Bangalore

ಒಂದು ಸಾಲಿನ ತೀರ್ಪು ಕೊಡುತ್ತಿದ್ದ ಕರ್ನಾಟಕದ ಜಡ್ಜ್‌ ವಜಾ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ಪೂರ್ಣ ಆದೇಶ ಸಿದ್ಧಪಡಿಸದೆ ಅಥವಾ ಬರೆಸದೆ ಕೇವಲ ತೀರ್ಪಿನ ಕೊನೆಯ ಸಾಲನ್ನಷ್ಟೇ ಪ್ರಕಟಿಸುತ್ತಿದ್ದ ಕರ್ನಾಟಕದ ಜಾರಿ ನ್ಯಾಯಾಲಯದ ನ್ಯಾಯಾಧೀಶ ಒಬ್ಬರನ್ನು ಸುಪ್ರೀಂಕೋರ್ಟ್‌ ಸೇವೆಯಿಂದ ವಜಾಗೊಳಿಸಿದೆ. ಈ ಜಡ್ಜ್‌ ಸಂಪೂರ್ಣ ಆದೇಶ ಸಿದ್ಧಪಡಿಸದೆ ಕೇವಲ ತೀರ್ಪಿನ ಕೊನೆಯ ಭಾಗವನ್ನು ಮಾತ್ರ ತೆರೆದ ನ್ಯಾಯಾಲಯದಲ್ಲಿ ಪ್ರಕಟಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ಪೀಠ ಆದೇಶಿಸಿದೆ. ಹೈಕೋರ್ಟ್‌ನ ಪೂರ್ಣ ಪೀಠ ವಜಾಗೊಳಿಸಿದ್ದರೂ ವಿಭಾಗೀಯ ಪೀಠವು ಅವರನ್ನು ಮರುನೇಮಕಗೊಳಿಸಲು ನೀಡಿದ್ದ ಆದೇಶಕ್ಕೆ ಸುಪ್ರೀಂ ತೀವ್ರ ಅಸಮಾಧಾನ ಕೂಡ ವ್ಯಕ್ತಪಡಿಸಿದೆ.  

ಒಂದು ಸಾಲಿನ ತೀರ್ಪು ಕೊಡುತ್ತಿದ್ದ ಕರ್ನಾಟಕದ ಜಡ್ಜ್‌ ವಜಾ Read More »

ಕರ್ನಾಟಕ

ಕುಖ್ಯಾತ ಸರಗಳ್ಳರು ಅರೆಸ್ಟ್ ➤ 1 ಕೋಟಿ ಮೌಲ್ಯದ 2 ಕೆ.ಜಿ ಚಿನ್ನಾಭರಣಗಳನ್ನು ಜಪ್ತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಕನ್ನ ಕಳವು ಮಾಡುತ್ತಿದ್ದ ಮಹಿಳೆ ಸೇರಿ ಮೂವರು ಕುಖ್ಯಾತ ಕನ್ನಗಳ್ಳರನ್ನು ಬಂಧಿಸಿ ಭರ್ಜರಿ ಬೇಟೆಯಾಡಿರುವ ಸಿಸಿಬಿ ಪೊಲೀಸರು 1 ಕೋಟಿ ಮೌಲ್ಯದ 2 ಕೆ.ಜಿ ಚಿನ್ನಾಭರಣಗಳನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಗುಜರಾತ್ ಹಾಗೂ ತಮಿಳುನಾಡಿನಿಂದ ನಗರಕ್ಕೆ ಬಂದು ನಗರದ ವಿವಿಧ ಕಡೆಗಳಲ್ಲಿ ಸಹಚರರೊಂದಿಗೆ ಸೇರಿ ಹಗಲು ಮತ್ತು ರಾತ್ರಿ ವೇಳೆ ಬೀಗ ಹಾಕಿರುವ ಮನೆಗಳನ್ನು ಗುರ್ತಿಸಿ ಹಗಲು ಮತ್ತು ರಾತ್ರಿ ವೇಳೆಯಲ್ಲಿ ತನ್ನ ಸಹಚರರೊಂದಿಗೆ ಸೇರಿಕೊಂಡು

ಕುಖ್ಯಾತ ಸರಗಳ್ಳರು ಅರೆಸ್ಟ್ ➤ 1 ಕೋಟಿ ಮೌಲ್ಯದ 2 ಕೆ.ಜಿ ಚಿನ್ನಾಭರಣಗಳನ್ನು ಜಪ್ತಿ Read More »

ಕರ್ನಾಟಕ

ಮಹಿಳೆಗೆ ಲೈಂಗಿಕ ಕಿರುಕುಳ ➤ PSI ಅಮಾನತು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ದೂರು ನೀಡಲು ಠಾಣೆಗೆ ಬಂದ ಮಹಿಳೆಯ ಸೊಂಟ ಹಿಡಿದು ಕಿರುಕುಳ ನೀಡಿ ಅನುಚಿತ ವರ್ತನೆ ಆರೋಪ ಪ್ರಕರಣ ಸಂಬಂಧಿಸಿದಂತೆ ಸುದ್ದಗುಂಟೆಪಾಳ್ಯ ಠಾಣೆಯ ಪಿಎಸ್‌ಐ ಮಂಜುನಾಥ್‌ ವಿರುದ್ಧ ಕೇಸ್ ದಾಖಲಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ. ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಅನುಚಿತ ವರ್ತನೆ ಮಾಡಿದ್ದಾರೆಂದು ಮಹಿಳೆಯು ಟ್ವೀಟ್‌ ಮಾಡಿದ್ದರು. ಬಳಿಕ ಪಿಎಸ್‌ಐ ಮಂಜುನಾಥ್‌ ವಿರುದ್ಧ ದೂರು ಸಹ ನೀಡಿದ್ದರು. ಈ ಕುರಿತಾಗಿ ಮಾತನಾಡಿದ ಡಿಸಿಪಿ ಸಿ.ಕೆ.ಬಾಬಾ, ನಮ್ಮ

ಮಹಿಳೆಗೆ ಲೈಂಗಿಕ ಕಿರುಕುಳ ➤ PSI ಅಮಾನತು Read More »

ಕರ್ನಾಟಕ, ಕ್ರೈಮ್ ನ್ಯೂಸ್

ತುಂಡರಿಸಿದ ಕೈಯನ್ನು ಯಶಸ್ವಿಯಾಗಿ ಮರು ಜೋಡಿಸಿದ ವೈದ್ಯರು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ಆಂಧ್ರಪ್ರದೇಶದ ಕುಪ್ಪಂ ಮೂಲದ ಚರಣ್ (11) ಎಂಬಾತ ಹುಲ್ಲು ಕತ್ತರಿಸುವ ಯಂತ್ರಕ್ಕೆ ಸಿಲುಕಿದ್ದ ಮರದ ಕಡ್ಡಿಯೊಂದನ್ನು ಕಿತ್ತು ಹಾಕಲು ಯತ್ನಿಸುವಾಗ ಮುಂಗೈ ತುಂಡಾಗಿ ಬಿದ್ದಿದೆ. ಆತನನ್ನು ಸ್ಥಳೀಯ ವೈದ್ಯಕೀಯ ಕಾಲೇಜಿಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ, ನಂತರ ಬೆಂಗಳೂರಿನ ನಾರಾಯಣ ಹೆಲ್ತ್ ಗೆ ಕಳುಹಿಸಲಾಗಿದೆ. ಬಾಲಕನ ತೋಳು ದೇಹದಿಂದ ಬೇರ್ಪಟ್ಟಿದ್ದರೂ, ನಾರಾಯಣದ ವೈದ್ಯರು ಕೈಯನ್ನು ಮತ್ತೆ ದೇಹಕ್ಕೆ ಜೋಡಿಸುವ ಶಸ್ತ್ರಚಿಕಿತ್ಸೆ ನಡೆಸಿದರು. ತುಂಡಾಗಿದ್ದ ತೋಳಿಗೆ ರಕ್ತದ ಸಂಚಲನೆಯನ್ನು ಮರು-ಸ್ಥಾಪಿಸಲು ಶಸ್ತ್ರಚಿಕಿತ್ಸೆಯು ಕೈಯನ

ತುಂಡರಿಸಿದ ಕೈಯನ್ನು ಯಶಸ್ವಿಯಾಗಿ ಮರು ಜೋಡಿಸಿದ ವೈದ್ಯರು Read More »

ಕರ್ನಾಟಕ

ಅಪರಿಚಿತನಿಗೆ ವಿದ್ಯುತ್‌ ಶಾಕ್‌; ರಕ್ಷಿಸಲು ಹೋದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ಬೀದಿ ದೀಪದ ವಿದ್ಯುತ್‌ ಕಂಬದಿಂದ ವಿದ್ಯುತ್‌ ಪ್ರವಹಿಸಿ ಸಂಕಷ್ಟದಲ್ಲಿದ್ದ ವ್ಯಕ್ತಿಯನ್ನು ಕಾಪಾಡಲು ಹೋಗಿ ಕೇರಳ ಮೂಲದ ಮೊಬೈಲ್‌ ವ್ಯಾಪಾರಿಯೊಬ್ಬರು ಪ್ರಾಣ ತೆತ್ತಿರುವ ಮಡಿವಾಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೇರಳ ರಾಜ್ಯದ ತ್ರಿಶೂರ್‌ ಜಿಲ್ಲೆಯ ಅಕ್ಬರ್‌ ಅಲಿ (36) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮಡಿವಾಳದ ಹೊಸೂರು ರಸ್ತೆಯ ಇಂಡಿಯನ್‌ ಆಯಿಲ್‌ ಪೆಟ್ರೋಲ್‌ ಬಂಕ್‌ ಸಮೀಪದ ಅಲಿ ನಡೆದುಕೊಂಡು ಹೋಗುವಾಗ ವಿದ್ಯುತ್‌ ಕಂಬದಲ್ಲಿ ವಿದ್ಯುತ್‌ ಪ್ರವಹಿಸಿ ಈ ಅವಘಡ ಸಂಭವಿಸಿದೆ ಎಂದು

ಅಪರಿಚಿತನಿಗೆ ವಿದ್ಯುತ್‌ ಶಾಕ್‌; ರಕ್ಷಿಸಲು ಹೋದ ವ್ಯಕ್ತಿ ಮೃತ್ಯು Read More »

ಕರ್ನಾಟಕ

ವಂಚನೆ ಆರೋಪದಡಿ ಫ್ರೀಡಂ ಆ್ಯಪ್‌ CEO ಸುಧೀರ್‌ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ಅರೆಕಾಲಿಕ ಉದ್ಯೋಗ ಕೊಡಿಸುವುದಾಗಿ ಹೇಳಿ ತಮ್ಮ ಆ್ಯಪ್‌ ಪ್ರಚಾರಕ್ಕೆ ಬಳಸಿಕೊಂಡು ಹಣ ನೀಡದೆ ವಂಚಿಸಿದ ಪ್ರಕರಣ ಸಂಬಂಧ ಇಂಡಿಯನ್‌ ಮಿನಿ ಫ್ರೀಡಂ ಕಂಪನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸಿ.ಎಸ್‌.ಸುಧೀರ್‌ನನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ‘ಕನ್ನಡಪ್ರಭ’ ಜತೆ ಮಾತನಾಡಿದ ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್‌ ಅವರು, ವಂಚನೆ ಪ್ರಕರಣದಲ್ಲಿ ಫ್ರೀಡಂ ಕಂಪನಿಯ ಸಿಇಒ ಸುಧೀರ್‌ನನ್ನು ಬಂಧಿಸಲಾಗಿದೆ. ಕೃತ್ಯದಲ್ಲಿ ಇತರರ ಪಾತ್ರದ ಬಗ್ಗೆ ಸಹ ತನಿಖೆ ಮುಂದುವರೆದಿದೆ ಎಂದು ಹೇಳಿದರು.

ವಂಚನೆ ಆರೋಪದಡಿ ಫ್ರೀಡಂ ಆ್ಯಪ್‌ CEO ಸುಧೀರ್‌ ಬಂಧನ Read More »

ಕರ್ನಾಟಕ

ನಾಳೆಯೊಳಗೆ ಕಾಂಗ್ರೆಸ್ 3ನೇ ಪಟ್ಟಿ ಬಿಡುಗಡೆ ಸಾಧ್ಯತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ಕಳೆದ ಮೂರ್ನಾಲ್ಕು ದಿನಗಳ ಹಿಂದೇ 3ನೇ ಪಟ್ಟಿಗಾಗಿ ಕಸರತ್ತು ನಡೆಸಿರುವ ಕಾಂಗ್ರೆಸ್‌ ಬಿಜೆಪಿಯ ಪಟ್ಟಿ ಬಿಡುಗಡೆಯಾದ ನಂತರ ಕೆಲವೊಂದು ಬದಲಾವಣೆಗಳನ್ನು ಮಾಡಿ ನಾಳೆಯೊಳಗೆ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಬಿಜೆಪಿ ಟಿಕೆಟ್‌ ಹಂಚಿಕೆಯ ಕಸರತ್ತು ಬಹುತೇಕವಾಗಿ ಪೂರ್ಣಗೊಂಡಿದೆ. ಆದರೆ, ಕಾಂಗ್ರೆಸ್ ಈಗಾಗಲೇ ಬಿಡುಗಡೆ ಮಾಡಿರುವ ಎರಡು ಪಟ್ಟಿಗಳಲ್ಲಿ ಯಾವುದೇ ಗೊಂದಲಗಳು ಇಲ್ಲದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಿದ್ದು, 58 ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡುವುದು ಬಾಕಿಯಿದೆ.

ನಾಳೆಯೊಳಗೆ ಕಾಂಗ್ರೆಸ್ 3ನೇ ಪಟ್ಟಿ ಬಿಡುಗಡೆ ಸಾಧ್ಯತೆ Read More »

ಕರ್ನಾಟಕ

‘ಬಹುಮತದೊಂದಿಗೆ ಅಧಿಕಾರ ಬರುವ ವಿಶ್ವಾಸ ಇದೆ’..! ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.12. ರಾಜ್ಯದ 189 ಸ್ಥಳಗಳಿಗೆ ಅಭ್ಯರ್ಥಿಗಳ ಘೋಷಣೆಯಾಗಿದ್ದು, ಎಲ್ಲರೂ ಬಹುಮತದಿಂದ ಆಯ್ಕೆಯಾಗಿ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಒಮ್ಮತದ ಸ್ವಾಗತ ದೊರೆತಿದೆ. ಕೆಲವು ಅಸಮಧಾನಿತರ ಜೊತೆ ಮಾತಾಡುವ ಕೆಲಸ ನಡೆದಿದೆ. ಲಕ್ಷ್ಮಣ ಸವದಿ ಅವರೊಂದಿಗೆ ಮಾತಾಡಿದ್ದು, ಯಾವುದೇ ದುಡುಕಿನ ನಿರ್ಧಾರ ಕೈಗೊಳ್ಳಬಾರದು ಎಂದು ತಿಳಿಸಿರುವುದಾಗಿ ಹೇಳಿದರು.

‘ಬಹುಮತದೊಂದಿಗೆ ಅಧಿಕಾರ ಬರುವ ವಿಶ್ವಾಸ ಇದೆ’..! ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ರಾಜ್ಯ ವಿಧಾನಸಭೆ ಚುನಾವಣೆ ➤ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಹೀಗಿವೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.12. ಬಿಜೆಪಿ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಂಡಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 189 ಮಂದಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಲಾಗಿದೆ. ಹಲವು ಸುತ್ತುಗಳ ಸಭೆ, ಸುದೀರ್ಘ ಸಮಾಲೋಚನೆಗಳ ಬಳಿಕ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದು, ಶಿಕಾರಿಪುರ ಕ್ಷೇತ್ರದಿಂದ ವೈ ವಿಜಯೇಂದ್ರಗೆ ಟಿಕೆಟ್ ನೀಡಲಾಗಿದೆ. ಶಿಗ್ಗಾಂವ್‌- ಬಸವರಾಜ

ರಾಜ್ಯ ವಿಧಾನಸಭೆ ಚುನಾವಣೆ ➤ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಹೀಗಿವೆ..! Read More »

ಕರ್ನಾಟಕ

ಚುನಾವಣೆ ಘೋಷಣೆಗೂ ಮುನ್ನ ವಸ್ತು ಜಪ್ತಿ ತಪ್ಪು ➤ ಹೈಕೋರ್ಟ್‌ ಸ್ಪಷ್ಟನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.12. ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ದಾಳಿ ನಡೆಸಿ ಯಾವುದೇ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲು ಅವಕಾಶವಿಲ್ಲ ಎಂದು ಹೈಕೋರ್ಚ್‌ ಸ್ಪಷ್ಟಪಡಿಸಿದೆ. ಹಬ್ಬದ ಪ್ರಯುಕ್ತ ಜನರಿಗೆ ವಿತರಿಸಲು ದಾಸ್ತಾನು ಮಾಡಲಾಗಿದ್ದ 530 ಅಕ್ಕಿ ಮೂಟೆಗಳನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದು, ಅದನ್ನು ಹಿಂದಿರುಗಿಸಲು ನಿರ್ದೇಶಿಸಬೇಕು ಎಂದು ಕೋರಿ ಬೆಂಗಳೂರಿನ ಶಿವಾಜಿನಗರದ ನಿವಾಸಿ ಇಷ್ತಿಯಾಕ್‌ ಅಹ್ಮದ್‌ ಎಂಬುವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನ್ಯಾಯಪೀಠ ಈ ಆದೇಶ

ಚುನಾವಣೆ ಘೋಷಣೆಗೂ ಮುನ್ನ ವಸ್ತು ಜಪ್ತಿ ತಪ್ಪು ➤ ಹೈಕೋರ್ಟ್‌ ಸ್ಪಷ್ಟನೆ Read More »

ಕರ್ನಾಟಕ
Scroll to Top