Bangalore

‘ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ರಾಜ್ಯಗಳ ಸಮಾನ ಪರಿಗಣನೆ’           ಕೇಂದ್ರ ಸಚಿವೆ ಕರಂದ್ಲಾಜೆ                  

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03.  ಕರ್ನಾಟಕಕ್ಕೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ ಎಂದು ಕೇಂದ್ರ ಎಂಎಸ್‌ಎಂಇ, ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾಕರಂದ್ಲಾಜೆ ಮೈಸೂರಿನಲ್ಲಿಂದು ಹೇಳಿದ್ದಾರೆ.ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ನ್ಯಾಯಾಲಯದಲ್ಲಿರುವ ಕಾರಣ, ಕೇಂದ್ರ ಸರ್ಕಾರ ಈ ಯೋಜನೆಗೆ ಆರ್ಥಿಕ ನೆರವು ನೀಡಲು ಸಾಧ್ಯವಾಗುವುದಿಲ್ಲ ಎಂದರು. ರಾಜ್ಯದ ಎರಡು ಹಗರಣಗಳ ಬಗ್ಗೆ ರಾಜ್ಯಪಾಲರಿಗೆ ಖಾಸಗಿ ವ್ಯಕ್ತಿಯೊಬ್ಬರು ದೂರು ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಕಾನೂನು ಸಲಹೆ ಪಡೆದು, ಮುಖ್ಯಮಂತ್ರಿಗಳಿಗೆ ಶೋಕಾಸ್ ನೋಟಿಸ್ […]

‘ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ರಾಜ್ಯಗಳ ಸಮಾನ ಪರಿಗಣನೆ’           ಕೇಂದ್ರ ಸಚಿವೆ ಕರಂದ್ಲಾಜೆ                   Read More »

ಕರ್ನಾಟಕ

ಸಮುದ್ರ ತೀರದಲ್ಲಿ ಗೋವಿನ ಅವಶೇಷ ಪತ್ತೆ..!            ಪ್ರಕರಣ ದಾಖಲು      

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03.  ಸಮುದ್ರತೀರದಲ್ಲಿ ಗೋಣಿಚೀಲದಲ್ಲಿ ಕಟ್ಟಿ ಎಸೆಯಲಾದ ಗೋವಿನ ಅವಶೇಷಗಳು ಪತ್ತೆಯಾಗಿದ್ದು, ಇಲ್ಲಿನ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕಡಲ ತೀರದಲ್ಲಿ ಗೋಣಿ ಚೀಲದಲ್ಲಿ ದನದ ಅವಶೇಷ ತೇಲಿಕೊಂಡು ಬಂದಿದ್ದು, ಚೀಲದಲ್ಲಿ ದನದ ತಲೆಯ ಭಾಗ ಹಾಗೂ ದವಡೆಯ ಮೂಳೆ ಹಾಗೂ ದನದ ಕಳೆಬರಗಳು ಪತ್ತೆಯಾಗಿದೆ. ಗೋವನ್ನು ವಧೆ ಮಾಡಿ ಅದರ ಕಳೆಬರವನ್ನು ಚೀಲದಲ್ಲಿ ಹಾಕಿ ಸಮುದ್ರಕ್ಕೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಸಮುದ್ರ ತೀರದಲ್ಲಿ ಗೋವಿನ ಅವಶೇಷ ಪತ್ತೆ..!            ಪ್ರಕರಣ ದಾಖಲು       Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಟಕ್ಕರ್ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಳಿಬಂದಿರುವ ಮುಡಾ ಅಕ್ರಮ ವಿರುದ್ಧ ಹೋರಾಟಕ್ಕಿಳಿದಿರುವ ಬಿಜೆಪಿ-ಜೆಡಿಎಸ್ ಬೆಂಗಳೂರಿನಿಂದ ಮೈಸೂರಿಗೆ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಅದಕ್ಕೆ ಟಕ್ಕರ್ ಕೊಡಲು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಾಮನಗರದಲ್ಲಿ ಇಂದು ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮ ನಡೆಯಲಿದೆ ಎನ್ನಲಾಗಿದೆ. ರಾಮನಗರದಲ್ಲಿ ಸಭೆ, ನಾಳೆ ಚನ್ನಪಟ್ಟಣ, ಆಗಸ್ಟ್ 5 ಮದ್ದೂರು, ಆಗಸ್ಟ್ 6 ಮಂಡ್ಯ, ಆಗಸ್ಟ್ 9ರಂದು ಮೈಸೂರಿನಲ್ಲಿ ಬಹಿರಂಗ ಸಮಾರೋಪ ಸಭೆ ನಡೆಸಲಿದ್ದೇವೆ. ಬಿಜೆಪಿ, ಜೆಡಿಎಸ್‌

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಟಕ್ಕರ್ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮ..! Read More »

ಕರ್ನಾಟಕ

ವಯನಾಡು ಭೂ ಕುಸಿತ ರಕ್ಷಣಾ ಕಾರ್ಯಾಚರಣೆ ಉಸ್ತುವಾರಿ ವಹಿಸಿರುವ ಜಿಲ್ಲಾಧಿಕಾರಿ ಕನ್ನಡತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ಭೂ ಕುಸಿತದಿಂದ ತತ್ತರಗೊಂಡಿರುವ ವಯನಾಡ್ ನಲ್ಲಿ ಜಿಲ್ಲಾಧಿಕಾರಿ ಮೇಘಶ್ರೀ ಡಿ.ಆರ್ ದುರಂತ ಸಂಭವಿಸಿದ ದಿನದಿಂದಲೂ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಕಾರ್ಯಾಚರಣೆಯ ಸಂಪೂರ್ಣ ಉಸ್ತುವಾರಿ ವಹಿಸಿರುವ ಮೇಘಶ್ರೀ ಕರ್ನಾಟಕದವರು. ಮೇಘಶ್ರೀ ಡಿಆರ್ ಅವರು ತಮ್ಮ ದಿನವನ್ನು ಪ್ರಾರಂಭಿಸುತ್ತಾರೆ ಮತ್ತು ವಯನಾಡ್ ಭೂಕುಸಿತ ಸಂತ್ರಸ್ತರಿಗೆ ಸೇವೆ ಸಲ್ಲಿಸಲು ದಣಿವರಿಯದೆ ಕೆಲಸ ಮಾಡುದ್ದಾರೆ ಎನ್ನಲಾಗಿದೆ.

ವಯನಾಡು ಭೂ ಕುಸಿತ ರಕ್ಷಣಾ ಕಾರ್ಯಾಚರಣೆ ಉಸ್ತುವಾರಿ ವಹಿಸಿರುವ ಜಿಲ್ಲಾಧಿಕಾರಿ ಕನ್ನಡತಿ..! Read More »

ಕರ್ನಾಟಕ

ಕರ್ನಾಟಕದಲ್ಲಿ 4398 ಸರ್ಕಾರಿ ಶಾಲೆಗಳಿಗೆ ಮುಚ್ಚುವ ಆತಂಕ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ರಾಜ್ಯದಲ್ಲಿರುವ 46 ಸಾವಿರ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪೈಕಿ ಸುಮಾರು 18 ಸಾವಿರ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ 30 ದಾಟಿಲ್ಲ. ಆಶ್ಚರ್ಯವೆಂದರೆ ಈ ಪೈಕಿ 4300 ಕ್ಕೂ ಹೆಚ್ಚು ಶಾಲೆಗಳಲ್ಲಿ 10ಕ್ಕಿಂತ ಕಡಿದು ಮಕ್ಕಳಿದ್ದಾರೆ. ಇದರಲ್ಲಿ ಶೂನ್ಯ ದಾಖಲಾತಿಯ ಶಾಲೆಗಳೂ ಇವೆ. ಇದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಇತ್ತೀಚೆಗೆ ಮುಕ್ತಾಯಗೊಂಡ ಮುಂಗಾರು ಅಧಿವೇಶನದಲ್ಲಿ ಮಂಡಿಸಿರುವ ಅಧಿಕೃತ ಮಾಹಿತಿ. ಈ ಹಿಂದೆ 10ಕ್ಕಿಂತ ಕಡಿಮೆ ಮಕ್ಕಳಿರುವ

ಕರ್ನಾಟಕದಲ್ಲಿ 4398 ಸರ್ಕಾರಿ ಶಾಲೆಗಳಿಗೆ ಮುಚ್ಚುವ ಆತಂಕ..! Read More »

ಕರ್ನಾಟಕ

ಮಲೆನಾಡು ಮತ್ತು ಕರಾವಳಿಯಲ್ಲಿ ಮಳೆ ಆರ್ಭಟ ಡ್ಯಾಂ ಗಳಿಗೆ ಭರ್ಜರಿ ನೀರು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ಕೊಡಗು ಹೊರತುಪಡಿಸಿ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಿಗೆ ನದಿ ನೀರು ನುಗ್ಗಿ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಭೂಕುಸಿತ ಕಂಡು ಬಂದಿದ್ದು, ಹಲವೆಡೆ ರಸ್ತೆ ಸಂಚಾರಕ್ಕೆ ಸಮಸ್ಯೆಯಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮತ್ತು ಸುಳ್ಯ ತಾಲೂಕು, ಉಡುಪಿಯ ಬೈಂದೂರು ವ್ಯಾಪ್ತಿಯಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆ ಕೆಲಗ್ರಾಮಗಳಲ್ಲಿ

ಮಲೆನಾಡು ಮತ್ತು ಕರಾವಳಿಯಲ್ಲಿ ಮಳೆ ಆರ್ಭಟ ಡ್ಯಾಂ ಗಳಿಗೆ ಭರ್ಜರಿ ನೀರು..! Read More »

ಕರಾವಳಿ, ಕರ್ನಾಟಕ

Infosys’ಗೆ ನೀಡಿದ್ದ 32,000 ಕೋಟಿ ರೂ. ‘GST’ ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02. ನಾಟಕೀಯ ಬೆಳವಣಿಗೆಯೊಂದರಲ್ಲಿ ಇನ್ಫೋಸಿಸ್‍ ಗೆ ನೀಡಿದ್ದ 32,403 ಕೋಟಿ ರೂಪಾಯಿಗಳ ಜಿಎಸ್ಟಿe ಡಿಮ್ಯಾಂಡ್ ನೋಟಿಸ್’ನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ಕೇಂದ್ರೀಯ ಜಿಎಸ್’ಟಿ ಗುಪ್ತಚರ ವಿಭಾಗಕ್ಕೆ ಉತ್ತರ ಕೊಡಬೇಕೆಂದು ಇನ್ಫೋಸಿಸ್’ಗೆ ಸೂಚಿಸಿದೆ. ರಾಜ್ಯ ಸರ್ಕಾರ, ತಾನು ನೀಡಿರುವ ಜಿಎಸ್ ಟಿ ನೋಟಿಸನ್ನು ಹಿಂಪಡೆದಿದೆ ಎಂದು ಖುದ್ದು ಇನ್ಫೋಸಿಸ್ ಸಂಸ್ಥೆಯೇ ಪ್ರಕಟಿಸಿದೆ. ರಾಜ್ಯ ಸರ್ಕಾರವು ನೋಟಿಸ್ ಹಿಂಪಡೆದಿದ್ದು, 32,000 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿರುವ ಆರೋಪಗಳ ಬಗ್ಗೆ ಕೇಂದ್ರೀಯ ಜಿಎಸ್ ಟಿ

Infosys’ಗೆ ನೀಡಿದ್ದ 32,000 ಕೋಟಿ ರೂ. ‘GST’ ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ Read More »

ಕರ್ನಾಟಕ

ಪತಿಯ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02. 21 ವರ್ಷದ ಪತಿಯ ಕಿರುಕುಳ ತಾಳಲಾರದೆ 11 ತಿಂಗಳ ಮಗುವಿನ 17 ವರ್ಷ ವಯಸ್ಸಿನ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಗಂಗಮ್ಮನಗುಡಿ ಪೊಲೀಸರು ಪತಿಯನ್ನು ಬಂಧಿಸಿದ್ದಾರೆ. ಸಂತ್ರಸ್ತೆ ತನ್ನ ಪತಿ ಕೌಶಿಕ್ ನನ್ನು ಮನೆಯಿಂದ ಹೊರಗೆ ಕಳುಹಿಸಿದ ನಂತರ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತಿಯ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೂವರನ್ನು ಬಲಿ ಪಡೆದಿದ್ದ ಕಾಡಾನೆ ಸೆರೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಆ.02. ಹೊರವಲಯದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಮೂರು ಜನರ ಸಾವಿಗೆ ಕಾರಣವಾಗಿದ್ದ ಮಕ್ನಾ ಕಾಡಾನೆಯನ್ನ ಕೊನೆಗೂ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದೆ. ಸೆರೆಯಾದ ಕಾಡಾನೆಯು ವಿಚಿತ್ರ ಸ್ವಭಾವ ಹೊಂದಿದ್ದು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ಭಯದ ವಾತಾವರಣವನ್ನು ಸೃಷ್ಟಿ ಮಾಡಿತ್ತು. ದುಬಾರೆ ಹಾಗೂ ಮತ್ತಿಗೋಡುವಿನಿಂದ ಕುಮ್ಕಿ ಆನೆಗಳನ್ನು ಕರೆತಂದು ಎರಡು ದಿನ ಕಾರ್ಯಾಚರಣೆ ನಡೆಸಿ ಆನೆಯನ್ನ ಸೆರೆ ಹಿಡಿಯಲಾಗಿದೆ.    

ಮೂವರನ್ನು ಬಲಿ ಪಡೆದಿದ್ದ ಕಾಡಾನೆ ಸೆರೆ Read More »

ಕರ್ನಾಟಕ

ಪ್ರಜ್ವಲ್ ರೇವಣ್ಣ ಕೇಸ್; ‘ಅಶ್ಲೀಲ ವಿಡಿಯೋಗಳು ಅಸಲಿ’ ಎಫ್ಎಸ್ಎಲ್ ವರದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ವರದಿ ಬಂದಿದೆ. ಈ ವಿಡಿಯೋಗಳು ಅಸಲಿ ಎಂದು ಎಫ್ಎಸ್ಎಲ್ ವರದಿಯಲ್ಲಿ ಬಹಿರಂಗವಾಗಿದೆ ಎನ್ನಲಾಗಿದೆ. ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದೀಗ ಬಂದಿರುವ ಎಫ್ಎಸ್ಎಲ್ ವರದಿ ಪ್ರಕಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ವಿಡಿಯೋ ನಕಲಿ ಅಲ್ಲ ಅಸಲಿ ಎಂದು ಬಹಿರಂಗವಾಗಿದೆ. ವಿಡಿಯೋಗಳು ಯಾವುದೇ ಅನಿಮೇಷನ್, ಗ್ರಾಫಿಕ್ಸ್, ಎಡಿಟ್, ಮಾರ್ಫ್ ಮಾಡಿದ್ದಲ್ಲ.

ಪ್ರಜ್ವಲ್ ರೇವಣ್ಣ ಕೇಸ್; ‘ಅಶ್ಲೀಲ ವಿಡಿಯೋಗಳು ಅಸಲಿ’ ಎಫ್ಎಸ್ಎಲ್ ವರದಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top