Bangalore

‘ಕಬ್ಬನ್‌ ಪಾರ್ಕ್‌’ನಲ್ಲಿ ಹೊಸ ರೂಲ್ಸ್‌ ಜಾರಿ..!   ➤ ಪಾರ್ಕ್‌ನಲ್ಲಿ ಪ್ರೇಮಿಗಳು ಅಸಭ್ಯವಾಗಿ ವರ್ತಿಸಿದ್ರೆ ‘ಲಾಠಿ ಚಾರ್ಜ್‌ ಫಿಕ್ಸ್’!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.11 ಸಿಲಿಕಾನ್‌ ಸಿಟಿ ಬೆಂಗಳೂರಿನ ಕಬ್ಬನ್‌ ಉದ್ಯಾನವನಕ್ಕೆ ಬರುವ ಜನರಿಗೆ ಕಿವಿಮಾತು ಇದಾಗಿದ್ದು, ಇನ್ಮುಂದೆ ಪಾರ್ಕ್‌ನಲ್ಲಿ ಪ್ರೇಮಿಗಳು ಅಸಭ್ಯವಾಗಿ ವರ್ತಿಸಿದ್ರೆ ಲಾಠಿ ಚಾರ್ಜ್‌ ಮಾಡಲಾಗುತ್ತದೆ ಎಂದು ಹೊಸ ರೂಲ್ಸ್‌ ಜಾರಿಗೆ ತರಲಾಗಿದೆ. ಕಬ್ಬನ್‌ ಉದ್ಯಾನ ಯಾವುದೇ ಎಂಟ್ರಿ ಫಿಸ್‌ ಇಲ್ಲ ಎಂದು ಸಾವಿರಾರು ಪ್ರೇಮಿಗಳು ಸದಾ ಸುತ್ತಾಡುತ್ತಿರುತ್ತಾರೆ. ಇನ್ಮುಂದೆ ಯಾವುದೇ ಹಣವಿಲ್ಲದೇ ಹಾಯಾಗಿ ಸುತ್ತಾಡಬಹುದು ಎಂದೆನ್ನುವ ಪ್ರೇಮಿಗಳಿಗೆ ಕೊಂಚ ಬಿಸಿ ತಟ್ಟಿದಂತಾಗಿದೆ.    

‘ಕಬ್ಬನ್‌ ಪಾರ್ಕ್‌’ನಲ್ಲಿ ಹೊಸ ರೂಲ್ಸ್‌ ಜಾರಿ..!   ➤ ಪಾರ್ಕ್‌ನಲ್ಲಿ ಪ್ರೇಮಿಗಳು ಅಸಭ್ಯವಾಗಿ ವರ್ತಿಸಿದ್ರೆ ‘ಲಾಠಿ ಚಾರ್ಜ್‌ ಫಿಕ್ಸ್’!   Read More »

ಕರ್ನಾಟಕ

ಸಚಿವ ಮುನಿರತ್ನ ವಿರುದ್ಧ ಮತ್ತೊಂದು FIR

(ನ್ಯೂಸ್ ಕಡಬ)newskadaba.com  ಬೆಂಗಳೂರು, ಏ.10. ಮತದಾರರಿಗೆ ಬೆಂಬಲಿಗರು ಸೀರೆ ಹಂಚುತ್ತಿದ್ದ ಹಿನ್ನೆಲೆಯಲ್ಲಿ ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ ಮತ್ತೊಂದು ಎಫ್’ಐಆರ್ ದಾಖಲಾಗಿದೆ. ಚುನಾವಣಾ ಆಯೋಗದ ಅಧಿಕಾರಿ ಮನೋಜ್ ಕುಮಾರ್ ನೀಡಿದ ದೂರಿನ ಮೇರೆಗೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಆರ್.ಆರ್. ನಗರದ ಬಂಗಾರಪ್ಪ ನಗರದಲ್ಲಿ ಮತದಾರರಿಗೆ ಮುನಿರತ್ನ ಬೆಂಬಲಿಗರು ಸೀರೆ ಹಂಚುವಾಗ ಸಿಕ್ಕಿಬಿದ್ದಿದ್ದರು. ಕೋಮುದ್ವೇಷ ಭಾಷಣ ಹಿನ್ನೆಲೆಯಲ್ಲಿ ಸಚಿವ ಮುನಿರತ್ನ ವಿರುದ್ಧ ಆರ್.ಆರ್. ನಗರ ಪೊಲೀಸರು ಎಫ್’ಐಆರ್ ದಾಖಲಿಸಿಕೊಂಡಿದ್ದರು.  

ಸಚಿವ ಮುನಿರತ್ನ ವಿರುದ್ಧ ಮತ್ತೊಂದು FIR Read More »

ಕರ್ನಾಟಕ

RCB ತಂಡಕ್ಕೆ ಕನ್ನಡಿಗ ಸೇರ್ಪಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು,  ಏ.10. RCB ತಂಡಕ್ಕೆ ಕನ್ನಡಿಗ ಸೇರ್ಪಡೆಯಾಗಿದೆ. ರಜತ್ ಪಾಟಿದಾರ್ ಬದಲಾಗಿ ವೇಗಿ ವೈಶಾಕ್ ವಿಜಯ್ ಕುಮಾರ್ ಅವರು, ಮೂಲಬೆಲೆ ೨೦ ಲಕ್ಷಕ್ಕೆ ಬೆಂಗಳೂರು ತಂಡ ಸೇರ್ಪಡೆಯಾಗಿದ್ದಾರೆ. ದೇಶಿಯ ಕ್ರಿಕೆಟ್ ನಲ್ಲಿ ಕರ್ನಾಟಕ ಪ್ರತಿನಿಧಿಸುವ ವೈಶಾಕ್, ಇದುವರೆಗೆ 14ಟಿ20 ಪಂದ್ಯಗಳನ್ನಾಡಿದ್ದು , 22 ವಿಕೆಟ್ ಕಬಳಿಸಿದ್ದಾರೆ. ಹಿಮ್ಮಡಿ ಗಾಯಕ್ಕೆ ಒಳಗಾಗಿರುವ ಪಾಟಿದಾರ್ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಅವರು ಇನ್ನೂ ಚೇತರಿಸಿಕೊಳ್ಳದ ಕಾರಣ ಐಪಿಎಲ್ ಸರಣಿಯಿಂದಲೇ ಹೊರಗುಳಿದಿದ್ದಾರೆ. ಪಾಟಿದಾರ್ ಹಿಮ್ಮಡಿ ನೋವಿನಿಂದ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಈ

RCB ತಂಡಕ್ಕೆ ಕನ್ನಡಿಗ ಸೇರ್ಪಡೆ Read More »

ಕರ್ನಾಟಕ

 ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿದ ಸರ್ಕಾರಿ ನೌಕರ!   ➤ ನೌಕರನನ್ನು ಅಮಾನತುಗೊಳಿಸಿದ ಜಿಲ್ಲಾಧಿಕಾರಿ  

(ನ್ಯೂಸ್ ಕಡಬ) newskadaba.com.ಬೆಂಗಳೂರು,ಏ.10 ರಾಜಕೀಯ ಪಕ್ಷದ ಪ್ರತಿನಿಧಿಯೊಂದಿಗೆ ಸೆಲ್ಫಿ ತೆಗೆದುಕೊಂಡು‌ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ‌ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಲೆಕ್ಕ ವಿಚಕ್ಷಣ ತಂಡದ‌ ಮುಖ್ಯಸ್ಥರಾದ ನೆಲಮಂಗಲ ಸರ್ಕಾರಿ ಪದವಿ ಪೂರ್ವ ಕಾಲೇಜು ದೈಹಿಕ ಶಿಕ್ಷಕ ಅಂಜ‌ನ್ ಕುಮಾರ್.ಬಿ.ಜೆ.ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ‌ ಅಮಾನತು‌ಪಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಆದೇಶಿಸಿದ್ದಾರೆ. ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಸಂಬಂಧ ಅಂಜನ್ ಕುಮಾರ್.ಬಿ.ಜೆ. ಅವರನ್ನು ನೆಲಮಂಗಲದ ಸೋಲೂರು ಹೋಬಳಿಯಲ್ಲಿ ಸ್ಥಾಪಿಸಲಾಗಿರುವ ಚೆಕ್‌ಪೋಸ್ಟ್‌ನಲ್ಲಿ

 ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿದ ಸರ್ಕಾರಿ ನೌಕರ!   ➤ ನೌಕರನನ್ನು ಅಮಾನತುಗೊಳಿಸಿದ ಜಿಲ್ಲಾಧಿಕಾರಿ   Read More »

ಕರ್ನಾಟಕ

ಬಿಯರ್ ಬಾಟಲಿ & ಕಲ್ಲಿನಿಂದ ಹೊಡೆದು ಯುವಕನ ಕೊಲೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.10. ಯುವಕನೋರ್ವನನ್ನು ಬಿಯರ್ ಬಾಟಲಿಯಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರಹಳ್ಳಿಯ ಬಾರ್ ವೊಂದರಲ್ಲಿ ನಡೆದಿದೆ. ಸುಬ್ರಹ್ಮಣ್ಯಪುರದ ರೌಡಿಶೀಟರ್ ಶಿವರಾಜ್ ನನ್ನು ಹತ್ಯೆ ಮಾಡಲಾಗಿದೆ. ಬಿಯರ್ ಬಾಟಲಿನಿಂದ ತಲೆಗೆ ಹೊಡೆದು ಮತ್ತೊಬ್ಬ ರೌಡಿಶೀಟರ್ ಮಂಜ ಕೊಲೆ ಮಾಡಿದ್ದಾನೆ.

ಬಿಯರ್ ಬಾಟಲಿ & ಕಲ್ಲಿನಿಂದ ಹೊಡೆದು ಯುವಕನ ಕೊಲೆ Read More »

ಕರ್ನಾಟಕ

‘170-180 ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಸಂಜೆ ಬಿಡುಗಡೆ’ ➤ ಬಿಎಸ್ ಯಡಿಯೂರಪ್ಪ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.10. ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿಯು ಸುಮಾರು 170 ರಿಂದ 180 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಸಂಜೆ ಬಿಡುಗಡೆ ಮಾಡಲಿದೆ ಎಂದು ಪಕ್ಷದ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಇಂದು ಸಂಜೆಯೊಳಗೆ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಪಟ್ಟಿಯನ್ನು ಅಂತಿಮಗೊಳಿಸಲು ಇಂದು ಇನ್ನೂ ಒಂದು ಸಭೆ ಇದೆ, ಇಂದು ಸಂಜೆಯೊಳಗೆ ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದರು. ಇನ್ನು ಮೊದಲ ಪಟ್ಟಿಯಲ್ಲಿ 170 ರಿಂದ 180

‘170-180 ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಸಂಜೆ ಬಿಡುಗಡೆ’ ➤ ಬಿಎಸ್ ಯಡಿಯೂರಪ್ಪ Read More »

ಕರ್ನಾಟಕ

ರೂಮ್ ನಲ್ಲಿ ವ್ಯಕ್ತಿಯೊಬ್ಬನನ್ನು ಕೂಡಿಟ್ಟು ಹಲ್ಲೆ ಮಾಡಿದ ದುಷ್ಕರ್ಮಿಗಳು! ➤ನರಳಿ ನರಳಿ ವ್ಯಕ್ತಿ ಮೃತ್ಯು!!

(ನ್ಯೂಸ್ ಕಡಬ) newskadaba.com. ಬೆಂಗಳೂರು,ಏ.10  ರಾಜ್ಯ ರಾಜಧಾನಿ ಬೆಂಗಳೂರಿನಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಕಳ್ಳತನ ಮಾಡಿದ್ದಾನೆಂದು ಒಂದು ವಾರಗಳು ಕಾಲ ವ್ಯಕ್ತಿಯೊಬ್ಬನನ್ನು ರೂಮಲ್ಲಿ ಕೂಡಿಟ್ಟು ಗುಂಪೊಂದು ಹಲ್ಲೆ ಮಾಡಿದೆ. ಕೊನೆಗೆ ಕಿರುಕುಳ ಸಹಿಸದೇ ಆ ವ್ಯಕ್ತಿ ರೂಮಿನಲ್ಲೇ ಪ್ರಾಣ ಬಿಟ್ಟಿದ್ದಾನೆ. ಈ ಅಮಾನವೀಯ ಘಟನೆ ರಾಮಮೂರ್ತಿ ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸೈಪುಲ್ಲಾ (35) ಎಂದು ಗುರುತಿಸಲಾಗಿದೆ. ಹಲ್ಲೆಯ ದೃಶ್ಯವನ್ನು ಮೊಬೈಲ್​​ನಲ್ಲಿ ಸೆರೆ ಹಿಡಿದು ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ.       * ರೂಮ್ ನಲ್ಲಿ

ರೂಮ್ ನಲ್ಲಿ ವ್ಯಕ್ತಿಯೊಬ್ಬನನ್ನು ಕೂಡಿಟ್ಟು ಹಲ್ಲೆ ಮಾಡಿದ ದುಷ್ಕರ್ಮಿಗಳು! ➤ನರಳಿ ನರಳಿ ವ್ಯಕ್ತಿ ಮೃತ್ಯು!! Read More »

ಕರ್ನಾಟಕ
Death, deadbody, Waterfall

ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕನ ಹತ್ಯೆ ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.10. ದೊಡ್ಡವರನ್ನು ಕುದುರೆ ಮೇಲೆ ಕೂರಿಸುವುದಿಲ್ಲ ಎಂದ ಅಪ್ರಾಪ್ತ ಬಾಲಕನನ್ನು ಆಕ್ರೋಶಗೊಂಡು ಕೊಲೆಗೈದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸತೀಶ್ (15) ಎಂಬ ಬಾಲಕನನ್ನು ಕೊಲೆಗೈದು ಪರಾರಿಯಾಗಿದ್ದ ಸೈಯದ್ ಶೋಯೆಬ್‌, ಸುಹೇಲುಲ್ಲಾ ಷರೀಫ್, ಮಹಮ್ಮದ್ ಹುಸೇನ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಡಾ.ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕನ ಹತ್ಯೆ ➤ ಆರೋಪಿಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕನ್ನಡಿಗರಿಗೆ ಬಿಗ್ ಶಾಕ್ ! ➤ಸಿಆರ್ ಪಿಎಫ್ ನೇಮಕಾತಿಗೆ ಇಂಗ್ಲಿಷ್, ಹಿಂದಿಯಲ್ಲೇ ಪರೀಕ್ಷೆ ಬರೆಯಲು ಅವಕಾಶ!

(ನ್ಯೂಸ್ ಕಡಬ) newskadaba.com.ಬೆಂಗಳೂರು,ಏ.10. ಕೇಂದ್ರ ಸರ್ಕಾರವು ಕನ್ನಡಿಗರಿಗೆ ಮತ್ತೊಂದು ಬಿಗ್ ಶಾಕ್ ನೀಡಿದ್ದು, ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಖಾಲಿ ಇರುವ 9212 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿರುವ ಕೇಂದ್ರ ಸರ್ಕಾರ ಅಭ್ಯರ್ಥಿಗಳು ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಸಿಆರ್ ಪಿಎಫ್ ನೇಮಕಾತಿಗೆ ಅಭ್ಯರ್ಥಿಗಳು ಕಂಪ್ಯೂಟರ್ ಆಧರಿತ ಪರೀಕ್ಷೆಯನ್ನು ಕೇವಲ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರವೇ ಬರೆಯಬಹುದು ಎಂಬ ಷರತ್ತು ಹಾಕಿದೆ. ಈ ಮೂಲಕ ಕೇಂದ್ರ ಸರ್ಕಾರ ದಕ್ಷಿಣ ರಾಜ್ಯಗಳ

ಕನ್ನಡಿಗರಿಗೆ ಬಿಗ್ ಶಾಕ್ ! ➤ಸಿಆರ್ ಪಿಎಫ್ ನೇಮಕಾತಿಗೆ ಇಂಗ್ಲಿಷ್, ಹಿಂದಿಯಲ್ಲೇ ಪರೀಕ್ಷೆ ಬರೆಯಲು ಅವಕಾಶ! Read More »

ಕರ್ನಾಟಕ

ಒಂಟಿ ಮಹಿಳೆಯನ್ನು ಕೊಲೆ ಮಾಡಿದ ದುಷ್ಕರ್ಮಿಗಳು   ➤ 3 ದಿನದ ಬಳಿಕ ಶವ ಪತ್ತೆ!!  

(ನ್ಯೂಸ್ ಕಡಬ) newskadaba.com. ಬೆಂಗಳೂರು,ಏ.10. ಬೆಂಗಳೂರಿನಲ್ಲಿ ಮತ್ತೊಂದು ಒಂಟಿ ಮಹಿಳೆಯ ಕೊಲೆ ನಡೆದಿರುವ ಘಟನೆ ನಡೆದಿದ್ದು,3 ದಿನಗಳ ಹಿಂದೆ ದುಷ್ಕರ್ಮಿಗಳು ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಬೆಂಗಳೂರಿನ ಕೆ.ಆರ್.ಪುರಂನ ಟಿಸಿ ಪಾಳ್ಯದಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಬಳ್ಳಾರಿ ಮೂಲದ ಅಂಬಿಕಾ (40) ಕೊಲೆಯಾಗಿರುವ ಮಹಿಳೆ. ಅಂಬಿಕಾ ದೇಹದ ಮೇಲೆ ಗಾಯಾದ ಗುರುತುಗಳು ಪತ್ತೆಯಾಗಿದ್ದು, ಕೆಲ ತಿಂಗಳ ಹಿಂದೆ ಅಂಬಿ ಪತಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಂಟಿ ಮಹಿಳೆಯನ್ನು ಕೊಲೆ ಮಾಡಿದ ದುಷ್ಕರ್ಮಿಗಳು   ➤ 3 ದಿನದ ಬಳಿಕ ಶವ ಪತ್ತೆ!!   Read More »

ಕರ್ನಾಟಕ
Scroll to Top