Bangalore

ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ ‘ಗಟ್ಟಿಮೇಳ’ ಹುಡುಗಿ..!

(ನ್ಯೂಸ್ ಕಡಬ) newskadaba.com ಅ. 11. ಇತ್ತೀಚೆಗೆ ಕಿರುತೆರೆ ಕಲಾವಿದರು ಬೆಳ್ಳಿ ತೆರೆಗೆ ಪಾದಾರ್ಪಣೆ ಮಾಡುತ್ತಿರುವುದು ಸಾಮಾನ್ಯವಾಗಿದೆ. ಇದೀಗ ಕಿರುತೆರೆ ನಟಿ ‘ಗಟ್ಟಿಮೇಳ’ ಖ್ಯಾತಿಯ ನಿಶಾ ರವಿಕೃಷ್ಣನ್​ ಸ್ಮಾಲ್​ ಸ್ಕ್ರೀನ್​ನಿಂದ ಸಿಲ್ವರ್​ ಸ್ಕ್ರೀನ್​ಗೆ ಎಂಟ್ರಿ ಕೊಟ್ಟಿದ್ದು, ಸದ್ಯ ಎಂ.ಸಿ ಚನ್ನಕೇಶವ ನಿರ್ದೇಶನದ ‘ಅಂಶು’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಮಹಿಳಾ ಪ್ರಧಾನ ಸೈಕೆಡೆಲಿಕ್​ ಥ್ರಿಲ್ಲರ್​ ಜಾನರ್​ ಚಿತ್ರವಾಗಿದೆ. ಅಂದಹಾಗೆ ಸೈಕೆಡೆಲಿಕ್​ ಎಂದರೆ ಭ್ರಮೆ ಉಂಟು ಮಾಡುವ ಅಥವಾ ಮನೋವಿಕೃತ ಎಂದರ್ಥ. ಪ್ರಸ್ತುತ ಸಮಾಜದಲ್ಲಿ ನಡೆಯುತ್ತಿರುವ ವಿಚಾರಗಳೇ ಚಿತ್ರಕ್ಕೆ ಸ್ಪೂರ್ತಿಯಾಗಿದ್ದು, […]

ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ ‘ಗಟ್ಟಿಮೇಳ’ ಹುಡುಗಿ..! Read More »

ಕರ್ನಾಟಕ, ಸಿನಿಮಾ
Crime

ಮಹಾಲಕ್ಷ್ಮೀ ಕೊಲೆ ಪ್ರಕರಣ – ಆರೋಪಿಯ ಡೆತ್ ನೋಟ್ ನಲ್ಲಿ ಕೊಲೆರಹಸ್ಯ ಬಯಲು

(ನ್ಯೂಸ್ ಕಡಬ) newskadaba.com ಸೆ. 26. ವೈಯಾಲಿಕಾವಲ್‌ನಲ್ಲಿ ಮಹಾಲಕ್ಷ್ಮಿ ಕೊಲೆಗೆ ಸಮಬಂಧಿಸಿದ ಆರೋಪಿಯೋರ್ವ ಒಡಿಶಾದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ಹತ್ಯೆಗೆ ಕಾರಣ ತಿಳಿಸಿ ಆತ ಬರೆದಿಟ್ಟಿರುವ ಡೆತ್‌ನೋಟ್ ಪೊಲೀಸರ ಕೈ ಸೇರಿದೆ. ಒಡಿಶಾದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಕೊಲೆ ಆರೋಪಿ ಮುಕ್ತಿ ರಂಜನ್ ರಾಯ್, ಆತ್ಮಹತ್ಯೆಗೂ ಮುನ್ನ ಮಹಾಲಕ್ಷ್ಮಿ ಕೊಲೆಗೆ ಕಾರಣವೇನೆಂಬುವುದನ್ನು ಡೆತ್ ನೋಟ್‌ ನಲ್ಲಿ ಬರೆದಿಟ್ಟಿದ್ದ. ಡೈರಿಯಲ್ಲಿದ್ದ ಡೆತ್‌ನೋಟ್ ನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ವರದಿಯ ಪ್ರಕಾರ ಡೆತ್ ನೋಟ್ ನಲ್ಲಿ ಸೆಪ್ಟೆಂಬರ್ 3

ಮಹಾಲಕ್ಷ್ಮೀ ಕೊಲೆ ಪ್ರಕರಣ – ಆರೋಪಿಯ ಡೆತ್ ನೋಟ್ ನಲ್ಲಿ ಕೊಲೆರಹಸ್ಯ ಬಯಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿಎಂ ವಿರುದ್ದ ಎಫ್ಐಆರ್ ದಾಖಲಿಸಿ ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ

(ನ್ಯೂಸ್ ಕಡಬ) newskadaba.com ಸೆ. 25. ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರದಂದು ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಎಫ್ ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿರುವುದಾಗಿ ತಿಳಿದುಬಂದಿದೆ. ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಲಕ್ಷ್ಮೀ ಅಯ್ಯಂಗರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ

ಸಿಎಂ ವಿರುದ್ದ ಎಫ್ಐಆರ್ ದಾಖಲಿಸಿ ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿಯಮ ಪಾಲಿಸದವರ ಲೈಸೆನ್ಸ್ ರದ್ದುಗೊಳಿಸಿ- ಸಾರಿಗೆ ಸಚಿವರಿಗೆ ಸಿಎಂ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು ಸೆ.23. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ವತಿಯಿಂದ 65 ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ ಆಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ: ನೂತನ 65 ಆಯಂಬುಲನ್ಸ್ ಗಳ ಲೋಕಾರ್ಪಣೆ’ ಮಾಡಿದರು. ಬಳಿಕ ಮಾತನಾಡಿದ ಅವರು, ಅಪಘಾತದ ಸಂದರ್ಭ ಗೋಲ್ಡರ್ ಹವರ್ ಬಹಳ ಮುಖ್ಯ. ಈ‌ ಒಂದು ಗಂಟೆಯಲ್ಲಿ ಅಗತ್ಯ ತುರ್ತು

ನಿಯಮ ಪಾಲಿಸದವರ ಲೈಸೆನ್ಸ್ ರದ್ದುಗೊಳಿಸಿ- ಸಾರಿಗೆ ಸಚಿವರಿಗೆ ಸಿಎಂ ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

BMTCಯಿಂದ ವಾಹನ ಚಾಲನಾ ತರಬೇತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21. ಬಿಎಂಟಿಸಿ ತರಬೇತಿ ಕೇಂದ್ರದಿಂದ ಸಾರ್ವಜನಿಕರಿಗೆ ಲಘು ಮತ್ತು ಘನ ವಾಹನ ಚಾಲನಾ ತರಬೇತಿ ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಲು ಕೋರಲಾಗಿದೆ. ಇದರಲ್ಲಿ 18 ವರ್ಷ ತುಂಬಿದವರಿಗೆ ಲಘು ವಾಹನ ಮತ್ತು 20 ವರ್ಷ ತುಂಬಿರುವವರಿಗೆ ಭಾರಿ ವಾಹನ ಚಾಲನಾ ತರಬೇತಿ ನೀಡಲಾಗುತ್ತದೆ. ಆಸಕ್ತರು ಜನನ ಪ್ರಮಾಣ ಪತ್ರ ಅಥವಾ SSLC ಅಂಕಪಟ್ಟಿ, ಆಧಾರ್ ಕಾರ್ಡ್, ಪಾಸ್ಪೋರ್ಟ್ ಅಳತೆಯ ಐದು ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. 26 ದಿನಗಳ ಕಾಲ ಚಾಲನಾ

BMTCಯಿಂದ ವಾಹನ ಚಾಲನಾ ತರಬೇತಿ- ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ರಸ್ತೆ ಅಪಘಾತ- ಮೇಲ್ಸೇತುವೆಯಿಂದ ಬಿದ್ದ ಕಾರು ಓರ್ವ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03. ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ನಂತರ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಮೇಲ್ಸೇತುವೆಯಿಂದ ಉರುಳಿಬಿದ್ದ ಪರಿಣಾಮ ಓರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಯಶವಂತಪುರದಲ್ಲಿ ಮಂಗಳವಾರದಂದು ನಸುಕಿನ ವೇಳೆ ನಡೆದಿದೆ. ಮೃತರನ್ನು ತಮಿಳುನಾಡು ಸೇಲಂ ಮೂಲದ ಶಬರೀಶ್(29) ಎಂದು ಗುರುತಿಸಲಾಗಿದೆ. ಗಾಯಗೊಂಡ ಶಂಕರ್ ರಾಮ್, ಅನುಶ್ರೀ, ಮಿಥುನ್ ಹಾಗೂ ಬೈಕ್ ಸವಾರ ಮಂಜುನಾಥ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ಮುಂದುವರಿಸಲಾಗಿದೆ ಎಂದು ಸಂಚಾರ ಪೊಲೀಸರು

ರಸ್ತೆ ಅಪಘಾತ- ಮೇಲ್ಸೇತುವೆಯಿಂದ ಬಿದ್ದ ಕಾರು ಓರ್ವ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದರ್ಶನ್ ಗೆ ರಾಜಾತಿಥ್ಯ ಪ್ರಕರಣ – ಕಾರಾಗೃಹ ಡಿಐಜಿ ಯಾಗಿ ದಿವ್ಯಶ್ರೀ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ನೂತನ ಕಾರಾಗೃಹ ಡಿಐಜಿಯಾಗಿ ದಿವ್ಯಶ್ರೀ ಹಾಗೂ ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕರಾಗಿ ಕೆ.ಸುರೇಶ್ ಎಂಬವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ಆರೋಪಕ್ಕೆ ಸಂಬಂಧಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಸರಕಾರ ಪರಪ್ಪನ ಅಗ್ರಹಾರದಲ್ಲಿನ ಅಧಿಕಾರಿಗಳನ್ನು ಅಮಾನತು ಮಾಡಿತ್ತು. ಇದರ ಬೆನ್ನಲ್ಲೇ ಕಾರಾಗೃಹ ಡಿಐಜಿ ಸೋಮಶೇಖರ್ ಜಾಗಕ್ಕೆ ಮೈಸೂರು ಕಾರಾಗೃಹ ಅಕಾಡೆಮಿ ಡಿಐಜಿಯಾಗಿದ್ದ ದಿವ್ಯಶ್ರೀ ಅವರನ್ನು ಹಾಗೂ ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕರಾಗಿದ್ದ

ದರ್ಶನ್ ಗೆ ರಾಜಾತಿಥ್ಯ ಪ್ರಕರಣ – ಕಾರಾಗೃಹ ಡಿಐಜಿ ಯಾಗಿ ದಿವ್ಯಶ್ರೀ ನೇಮಕ Read More »

ಕರ್ನಾಟಕ

ರೌಡಿಶೀಟರ್ ಗಳ ಮನೆ ಮೇಲೆ ದಿಢೀರ್ ಪೊಲೀಸ್ ದಾಳಿ – ಹಲವರು ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 27. ಬೆಂಗಳೂರಿನ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ರೌಡಿಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿ, ಹಲವರನ್ನು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ.   ಪೊಲೀಸರು ಇಂದು ಮುಂಜಾನೆ ಐದು ಗಂಟೆಯಿಂದ ಬೆಂಗಳೂರಿನ ವಿದ್ಯಾರಣ್ಯಪುರ ಸೇರಿದಂತೆ ಹಲವು ಕಡೆ ರೌಡಿಶೀಟರ್ ಗಳ ಮನೆ ದಾಳಿ ನಡೆಸಿರುವುದಾಗಿ ಹಲವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ. ದಾಳಿ ವೇಳೆ ರೌಡಿಶೀಟರ್ ಗಳ ಮನೆಯಲ್ಲಿ ಲಾಂಗ್ ಪತ್ತೆಯಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರೌಡಿಶೀಟರ್ ಗಳ ಮನೆ ಮೇಲೆ ದಿಢೀರ್ ಪೊಲೀಸ್ ದಾಳಿ – ಹಲವರು ವಶಕ್ಕೆ Read More »

ಕರ್ನಾಟಕ

ದರ್ಶನ್ ಗೆ ರಾಜಾತಿಥ್ಯದ ಫೊಟೋ ವೈರಲ್- ಏಳು ಅಧಿಕಾರಿಗಳು ಸಸ್ಪೆಂಡ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಿರುವ ಫೋಟೋ ವೈರಲ್ ಆಗಿರುವುದರ ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿರುವ ವಿಡಿಯೋ ತುಣುಕು ಕೂಡಾ ವೈರಲ್ ಆಗಿತ್ತು. ಈ ಬೆನ್ನಲ್ಲೇ ಜೈಲಿನ ಏಳು ಅಧಿಕಾರಿಗಳನ್ನು ಗೃಹಸಚಿವ ಜಿ. ಪರಮೇಶ್ವರ್ ಅವರು ಸಸ್ಪೆಂಡ್ ಮಾಡಿ ಆದೇಶಿಸಿರುವ ಕುರಿತು ವರದಿಯಾಗಿದೆ. ಈ ಕುರಿತು ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಏಳು

ದರ್ಶನ್ ಗೆ ರಾಜಾತಿಥ್ಯದ ಫೊಟೋ ವೈರಲ್- ಏಳು ಅಧಿಕಾರಿಗಳು ಸಸ್ಪೆಂಡ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಪಿಯುಸಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವರ್ಷದಿಂದ ಉಚಿತವಾಗಿ ನೀಟ್ ತರಬೇತಿ’- ಸಚಿವ ಮಧು ಬಂಗಾರಪ್ಪ                              

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 23.  ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ 25 ಸಾವಿರ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಉಚಿತವಾಗಿ ನೀಟ್ (NEET) ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವರ್ಷದಿಂದಲೇ ಉಚಿವಾಗಿ ನೀಟ್​ ತರಬೇತಿ ನೀಡಲಾಗುತ್ತದೆ. ತಜ್ಞರಿಂದ ರಾಜ್ಯದ 25 ಸಾವಿರ ಬಡ ಪಿಯು ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ನೀಡಲಾಗುತ್ತದೆ. ಇದಕ್ಕಾಗಿ 12 ಕೋಟಿ ರೂಪಾಯಿ

‘ಪಿಯುಸಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವರ್ಷದಿಂದ ಉಚಿತವಾಗಿ ನೀಟ್ ತರಬೇತಿ’- ಸಚಿವ ಮಧು ಬಂಗಾರಪ್ಪ                               Read More »

ಕರ್ನಾಟಕ
Scroll to Top