Bangalore

ರಾತ್ರಿ ಬಸ್ಸಲ್ಲಿ ಅಕ್ರಮವಾಗಿ 34 ಕೆಜಿ ಚಿನ್ನ ಸಾಗಾಟ…! ► 6 ಮಂದಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.12. ಕರ್ನಾಟಕದಿಂದ ಕೇರಳಕ್ಕೆ ಅಕ್ರಮವಾಗಿ 34 ಕೆಜಿ ಚಿನ್ನವನ್ನು ಬಸ್ ನಲ್ಲಿ ಸಾಗಿಸುತ್ತಿದ್ದ ತಂಡವನ್ನು ಕೇರಳದ ಅಬಕಾರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕದಿಂದ ಕೇರಳಕ್ಕೆ ಅಕ್ರಮವಾಗಿ ಚಿನ್ನ ಹಾಗೂ ಮಾದಕ ವಸ್ತು ಸಾಗಾಟವಾಗುತ್ತಿದೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಕೇರಳ ವಯನಾಡಿನ ಅಬಕಾರಿ ಗುಪ್ತ ದಳದ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕರ್ನಾಟಕದಿಂದ ಕೇರಳಕ್ಕೆ ತೆರಳುತ್ತಿದ್ದ ಬಸ್ಸನ್ನು ತಪಾಸಣೆ ನಡೆಸಿದ ವೇಳೆ 4 ಬ್ಯಾಗ್ ಗಳಲ್ಲಿ 34 ಕೆಜಿ […]

ರಾತ್ರಿ ಬಸ್ಸಲ್ಲಿ ಅಕ್ರಮವಾಗಿ 34 ಕೆಜಿ ಚಿನ್ನ ಸಾಗಾಟ…! ► 6 ಮಂದಿ ಪೊಲೀಸ್ ವಶಕ್ಕೆ Read More »

ಕರಾವಳಿ

10 ವರ್ಷಗಳ ಹಿಂದಿನ ಡೀಸೆಲ್‌ ವಾಹನಗಳ ನಿಷೇಧ ► ಹಸಿರು ನ್ಯಾಯ ಮಂಡಳಿಯ ತೀರ್ಪನ್ನು ಎತ್ತಿಹಿಡಿದ ಸುಪ್ರೀಂ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.15. ರಾಷ್ಟ್ರ ರಾಜಧಾನಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಅತಿಯಾಗಿ ವಾಯುಮಾಲಿನ್ಯ ಸೃಷ್ಟಿಸುವ 10 ವರ್ಷಗಳ ಹಿಂದಿನ ಡೀಸೆಲ್‌ ವಾಹನಗಳ ಮೇಲಿನ ನಿಷೇಧವನ್ನು ತೆರವುಗೊಳಿಸಲು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನಿರಾಕರಿಸಿದೆ. ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವಾಲಯವು, 10 ವರ್ಷ ಹಿಂದಿನ ಡೀಸೆಲ್ ವಾಹನಗಳ ಬಳಕೆಯಿಂದ ಜನರ ಆರೋಗ್ಯಕ್ಕೆ ಯಾವುದೇ ಹಾನಿಯಿಲ್ಲ ಎಂದು ಹೇಳಿ ಈ ವಾಹನಗಳ ಮೇಲೆ ಹಸಿರು ನ್ಯಾಯಾಧೀಕರಣ ಹೇರಿದ್ದ ನಿಷೇಧವನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

10 ವರ್ಷಗಳ ಹಿಂದಿನ ಡೀಸೆಲ್‌ ವಾಹನಗಳ ನಿಷೇಧ ► ಹಸಿರು ನ್ಯಾಯ ಮಂಡಳಿಯ ತೀರ್ಪನ್ನು ಎತ್ತಿಹಿಡಿದ ಸುಪ್ರೀಂ Read More »

ರಾಷ್ಟ್ರೀಯ ನ್ಯೂಸ್

ಜಿಂಕೆ ಚರ್ಮ ಮಾರಾಟ ಪ್ರಕರಣ ► ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.14. ಜಿಂಕೆ ಚರ್ಮವನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆಯ ವಿಶೇಷ ಸಿಬ್ಬಂದಿ ಹಿಡಿದು ಪೊಲೀಸರ ವಶಕ್ಕೆ ನೀಡಿರುವ ಘಟನೆ ಬನ್ನೇರುಘಟ್ಟದಲ್ಲಿ ಗುರುವಾರದಂದು ನಡೆದಿದೆ. ಬಂಧಿತ ಆರೋಪಿಗಳನ್ನು ನಾರಾಯಣಸ್ವಾಮಿ (42) ಮತ್ತು ನಾಗಮಾದ(27) ಎಂದು ಗುರುತಿಸಲಾಗದ. ಇವರಿಬ್ಬರು ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು, ಬನ್ನೇರುಘಟ್ಟ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಜಿಂಕೆ ಚರ್ಮ ಮಾರಾಟ ಮಾಡುತ್ತಿದ್ದಾಗ ಅರಣ್ಯ ಇಲಾಖೆಯ ವಿಶೇಷ ದಳದ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಬಂಧಿತರ ಬಳಿಯಿದ್ದ ಜಿಂಕೆ ಚರ್ಮವನ್ನು ಪೊಲೀಸರು ವಶಪಡಿಸಿಕೊಂಡಿದ್ದು,

ಜಿಂಕೆ ಚರ್ಮ ಮಾರಾಟ ಪ್ರಕರಣ ► ಇಬ್ಬರ ಬಂಧನ Read More »

ಕರ್ನಾಟಕ

ಗೌರಿ ಲಂಕೇಶ್ ಹತ್ಯೆ ಪ್ರಕರಣ ► ಇಂದು ರಾಷ್ಟ್ರಮಟ್ಟದ ಪ್ರತಿರೋಧ ಸಮಾವೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.12. ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಗೌರಿ ಲಂಕೇಶ್ ಹತ್ಯೆ ವಿರೋಧಿ ಹೋರಾಟ ವೇದಿಕೆಯ ವತಿಯಿಂದ ಮಂಗಳವಾರದಂದು ರಾಷ್ಟ್ರಮಟ್ಟದ ಪ್ರತಿರೋಧ ಸಮಾವೇಶವು ಸೆಂಟ್ರಲ್ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಈ ರಾಷ್ಟ್ರಮಟ್ಟದ ಪ್ರತಿರೋಧ ಸಮಾವೇಶದಲ್ಲಿ ಸೀತರಾಂ ಯೆಚೂರಿ, ಸಾಯಿನಾಥ್, ಮೇಧಾ ಪಾಟ್ಕರ್, ಆನಂದ್ ಪಟವರ್ಧನ್, ತೀಸ್ತಾ ಸೆಟಲ್ವಾಡ್, ಯೋಗೆಂದ್ರ ಯಾದವ್, ಜಿಗ್ನೇಶ್ ಮೇವಾನಿ, ವಿವಿಧ ಕವಿಗಳು, ಬರಹಗಾರರು, ಹೋರಾಟಗಾರರು, ಕಲಾವಿದರು, ಪತ್ರಕರ್ತರು ಮತ್ತು ಸಾಮಾನ್ಯ ಜನತೆ ಭಾಗವಹಿಸಲಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣ ► ಇಂದು ರಾಷ್ಟ್ರಮಟ್ಟದ ಪ್ರತಿರೋಧ ಸಮಾವೇಶ Read More »

ರಾಷ್ಟ್ರೀಯ ನ್ಯೂಸ್

ಪತ್ರಕರ್ತೆ ಗೌರಿ ಲಂಕೇಶ್ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.05. ಖ್ಯಾತ ಪತ್ರಕರ್ತೆ ಹಾಗೂ ಚಿಂತಕಿ ಗೌರಿ ಲಂಕೇಶ್ ಅವರನ್ನು ರಾಜಾರಾಜೇಶ್ವರಿ ನಗರದ ಅವರ ಮನೆಯ ಬಳಿಯಲ್ಲೇ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೈದ ಘಟನೆ ಇಂದು ರಾತ್ರಿ ನಡೆದಿದೆ. ಪತ್ರಕರ್ತೆ ಗೌರಿ ಲಂಕೇಶ್ ಅವರು ರಾತ್ರಿ 8:00 ಗಂಟೆ ಸುಮಾರಿಗೆ ಮನೆಯ ಹೊರಗಡೆ ನಿಂತಿದ್ದ ಸಂದರ್ಭದಲ್ಲಿ ಅವರ ಮೇಲೆ ಮೂವರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿಯಿಂದ ಗೌರಿ ಅವರ ಹಣೆ ಹಾಗೂ ಎದೆಗೆ ಗುಂಡು ತಗಲಿದ್ದು, ಗಂಭೀರ

ಪತ್ರಕರ್ತೆ ಗೌರಿ ಲಂಕೇಶ್ ಬರ್ಬರ ಹತ್ಯೆ Read More »

ಕರಾವಳಿ

ವಿವಾಹಿತನಿಂದ ಯುವತಿಯ ಅಪಹರಣ ► ತಾಳಿ ಕಟ್ಟಿ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.28, ವಿವಾಹಿತ ವ್ಯಕ್ತಿಯೊಬ್ಬ 20 ವರ್ಷದ ಯುವತಿಯನ್ನು ಅಪಹರಿಸಿ ಆಕೆಗೆ ತಾಳಿ ಕಟ್ಟಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾನೆ. ಅಗ್ರಹಾರ ದಾಸರಹಳ್ಳಿಯ ನಿವಾಸಿ ಸಂತೋಷ್‌ (32) ಜೈಲು ಪಾಲಾದ ವ್ಯಕ್ತಿ. ಪತ್ನಿ ಮತ್ತು ಮಕ್ಕಳನ್ನು ತೊರೆದು ಒಂಟಿಯಾಗಿದ್ದ ಈತ ಮನೆ ಸಮೀಪವೇ ಇಸ್ತ್ರಿ ಅಂಗಡಿ ಇಟ್ಟುಕೊಂಡಿದ್ದ. ತನ್ನ ಅಂಗಡಿಗೆ ಆಗಾಗ ಇಸ್ತ್ರಿಗೆ ಬಟ್ಟೆ ತೆಗೆದುಕೊಂಡು ಬರುತ್ತಿದ್ದ ಯುವತಿಯನ್ನು ಮದುವೆಯಾಗಲು ಇಚ್ಛಿಸಿದ್ದ ಇದಕ್ಕೆ ಯುವತಿ ನಿರಾಕರಿಸಿ ಪೋಷಕರಿಗೆ ಆತನ ವರ್ತನೆ

ವಿವಾಹಿತನಿಂದ ಯುವತಿಯ ಅಪಹರಣ ► ತಾಳಿ ಕಟ್ಟಿ ಅತ್ಯಾಚಾರ Read More »

ಕರ್ನಾಟಕ

ಲಾರಿಗೆ ಢಿಕ್ಕಿಯಾದ ಕಾರು: ಕಿರುತೆರೆ ನಟಿ, ಸಹ ನಟ ಮೃತ್ಯು ► ಕುಕ್ಕೇ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಆಗಮಿಸುತ್ತಿದ್ದ ನಟರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.24. ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಿರುತುರೆ ನಟಿ ಹಾಗೂ ಸಹನಟ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟು, ನಾಲ್ವರು ಸಹನಟರು ಗಾಯಗೊಂಡ ಘಟನೆ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಲ್ಯಾಂಕೋ ಟೋಲ್‌ ರಸ್ತೆಯ ಸೋಲೂರು ಬಳಿ ಬುಧವಾರ ತಡರಾತ್ರಿ ನಡೆದಿದೆ. ಮಹಾನದಿ ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಮತ್ತು ರು. ಮಧುಬಾಲ, ತ್ರಿವೇಣಿ ಸಂಗಮ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಕಿರುತೆರೆ ನಟಿ ರಚನಾ(23) ಹಾಗೂ ಸಹ ನಟ ಜೀವನ್‌ ಮೃತಪಟ್ಟವರು.

ಲಾರಿಗೆ ಢಿಕ್ಕಿಯಾದ ಕಾರು: ಕಿರುತೆರೆ ನಟಿ, ಸಹ ನಟ ಮೃತ್ಯು ► ಕುಕ್ಕೇ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಆಗಮಿಸುತ್ತಿದ್ದ ನಟರು Read More »

ಕರ್ನಾಟಕ

ಯಡಿಯೂರಪ್ಪರಿಗೆ ಮುಳುವಾಗಲಿದೆಯಾ ಡಿನೋಟಿಫಿಕೇಷನ್ ಗುಮ್ಮ ► ಅಲ್ಲ ಸರ್ಕಾರದ ತಂತ್ರಗಾರಿಕೆ ತಲೆಕೆಳಗಾಗಲಿದೆಯಾ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ .23, ಬಿಎಸ್ ಯಡಿಯೂರಪ್ಪ ವಿರುದ್ಧ ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಸಂಬಂಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬುಧವಾರ ಹೈಕೋರ್ಟ್ ನಲ್ಲಿ  ನಡೆಯಲಿದೆ. ಎಫ್ಐಆರ್ ಗೆ ಮಧ್ಯಂತರ ತಡೆ ಕೋರಿ ಸಲ್ಲಿಸಿರುವ ಮನವಿ ಕುರಿತು ಇಂದು ವಾದ ನಡೆಯಲಿದೆ. ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಗುತ್ತೋ ಇಲ್ಲವೋ ಅನ್ನೋದು ಇಂದು ನಿರ್ಧಾರವಾಗಲಿದೆ. ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ಹಾಗೂ ಎಸಿಬಿ ಪರ ಮಾಜಿ ಅಡ್ವೋಕೇಟ್ ಜನರಲ್ ರವಿ

ಯಡಿಯೂರಪ್ಪರಿಗೆ ಮುಳುವಾಗಲಿದೆಯಾ ಡಿನೋಟಿಫಿಕೇಷನ್ ಗುಮ್ಮ ► ಅಲ್ಲ ಸರ್ಕಾರದ ತಂತ್ರಗಾರಿಕೆ ತಲೆಕೆಳಗಾಗಲಿದೆಯಾ…? Read More »

ಕರಾವಳಿ

ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಲಿರುವ ನಟಿ ಪ್ರಿಯಾಮಣಿ ► ಬೆಂಗಳೂರಿನಲ್ಲಿ ಸರಳ ವಿವಾಹವಾಗಲಿರುವ ನಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, 10 ಕ್ಕೂ ಅಧಿಕ ಕನ್ನಡ ಚಿತ್ರಗಳಲ್ಲಿ ನಟಿಸಿದ್ದ ಬಹುಬೇಡಿಕೆಯ ಬಹುಭಾಷಾ ನಟಿ ಪ್ರಿಯಾಮಣಿ ತನ್ನ ಬಾಲ್ಯದ ಗೆಳೆಯ ಮುಂಬೈ ಮೂಲದ ಉದ್ಯಮಿ ಮುಸ್ತಫಾ ರಾಜ್ ಜೊತೆ ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಲಿದ್ದಾರೆ.

ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಲಿರುವ ನಟಿ ಪ್ರಿಯಾಮಣಿ ► ಬೆಂಗಳೂರಿನಲ್ಲಿ ಸರಳ ವಿವಾಹವಾಗಲಿರುವ ನಟಿ Read More »

ಕರ್ನಾಟಕ

ವಿದ್ಯುತ್ ಶಾಕ್ ನೀಡಿ ವ್ಯಕ್ತಿಯ ಬರ್ಬರ ಕೊಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.22. ಕಳ್ಳತನದ ಆರೋಪದ ಮೇಲೆ ಕರೆಂಟ್ ಶಾಕ್ ಕೊಟ್ಟು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮಾರತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೇಕೊಳಾಲದಲ್ಲಿ ಸೋಮವಾರ ರಾತ್ರಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಬಷೀರ್‍ ಕೊಲೆಯಾದ ವ್ಯಕ್ತಿ. ಈತನಿಗೆ ನಾಲ್ವರು ದುಷ್ಕರ್ಮಿಗಳು ಬೆಳಗಿಂದ ಸಂಜೆಯವರೆಗೂ ಕಿರುಕುಳ ನೀಡಿ, ನಂತರ ಆತನನ್ನ ಕೊಲೆ ಮಾಡಿದ್ದು, ಜತೆಗಾರರಿಬ್ಬರ ಮೇಲೆ ಮನಸ್ಸೋ ಇಚ್ಛೆ ಹಲ್ಲೆ ಮಾಡಲಾಗಿದೆ. ಬಷೀರ್ ಒಂದು ವರ್ಷದ ಹಿಂದೆ ಮದುವೆಯಾಗಿದ್ದು ಪಶ್ಚಿಮ ಬಂಗಾಳದಿಂದ ಗುಜರಿ

ವಿದ್ಯುತ್ ಶಾಕ್ ನೀಡಿ ವ್ಯಕ್ತಿಯ ಬರ್ಬರ ಕೊಲೆ Read More »

ಕರ್ನಾಟಕ
Scroll to Top