Bangalore

ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ ಉಂಟಾಗಿದೆ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.23 ನಮ್ಮ ಮೆಟ್ರೋ ಹಸಿರು ಮಾರ್ಗದ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಈ ತೊಂದರೆ ಉಂಟಾಗಿದೆ. 7 ಗಂಟೆಗೆ ಆರಂಭವಾಗಬೇಕಿದ್ದ ರೈಲುಗಳ ಸಂಚಾರ ತಡವಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ನೇರಳೆ ಮಾರ್ಗದಲ್ಲಿ ರೈಲುಗಳು ಎಂದಿನಂತೆ ಸಂಚಾರ ನಡೆಸುತ್ತಿವೆ.  

ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ ಉಂಟಾಗಿದೆ..! Read More »

ಕರ್ನಾಟಕ

ಅನಾರೋಗ್ಯಕ್ಕೆ ತುತ್ತಾದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ…!  ➤ ಆಸ್ಪತ್ರೆಗೆ ದಾಖಲು..!

ಸ್ ಕಡಬ)Newskadaba.com ಬೆಂಗಳೂರು,ಏ.23 ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದ ಪರ ಪ್ರಚಾರದಲ್ಲಿ ನಿರತರಾಗಿದ್ದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚುನಾವಣೆ ನಿಮಿತ್ತ ನಿರಂತರ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದ ಕಾರಣ, ಆಯಾಸದಿಂದಾಗಿ ಜ್ವರ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ವಿಶ್ರಾಂತಿ ತೆಗೆದುಕೊಂಡು ಬಳಿಕ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗುವುದಾಗಿ ಮಾಹಿತಿ ನೀಡಿದ್ದಾರೆ.  

ಅನಾರೋಗ್ಯಕ್ಕೆ ತುತ್ತಾದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ…!  ➤ ಆಸ್ಪತ್ರೆಗೆ ದಾಖಲು..! Read More »

ಕರ್ನಾಟಕ

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ.!   ➤ ಐವರು ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.23ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಈ ದುರಂತ ಸಂಭವಿಸಿದೆ. ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಇನ್ನೊರ್ವ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.    

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ.!   ➤ ಐವರು ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ

ಹೈಕೋರ್ಟ್, ಸುಪ್ರೀಂಕೋರ್ಟ್‌ನ ತೀರ್ಪುಗಳು ಕನ್ನಡದಲ್ಲಿ ಪ್ರಕಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.21. ನ್ಯಾಯಾಂಗದ ಆದೇಶಗಳನ್ನು ಸಾಮಾನ್ಯ ಜನ ಮತ್ತು ದಾವೆದಾರರಿಗೆ ಅರ್ಥೈಸುವುದಕ್ಕಾಗಿ ಸುಪ್ರೀಂ ಕೋರ್ಟ್ ಮತ್ತು ಕರ್ನಾಟಕ ಹೈಕೋರ್ಟ್‌ ನ ಒಟ್ಟು 197 ಪ್ರಮುಖ ತೀರ್ಪುಗಳನ್ನು ಕನ್ನಡೀಕರಿಸಿ ಹೈಕೋರ್ಟ್ ವೆಬ್ಸೈಟ್‌ನಲ್ಲಿ ಪ್ರಕಟಿಸಿದೆ. ಕೇರಳ, ಗುಜರಾತ್ ಮತ್ತು ಮಹಾರಾಷ್ಟ್ರ ಹೈಕೋರ್ಟ್‌ಗಳು ಈಗಾಗಲೇ ಸ್ಥಳೀಯ ಭಾಷೆಯಲ್ಲಿ ತೀರ್ಪುಗಳನ್ನು ಪ್ರಕಟಿಸಲು ಆರಂಭಿಸಿವೆ. ಆದರೆ, ಅತಿ ಹೆಚ್ಚು ತೀರ್ಪುಗಳನ್ನು ಕನ್ನಡದಲ್ಲಿ ಪ್ರಕಟಿಸಿರುವುದು ಕರ್ನಾಟಕ ಹೈಕೋರ್ಟ್ ಮಾತ್ರ ಎಂದು ತಿಳಿದು ಬಂದಿದೆ.

ಹೈಕೋರ್ಟ್, ಸುಪ್ರೀಂಕೋರ್ಟ್‌ನ ತೀರ್ಪುಗಳು ಕನ್ನಡದಲ್ಲಿ ಪ್ರಕಟ Read More »

ಕರ್ನಾಟಕ

ರಾಮಕಥಾ ಗಾಯಕಿ ಅತ್ಯಾಚಾರ ಪ್ರಕರಣ       ➤ ಪ್ರಭಾಕರ ಭಟ್ ವಿರುದ್ಧದ ದೋಷಾರೋಪ ಪಟ್ಟಿ ರದ್ದು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.21. ರಾಮಕಥಾ ಗಾಯಕಿ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ರಾಘವೇಶ್ವರ ಭಾರತೀ ಸ್ವಾಮೀಜಿ ಪರ ವಹಿಸುವಂತೆ ಸಂತ್ರಸ್ತೆಯ ಪತಿಯ ಸಹೋದರ ಶ್ಯಾಮ್ ಪ್ರಸಾದ್ ಶಾಸ್ತ್ರಿಗೆ ಒತ್ತಡ ಹೇರಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಪ್ರಕರಣದಲ್ಲಿ ಆರೋಪಿತರ ವಿರುದ್ಧದ ದೋಷಾರೋಪ ಪಟ್ಟಿಯನ್ನು ಹೈಕೋರ್ಟ್​ ರದ್ದುಪಡಿಸಿದೆ. ಈ ಪ್ರಕರಣದಲ್ಲಿ ಹೊಸನಗರ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಶ್ರೀಗಳು ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಿಸಲಾಗಿದ್ದ ದೋಷಾರೋಪ ಪಟ್ಟಿಯನ್ನು

ರಾಮಕಥಾ ಗಾಯಕಿ ಅತ್ಯಾಚಾರ ಪ್ರಕರಣ       ➤ ಪ್ರಭಾಕರ ಭಟ್ ವಿರುದ್ಧದ ದೋಷಾರೋಪ ಪಟ್ಟಿ ರದ್ದು Read More »

ಕರ್ನಾಟಕ

ರಾಜೇಶ್ ಮಾಸ್ಟರ್ ನಿಗೂಢ ನಿಧನದ ಹಿಂದೆ ಆತ್ಮಹತ್ಯೆ ಶಂಕೆ!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.21 ನೃತ್ಯ ನಿರ್ದೇಶಕ ಮಾಸ್ಟರ್ ದಿಢೀರನೆ ನಿಧನರಾಗಿರೋ ಆಘಾತದ ಸುದ್ದಿ ಹೊರಬಿದ್ದಿದೆ.ಅವರ ಸಾವಿನ ಕಾರಣದ ಬಗ್ಗೆ ಯಾವುದೇ ಅಧಿಕೃತ ದೃಢೀಕರಣಗಳಿಲ್ಲದಿದ್ದರೂ, ನಿಗೂಢ ಕಾರಣಕ್ಕಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ತಮ್ಮ ಅಸಾಧಾರಣ ಕೌಶಲ್ಯಕ್ಕೆ ಹೆಸರುವಾಸಿಯಾಗಿರುವ ರಾಜೇಶ್ ಸಿನಿಮಾ ರಂಗದಲ್ಲಿ ಕೆಲಸ ಮಾಡಿದ್ದಾರೆ.ಹಲವಾರು ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ರಾಜೇಶ್ ಮಾಸ್ಟರ್ ಸಾವಿನ ಸುದ್ದಿ ಬಗ್ಗೆ ತಮ್ಮ ಆಘಾತವನ್ನು ವ್ಯಕ್ತಪಡಿಸಿದ್ದಾರೆ.      

ರಾಜೇಶ್ ಮಾಸ್ಟರ್ ನಿಗೂಢ ನಿಧನದ ಹಿಂದೆ ಆತ್ಮಹತ್ಯೆ ಶಂಕೆ! Read More »

ಕರ್ನಾಟಕ

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನಲೆ!   ➤ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ಚುನಾವಣಾ ಆಯೋಗ ಅನುಮತಿ ನಿರಾಕರಿಸಿದೆ…!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.21 ಚುನಾವಣಾ ದಿನಾಂಕ ಘೋಷಣೆಯಾಗಿದ್ದರೂ ಸಹ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂಬ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ಚುನಾವಣಾ ಆಯೋಗ ಅನುಮತಿ ನೀಡಲು ನಿರಾಕರಿಸಿದೆ.ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವ ತನಕ ಕಾಯಬೇಕಿದೆ.          

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನಲೆ!   ➤ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ಚುನಾವಣಾ ಆಯೋಗ ಅನುಮತಿ ನಿರಾಕರಿಸಿದೆ…! Read More »

ಕರ್ನಾಟಕ

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್! ➤ ಶಿಕ್ಷಣ ಇಲಾಖೆ ಬಿಸಿಯೂಟ, ಕ್ಷೀರ ಭಾಗ್ಯ ಯೋಜನೆಗೆ ಸಿದ್ಧತೆ ಕೈಗೊಳ್ಳಲು ಸೂಚನೆ ನೀಡಿದೆ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.21 2023 -24 ನೇ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮಧ್ಯಾಹ್ನದ ಬಿಸಿಯೂಟ ಮತ್ತು ಕ್ಷೀರ ಭಾಗ್ಯ ಯೋಜನೆ ಅನುಷ್ಠಾನಕ್ಕೆ ಅಗತ್ಯ ಪೂರ್ವಭಾವಿ ಸಿದ್ಧತೆ ಕೈಗೊಳ್ಳಲು ಶಿಕ್ಷಣ ಇಲಾಖೆ ವತಿಯಿಂದ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಸೂಚನೆ ನೀಡಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ರಜೆ ಅವಧಿಯಲ್ಲಿ ಉಳಿಕೆಯಾದ ಅಕ್ಕಿ, ಗೋಧಿ, ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ ಮತ್ತು ಹಾಲಿನ ಪುಡಿ ಸೇರಿದಂತೆ ಇತರೆ ಪದಾರ್ಥಗಳನ್ನು ಪರಿಶೀಲಿಸಿ

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್! ➤ ಶಿಕ್ಷಣ ಇಲಾಖೆ ಬಿಸಿಯೂಟ, ಕ್ಷೀರ ಭಾಗ್ಯ ಯೋಜನೆಗೆ ಸಿದ್ಧತೆ ಕೈಗೊಳ್ಳಲು ಸೂಚನೆ ನೀಡಿದೆ..! Read More »

ಕರ್ನಾಟಕ

ಜನರಿಗೆ ಹಣ ಪಡೆದು ಮತ ಹಾಕುವುದರಲ್ಲೇ ಆಸಕ್ತಿ!   ➤ ಹೈಕೋರ್ಟ್ ಕಿಡಿ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.21 ಸಾರ್ವಜನಿಕ ಪ್ರಕಟಣೆ ನೀಡಿದ ಹೊರತಾಗಿಯೂ ಇಡೀ ರಾಜ್ಯದ ಯಾವೊಂದು ಭಾಗದಿಂದಲೂ ಸ್ಮಶಾನ ಜಾಗಕ್ಕೆ ಭೂಮಿ ಮಂಜೂರಾತಿ ಕೋರಿ ಸರ್ಕಾರಕ್ಕೆ ಜನರು ಮನವಿ ಸಲ್ಲಿಸದ ಬಗ್ಗೆ ಕರ್ನಾಟಕ ಹೈಕೋರ್ಟ್ ಕಿಡಿ ಕಾರಿದೆ. ಅಲ್ಲದೇ, ನಮ್ಮ ಜನರಿಗೆ ಮೂಲಭೂತ ಸೌಲಭ್ಯ ಪಡೆಯುವುದಕ್ಕಿಂತ ಚುನಾವಣೆ ಬಗ್ಗೆಯೇ ಹೆಚ್ಚು ಆಸಕ್ತಿ, ಅದರಲ್ಲೂ ಹಣ ಪಡೆದು ಮತ ಹಾಕುವುದರಲ್ಲೇ ಮಗ್ನರಾಗಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದೆ.        

ಜನರಿಗೆ ಹಣ ಪಡೆದು ಮತ ಹಾಕುವುದರಲ್ಲೇ ಆಸಕ್ತಿ!   ➤ ಹೈಕೋರ್ಟ್ ಕಿಡಿ..! Read More »

ಕರ್ನಾಟಕ

ಡಿ.ಕೆ. ಶಿವಕುಮಾರ್ ಗೆ ನಾಮಪತ್ರ ತಿರಸ್ಕೃತವಾಗುವ ಆತಂಕ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.21 ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿಮುಕ್ತಾಯವಾಗಿದ್ದು, ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 24 ಕೊನೆಯ ದಿನವಾಗಿದೆ. ಏಪ್ರಿಲ್ 21(ಇಂದು) ಚುನಾವಣಾ ಅಧಿಕಾರಿಗಳು ನಾಮಪತ್ರಕೆಗಳನ್ನು ಪರಿಶೀಲನೆ ಮಾಡಲಿದ್ದಾರೆ. ಕಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಈ ನಾಮಪತ್ರ ತಿರಸ್ಕೃತವಾಗುವ ಆತಂಕದಲ್ಲಿದ್ದು, ಡಿಕೆ ಶಿವಕುಮಾರ್​ ಅವರ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ.      

ಡಿ.ಕೆ. ಶಿವಕುಮಾರ್ ಗೆ ನಾಮಪತ್ರ ತಿರಸ್ಕೃತವಾಗುವ ಆತಂಕ.! Read More »

ಕರ್ನಾಟಕ
Scroll to Top