Bangalore

ಜೆಡಿಎಸ್ ಅಭ್ಯರ್ಥಿ ಬೆಂಬಲಿಗ ಹಾಗೂ ಕಾಂಗ್ರೆಸ್ ಅಭ್ಯರ್ಥಿ ನಡುವೆ  ಮಾತಿನ ಚಕಮಕಿ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.10 ಆರ್​ಟಿ ನಗರದ ಪ್ರೆಸಿಡೆನ್ಸಿ ಶಾಲೆಯ ಮತಗಟ್ಟೆ ಬಳಿ ಜೆಡಿಎಸ್ ಅಭ್ಯರ್ಥಿ ಬೆಂಬಲಿಗ ಹಾಗೂ ಕಾಂಗ್ರೆಸ್ ಅಭ್ಯರ್ಥಿ ನಡುವೆ ಮಾತಿನ ಚಕಮಕಿ ನಡೆದಿದೆ.ಮತಗಟ್ಟೆ ಮುಂದೆ ನಿಂತ ಮತದಾರರ ಬಳಿ ಜೆಡಿಎಸ್​ಗೆ ಬೆಂಬಲ ನೀಡುವಂತೆ ಜೆಡಿಎಸ್​ ಅಭ್ಯರ್ಥಿಯ ಬೆಂಬಲಿಗರೊಬ್ಬರು ಮನವಿ ಮಾಡಿದ್ದಾರೆ. ಜೆಡಿಎಸ್​ ಬೆಂಬಲಿಗ ಜನರಲ್ಲಿ ಮನವಿ ಮಾಡಿದ್ದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಭೈರತಿ ಸುರೇಶ್ ರೊಚ್ಚಿಗೆದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಭೈರತಿ ಸುರೇಶ್, ‘ನಿಮಗೆ ವೋಟು ಇಲ್ಲದಿದ್ರೂ ಮತಗಟ್ಟೆಗೆ ಪ್ರವೇಶಿಸಿದ್ದೀರಾ. ಅದರ ಜತೆಗೆ ಇಲ್ಲಿ ಮತ ಕೇಳಿ ಕಾನುನು […]

ಜೆಡಿಎಸ್ ಅಭ್ಯರ್ಥಿ ಬೆಂಬಲಿಗ ಹಾಗೂ ಕಾಂಗ್ರೆಸ್ ಅಭ್ಯರ್ಥಿ ನಡುವೆ  ಮಾತಿನ ಚಕಮಕಿ.! Read More »

ಕರ್ನಾಟಕ

ಮತದಾರರಿಗೆ ಹಣ ಹಂಚುತ್ತಿದ್ದ 13 ಮಂದಿ ಯುವಕರು  ಪೊಲೀಸರ ವಶಕ್ಕೆ…!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.10  ಸುಬ್ರಹ್ಮಣ್ಯಪುರ ಠಾಣೆ ವ್ಯಾಪ್ತಿಯ ಮರವೊಂದರ ಬುಡದಲ್ಲಿ ಬಿಸಾಕಿದ್ದ ₹ 4.95 ಲಕ್ಷ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದು, ಮತದಾರರಿಗೆ ಆಮಿಷವೊಡ್ಡುತ್ತಿದ್ದ ಆರೋಪದಡಿ 13 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ‘ತಮಿಳುನಾಡಿನಿಂದ ನಗರಕ್ಕೆ ಬಂದಿದ್ದ ಕೆಲ ಯುವಕರು, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕೆಲ ಮನೆಗಳಿಗೆ ತೆರಳಿ ಹಣ ಹಂಚುತ್ತಿದ್ದರು. ಮಾಹಿತಿ ಬರುತ್ತಿದ್ದಂತೆ ಚುನಾವಣಾಧಿಕಾರಿ ತಂಡದ ಜೊತೆ ಜಂಟಿ ಕಾರ್ಯಾಚರಣೆ ನಡೆಸಲಾಯಿತು’ ಎಂದು ಪೊಲೀಸ್ ಮೂಲಗಳು ಹೇಳಿವೆ.’ಹಣ ಹಂಚುತ್ತಿದ್ದ 13 ಮಂದಿ ಕೈಗೆ ಸಿಕ್ಕಿಬಿದ್ದಿದ್ದು, ಕೆಲವರು

ಮತದಾರರಿಗೆ ಹಣ ಹಂಚುತ್ತಿದ್ದ 13 ಮಂದಿ ಯುವಕರು  ಪೊಲೀಸರ ವಶಕ್ಕೆ…! Read More »

ಕರ್ನಾಟಕ

ಗಡಿಭಾಗಗಳಲ್ಲಿ ಪೊಲೀಸರಿಂದ ಕಟ್ಟೆಚ್ಚರ ➤ ನಕಲಿ ಮತದಾನಕ್ಕೆ ಅವಕಾಶವಿಲ್ಲ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.10. ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದೆ. ಇಂದು ರಾಜ್ಯದ ಗಡಿ ಭಾಗಗಳಲ್ಲಿ ಹೆಚ್ಚಿನ ಭದ್ರತೆ ವಹಿಸಲಾಗಿದೆ. ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಅವರು ಚುನಾವಣಾ ಭದ್ರತೆ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯದ ಎಲ್ಲ ಚೆಕ್ ಪೋಸ್ಟ್ಗಳಲ್ಲಿ ಭಾರಿ ಭದ್ರತೆ ಇರಲಿದ್ದು ಎಲ್ಲ ಎಸ್‌ಪಿ, ಕಮಿಷನರ್ಗಳು ರಾತ್ರಿ ಗಸ್ತು ತಿರುಗಲಿದ್ದಾರೆ. ಹೊರ ರಾಜ್ಯಗಳಿಂದ ರಾಜ್ಯ ಪ್ರವೇಶಿಸುವವರನ್ನು ಪರಿಶೀಲನೆ ನಡೆಸಿ ಪ್ರವೇಶಕ್ಕೆ ಅನುಮತಿ ನೀಡಲಾಗುವುದು. ವಿನಾಕಾರಣ ಬೇರೆ

ಗಡಿಭಾಗಗಳಲ್ಲಿ ಪೊಲೀಸರಿಂದ ಕಟ್ಟೆಚ್ಚರ ➤ ನಕಲಿ ಮತದಾನಕ್ಕೆ ಅವಕಾಶವಿಲ್ಲ Read More »

ಕರ್ನಾಟಕ

ಜೆಡಿಎಸ್ ಅಭ್ಯರ್ಥಿ ಜಿ.ರಘು ಆಚಾರ್ ನಿವಾಸದ ಮೇಲೆ ಐಟಿ ದಾಳಿ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.10 ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಿ.ರಘು ಆಚಾರ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿತ್ರದುರ್ಗ ನಗರದ ಹೊರವಲಯದ ಬೆಂಗಳೂರು ಮಾರ್ಗದ ಎನ್.ಹೆಚ್. 4 ಬಳಿಯ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ. ದಾಳಿ ಸಂದರ್ಭದಲ್ಲಿ ಮತದಾರರಿಗೆ ಹಂಚಲು ಪ್ಯಾಕ್ ಮಾಡಿ ಇಟ್ಟಿದ್ದ 50 ಲಕ್ಷ ರೂ.ಗಳು ಹಾಗೂ 8.83 ಲಕ್ಷ ಮೌಲ್ಯದ ಬಿಡಿಬಿಡಿ ನೋಟುಗಳು ಸೇರಿದಂತೆ ಒಟ್ಟು 58,83,000 ರೂ. ನಗದು ಹಣ ವಶಪಡಿಸಿಕೊಳ್ಳಲಾಗಿದೆ. 239 ಲೀಟರ್ ನಷ್ಟು ಮದ್ಯದ ಬಾಟಲ್

ಜೆಡಿಎಸ್ ಅಭ್ಯರ್ಥಿ ಜಿ.ರಘು ಆಚಾರ್ ನಿವಾಸದ ಮೇಲೆ ಐಟಿ ದಾಳಿ..! Read More »

ಕರ್ನಾಟಕ

ಬಸ್ಸು ಮತ್ತು ಗೋಡೆ ಮಧ್ಯೆ ಸಿಲುಕಿ ನಿರ್ವಾಹಕ ಮೃತ್ಯು..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.10 ಬಿಎಂಟಿಸಿ ಯಲಹಂಕ ಡಿಪೊ- 30ರಲ್ಲಿ ಎಲೆಕ್ಟ್ರಿಕ್ ಬಸ್ ಗೋಡೆಗೆ ಡಿಕ್ಕಿ ಹೊಡೆದಿದ್ದು, ಬಸ್ಸು ಮತ್ತು ಗೋಡೆ ಮಧ್ಯೆ ಸಿಲುಕಿ ನಿರ್ವಾಹಕ ಸೋಮಶೇಖರಯ್ಯ (59) ಮೃತಪಟ್ಟಿದ್ದಾರೆ. ಕರ್ತವ್ಯ ಮುಗಿಸಿ ಡಿಪೊಗೆ ಬಂದಿದ್ದ ಅವರು, ಕಚೇರಿಯಲ್ಲಿ ಟಿಕೆಟ್ ಹಣ ಜಮೆ ಮಾಡಿ ವಾಪಸು ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸೋಮಶೇಖರಯ್ಯ ಅವರಿಗೆ ಗುದ್ದಿಕೊಂಡು ಮುಂದಕ್ಕೆ ಹೋಗಿದ್ದ ಬಸ್‌, ಗೋಡೆಗೆ ಡಿಕ್ಕಿ ಹೊಡೆದಿತ್ತು. ಬಸ್‌ ಹಾಗೂ ಗೋಡೆ ನಡುವೆ ಸಿಲುಕಿ ಸೋಮಶೇಖರಯ್ ದೇಹ ಜಜ್ಜಿಯಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು

ಬಸ್ಸು ಮತ್ತು ಗೋಡೆ ಮಧ್ಯೆ ಸಿಲುಕಿ ನಿರ್ವಾಹಕ ಮೃತ್ಯು..! Read More »

ಕರ್ನಾಟಕ

ನೀತಿ ಸಂಹಿತೆ ಜಾರಿಯಾದ ಬಳಿಕ ₹ 147.46 ಕೋಟಿ ನಗದು ವಶ‍ಪಡಿಸಿಕೊಂಡ ಚುನಾವಣಾ ಆಯೋಗ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.09. ಮಾರ್ಚ್‌.29 ರಂದು ಜಾರಿಯಾದ ಚುನಾವಣೆ ನೀತಿ ಸಂಹಿತೆ ಆರಂಭವಾದ ಬಳಿಕ ₹ 147.46 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. 2018ರ ಚುನಾವಣೆಗೆ ಹೋಲಿಕೆ ಮಾಡಿದರೆ ಇದು ಶೇ 100 ರಷ್ಟು ಹೆಚ್ಚು. ಸುಮಾರು ₹ 100 ಕೋಟಿ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ವಶಪಡಿಸಿಕೊಳ್ಳಲಾಗಿದ್ದು, ₹ 24.22 ಕೋಟಿ ಮೌಲ್ಯದಷ್ಟು ಮತದಾರರಿಗೆ ವಿತರಿಸಲು ಸೀರೆ, ಕುಕ್ಕರ್‌ ಹಾಗೂ ಇನ್ನಿತರ ವಸ್ತುಗಳನ್ನು ಮಾಡಲಾಗಿದೆ.

ನೀತಿ ಸಂಹಿತೆ ಜಾರಿಯಾದ ಬಳಿಕ ₹ 147.46 ಕೋಟಿ ನಗದು ವಶ‍ಪಡಿಸಿಕೊಂಡ ಚುನಾವಣಾ ಆಯೋಗ Read More »

ಕರ್ನಾಟಕ

ರಾಜ್ಯ ವಿಧಾನ ಸಭೆಯ ಚುನಾವಣೆಯ ಹಿನ್ನಲೆ ➤ಪ್ರಸಿದ್ಧ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.09 ರಾಜ್ಯ ವಿಧಾನ ಸಭೆಯ ಚುನಾವಣೆಯ ಹಿನ್ನಲೆಯಲ್ಲಿ ಮೇ 10ರಂದು ಮತದಾನ ಇರುವುದರಿಂದ ಕೆಲ ಪ್ರಮುಖ ಪ್ರವಾಸಿ ತಾಣಗಳಿಗೆ ಮತದಾನದ ದಿನದಂದು ನಿರ್ಬಂಧ ಹೇರಲಾಗಿದೆ. ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣ ವಿಶ್ವ ವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಿ ಜಿಲ್ಲಾಡಳಿತ ಈಗಾಗಲೇ ಆದೇಶ ಹೊರಡಿಸಿದೆ.ಮತದಾನದಿಂದ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರದೆ ಇದ್ದರೆ ಬರುವ ಪ್ರವಾಸಿಗರಿಗಾಗಿ ನಿರ್ವಹಣಾ ಪ್ರಾಧಿಕಾರ ಸಿಬ್ಬಂದಿ ಕರ್ತವ್ಯಪಾಲನೆ ಮಾಡಬೇಕಾಗುತ್ತದೆ.

ರಾಜ್ಯ ವಿಧಾನ ಸಭೆಯ ಚುನಾವಣೆಯ ಹಿನ್ನಲೆ ➤ಪ್ರಸಿದ್ಧ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ..! Read More »

ಕರ್ನಾಟಕ

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ➤ ನಾಳೆ ರೇಷ್ಮೆಗೂಡು ಮಾರುಕಟ್ಟೆ ವಹಿವಾಟು ಸ್ಥಗಿತ..!*  

(ನ್ಯೂಸ್ ಕಡಬ)Newskadaba.com ದೇವನಹಳ್ಳಿ,ಮೇ.09 ರಾಜ್ಯ ವಿಧಾನಸಭೆ ಚುನಾವಣೆಗೆ ಮೇ10 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಇಲ್ಲಿಯ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ವಹಿವಾಟು ಇರುವುದಿಲ್ಲ.’ಮೇ 9 ರಂದು ಸಂಜೆಯಿಂದಲೇ ಯಾರೂ ಮಾರುಕಟ್ಟೆಗೆ ರೇಷ್ಮೆಗೂಡು ತರಬಾರದು. ಮೇ 10 ರಂದು ಸಂಜೆ ಗೂಡು ತರಬಹುದು. ಮೇ11 ರಂದು ಬೆಳಿಗ್ಗೆ ಎಂದಿನಂತೆ ಹರಾಜು ಪ್ರಕ್ರಿಯೆ ಮತ್ತು ವಹಿವಾಟು ನಡೆಯಲಿದೆ’ ಎಂದು ಮಾರುಕಟ್ಟೆಯ ಉಪ ನಿರ್ದೆಶಕ ಡಾ. ಎಸ್.ಸುಂದರ್ ರಾಜ್ ತಿಳಿಸಿದ್ದಾರೆ.          

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ➤ ನಾಳೆ ರೇಷ್ಮೆಗೂಡು ಮಾರುಕಟ್ಟೆ ವಹಿವಾಟು ಸ್ಥಗಿತ..!*   Read More »

ಕರ್ನಾಟಕ

ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಳೆ ಮತದಾನ ➤ ‘ಮೆಟ್ರೋ ಸಂಚಾರ’ದ ಅವಧಿ ವಿಸ್ತರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.09. ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Election 2023) ಮತದಾನ ನಡೆಯಲಿದೆ. ಅದು ಮತದಾನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಮೆಟ್ರೋ ಸಂಚಾರವನ್ನು(Metro Service) ವಿಸ್ತರಣೆ ಮಾಡಿದೆ. ಈ ಕುರಿತಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMTC)ವು ದಿನಾಂಕ 10-05-2023ರ ನಡೆಯಲಿರುವ ಕರ್ನಾಟಕ ವಿಧಾನಸಭಾ ಚನಾವಣೆಯ ಪ್ರಯುಕ್ತ ನಿಗಮವು ಮೆಟ್ರೋ ರೈಲು ಸೇವೆಗಳನ್ನು (Namma METRO Service) ಮಧ್ಯರಾತ್ರಿಯವರೆಗೆ ವಿಸ್ತರಿಸಲಾಗಿದೆ ಎಂದಿದೆ.  

ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಳೆ ಮತದಾನ ➤ ‘ಮೆಟ್ರೋ ಸಂಚಾರ’ದ ಅವಧಿ ವಿಸ್ತರಣೆ Read More »

ಕರ್ನಾಟಕ

ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರಿಂದ 36 ಕೆಜಿ ಗಾಂಜಾ ವಶಕ್ಕೆ..!➤ ಪ್ರಕರಣ ದಾಖಲು

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.09 ಕೆಎಸ್ಆರ್ ರೈಲು ನಿಲ್ದಾಣದಲ್ಲಿದ್ದ ಪ್ರಯಾಣಿಕರಿಂದ ರೂ.36,30,000 ಮೌಲ್ಯದ 36 ಕೆಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಇಬ್ಬರು ಪ್ರಯಾಣಿಕರಿಂದ ಗಾಂಜಾವನ್ನು ವಶಕ್ಕೆ ಪಡೆಯಲಾಗಿದ್ದು, ಇಬ್ಬ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಸೆಕ್ಷನ್ 20(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ನಿಯಮ ಉಲ್ಲಂಘನೆಯಾಗದಂತೆ ಖಚಿತಪಡಿಸಿಕೊಳ್ಳಲು ರೈಲ್ವೇ ರಕ್ಷಣಾ ಪಡೆ ಮತ್ತು ಸರ್ಕಾರಿ ರೈಲ್ವೆ ಪೊಲೀಸರು ಜಂಟಿಯಾಗಿ ಈ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಇದರಂತೆ ರೈಲುಗಳು ಮತ್ತು ಪ್ಲಾಟ್ಫಾರ್ಮ್ಗಳಲ್ಲಿ ಪ್ರತೀನಿತ್ಯ ತೀವ್ರ ತಪಾಸಣೆ

ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರಿಂದ 36 ಕೆಜಿ ಗಾಂಜಾ ವಶಕ್ಕೆ..!➤ ಪ್ರಕರಣ ದಾಖಲು Read More »

ಕರ್ನಾಟಕ
Scroll to Top