Bangalore

ಸರ್ಕಾರಿ ಆಸ್ಪತ್ರೆಯ ಡ್ಯೂಟಿ ರೂಂನಲ್ಲೇ ವೈದ್ಯ ಆತ್ಮಹತ್ಯೆ    ➤ ಸ್ಥಳದಲ್ಲಿ ಡೆತ್ ನೋಟು ಪತ್ತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.24. ಸರ್ಕಾರಿ ಆಸ್ಪತ್ರೆಯಲ್ಲೇ ವೈದ್ಯರೊಬ್ಬರು ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ತಿಲಕ್​ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡಾ.ಎಸ್.ರೇಣುಕಾನಂದ (43) ಆತ್ಮಹತ್ಯೆ ಮಾಡಿಕೊಂಡ ವೈದ್ಯರು. ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿದ್ದ ರೇಣುಕಾನಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತು ಅವರು ಆಸ್ಪತ್ರೆಯ ಡ್ಯೂಟಿ ರೂಮ್​ನಲ್ಲೇ ತಾಯಿಯ ಸೀರೆಯಿಂದ ಫ್ಯಾನ್​ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  

ಸರ್ಕಾರಿ ಆಸ್ಪತ್ರೆಯ ಡ್ಯೂಟಿ ರೂಂನಲ್ಲೇ ವೈದ್ಯ ಆತ್ಮಹತ್ಯೆ    ➤ ಸ್ಥಳದಲ್ಲಿ ಡೆತ್ ನೋಟು ಪತ್ತೆ Read More »

ಕರ್ನಾಟಕ

ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.24 ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಯಲಹಂಕದಲ್ಲಿರುವ ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ನಿವಾಸದಲ್ಲಿ ಪರಿಶೀಲನೆ ನಡೆಸಲಾಗಿದೆ.ಆದಾಯ ಮೀರಿ ಅಕ್ರಮ ಆಸ್ತಿಗಳಿಕೆ ಆರೋಪದ ದೂರು ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.      

ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು.! Read More »

ಕರ್ನಾಟಕ

ಸಮಸ್ಯೆ ಹೇಳಿಕೊಂಡಿದಕ್ಕೆ ಯುವಕನಿಗೆ ಕಪಾಳಮೋಕ್ಷ ಮಾಡಿದ ಕಾಂಗ್ರೆಸ್ ನಾಯಕ.!   ➤ಎಂ.ಬಿ.ಪಾಟೀಲ್..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.24 ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್ ಅವರು ವ್ಯಕ್ತಿಯೊಬ್ಬನಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋವನ್ನು ಬಿಜೆಪಿ ಶೇರ್ ಮಾಡಿದೆ. ಕಾಂಗ್ರೆಸ್ ಗೂಂಡಾಗಿರಿಯನ್ನು ಟೀಕಿಸಿರುವ ಬಿಜೆಪಿ, ತನ್ನ ಕುಂದುಕೊರತೆಗಳನ್ನು ಹಂಚಿಕೊಂಡಿದ್ದಕ್ಕಾಗಿ ಯುವಕನ ಮೇಲೆ ದೈಹಿಕ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದೆ. ಗೂಂಡಾಗಿರಿ ಕಾಂಗ್ರೆಸ್ನ ಡಿಎನ್‌ಎಯಲ್ಲಿದೆ. ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್ ತಮ್ಮ ಕುಂದುಕೊರತೆಗಳನ್ನು ಹಂಚಿಕೊಂಡಿದ್ದಕ್ಕಾಗಿ ಯುವಕನ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ.    

ಸಮಸ್ಯೆ ಹೇಳಿಕೊಂಡಿದಕ್ಕೆ ಯುವಕನಿಗೆ ಕಪಾಳಮೋಕ್ಷ ಮಾಡಿದ ಕಾಂಗ್ರೆಸ್ ನಾಯಕ.!   ➤ಎಂ.ಬಿ.ಪಾಟೀಲ್..! Read More »

ಕರ್ನಾಟಕ

ಏ.24(ಇಂದು)  ನಾಮಪತ್ರ  ಹಿಂಪಡೆಯಲು ಕೊನೆ ದಿನ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.24 ರಾಜ್ಯ ವಿಧಾನಸಭೆ ಚುನಾವಣೆ ನಾಮಪತ್ರ ವಾಪಸ್ ಪಡೆಯಲು ಇಂದೇ ಕೊನೆ ದಿನವಾಗಿದೆ. 3632 ಮಂದಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. 502 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕರಿಸಲಾಗಿದೆ. 3130 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ. ಜೆಡಿಎಸ್ 211 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಕೆಲವೆಡೆ ಬಂಡಾಯ ಅಭ್ಯರ್ಥಿಗಳ ಮನವೊಲಿಕೆ ಯಶಸ್ವಿಯಾಗಿದ್ದು, ನಾಮಪತ್ರ ವಾಪಸ್ ಪಡೆಯಲು ಒಪ್ಪಿಕೊಂಡಿದ್ದಾರೆ. ಇಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ.      

ಏ.24(ಇಂದು)  ನಾಮಪತ್ರ  ಹಿಂಪಡೆಯಲು ಕೊನೆ ದಿನ.! Read More »

ಕರ್ನಾಟಕ

‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್..! ➤ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ..!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.23   ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ.10ರಂದು ಮತದಾನ ನಡೆಯಲಿದೆ. ಮೇ.13ರಂದು ಮತಏಣಿಕೆ ನಡೆದು, ಫಲಿತಾಂಶ ಘೋಷಣೆಯಾಗಲಿದೆ. ಈ ಹಿನ್ನಲೆಯಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧಿಸಲಾಗುತ್ತಿದೆ. ಈ ಕುರಿತಂತೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಮತದಾನದ ಪ್ರಯುಕ್ತ ದಿನಾಂಕ 08-05-2023ರ ಸಂಜೆ 5 ಗಂಟೆಯಿಂದ, 10-05-2023ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಏಣಿಕೆ ಪ್ರಯುಕ್ತ ದಿನಾಂಕ 13-05-2023ರಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12ಗಂಟೆಯವೆರೆಗ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್..! ➤ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ..!   Read More »

ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ..!   ➤ ಅದೃಷ್ಟವಶಾತ್‌ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಪಾಯದಿಂದ ಪಾರು.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.23  ಕೆಎಸ್‌ಆರ್‌ಟಿಸಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಯಾಗಿದ್ದು, ಅದೃಷ್ಟವಶಾತ್‌ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ದುರಂತ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಗೌರಿಬಿದನೂರು ರಸ್ತೆ ಮಾಕಳಿ ತಿರುವಿನಲ್ಲಿ ನಡೆಸಿದೆ ಎಂದು ವರದಿಯಾಗಿದೆ. ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದಾಗ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾಗಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.ಹತ್ತಿರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.    

ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ..!   ➤ ಅದೃಷ್ಟವಶಾತ್‌ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಪಾಯದಿಂದ ಪಾರು.! Read More »

ಕರ್ನಾಟಕ

ಇಬ್ಬರು ‘IPS’ ಅಧಿಕಾರಿಗಳ ವರ್ಗಾವಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.23. ಚುನಾವಣೆ ಹೊತ್ತಲ್ಲಿ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಮತ್ತು ದಾವಣಗೆರೆ ಎಸ್ಪಿ ರಿಷ್ಯಾಂತ್ ವರ್ಗಾವಣೆ ಮಾಡಲಾಗಿದೆ. ವೈಟ್ ಫೀಲ್ಡ್ ವಿಭಾಗಕ್ಕೆ ಧರ್ಮೇಂದ್ರ ಕುಮಾರ್ ಮೀನಾ ನೂತನ ಡಿಸಿಪಿ. ಅರೂಣ್ ಕೆ ದಾವಣಗೆರೆ ನೂತನ ಡಿಸಿಪಿಯಾಗಿ ನೇಮಕವಾಗಿದ್ದಾರೆ.  

ಇಬ್ಬರು ‘IPS’ ಅಧಿಕಾರಿಗಳ ವರ್ಗಾವಣೆ Read More »

ಕರ್ನಾಟಕ

ಇಬ್ಬರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.23 ವಿಧಾನಸಭಾ ಚುನಾವಣೆ ಹೊತ್ತಲ್ಲೇ ರಾಜ್ಯ ಸರ್ಕಾರ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರಿನ ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಹಾಗೂ ದಾವಣಗೆರೆ ಎಸ್.ಪಿ. ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.ವೈಟ್ ಫೀಲ್ಡ್ ವಿಭಾಗಕ್ಕೆ ಧರ್ಮೇಂದ್ರ ಕುಮಾರ್ ಮೀನಾ ನೂತನ ಡಿಸಿಪಿಯಾಗಿ ನೇಮಕಗೊಂಡಿದ್ದಾರೆ. ದಾವಣಗೆರೆ ಎಸ್ ಪಿಯಾಗಿ ಅರುಣ್ ಕೆ ನೇಮಕಗೊಂಡಿದ್ದಾರೆ.    

ಇಬ್ಬರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ..! Read More »

ಕರ್ನಾಟಕ

ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೆ, ಮುಸ್ಲಿಮರಿಗೆ ಮತ್ತೆ ಮೀಸಲಾತಿ..! ➤ಜತೆಗೆ  ರಾಜ್ಯದಲ್ಲಿ Amul ಹಾಲಿಗೆ ಕಡಿವಾಣ.!

(ನ್ಯೂಸ್ ಕಡಬ)Newskadaba.com ಬೆಂಗಳೂರು, ಏ.23 ಕರ್ನಾಟಕದಲ್ಲಿ ನಾನು ಮುಖ್ಯಮಂತ್ರಿಯಾದರೆ ಮುಸ್ಲಿಮರಿಗೆ ಮತ್ತೆ ಶೇ.4ರ ಮೀಸಲಾತಿ ನೀಡುತ್ತೇನೆ. ಜತೆಗೆ ರಾಜ್ಯದಲ್ಲಿ ಅಮುಲ್‌ ಹಾಲು ಖರೀದಿಸದಂತೆ ಆದೇಶಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಮುಸ್ಲಿಮರ ಶೇ.4 ಮೀಸಲಾತಿಯನ್ನು ರದ್ದುಗೊಳಿಸಿ, ಅದನ್ನು ಒಕ್ಕಲಿಗರು ಮತ್ತು ಲಿಂಗಾಯತರಿಗೆ ಹಂಚಿದೆ. ಈ ಹಂಚಿಕೆ ಲಿಂಗಾಯತರು ಮತ್ತು ಒಕ್ಕಲಿಗರ ಬೇಡಿಕೆಯಾಗಿತ್ತಾ? ನಾನು ಮುಖ್ಯಮಂತ್ರಿಯಾದರೆ ಮುಸ್ಲಿಮರ ಮೀಸಲಾತಿಯನ್ನು ವಾಪಸ್‌ ತರುತ್ತೇನೆ. ಮಾತ್ರವಲ್ಲದೆ, ಒಕ್ಕಲಿಗರು ಹಾಗೂ ಲಿಂಗಾಯತರಿಗೂ ತೊಂದರೆಯಾಗದಂತೆ ನೋಡಿಕೊಳ್ಳುತ್ತೇನೆ ಎಂದಿದ್ದಾರೆ.  

ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೆ, ಮುಸ್ಲಿಮರಿಗೆ ಮತ್ತೆ ಮೀಸಲಾತಿ..! ➤ಜತೆಗೆ  ರಾಜ್ಯದಲ್ಲಿ Amul ಹಾಲಿಗೆ ಕಡಿವಾಣ.! Read More »

ಕರ್ನಾಟಕ

ಡಿಸ್ಕೌಂಟ್ ‘ಸೇಲ್’ನಲ್ಲಿ ಸೀರೆಗಾಗಿ ಮಹಿಳೆಯರ ಭಾರಿ ರಂಪಾಟ..!

(ನ್ಯೂಸ್ ಕಡಬ)Newskadaba.com ಬೆಂಗಳೂರು, ಏ.23 ಸೀರೆಗಳು ಅಂದ್ರೆ ನಾರಿಯರಿಗೆ ಪಂಚಪ್ರಾಣ. ತಮಗೆ ಇಷ್ಟವಾದ ಸೀರೆಗಳ ಸೆಲೆಕ್ಷನ್‌ಗೆ ಹೆಂಗಳೆಯರು ಸಿಕ್ಕಾಪಟ್ಟೆ ಶಾಪಿಂಗ್‌ ಮಾಡ್ತಾರೆ. ಅದೇ ಸೀರೆಗಳು ಕಡಿಮೆ ದರದಲ್ಲಿ ಸಿಕ್ರೆ ಸುಮ್ನೆ ಬಿಡ್ತಾರಾ. ನಾ ಮುಂದು ತಾ ಮುಂದು ಅಂತಾ ಮುಗಿ ಬೀಳ್ತಾರೆ. ಹೀಗೆ ನಡೆದ ಡಿಸ್ಕೌಂಟ್‌ ಸೇಲ್‌ನಲ್ಲಿ ಇಬ್ಬರು ಮಹಿಳೆಯರು ಜಡೆ ಹಿಡಿದು ಕಿತ್ತಾಡಿಕೊಂಡಿದ್ದಾರೆ.ಒಬ್ಬರ ಜಡೆ ಮತ್ತೊಬ್ಬರು ಹಿಡಿದು ರಂಪಾಟ ನಡೆಸಿರುವ ಘಟನೆ ಮಲ್ಲೇಶ್ವರಂನ KSIC ಡಿಸ್ಕೌಂಟ್ ಸೇಲ್‌ನಲ್ಲಿ ನಡೆದಿದೆ.    

ಡಿಸ್ಕೌಂಟ್ ‘ಸೇಲ್’ನಲ್ಲಿ ಸೀರೆಗಾಗಿ ಮಹಿಳೆಯರ ಭಾರಿ ರಂಪಾಟ..! Read More »

ಕರ್ನಾಟಕ
Scroll to Top