತು. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧದ ಈ ಸಿಟ್ಟು ಮುಂದಿನ ದಿನಗಳಲ್ಲಿ […]

ಗ್ಯಾರಂಟಿ ಯೋಜನೆಗಳಿಗೆ ಎಸ್ ಸಿ/ಎಸ್ ಟಿ ಅನುದಾನ ಬಳಕೆ..! ಕಾಂಗ್ರೆಸ್ ಜೊತೆ ಮುನಿಸಿಕೊಂಡಿರುವ ದಲಿತ ವಿಚಾರವಾದಿಗಳು..! Read More »

ಕರ್ನಾಟಕ

ಪಿಜಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ..!      ಬಿಬಿಎಂಪಿ ಆಯುಕ್ತರು..!               

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ಬಿಬಿಎಂಪಿ ಇದೀಗ ನಗರ ವ್ಯಾಪ್ತಿಯಲ್ಲಿ ‘ಪೇಯಿಂಗ್‌ ಗೆಸ್ಟ್‌’ (ಪಿಜಿ)ಗಳಿಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಬಿಬಿಎಂಪಿ ಕಾಯ್ದೆ–2020ರ ಸೆಕ್ಷನ್‌ 305ರ ಪ್ರಕಾರ, ಪಿಜಿಗಳಿಗೆ ಉದ್ದಿಮೆ ಪರವಾನಗಿ ನೀಡುವಾಗ ಪಾಲನೆ ಮಾಡಬೇಕಾದ ಮಾರ್ಗಸೂಚಿಗಳನ್ನು ಬಿಬಿಎಂಪಿ ಮುಖ್ಯ ಆಯುಕ್ತರು ಹೊರಡಿಸಿದ್ದಾರೆ. ಈಗಾಗಲೇ ಉದ್ದಿಮೆ ಪರವಾನಗಿ ಪಡೆದಿರುವ ಪಿಜಿಗಳೂ ನವೀಕರಣ ಸಂದರ್ಭದಲ್ಲಿ ಈ ಮಾರ್ಗಸೂಚಿಗಳನ್ನು ಪಾಲಿಸಿರಬೇಕು. ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವುದು ಕಂಡು ಬಂದರೆ ಪರವಾನಗಿಗಳನ್ನು ರದ್ದುಗೊಳಿಸಲಾಗುತ್ತದೆ ಎಂದು ಸೂಚಿಸಲಾಗಿದೆ.  

ಪಿಜಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ..!      ಬಿಬಿಎಂಪಿ ಆಯುಕ್ತರು..!                Read More »

ಕರ್ನಾಟಕ

7ನೇ ವೇತನ ಆಯೋಗ ಜಾರಿ..! ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರಕ್ಕೆ ಶುರುವಾಯ್ತು ಆರ್ಥಿಕ ಸಂಕಷ್ಟ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿಗೆ ಸರ್ಕಾರ ನಿರ್ಧರಿಸಿದ್ದು, ಈ ನಡುವಲ್ಲೇ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಆರ್ಥಿಕ ಸಮಸ್ಯೆ ಎದುರಾಗಿದೆ ಎಂದು ತಿಳಿದುಬಂದಿದೆ. ಅಧಿಕಾರಕ್ಕೆ ಬರುವುದಕ್ಕೂ ಮುನ್ನ 2023 ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಎಲ್ಲಾ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದಗಳನ್ನು ಯಾವುದೇ ವಿಳಂಬ ನೀತಿ ಅನುಸರಿಸದೆ ಭರ್ತಿ ಮಾಡುತ್ತೇವೆಂದು ಭರವಸೆ ನೀಡಿದ್ದರು. ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ

7ನೇ ವೇತನ ಆಯೋಗ ಜಾರಿ..! ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರಕ್ಕೆ ಶುರುವಾಯ್ತು ಆರ್ಥಿಕ ಸಂಕಷ್ಟ..! Read More »

ಕರ್ನಾಟಕ

ಮತ್ತೇ ರೈಲು ಮಾರ್ಗದಲ್ಲಿ ಭೂಕುಸಿತ..! ಬೆಂಗಳೂರು- ಮಂಗಳೂರು ರೈಲು ಸಂಚಾರ ರದ್ದು      

(ನ್ಯೂಸ್ ಕಡಬ)newskadaba.com ಮಂಗಳೂರು, ಆ.10. ಎರಡು ದಿನದ ಹಿಂದಷ್ಟೇ ಆರಂಭಗೊಂಡ ಬೆಂಗಳೂರು-ಮಂಗಳೂರು ರೈಲು ಸೇವೆ ತಾತ್ಕಾಲಿಕವಾಗಿ ಮತ್ತೆ ರದ್ದುಗೊಳಿಸಿದ್ದು, ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದ ಪರಿಣಾಮ ರೈಲುಗಳ ಸಂಚಾರ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ. ಶನಿವಾರ ಮುಂಜಾನೆ ಸಕಲೇಶಪುರ ಹಾಗೂ ಬಾಳ್ಳುಪೇಟೆ ರೈಲು ಮಾರ್ಗ ಮಧ್ಯೆ ಭೂಕುಸಿತ ಉಂಟಾಗಿದೆ. ಇದರಿಂದಾಗಿ ಶುಕ್ರವಾರ(ಆ.09) ದಂದು ಹೊರಟಿದ್ದ ಬೆಂಗಳೂರು-ಕಣ್ಣೂರು (ಕಣ್ಣೂರು ಎಕ್ಸ್ ಪ್ರೆಸ್) ಮತ್ತು ಬೆಂಗಳೂರು-ಮುರ್ಡೇಶ್ವರ (ಮುರ್ಡೇಶ್ವರ ಎಕ್ಸ್ ಪ್ರೆಸ್) ರೈಲುಗಳು ಆಲೂರು ಹಾಗೂ ಹಾಸನದಲ್ಲಿ ಸ್ಥಗಿತಗೊಂಡಿದೆ ಎಂದು ವರದಿ ತಿಳಿಸಿದೆ.

ಮತ್ತೇ ರೈಲು ಮಾರ್ಗದಲ್ಲಿ ಭೂಕುಸಿತ..! ಬೆಂಗಳೂರು- ಮಂಗಳೂರು ರೈಲು ಸಂಚಾರ ರದ್ದು       Read More »

ಕರ್ನಾಟಕ

ದಕ್ಷಿಣ ಕನ್ನಡಜಿಲ್ಲೆಯ ವಸಂತ ಅಮೀನ್‌ ಸೇರಿ 93 ಮಂದಿಗೆ ನಾಟಕ‌ ಅಕಾಡೆಮಿ ಪ್ರಶಸ್ತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ಕರ್ನಾಟಕ ನಾಟಕ ಅಕಾಡೆಮಿಯು ಮೂರು ವರ್ಷಗಳ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ನಟಿ ಉಮಾಶ್ರೀ , ನಾಟಕಕಾರರಾದ ಎಚ್.ಎಸ್. ಶಿವಪ್ರಕಾಶ್ ಹಾಗೂ ರಂಗಕರ್ಮಿ ಕೋಟಿಗಾನಹಳ್ಳಿ ರಾಮಯ್ಯ ‘ಜೀವಮಾನ ಸಾಧನೆ ಪ್ರಶಸ್ತಿ’ಗೆ (ಗೌರವ ಪ್ರಶಸ್ತಿ) ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ವಸಂತ್‌ ಅಮೀನ್‌ ಗೂ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಅಕಾಡೆಮಿ ಅಧ್ಯಕ್ಷ ಕೆ.ವಿ. ನಾಗರಾಜಮೂರ್ತಿ ಅವರು ಸುದ್ದಿಗೋಷ್ಠಿಯಲ್ಲಿ 93 ಮಂದಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಿದರು.‘ಜೀವಮಾನ ಸಾಧನೆ ಪ್ರಶಸ್ತಿ’ಯು ತಲಾ 50

ದಕ್ಷಿಣ ಕನ್ನಡಜಿಲ್ಲೆಯ ವಸಂತ ಅಮೀನ್‌ ಸೇರಿ 93 ಮಂದಿಗೆ ನಾಟಕ‌ ಅಕಾಡೆಮಿ ಪ್ರಶಸ್ತಿ Read More »

ಕರ್ನಾಟಕ

ಪ್ರಕಾಶ್ ರಾಜ್ ಒಬ್ಬ ಅಜ್ಞಾನಿ, ಕೆಟ್ಟ ಹೋರಾಟಗಾರ            ಅಚ್ಚರಿ ಮೂಡಿಸಿದ ನಟ ಚೇತನ್ ಪೋಸ್ಟ್   

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ವಿನೇಶ್‌ ಫೋಗಟ್‌ ಪ್ರಕರಣದಲ್ಲಿ ಸಹನಟ ಪ್ರಕಾಶ್‌ ರೈ ನಿಲುವಿನ ವಿರುದ್ಧ ಕಿಡಿಕಾರಿರುವ ನಟ ಚೇತನ್‌ ಅಹಿಂಸಾ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬೆಂಬಲ ವ್ಯಕ್ತಪಡಿಸಿ ಮಾಡಿರುವ ಪೋಸ್ಟ್ ವೊಂದು ಇದೀಗ ಎಲ್ಲರಲ್ಲೂ ಅಚ್ಚರಿಯುಂಟು ಮಾಡಿದೆ ಎಂದು ವರದಿ ತಿಳಿಸಿದೆ. 50 ಕಿಲೋಗಿಂತ 100 ಗ್ರಾಂ ತೂಕ ಹೆಚ್ಚಳವಾದ ಹಿನ್ನೆಲೆ ಪ್ಯಾರಿಸ್ ಒಲಿಂಪಿಕ್ಸ್‌-2024ರ ಫೈನಲ್‌ ಕುಸ್ತಿ ಪಂದ್ಯದಿಂದ ಹೊರ ಬಿದ್ದ ವಿನೇಶ್‌ ಫೋಗಟ್ ಪರ, ಮೋದಿ ವಿರುದ್ಧ ಪೋಸ್ಟ್‌ ಹಾಕಿದ್ದ ಪ್ರಕಾಶ್‌ ರೈ

ಪ್ರಕಾಶ್ ರಾಜ್ ಒಬ್ಬ ಅಜ್ಞಾನಿ, ಕೆಟ್ಟ ಹೋರಾಟಗಾರ            ಅಚ್ಚರಿ ಮೂಡಿಸಿದ ನಟ ಚೇತನ್ ಪೋಸ್ಟ್    Read More »

ಕರ್ನಾಟಕ

ಪವನ್ ಕಲ್ಯಾಣ್ ಮನವಿ ಪುರಸ್ಕರಿಸಿದ ರಾಜ್ಯ ಸರ್ಕಾರ ಆನೆಗಳ ತರಬೇತಿಗೆ ಮಾವುತರ ಕಳುಹಿಸಲು ಒಪ್ಪಿಗೆ           

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ಕರ್ನಾಟಕ ಅರಣ್ಯ ಇಲಾಖೆಯು ತರಬೇತಿ ಪಡೆದ ಕುಮ್ಕಿ (ಕ್ಯಾಂಪ್) ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರಿಸಲಿದೆ ಎಂದು ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಹೇಳಿದ್ದಾರೆ. ಇಷ್ಟೇ ಅಲ್ಲ, ಮಾವುತರು ಮತ್ತು ಕಾವಾಡಿಗರಿಗೆ ತರಬೇತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಆಂಧ್ರಪ್ರದೇಶ ಎಂಟು ಕುಮ್ಕಿ ಆನೆಗಳನ್ನು ಕೇಳಿದೆ, ರಾಜ್ಯದ ವಿವಿಧ ಶಿಬಿರಗಳಲ್ಲಿ ಒಟ್ಟು 103 ಕುಮ್ಕಿ ಆನೆಗಳಿವೆ, ಅವುಗಳಲ್ಲಿ ಆಂಧ್ರಪ್ರದೇಶಕ್ಕೆ ಕೆಲವು ಆನೆಗಳನ್ನು ಕರ್ನಾಟಕ ಕಳುಹಿಸಲಿದೆ ಎಂದು ಖಂಡ್ರೆ ಮಾಧ್ಯಮಗಳಿಗೆ ತಿಳಿಸಿದರು.

ಪವನ್ ಕಲ್ಯಾಣ್ ಮನವಿ ಪುರಸ್ಕರಿಸಿದ ರಾಜ್ಯ ಸರ್ಕಾರ ಆನೆಗಳ ತರಬೇತಿಗೆ ಮಾವುತರ ಕಳುಹಿಸಲು ಒಪ್ಪಿಗೆ            Read More »

ಕರ್ನಾಟಕ

ಸಿಎಂ ಸಿದ್ದರಾಮಯ್ಯ ವಿರುದ್ಧ CBI ತನಿಖೆ ಪ್ರಕರಣ     ಕುತೂಹಲ ಮೂಡಿಸಿದ ರಾಜ್ಯಪಾಲರ ನಡೆ       

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಷಿಕ್ಯೂಷನ್‌ ಗೆ ಅನುಮತಿ ಕೋರಿ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಮನವಿ ಸಂಬಂಧ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಇನ್ನು ಕ್ರಮ ಕೈಗೊಂಡಿಲ್ಲ. ಈ ನಡುವಲ್ಲೇ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ತನಿಖೆಗೆ ವಹಿಸುವ ಕುರಿತು ಚಿಂತನೆ ನಡೆಸುತ್ತಿದ್ದಾರೆಂಬ ಊಹಾಪೋಹಗಳು ಶುರುವಾಗಿವೆ. ಅಬ್ರಹಾಂ ಸಲ್ಲಿಸಿದ್ದ ಮನವಿಗೆ ಪ್ರತಿಕ್ರಿಯಿಸಿದ ರಾಜ್ಯಪಾಲರು ಅದೇ ದಿನ ಸಿಎಂಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದರು. ಸಿದ್ದರಾಮಯ್ಯ ಅವರ ಅನುಪಸ್ಥಿತಿಯಲ್ಲಿ ನಡೆದ ಸಚಿವ

ಸಿಎಂ ಸಿದ್ದರಾಮಯ್ಯ ವಿರುದ್ಧ CBI ತನಿಖೆ ಪ್ರಕರಣ     ಕುತೂಹಲ ಮೂಡಿಸಿದ ರಾಜ್ಯಪಾಲರ ನಡೆ        Read More »

ಕರ್ನಾಟಕ

ಪ್ರಾಂಶುಪಾಲ ಹುದ್ದೆ ಭರ್ತಿಗೆ ಹೊಸ ನಿಯಮ    ಉಪನ್ಯಾಸಕರ ತೀವ್ರ ವಿರೋಧ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ರಾಜ್ಯದ ಹಲವು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪೂರ್ಣಾವಧಿ ಪ್ರಾಂಶುಪಾಲರಿಲ್ಲ ಮತ್ತು ಖಾಲಿ ಇರುವ ಹುದ್ದೆಗಳನ್ನು ಲಿಖಿತ ಪರೀಕ್ಷೆ ಮೂಲಕ ಭರ್ತಿ ಮಾಡಲು ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ. ಶಿಕ್ಷಣ ಇಲಾಖೆಯ ಈ ನಡೆ ಸರ್ಕಾರಿ ಕಾಲೇಜುಗಳ ಉಪನ್ಯಾಸಕರ ಆತಂಕಕ್ಕೆ ಕಾರಣವಾಗಿದೆ. ಖಾಸಗಿ ಸಂಸ್ಥೆಗಳ ಉಪನ್ಯಾಸಕರು ತಮ್ಮ ಕಾಲೇಜುಗಳ ಪ್ರಾಂಶುಪಾಲರಾಗಲು ಅವಕಾಶ ನೀಡುವುದರಿಂದ ಅವರು ಈ ಕ್ರಮಕ್ಕೆ ವಿರೋಧ ವ್ಯಕ್ತ ಪಡಿಸಿದ್ದಾರೆ. ಕರ್ನಾಟಕದಲ್ಲಿ 430 ಸರ್ಕಾರಿ ಪದವಿ ಕಾಲೇಜುಗಳು ಬಿಎ, ಬಿಕಾಂ, ಬಿಎಸ್ಸಿ

ಪ್ರಾಂಶುಪಾಲ ಹುದ್ದೆ ಭರ್ತಿಗೆ ಹೊಸ ನಿಯಮ    ಉಪನ್ಯಾಸಕರ ತೀವ್ರ ವಿರೋಧ Read More »

ಕರ್ನಾಟಕ

ಸ್ಥಗಿತಗೊಂಡಿದ್ದ ಮಂಗಳೂರು- ಬೆಂಗಳೂರು ರೈಲು ಸಂಚಾರ ಪುನರಾರಂಭ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.09. ಭೂಕುಸಿತದಿಂದ ಸ್ಥಗಿತಗೊಂಡಿರುವ ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ಪುನರಾರಂಭಗೊಂಡಿದೆ ಎಂದು ತಿಳಿದುಬಂದಿದೆ. ದೋಣಿಗಲ್‌ ಎಂಬಲ್ಲಿ ರೈಲು ಮಾರ್ಗದಲ್ಲಿ ಭೂ ಕುಸಿತ ಸಂಭವಿಸಿದ್ದು, ಪರಿಣಾಮ ತತ್‌ ಕ್ಷಣದಿಂದಲೇ ಮಂಗಳೂರು- ಬೆಂಗಳೂರು ಎಲ್ಲ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಹಾಗೂ ಕೆಲವು ರೈಲುಗಳ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿತ್ತು. ಇದೀಗ ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಇದೀಗ 12 ದಿನಗಳ ಬಳಿಕ ರೈಲು ಸಂಚಾರ ಮತ್ತೆ ಆರಂಭಗೊಂಡಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ.

ಸ್ಥಗಿತಗೊಂಡಿದ್ದ ಮಂಗಳೂರು- ಬೆಂಗಳೂರು ರೈಲು ಸಂಚಾರ ಪುನರಾರಂಭ Read More »

ಕರಾವಳಿ, ಕರ್ನಾಟಕ
Scroll to Top